AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಂಜು ಬೆಂಬಲಿಗರ ವೋಟ್​ ನಂಗೆ ಸಿಗಲ್ಲ’; ದಿವ್ಯಾ ಸುರೇಶ್​ ಲೆಕ್ಕಾಚಾರ ಉಲ್ಟಾಪಲ್ಟಾ

ಕಳೆದ ವಾರದ ಕ್ಯಾಪ್ಟನ್ಸಿ ಟಾಸ್ಕ್​ನಲ್ಲಿ ದಿವ್ಯಾ ಸುರೇಶ್​ ಅವರು ಶಮಂತ್​ ಬ್ರೋ ಗೌಡಗೆ ಸಪೋರ್ಟ್​ ಮಾಡಿದ್ದರು. ಇದು ಮಂಜು ಗಮನಕ್ಕೆ ಬಂದಿದೆ.

‘ಮಂಜು ಬೆಂಬಲಿಗರ ವೋಟ್​ ನಂಗೆ ಸಿಗಲ್ಲ’; ದಿವ್ಯಾ ಸುರೇಶ್​ ಲೆಕ್ಕಾಚಾರ ಉಲ್ಟಾಪಲ್ಟಾ
ದಿವ್ಯಾ ಸುರೇಶ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jun 30, 2021 | 10:40 PM

ಪ್ರಶಾಂತ್ ಸಂಬರಗಿ, ಚಕ್ರವರ್ತಿ ಚಂದ್ರಚೂಡ್​, ರಘು ಗೌಡ, ನಿಧಿ ಸುಬ್ಬಯ್ಯ, ಮಂಜು ಪಾವಗಡ, ದಿವ್ಯಾ ಸುರೇಶ್, ಪ್ರಿಯಾಂಕಾ ತಿಮ್ಮೇಶ್​ ಮೇಲೆ ಎಲಿಮಿನೇಷನ್​ ತೂಗುಗತ್ತಿ ತೂಗುತ್ತಿದೆ. ಈ ವಾರ ದಿವ್ಯಾ ಸುರೇಶ್​ ಅವರು ಮನೆಯಿಂದ ಹೊರ ಹೋಗುತ್ತಾರಂತೆ. ಇದಕ್ಕೆ ಮಂಜು ಬೆಂಬಲಿಗರು ವೋಟ್​ ಮಾಡದೇ ಇರೋದೆ ಕಾರಣ. 

ಕಳೆದ ವಾರದ ಕ್ಯಾಪ್ಟನ್ಸಿ ಟಾಸ್ಕ್​ನಲ್ಲಿ ದಿವ್ಯಾ ಸುರೇಶ್​ ಅವರು ಶಮಂತ್​ ಬ್ರೋ ಗೌಡಗೆ ಸಪೋರ್ಟ್​ ಮಾಡಿದ್ದರು. ಇದು ಮಂಜು ಗಮನಕ್ಕೆ ಬಂದಿದೆ. ನಾಲ್ಕು ದಿನ ಇದನ್ನು ಮಂಜು ಸಹಿಸಿಕೊಂಡಿದ್ದರು. ಆದರೆ, ಹೆಚ್ಚು ದಿನ ಇದನ್ನು ತಡೆದಿಟ್ಟುಕೊಳ್ಳೋಕೆ ಅವರಿಂದ ಆಗಿಲ್ಲ. ಹೀಗಾಗಿ, ದಿವ್ಯಾ ಬಳಿ ಈ ಬಗ್ಗೆ ಚರ್ಚೆ ಮಾಡಿದ್ದಾರೆ.

ಮಂಜು ಈ ವಿಚಾರವನ್ನು ಪ್ರಸ್ತಾಪ ಮಾಡಿದ ನಂತರ ದಿವ್ಯಾ ಇದನ್ನು ಒಪ್ಪಿಕೊಂಡಿಲ್ಲ. ಶಮಂತ್​ ಜಾಗದಲ್ಲಿ ಯಾರೇ ಇದ್ದರೂ ಇದೇ ರೀತಿ ಮಾಡುತ್ತಿದ್ದೆ ಎಂದು ಹೇಳಿಕೊಂಡರು. ಕೊನೆಗೆ ‘ಮಂಜು ನಾನು ನಿನ್ನ ಬಳಿ ಕ್ಷಮೆ ಕೇಳುತ್ತಿದ್ದೇನೆ. ಸಾರಿ’ ಎಂದರು ದಿವ್ಯಾ. ಆದರೆ, ಮಂಜು ಕ್ಷಮೆ ಬೇಡ ಎಂದು ನೇರವಾಗಿಯೇ ಹೇಳಿದರು.

‘ನಂಗೆ ಈ ಮನೆ ಸಾಕಾಗಿದೆ. ತುಂಬಾನೇ ಹಿಂಸೆ ಆಗುತ್ತಿದೆ. ನಾಳೆಯಿಂದ ನನ್ನ ಜತೆ ಮಾತನಾಡಬೇಡ. ದಯವಿಟ್ಟು ನನ್ನ ಜತೆಗಿನ ಮಾತು ನಿಲ್ಲಿಸು. ಈ ವಾರ ನಾನೇ ಮನೆಯಿಂದ ಹೊರ ಹೋಗುತ್ತೇನೆ. ನೀನು ಮಾತನಾಡೋದನ್ನು ನಿಲ್ಲಿಸಿದರೆ ನಿನ್ನ ಅಭಿಮಾನಿಗಳು ನನಗೆ ವೋಟ್​ ಮಾಡೋದು ನಿಲ್ಲಿಸುತ್ತಾರೆ’ ಎಂದರು ದಿವ್ಯಾ.

ಪ್ರಶಾಂತ್​ ಸಂಬರಗಿ ಹಾಗೂ ಚಕ್ರವರ್ತಿ ಬಗ್ಗೆ ದಿವ್ಯಾ ಮಾತನಾಡಿದ್ದರು. ಅವರಿಬ್ಬರು ಸೆಕ್ಯುರಿಟಿ ಗಾರ್ಡ್​ಗಳಂತೆ ನನ್ನ ಹಿಂದೆಯೇ ಇರುತ್ತಿದ್ದರು ಎಂದು ನನ್ನ ಮನೆಯಲ್ಲಿ ಹೇಳಿದ್ದಾರೆ ಎಂಬುದಾಗಿ ದಿವ್ಯಾ ಸುದೀಪ್​ ಎದುರು ಹೇಳಿದ್ದರು. ಇದಾದ ನಂತರದಲ್ಲಿ ಪ್ರಶಾಂತ್​ ಹಾಗೂ ಚಕ್ರವರ್ತಿ ಮಾತಿನ ಮೂಲಕವೇ ದಿವ್ಯಾಗೆ ಚುಚ್ಚಿ ಮಾತನಾಡುತ್ತಿದ್ದಾರೆ. ಹೀಗಾಗಿ, ಮನೆಯಿಂದ ಹೊರ ಹೋಗಬೇಕು ಎಂದು ದಿವ್ಯಾ ಹೇಳೋಕೆ ಇದು ಕೂಡ ಒಂದು ಕಾರಣ.

ಇದನ್ನೂ ಓದಿ: ಬಿಗ್​ ಬಾಸ್ ಮನೆಯಲ್ಲಿ ಒಟ್ಟೊಟ್ಟಿಗೆ ಅತ್ತ ಪ್ರಶಾಂತ್​-ಚಕ್ರವರ್ತಿ, ಮಂಜು-ದಿವ್ಯಾ; ಇದೆಂಥ ಋಣಾನುಬಂಧ

‘ಮೊದಲಿನಂತೆ ಇರೋಕೆ ಸಾಧ್ಯವಿಲ್ಲ, ನನ್ನ ಬಳಿ ಮಾತನಾಡಬೇಡ’; ದಿವ್ಯಾಗೆ ಕಟು ಮಾತಿನಿಂದ ಎಚ್ಚರಿಕೆ ನೀಡಿದ ಮಂಜು

Published On - 10:34 pm, Wed, 30 June 21

ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ