AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕ್ಸ್ ಆಫೀಸ್​​ನಲ್ಲಿ ‘ತುನಿವು’ ಚಿತ್ರ ಹಿಂದಿಕ್ಕಿದ ವಿಜಯ್ ಸಿನಿಮಾ ‘ವಾರಿಸು’

Varisu And Thunivu Collection: ಎರಡನೇ ದಿನದ (ಜನವರಿ 12) ಕಲೆಕ್ಷನ್ ವಿಚಾರದ ಬಗ್ಗೆಯೂ ಮಾಹಿತಿ ಸಿಕ್ಕಿದೆ. ‘ತುನಿವು’ ಸಿನಿಮಾ ತಮಿಳುನಾಡಿನಲ್ಲಿ ಎರಡನೇ ದಿನ 14.42 ಕೋಟಿ ರೂಪಾಯಿ ಗಳಿಕೆ ಮಾಡಿಕೊಂಡಿದೆ.

ಬಾಕ್ಸ್ ಆಫೀಸ್​​ನಲ್ಲಿ ‘ತುನಿವು’ ಚಿತ್ರ ಹಿಂದಿಕ್ಕಿದ ವಿಜಯ್ ಸಿನಿಮಾ ‘ವಾರಿಸು’
ವಿಜಯ್-ಅಜಿತ್
TV9 Web
| Edited By: |

Updated on: Jan 13, 2023 | 10:54 AM

Share

ಸಂಕ್ರಾಂತಿ ಸಂದರ್ಭದಲ್ಲಿ ತಮಿಳುನಾಡಿನಲ್ಲಿ ಎರಡು ದೊಡ್ಡ ಸಿನಿಮಾಗಳು ರಿಲೀಸ್ ಆಗಿವೆ. ಅಜಿತ್ ಕುಮಾರ್ ನಟನೆಯ ‘ತುನಿವು’ (Thunivu) ಹಾಗೂ ದಳಪತಿ ವಿಜಯ್ ಅಭಿನಯದ ‘ವಾರಿಸು’ ಚಿತ್ರಗಳು (Varisu Movie) ಮುಖಾಮುಖಿ ಆಗಿವೆ. ಈ ಎರಡೂ ಚಿತ್ರಗಳು ಉತ್ತಮ ಪ್ರದರ್ಶನ ಕಾಣುತ್ತಿವೆ. ಕಲೆಕ್ಷನ್ ವಿಚಾಕ್ಕೆ ಬಂದರೆ ‘ತುನಿವು’ ಎದುರು ‘ವಾರಿಸು’ ಮೇಲುಗೈ ಸಾಧಿಸಿದೆ. ಅಂತಿಮವಾಗಿ ಯಾವ ಸಿನಿಮಾ ಗೆಲ್ಲುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಬಾಲಿವುಡ್ ಬಾಕ್ಸ್ ಆಫೀಸ್ ಪಂಡಿತರ ಪ್ರಕಾರ ‘ವಾರಿಸು’ ಸಿನಿಮಾ ಈವರೆಗೆ 46.2 ಕೋಟಿ ರೂಪಾಯಿ ಗಳಿಕೆ ಮಾಡಿದೆ. ‘ತುನಿವು’ ಸಿನಿಮಾ 37.6 ಕೋಟಿ ರೂ. ಬಾಚಿಕೊಂಡಿದೆ. ಒಟ್ಟಾರೆ ಕಲೆಕ್ಷನ್ ವಿಚಾರದಲ್ಲಿ ‘ತುನಿವು’ಗಿಂತ ‘ವಾರಿಸು’ ಸುಮಾರು 9 ಕೋಟಿ ರೂಪಾಯಿ ಮುಂದಿದೆ.

ಎರಡನೇ ದಿನದ (ಜನವರಿ 12) ಕಲೆಕ್ಷನ್ ವಿಚಾರದ ಬಗ್ಗೆಯೂ ಮಾಹಿತಿ ಸಿಕ್ಕಿದೆ. ‘ತುನಿವು’ ಸಿನಿಮಾ ತಮಿಳುನಾಡಿನಲ್ಲಿ ಎರಡನೇ ದಿನ 14.42 ಕೋಟಿ ರೂಪಾಯಿ ಗಳಿಕೆ ಮಾಡಿಕೊಂಡಿದೆ. ಭಾರತದಲ್ಲಿ ಈ ಚಿತ್ರದ ಕಲೆಕ್ಷನ್ ಎರಡನೇ ದಿನಕ್ಕೆ 17-19 ಕೋಟಿ ರೂಪಾಯಿ ಇದೆ.  ಇನ್ನು, ‘ವಾರಿಸು’ ಸಿನಿಮಾಗೆ ಬಾಕ್ಸ್​ ಆಫೀಸ್​ನಲ್ಲಿ ಗಳಿಕೆ ಚೆನ್ನಾಗಿಯೇ ಆಗಿದೆ. ಎರಡನೇ ದಿನ ಈ ಚಿತ್ರ ತಮಿಳುನಾಡಿನಲ್ಲಿ 16.2 ಕೋಟಿ ರೂಪಾಯಿ ಹಾಗೂ ಭಾರತಾದ್ಯಂತ 18-20 ಕೋಟಿ ರೂಪಾಯಿ ಗಳಿಕೆ ಮಾಡಿಕೊಂಡಿದೆ.

ಮೊದಲ ದಿನದ ಕಲೆಕ್ಷನ್ ಲೆಕ್ಕ

‘ತುನಿವು’ ಸಿನಿಮಾ ಭಾರತದಲ್ಲಿ 26 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ‘ವಾರಿಸು’ ಸಿನಿಮಾ 26.50 ಕೋಟಿ ರೂ. ಬಾಚಿಕೊಂಡಿತ್ತು. ತಮಿಳುನಾಡು ಬಾಕ್ಸ್ ಆಫೀಸ್​ನಲ್ಲಿ ಮೊದಲ ದಿನ ‘ತುನಿವು’ ಮೇಲುಗೈ ಸಾಧಿಸಿತ್ತು. ಈ ಚಿತ್ರ ತಮಿಳುನಾಡಿನಲ್ಲಿ 18 ಕೋಟಿ ರೂಪಾಯಿ ಗಳಿಕೆ ಮಾಡಿದರೆ, ‘ವಾರಿಸು’17 ಕೋಟಿ ರೂಪಾಯಿಗೆ ಮೊದಲ ದಿನದ ಆಟ ಮುಗಿಸಿತ್ತು. ಈಗ ಎರಡನೇ ದಿನ ಕಲೆಕ್ಷನ್ ವಿಚಾರದಲ್ಲಿ ‘ವಾರಿಸು’ ಚೇತರಿಕೆ ಕಂಡಿದೆ.

ಇದನ್ನೂ ಓದಿ: ‘ತುನಿವು’ ಮತ್ತು ‘ವಾರಿಸು’ ಚಿತ್ರಗಳಲ್ಲಿ ಮೊದಲ ದಿನ ಗೆದ್ದಿದ್ಯಾರು? ಇಲ್ಲಿದೆ ಬಾಕ್ಸ್ ಆಫೀಸ್ ಕಲೆಕ್ಷನ್ ಲೆಕ್ಕಾಚಾರ

ಅಜಿತ್ ಹಾಗೂ ವಿಜಯ್ ಅಭಿಮಾನಿಗಳ ಮಧ್ಯೆ ಮೊದಲಿನಿಂದಲೂ ಶೀತಲ ಸಮರ ನಡೆಯುತ್ತಲೇ ಇದೆ. ಈಗ ಎರಡೂ ಹೀರೋಗಳ ಸಿನಿಮಾಗಳು ಒಟ್ಟಿಗೆ ರಿಲೀಸ್ ಆಗಿರುವುದರಿಂದ ಸಹಜವಾಗಿಯೇ ಸಾಕಷ್ಟು ಸ್ಪರ್ಧೆ ಇದೆ. ನೆಚ್ಚಿನ ಹೀರೋನ ಸಿನಿಮಾ ಗೆಲ್ಲಿಸಲು ವಿಜಯ್ ಹಾಗೂ ಅಜಿತ್ ಫ್ಯಾನ್ಸ್ ಪ್ರಯತ್ನಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?