AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಂಜು ಬೆಂಬಲಿಗರ ವೋಟ್​ ನಂಗೆ ಸಿಗಲ್ಲ’; ದಿವ್ಯಾ ಸುರೇಶ್​ ಲೆಕ್ಕಾಚಾರ ಉಲ್ಟಾಪಲ್ಟಾ

ಕಳೆದ ವಾರದ ಕ್ಯಾಪ್ಟನ್ಸಿ ಟಾಸ್ಕ್​ನಲ್ಲಿ ದಿವ್ಯಾ ಸುರೇಶ್​ ಅವರು ಶಮಂತ್​ ಬ್ರೋ ಗೌಡಗೆ ಸಪೋರ್ಟ್​ ಮಾಡಿದ್ದರು. ಇದು ಮಂಜು ಗಮನಕ್ಕೆ ಬಂದಿದೆ.

‘ಮಂಜು ಬೆಂಬಲಿಗರ ವೋಟ್​ ನಂಗೆ ಸಿಗಲ್ಲ’; ದಿವ್ಯಾ ಸುರೇಶ್​ ಲೆಕ್ಕಾಚಾರ ಉಲ್ಟಾಪಲ್ಟಾ
ದಿವ್ಯಾ ಸುರೇಶ್​
TV9 Web
| Edited By: |

Updated on:Jun 30, 2021 | 10:40 PM

Share

ಪ್ರಶಾಂತ್ ಸಂಬರಗಿ, ಚಕ್ರವರ್ತಿ ಚಂದ್ರಚೂಡ್​, ರಘು ಗೌಡ, ನಿಧಿ ಸುಬ್ಬಯ್ಯ, ಮಂಜು ಪಾವಗಡ, ದಿವ್ಯಾ ಸುರೇಶ್, ಪ್ರಿಯಾಂಕಾ ತಿಮ್ಮೇಶ್​ ಮೇಲೆ ಎಲಿಮಿನೇಷನ್​ ತೂಗುಗತ್ತಿ ತೂಗುತ್ತಿದೆ. ಈ ವಾರ ದಿವ್ಯಾ ಸುರೇಶ್​ ಅವರು ಮನೆಯಿಂದ ಹೊರ ಹೋಗುತ್ತಾರಂತೆ. ಇದಕ್ಕೆ ಮಂಜು ಬೆಂಬಲಿಗರು ವೋಟ್​ ಮಾಡದೇ ಇರೋದೆ ಕಾರಣ. 

ಕಳೆದ ವಾರದ ಕ್ಯಾಪ್ಟನ್ಸಿ ಟಾಸ್ಕ್​ನಲ್ಲಿ ದಿವ್ಯಾ ಸುರೇಶ್​ ಅವರು ಶಮಂತ್​ ಬ್ರೋ ಗೌಡಗೆ ಸಪೋರ್ಟ್​ ಮಾಡಿದ್ದರು. ಇದು ಮಂಜು ಗಮನಕ್ಕೆ ಬಂದಿದೆ. ನಾಲ್ಕು ದಿನ ಇದನ್ನು ಮಂಜು ಸಹಿಸಿಕೊಂಡಿದ್ದರು. ಆದರೆ, ಹೆಚ್ಚು ದಿನ ಇದನ್ನು ತಡೆದಿಟ್ಟುಕೊಳ್ಳೋಕೆ ಅವರಿಂದ ಆಗಿಲ್ಲ. ಹೀಗಾಗಿ, ದಿವ್ಯಾ ಬಳಿ ಈ ಬಗ್ಗೆ ಚರ್ಚೆ ಮಾಡಿದ್ದಾರೆ.

ಮಂಜು ಈ ವಿಚಾರವನ್ನು ಪ್ರಸ್ತಾಪ ಮಾಡಿದ ನಂತರ ದಿವ್ಯಾ ಇದನ್ನು ಒಪ್ಪಿಕೊಂಡಿಲ್ಲ. ಶಮಂತ್​ ಜಾಗದಲ್ಲಿ ಯಾರೇ ಇದ್ದರೂ ಇದೇ ರೀತಿ ಮಾಡುತ್ತಿದ್ದೆ ಎಂದು ಹೇಳಿಕೊಂಡರು. ಕೊನೆಗೆ ‘ಮಂಜು ನಾನು ನಿನ್ನ ಬಳಿ ಕ್ಷಮೆ ಕೇಳುತ್ತಿದ್ದೇನೆ. ಸಾರಿ’ ಎಂದರು ದಿವ್ಯಾ. ಆದರೆ, ಮಂಜು ಕ್ಷಮೆ ಬೇಡ ಎಂದು ನೇರವಾಗಿಯೇ ಹೇಳಿದರು.

‘ನಂಗೆ ಈ ಮನೆ ಸಾಕಾಗಿದೆ. ತುಂಬಾನೇ ಹಿಂಸೆ ಆಗುತ್ತಿದೆ. ನಾಳೆಯಿಂದ ನನ್ನ ಜತೆ ಮಾತನಾಡಬೇಡ. ದಯವಿಟ್ಟು ನನ್ನ ಜತೆಗಿನ ಮಾತು ನಿಲ್ಲಿಸು. ಈ ವಾರ ನಾನೇ ಮನೆಯಿಂದ ಹೊರ ಹೋಗುತ್ತೇನೆ. ನೀನು ಮಾತನಾಡೋದನ್ನು ನಿಲ್ಲಿಸಿದರೆ ನಿನ್ನ ಅಭಿಮಾನಿಗಳು ನನಗೆ ವೋಟ್​ ಮಾಡೋದು ನಿಲ್ಲಿಸುತ್ತಾರೆ’ ಎಂದರು ದಿವ್ಯಾ.

ಪ್ರಶಾಂತ್​ ಸಂಬರಗಿ ಹಾಗೂ ಚಕ್ರವರ್ತಿ ಬಗ್ಗೆ ದಿವ್ಯಾ ಮಾತನಾಡಿದ್ದರು. ಅವರಿಬ್ಬರು ಸೆಕ್ಯುರಿಟಿ ಗಾರ್ಡ್​ಗಳಂತೆ ನನ್ನ ಹಿಂದೆಯೇ ಇರುತ್ತಿದ್ದರು ಎಂದು ನನ್ನ ಮನೆಯಲ್ಲಿ ಹೇಳಿದ್ದಾರೆ ಎಂಬುದಾಗಿ ದಿವ್ಯಾ ಸುದೀಪ್​ ಎದುರು ಹೇಳಿದ್ದರು. ಇದಾದ ನಂತರದಲ್ಲಿ ಪ್ರಶಾಂತ್​ ಹಾಗೂ ಚಕ್ರವರ್ತಿ ಮಾತಿನ ಮೂಲಕವೇ ದಿವ್ಯಾಗೆ ಚುಚ್ಚಿ ಮಾತನಾಡುತ್ತಿದ್ದಾರೆ. ಹೀಗಾಗಿ, ಮನೆಯಿಂದ ಹೊರ ಹೋಗಬೇಕು ಎಂದು ದಿವ್ಯಾ ಹೇಳೋಕೆ ಇದು ಕೂಡ ಒಂದು ಕಾರಣ.

ಇದನ್ನೂ ಓದಿ: ಬಿಗ್​ ಬಾಸ್ ಮನೆಯಲ್ಲಿ ಒಟ್ಟೊಟ್ಟಿಗೆ ಅತ್ತ ಪ್ರಶಾಂತ್​-ಚಕ್ರವರ್ತಿ, ಮಂಜು-ದಿವ್ಯಾ; ಇದೆಂಥ ಋಣಾನುಬಂಧ

‘ಮೊದಲಿನಂತೆ ಇರೋಕೆ ಸಾಧ್ಯವಿಲ್ಲ, ನನ್ನ ಬಳಿ ಮಾತನಾಡಬೇಡ’; ದಿವ್ಯಾಗೆ ಕಟು ಮಾತಿನಿಂದ ಎಚ್ಚರಿಕೆ ನೀಡಿದ ಮಂಜು

Published On - 10:34 pm, Wed, 30 June 21

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ