AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಸೋಲು, ವಿವಾದದ ನಡುವೆಯೂ ಕಮಲ್ ಹಾಸನ್​ಗೆ ಸಿಕ್ತು ಆಸ್ಕರ್ ಗೌರವ

ಒಂದೆಡೆ ಕನ್ನಡ ಭಾಷೆಗೆ ಸಂಬಂಧಿಸಿದ ವಿವಾದ ಆಯಿತು. ಇನ್ನೊಂದೆಡೆ ‘ಥಗ್ ಲೈಫ್’ ಸಿನಿಮಾ ಸೋತಿತು. ಈ ಬೇಸರದ ನಡುವೆಯೂ ನಟ ಕಮಲ್ ಹಾಸನ್ ಅವರಿಗೆ ಖುಷಿ ಆಗುವಂತಹ ಬೆಳವಣಿಗೆ ನಡೆದಿದೆ. ‘ಅಕಾಡೆಮಿ ಆಫ್ ಮೋಷನ್ ಪಿಕ್ಚರ್ ಆರ್ಟ್ಸ್​ ಆ್ಯಂಡ್ ಸೈನ್ಸ್’ (ಆಸ್ಕರ್) ಕಡೆಯಿಂದ ಕಮಲ್​ ಹಾಸನ್​ಗೆ ಆಹ್ವಾನ ಬಂದಿದೆ.

ಸಿನಿಮಾ ಸೋಲು, ವಿವಾದದ ನಡುವೆಯೂ ಕಮಲ್ ಹಾಸನ್​ಗೆ ಸಿಕ್ತು ಆಸ್ಕರ್ ಗೌರವ
Kamal Haasan, Oscar
ಮದನ್​ ಕುಮಾರ್​
|

Updated on:Jun 29, 2025 | 8:45 AM

Share

ನಟ ಕಮಲ್ ಹಾಸನ್ (Kamal Haasan) ಅವರು ಇತ್ತೀಚೆಗೆ ಸಿನಿಮಾಗಿಂತಲೂ ಹೆಚ್ಚಾಗಿ ವಿವಾದದ ಮೂಲಕವೇ ಸುದ್ದಿ ಆದರು. ಅವರು ನಟಿಸಿದ ‘ಥಗ್​ ಲೈಫ್’ ಸಿನಿಮಾ ಬಿಡುಗಡೆಗೆ ಸಿದ್ಧವಿರುವಾಗ ಅವರು ಕನ್ನಡದ ಬಗ್ಗೆ ಮಾತನಾಡಿದ್ದು ವಿವಾದಕ್ಕೆ ಕಾರಣ ಆಯಿತು. ಆ ವಿವಾದದ ಕಿಡಿಯಿಂದಾಗಿ ಕರ್ನಾಟಕದಲ್ಲಿ ‘ಥಗ್​ ಲೈಫ್’ (Thug Life) ಚಿತ್ರ ಬಿಡುಗಡೆ ಆಗಲೇ ಇಲ್ಲ. ಬೇರೆ ರಾಜ್ಯಗಳಲ್ಲಿ ಸಿನಿಮಾ ತೆರೆಕಂಡರೂ ಹೀನಾಯವಾಗಿ ಸೋತಿತು. ಇಷ್ಟೆಲ್ಲ ಕಹಿ ಅನುಭವದ ಬಳಿಕ ಕಮಲ್ ಹಾಸನ್ ಅವರಿಗೆ ಒಂದು ಸಿಹಿ ಸುದ್ದಿ ಸಿಕ್ಕಿದೆ. ಈಗ ಅವರು ಆಸ್ಕರ್ (Oscar) ಗೌರವಕ್ಕೆ ಪಾತ್ರರಾಗಿದ್ದಾರೆ! ಹಾಗಂತ ಅವರಿಗೆ ಆಸ್ಕರ್ ಪ್ರಶಸ್ತಿ ಸಿಕ್ಕಿಲ್ಲ. ಬದಲಿಗೆ, ಆಸ್ಕರ್ ಸದಸ್ಯತ್ವ ಸಿಕ್ಕಿದೆ.

ಪ್ರತಿ ವರ್ಷ ಆಸ್ಕರ್ ಪ್ರಶಸ್ತಿ ನೀಡಲಾಗುತ್ತದೆ. ಅದಕ್ಕಾಗಿ ಜಾಗತಿಕ ಸಿನಿಮಾದ ಹಲವರು ವೋಟ್ ಮಾಡುತ್ತಾರೆ. ವೋಟ್ ಮಾಡಬೇಕು ಎಂದರೆ ‘ಅಕಾಡೆಮಿ ಆಫ್ ಮೋಷನ್ ಪಿಕ್ಚರ್ ಆರ್ಟ್ಸ್​ ಆ್ಯಂಡ್ ಸೈನ್ಸ್’ನಲ್ಲಿ ಸದಸ್ಯರಾಗಿರಬೇಕು. ಇದಕ್ಕೆ ಸದಸ್ಯರಾಗುವಂತೆ ಕಮಲ್ ಹಾಸನ್ ಅವರಿಗೆ ಈಗ ಆಹ್ವಾನ ನೀಡಲಾಗಿದೆ. ಅದನ್ನು ಅವರು ಖುಷಿಯಿಂದ ಸ್ವೀಕರಿಸಿದ್ದಾರೆ.

ಇದನ್ನೂ ಓದಿ
Image
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿಕೆ, ನಟ ಜಗ್ಗೇಶ್​ರಿಂದ ಪಾಠ
Image
ರಾಜ್ಯಸಭೆಗೆ ಕಮಲ್ ಹಾಸನ್; ಮೇಲ್ಮನೆ ಪ್ರವೇಶಕ್ಕೆ ನಾಮ ನಿರ್ದೇಶನ
Image
ಕಮಲ್ ಹಾಸನ್ ವಿವಾದ: ಕನ್ನಡಿಗರ ಕೆರಳಿಸಿದ ನಟನ​ ಚಿತ್ರಕ್ಕೆ ಸಂಕಷ್ಟ
Image
ಸೋನು ನಿಗಮ್ ಬೆನ್ನಲ್ಲೇ ಕಮಲ್ ಹಾಸನ್ ವಿವಾದ: ಕೆರಳಿ ಕೆಂಡವಾದ ಕನ್ನಡಿಗರು

ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ‘ಅಕಾಡೆಮಿ ಆಫ್ ಮೋಷನ್ ಪಿಕ್ಚರ್ ಆರ್ಟ್ಸ್​ ಆ್ಯಂಡ್ ಸೈನ್ಸ್ ಸೇರಿಕೊಳ್ಳಲು ನನಗೆ ಹೆಮ್ಮೆ ಆಗುತ್ತಿದೆ. ಈ ಮನ್ನಣೆ ಕೇವಲ ನನ್ನದಲ್ಲ. ಇಡೀ ಭಾರತೀಯ ಸಿನಿಮಾ ಸಮೂಹಕ್ಕೆ ಇದು ಸೇರುತ್ತದೆ. ನನಗೆ ಈ ಸ್ವರೂಪ ನೀಡಿದ ಹಲವಾರು ನಿರ್ದೇಶಕರಿಗೆ ಸಲ್ಲುತ್ತದೆ’ ಎಂದು ಕಮಲ್ ಹಾಸನ್ ಹೇಳಿದ್ದಾರೆ.

‘ಭಾರತೀಯ ಚಿತ್ರರಂಗವು ಜಗತ್ತಿಗೆ ಇನ್ನೂ ಸಾಕಷ್ಟನ್ನು ನೀಡಬೇಕಿದೆ. ಜಾಗತಿಕ ಸಿನಿಮಾ ಮಂದಿಯ ಜೊತೆ ಇನ್ನಷ್ಟು ತೊಡಗಿಕೊಳ್ಳಲು ನಾನು ಕಾತುರನಾಗಿದ್ದೇನೆ. ನನ್ನ ಜೊತೆ ಅಕಾಡೆಮಿ ಸೇರುತ್ತಿರುವ ಇನ್ನುಳಿದ ಕಲಾವಿದರು ಮತ್ತು ತಂತ್ರಜ್ಞರಿಗೂ ಅಭಿನಂದನೆ ತಿಳಿಸುತ್ತೇನೆ’ ಎಂದು ಕಮಲ್ ಹಾಸನ್ ಅವರು ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಆಸ್ಕರ್ ನಿಯಮಗಳಲ್ಲಿ ಮಹತ್ವದ ಬದಲಾವಣೆ, ಕೊನೆ ಆಗುವುದೇ ಪಕ್ಷಪಾತ?

ಕಮಲ್ ಹಾಸನ್ ಅವರಿಗೆ ಆಸ್ಕರ್ ಗೌರವ ಸಿಕ್ಕಿದ್ದಕ್ಕೆ ಅಭಿಮಾನಿಗಳಿಗೆ ತುಂಬ ಖುಷಿಯಾಗಿದೆ. ಕಮೆಂಟ್​​ಗಳ ಮೂಲಕ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ಫ್ಯಾನ್ಸ್ ಮಾತ್ರವಲ್ಲದೇ ಸಿನಿಮಾ, ರಾಜಕೀಯ ಮುಂತಾದ ಕ್ಷೇತ್ರಗಳ ಗಣ್ಯರು ಕೂಡ ಕಮಲ್ ಹಾಸನ್ ಅವರನ್ನು ಅಭಿನಂದಿಸಿದ್ದಾರೆ. ಆಯುಷ್ಮಾನ್ ಖುರಾನಾ, ಡಿಂಪಲ್ ಕಪಾಡಿಯಾ ಮುಂತಾದವರು ಕೂಡ ಅಕಾಡೆಮಿ ಸದಸ್ಯತ್ವಕ್ಕೆ ಆಹ್​ವಾನ ಪಡೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:44 am, Sun, 29 June 25

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು