AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada Elimination: ಎಂಟನೇ ವಾರ ಈ ಸ್ಪರ್ಧಿಯ ಬಿಗ್​ ಬಾಸ್​ ಪಯಣ ಅಂತ್ಯ?

Kannada Bigg Boss Elimination: ಈ ವಾರ ಮಂಜು ಪಾವಗಡ, ದಿವ್ಯಾ ಸುರೇಶ್, ಪ್ರಶಾಂತ್, ವೈಷ್ಣವಿ, ರಘು, ರಾಜೀವ್ ಡೇಂಜರ್ ಝೋನ್‌ನಲ್ಲಿದ್ದಾರೆ.

Bigg Boss Kannada Elimination: ಎಂಟನೇ ವಾರ ಈ ಸ್ಪರ್ಧಿಯ ಬಿಗ್​ ಬಾಸ್​ ಪಯಣ ಅಂತ್ಯ?
ಬಿಗ್​ ಬಾಸ್​ ಕನ್ನಡ
ರಾಜೇಶ್ ದುಗ್ಗುಮನೆ
|

Updated on:Apr 25, 2021 | 2:05 PM

Share

ಬಿಗ್​ ಬಾಸ್​ ಸ್ಪರ್ಧಿಗಳು ಈಗಾಗಲೇ 50 ದಿನ ಪೂರೈಸಿದ್ದಾರೆ. ಎಂಟನೇ ವಾರದ ಎಲಿಮಿನೇಷನ್​ ಭಾನುವಾರ (ಎಪ್ರಿಲ್​ 25) ನಡೆಯುತ್ತಿದೆ. ಈ ವಾರ ಮಂಜು ಪಾವಗಡ, ದಿವ್ಯಾ ಸುರೇಶ್​, ಪ್ರಶಾಂತ್​ ಸಂಬರಗಿ, ವೈಷ್ಣವಿ, ರಘು ಹಾಗೂ ರಾಜೀವ್​ ತಲೆ ಮೇಲೆ ಎಲಿಮಿನೇಷನ್​ ತೂಗುಗತ್ತಿ ತೂಗುತ್ತಿದೆ. ಈ ಆರು ಮಂದಿಯ ಪೈಕಿ ಒಬ್ಬರ ಪ್ರಯಾಣ ಈ ವಾರಕ್ಕೆ ಅಂತ್ಯಗೊಳ್ಳಲಿದೆ.

ಈ ವಾರ ಮನೆಯಲ್ಲಿ ಅತಿ ಹೆಚ್ಚು ವೋಟ್​ ಪಡೆದು ನಾಮಿನೇಟ್​ ಆದವರು ಮಂಜು ಹಾಗೂ ದಿವ್ಯಾ. ಮಂಜು ಮತ್ತು ದಿವ್ಯಾ ಏಳನೇ ವಾರದ ಟಾಸ್ಕ್​ನಲ್ಲಿ ಮೋಸದ ಹಾದಿ ತುಳಿದಿದ್ದರು. ಇದು ಮನೆಮಂದಿಗೆ ಶಾಕ್​ ನೀಡಿತ್ತು. ಈ ಘಟನೆಯಿಂದ ಮನೆಯ ಸ್ಪರ್ಧಿಗಳು ತುಂಬಾನೇ ಬೇಸರ ಮಾಡಿಕೊಂಡಿದ್ದರು. ಹೀಗಾಗಿ, ಬಹುತೇಕರು ಮಂಜು ಮತ್ತು ದಿವ್ಯಾ ಹೆಸರನ್ನು ತೆಗೆದುಕೊಂಡರು.

ರಘು ವಿರುದ್ಧ ಮಂಜು ಹಾಗೂ ದಿವ್ಯಾ ಸುರೇಶ್​ ವೋಟ್​ ಮಾಡಿದ್ದಾರೆ. ವೈಷ್ಣವಿ ವಿರುದ್ಧ  ಚಕ್ರವರ್ತಿ ಚಂದ್ರಚೂಡ್​ ಹಾಗೂ ಪ್ರಿಯಾಂಕಾ ಮತ ಹಾಕಿದ್ದಾರೆ. ಹೀಗಾಗಿ, ರಘು ಮತ್ತು ವೈಷ್ಣವಿ ಕೂಡ ನಾಮಿನೇಟ್​ ಆಗಿದ್ದಾರೆ. ಕಳೆದ ವಾರದ ಟಾಸ್ಕ್​ನಲ್ಲಿ ಅಷ್ಟು ಉತ್ತಮವಾಗಿ ಆಡಿಲ್ಲ ಎಂಬ ಕಾರಣಕ್ಕೆ ಪ್ರಶಾಂತ್​ ಸಂಬರಗಿಯನ್ನು ನಾಮಿನೇಟ್​ ಮಾಡಲಾಗಿತ್ತು. ನೇರವಾಗಿ ನಾಮಿನೇಟ್​ ಮಾಡುವ ಅವಕಾಶ ಕ್ಯಾಪ್ಟನ್​ ಅರವಿಂದ್​ಗೆ ಇತ್ತು. ಈ ವೇಳೆ ರಾಜೀವ್ ಅವರನ್ನು ನಾಮಿನೇಟ್​ ಮಾಡಿದರು.

ಹೀಗಾಗಿ ಈ ವಾರ ಮಂಜು ಪಾವಗಡ, ದಿವ್ಯಾ ಸುರೇಶ್, ಪ್ರಶಾಂತ್, ವೈಷ್ಣವಿ, ರಘು, ರಾಜೀವ್ ಡೇಂಜರ್ ಝೋನ್‌ನಲ್ಲಿದ್ದಾರೆ. ಮಂಜು ಪಾವಗಡ ಡಲ್​ ಆದರೂ ಅವರ ಟಿಆರ್​ಪಿ ಕುಗ್ಗಿಲ್ಲ. ಹೀಗಾಗಿ, ಅವರು ಮನೆಯಿಂದ ಹೊರ ಹೋಗೋದು ಅನುಮಾನವೇ. ಪ್ರಶಾಂತ್​ ಸಂಬರಗಿ ಮನೆ ಮಂದಿಗೆ ಇಷ್ಟವಾಗದೆ ಇರಬಹುದು ಆದರೆ, ಅವರ ತಂತ್ರಗಾರಿಕೆ ಪ್ರೇಕ್ಷಕರಿಗೆ ಇಷ್ಟವಾಗುತ್ತಿದೆ. ಹೀಗಾಗಿ, ಅವರು ಕೂಡ ಮನೆಯಲ್ಲಿ ಮುಂದುವರಿಯಬಹುದು.

ಅಗ್ನಿಸಾಕ್ಷಿ ಖ್ಯಾತಿಯ ವೈಷ್ಣವಿ ಸೈಲೆಂಟ್​ ಆಗಿದ್ದುಕೊಂಡೇ ಪ್ರೇಕ್ಷಕರನ್ನು ಸೆಳೆಯುತ್ತಿದ್ದಾರೆ. ದಿವ್ಯಾ-ಮಂಜು ಕಹಾನಿ ಎಲ್ಲರ ಗಮನ ಸೆಳೆಯುತ್ತಿದೆ. ಇನ್ನು, ರಘು ಈ ವಾರದ ಕ್ಯಾಪ್ಟನ್​ ಆಗಿದ್ದಾರೆ. ಹೀಗಾಗಿ ಇವರಿಬ್ಬರೂ ಹೋಗೋದು ಡೌಟ್​ ಎನ್ನಲಾಗುತ್ತಿದೆ. ಇನ್ನು ಉಳೀದುಕೊಂಡಿದ್ದು ರಾಜೀವ್​. ಈ ವಾರ ಅವರೇ ಮನೆಯಿಂದ ಹೊರ ಹೋಗಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಸೆಲ್ಫೀ ನೆಪದಲ್ಲಿ ಬಿಗ್​ ಬಾಸ್​ ಸ್ಪರ್ಧಿಗೆ ಎಲ್ಲರೆದುರೇ ಮುತ್ತಿಟ್ಟ ಅಭಿಮಾನಿ! ಮರುದಿನವೇ ಬಂತು ಕೊರೊನಾ

Published On - 3:18 pm, Sat, 24 April 21

ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​