AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ 25 ಲಕ್ಷ ರೂ. ಗಳಿಸಿದ ‘ಥಗ್ ಲೈಫ್; ಕರ್ನಾಟಕದಲ್ಲಿ ಚಿತ್ರ ರಿಲೀಸ್ ಆದರೆ ಮತ್ತಷ್ಟು ನಷ್ಟ  

ಕಮಲ್ ಹಾಸನ್ ಅವರು ತಮ್ಮ ‘ಥಗ್ ಲೈಫ್’ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಹಠ ಹಿಡಿದಿದ್ದಾರೆ. ಸುಪ್ರೀಂ ಕೋರ್ಟ್ ಚಿತ್ರದ ಬಿಡುಗಡೆಗೆ ಅನುಮತಿ ನೀಡಿದೆ. ಆದರೆ, ಕಳಪೆ ಬಾಕ್ಸ್ ಆಫೀಸ್ ಗಳಿಕೆಯಿಂದಾಗಿ ವಿತರಕರು ಮುಂದೆ ಬರುವುದು ಅನುಮಾನ. ವೆಂಕಟೇಶ್ ಚಿತ್ರದ ವಿತರಣೆಯಿಂದ ಹಿಂದೆ ಸರಿದಿದ್ದಾರೆ.

ಕೇವಲ 25 ಲಕ್ಷ ರೂ. ಗಳಿಸಿದ ‘ಥಗ್ ಲೈಫ್; ಕರ್ನಾಟಕದಲ್ಲಿ ಚಿತ್ರ ರಿಲೀಸ್ ಆದರೆ ಮತ್ತಷ್ಟು ನಷ್ಟ  
ಕಮಲ್ ಹಾಸನ್
ರಾಜೇಶ್ ದುಗ್ಗುಮನೆ
|

Updated on: Jun 18, 2025 | 6:55 AM

Share

‘ಥಗ್ ಲೈಫ್’ (Thug Life Movie) ಚಿತ್ರವನ್ನು ಕರ್ನಾಟಕದಲ್ಲಿ ರಿಲೀಸ್ ಮಾಡಲೇಬೇಕು ಎಂಬ ಹಠವನ್ನು ಕಮಲ್ ಹಾಸನ್ ಹೊತ್ತಿದ್ದಾರೆ. ಈ ಕಾರಣದಿಂದಲೇ ಸಿನಿಮಾ ರಿಲೀಸ್ ಮಾಡಲು ಶತಾಯ ಗತಾಯ ಪ್ರಯತ್ನ ಮಾಡುತ್ತಿದ್ದಾರೆ. ಈಗ ಸುಪ್ರೀಂಕೋರ್ಟ್​ನಿಂದ ಥಗ್ ಲೈಫ್ ಸಿನಿಮಾ ರಿಲೀಸ್ ಮಾಡಲು ಗ್ರೀನ್ ಸಿಗ್ನಲ್ ಸಿಕ್ಕಿದೆ. ಆದರೆ, ಹಂಚಿಕೆ ಮಾಡಲು ಯಾರೊಬ್ಬರೂ ಮುಂದಾಗೋದು ಅನುಮಾನ ಎಂದು ಹೇಳಲಾಗುತ್ತಿದೆ. ಇದಕ್ಕೆ ಕಾರಣ ಆಗಿದ್ದು ಸಿನಿಮಾ ಪರ್ಫಾರ್ಮೆನ್ಸ್.

‘ಥಗ್ ಲೈಫ್’ ಸಿನಿಮಾದ ಗಳಿಕೆ ಹೀನಾಯ ಸ್ಥಿತಿಯಲ್ಲಿದೆ. ಈ ಚಿತ್ರ ಮಂಗಳವಾರ (ಜೂನ್ 17) ಕೇವಲ 25 ಲಕ್ಷ ರೂಪಾಯಿ ಕಲೆಕ್ಷನ್ ಮಾಡಿದೆ. ಸಿನಿಮಾದ ಒಟ್ಟೂ ಗಳಿಕೆ ಇನ್ನೂ 47 ಕೋಟಿ ರೂಪಾಯಿಯಲ್ಲಿದೆ. ಈ ಸಿನಿಮಾ ಕರ್ನಾಟಕದಲ್ಲಿ ರಿಲೀಸ್ ಆದರೂ ಜನರು ಚಿತ್ರವನ್ನು ಇಷ್ಟಪಡೋದು ಅನುಮಾನ ಎಂದೇ ಹೇಳಲಾಗುತ್ತಿದೆ. ಹೀಗಾಗಿ, ತಂಡಕ್ಕೆ ಮತ್ತೊಂದಷ್ಟು ನಷ್ಟವೇ ಉಂಟಾಗಲಿದೆ.

ಈ ಮೊದಲು ‘ಥಗ್ ಲೈಫ್’ ಚಿತ್ರವನ್ನು ಹಂಚಿಕೆ ಮಾಡಲು ಒಪ್ಪಿಕೊಂಡಿದ್ದ ವೆಂಕಟೇಶ್ ಅವರು ತಾವು ಸಿನಿಮಾನ ಹಂಚಿಕೆ ಮಾಡುವುದಿಲ್ಲ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ. ಅವರು ದೊಡ್ಡ ಮೊತ್ತಕ್ಕೆ ಸಿನಿಮಾನ ಖರೀದಿ ಮಾಡಿದ್ದರು. ಈಗ ಸಿನಿಮಾ ವಿಳಂಬ ಆಗಿ ರಿಲೀಸ್ ಆಗುತ್ತಿರುವುದರಿಂದ ಬಿಡಿಗಾಸು ಬರುವುದಿಲ್ಲ ಅನ್ನೋದು ಅವರಿಗೆ ಸ್ಪಷ್ಟವಾಗಿದೆ.

ಇದನ್ನೂ ಓದಿ
Image
ಸಿನಿಮಾ ಸೆಟ್​ನಲ್ಲೇ ಹೀರೋನಾ ಮದುವೆ ಆಗಿದ್ರಾ ಜೆನಿಲಿಯಾ? ಉತ್ತರಿಸದ ನಟಿ
Image
ಶೋಭಿತಾ ಹಾಗೂ ನಾಗ ಚೈತನ್ಯರನ್ನು ನಿರ್ಲಕ್ಷಿಸಿದ್ರಾ ಮಹೇಶ್ ಬಾಬು?
Image
ಕೊಟ್ಟಿಯೂರು ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಧನರಾಜ್, ಪತ್ನಿ
Image
ರವಿಚಂದ್ರನ್​ಗೆ ನೋವಾಗದಂತೆ ಸಿನಿಮಾ ಚೆನ್ನಾಗಿಲ್ಲ ಎಂದಿದ್ದ ತಂದೆ ವೀರಸ್ವಾಮಿ

ಇನ್ನು, ಬೇರೆ ಯಾರಾದರೂ ಹಂಚಿಕೆದಾರರು ‘ಥಗ್ ಲೈಫ್’ ಚಿತ್ರವನ್ನು ಹಂಚಿಕೆ ಮಾಡಲು ಮುಂದೆ ಬರೋದು ಅನುಮಾನ ಎಂದು ಹೇಳಲಾಗುತ್ತಿದೆ. ಇನ್ನು, ಕಮಲ್ ಹಾಸನ್​ಗೆ ಇದು ಪ್ರತಿಷ್ಠೆಯ ವಿಷಯ ಆಗಿರುವುದರಿಂದ ಅವರೇ ಹಣ ನೀಡಿ ಯಾರನ್ನಾದರೂ ಸಿನಿಮಾ ಹಂಚಿಕೆ ಮಾಡಲು ಮುಂದಕ್ಕೆ ತರಬಹುದು. ಆದರೆ, ಥಿಯೇಟರ್ ಬಾಡಿಗೆ ಸೇರಿದಂತೆ ಅನೇಕ ಖರ್ಚಿರುತ್ತದೆ. ಸಿನಿಮಾ ಕಳಪೆ ವಿಮರ್ಶೆ ಪಡೆದಿರುವದರಿಂದ ಕಲೆಕ್ಷನ್ ಆಗೋದು ಕೂಡ ಅನುಮಾನದಲ್ಲೇ ಇದೆ. ಹೀಗಾಗಿ, ಸಿನಿಮಾ ರಿಲೀಸ್ ಮಾಡಿದರೂ ಇನ್ನೊಂದಿಷ್ಟು ನಷ್ಟವನ್ನೇ ಅನುಭವಿಸಬೇಕಾಗುತ್ತದೆ.

ಇದನ್ನೂ ಓದಿ: ‘ಥಗ್ ಲೈಫ್’ ರಿಲೀಸ್​ಗೆ ಸುಪ್ರೀಂ ಅನುಮತಿ; ಆದರೂ ಕರ್ನಾಟಕದಲ್ಲಿ ಬರಲ್ಲ ಕಮಲ್ ಚಿತ್ರ

‘ಥಗ್ ಲೈಫ್’ ಚಿತ್ರದಲ್ಲಿ ಕಮಲ್ ಹಾಸನ್, ತ್ರಿಷಾ, ಅಭಿರಾಮಿ, ಸಿಂಬು ಮೊದಲಾದವರು ನಟಿಸಿದ್ದಾರೆ. ಈ ಚಿತ್ರವನ್ನು ಮಣಿರತ್ನಂ ನಿರ್ದೇಶನ ಮಾಡಿದ್ದು, ಕಮಲ್ ಹಾಸನ್ ಅವರ ನಿರ್ಮಾಣ ಇದೆ. ಈ ಚಿತ್ರದಿಂದ ಅವರಿಗೆ ದೊಡ್ಡ ನಷ್ಟ ಉಂಟಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು