‘ಕೆಜಿಎಫ್​ 2’ ಕಲೆಕ್ಷನ್​ ವಿಚಾರದಲ್ಲಿ ಮೂಡಿದೆ ಚಿಂತೆ; ಮನಸ್ಸು ಬದಲಿಸುತ್ತಾ ಆಂಧ್ರ ಸರ್ಕಾರ?

ಆಂಧ್ರ ಪ್ರದೇಶದಲ್ಲಿ ಈವರೆಗೆ ‘ಕೆಜಿಎಫ್​ ಚಾಪ್ಟರ್​ 2’ ಬುಕಿಂಗ್ ಓಪನ್ ಆಗಿಲ್ಲ. ಹೀಗೇಕೆ ಎಂದು ಅನೇಕರು ಆಲೋಚಿಸುತ್ತಿದ್ದಾರೆ. ಇದಕ್ಕೆ ಮಹತ್ವದ ಕಾರಣವೊಂದಿದೆ.

‘ಕೆಜಿಎಫ್​ 2’ ಕಲೆಕ್ಷನ್​ ವಿಚಾರದಲ್ಲಿ ಮೂಡಿದೆ ಚಿಂತೆ; ಮನಸ್ಸು ಬದಲಿಸುತ್ತಾ ಆಂಧ್ರ ಸರ್ಕಾರ?
ಯಶ್
Follow us
| Updated By: ರಾಜೇಶ್ ದುಗ್ಗುಮನೆ

Updated on: Apr 11, 2022 | 2:42 PM

‘ಕೆಜಿಎಫ್​ ಚಾಪ್ಟರ್​ 2’ ಸಿನಿಮಾ (KGF Chapter 2) ಕೇವಲ ಕನ್ನಡ ಚಿತ್ರವಾಗಿ ಉಳಿದಿಲ್ಲ. ಪರಭಾಷಿಗರು ಕೂಡ ಇದು ನಮ್ಮದೇ ಚಿತ್ರ ಎಂಬಷ್ಟು ಪ್ರೀತಿ ತೋರುತ್ತಿದ್ದಾರೆ. ಈ ಚಿತ್ರ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿದ್ದು, ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡುವುದರಲ್ಲಿ ಯಾವುದೇ ಅನುಮಾನ ಇಲ್ಲ. ಈ ಮಧ್ಯೆ ಆಂಧ್ರ ಪ್ರದೇಶದ (Andhra Pradesh) ಭಾಗದಲ್ಲಿ ಸರ್ಕಾರದ ಹೊಸ ನಿಯಮದಿಂದ ಚಿತ್ರದ ಬಾಕ್ಸ್​ ಆಫೀಸ್ ಕಲೆಕ್ಷನ್​ಗೆ ಕೊಂಚ ಹಿನ್ನಡೆ ಆಗುವ ಸೂಚನೆ ಸಿಕ್ಕಿದೆ. ಒಂದೊಮ್ಮೆ ಸರ್ಕಾರ ಮನಸ್ಸು ಬದಲಿಸಿದರೆ ಚಿತ್ರಕ್ಕೆ ಪ್ಲಸ್ ಪಾಯಿಂಟ್ ಆಗಲಿದೆ.

ಕರ್ನಾಟಕ, ಮಹಾರಾಷ್ಟ್ರ, ದೆಹಲಿ, ತಮಿಳುನಾಡು, ಕೇರಳದಲ್ಲಿ ಈಗಾಗಲೇ ‘ಕೆಜಿಎಫ್​ ಚಾಪ್ಟರ್​ 2’ ಮುಂಗಡ ಬುಕಿಂಗ್ ಆರಂಭಗೊಂಡಿದೆ. ಬೆಂಗಳೂರು ಸೇರಿ ಹಲವು ಕಡೆಗಳಲ್ಲಿ ಹಲವು ಶೋಗಳ ಟಿಕೆಟ್​ಗಳು ಸೋಲ್ಡ್​ಔಟ್​ ಆಗಿದೆ. ಆದರೆ, ಆಂಧ್ರ ಪ್ರದೇಶದಲ್ಲಿ ಈವರೆಗೆ ‘ಕೆಜಿಎಫ್​ ಚಾಪ್ಟರ್​ 2’ ಬುಕಿಂಗ್ ಓಪನ್ ಆಗಿಲ್ಲ. ಹೀಗೇಕೆ ಎಂದು ಅನೇಕರು ಆಲೋಚಿಸುತ್ತಿದ್ದಾರೆ. ಇದಕ್ಕೆ ಮಹತ್ವದ ಕಾರಣವೊಂದಿದೆ.

ಸಿನಿಮಾ ಟಿಕೆಟ್​ ದರದ ವಿಚಾರದಲ್ಲಿ ಆಂಧ್ರ ಪ್ರದೇಶ ಸರ್ಕಾರ ಹೊಸ ನಿಯಮ ಜಾರಿಗೆ ತಂದಿತ್ತು. ನಗರ ವ್ಯಾಪ್ತಿಯಲ್ಲಿ ಇರುವ ಮಲ್ಟಿಪ್ಲೆಕ್ಸ್​ಗಳಿಗೆ ಟಿಕೆಟ್​ ಮೊತ್ತ 75 ರೂಪಾಯಿ ಕನಿಷ್ಠ ಹಾಗೂ 250 ರೂಪಾಯಿ ಗರಿಷ್ಟ ಮೊತ್ತ ನಿಗದಿ ಮಾಡಲಾಗಿತ್ತು. ಎಸಿ ಹಾಗೂ ಎಸಿ ರಹಿತ ಚಿತ್ರಮಂದಿರಗಳ ಟಿಕೆಟ್​ ದರ 20-100 ರೂ ಅಂತರದಲ್ಲಿ ಇರಬೇಕು ಎಂದು ಹೇಳಿತ್ತು. ಇದಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ದೊಡ್ಡ ಬಜೆಟ್​ನ ಚಿತ್ರಗಳಿಗೆ ವಿನಾಯಿತಿ ನೀಡುವ ಬಗ್ಗೆ ಸರ್ಕಾರ ಘೋಷಿಸಿತ್ತು. ಜತೆಗೆ ಕೆಲ ಷರತ್ತುಗಳನ್ನು ಕೂಡ ವಿಧಿಸಿತ್ತು.

ಸಿನಿಮಾದ ಬಜೆಟ್ 100 ಕೋಟಿ ರೂಪಾಯಿ ದಾಟಿರಬೇಕು ಮತ್ತು ಸಿನಿಮಾದ ಶೇ.20 ಶೂಟಿಂಗ್ ಆಂಧ್ರ ಪ್ರದೇಶದಲ್ಲೇ ಆಗಿರಬೇಕು. ಹೀಗಿದ್ದರೆ ಮಾತ್ರ ಟಿಕೆಟ್ ದರ ಹೆಚ್ಚಿಸಿಕೊಳ್ಳಬಹುದು. ‘ಕೆಜಿಎಫ್​ 2’ ಬಜೆಟ್ 100 ಕೋಟಿ ಮೇಲಿದೆ. ಆದರೆ, ಚಿತ್ರದ ಶೇ.20 ಶೂಟಿಂಗ್ ಆಂಧ್ರದಲ್ಲಿ ನಡೆದಿದೆಯೋ ಅಥವಾ ಇಲ್ಲವೋ ಎಂಬ ಬಗ್ಗೆ ಸೂಕ್ತ ಸ್ಪಷ್ಟನೆ ಸಿಕ್ಕಿಲ್ಲ. ಈ ಕಾರಣಕ್ಕೆ ಸಿನಿಮಾದ ಟಿಕೆಟ್​ ದರವನ್ನು ಹೆಚ್ಚಿಸುವಂತಿಲ್ಲ.

ಈ ಹಿಂದೆ ‘ರಾಧೆ ಶ್ಯಾಮ್​’ ಹಾಗೂ ‘ಆರ್​ಆರ್​ಆರ್’ ಚಿತ್ರಗಳಿಗೆ ಸರ್ಕಾರದಿಂದ ವಿನಾಯಿತಿ ಸಿಕ್ಕಿತ್ತು. ಈ ಎರಡೂ ಚಿತ್ರಗಳ ಶೆ.20 ಶೂಟಿಂಗ್ ಆಂಧ್ರದಲ್ಲಿ ನಡೆದಿರಲಿಲ್ಲ. ಆದರೆ, ಹೊಸ ನಿಯಮ ಬರುವುದಕ್ಕೂ ಮೊದಲೇ ಸಿನಿಮಾದ ಶೂಟಿಂಗ್ ಪೂರ್ಣಗೊಂಡಿತ್ತು ಎಂಬ ಕಾರಣಕ್ಕೆ ಸಿನಿಮಾದ ಟಿಕೆಟ್​ ದರ ಹೆಚ್ಚಿಸಿಕೊಳ್ಳಲು ಅವಕಾಶ ನೀಡಲಾಗಿತ್ತು. ಈಗ ‘ಕೆಜಿಎಫ್​ 2’ಗೂ ಇದೇ ರೀತಿಯ ವಿನಾಯಿತಿ ಸಿಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಯಶ್​ ಎಂಟ್ರಿಗೆ ಹೆದರಿದ ಬಾಲಿವುಡ್​ ಹೀರೋ; ಪೈಪೋಟಿ ನೀಡಲಾಗದೇ ಹಿಂದೆ ಸರಿದ ಶಾಹಿದ್​ ಕಪೂರ್ ‘ಜೆರ್ಸಿ’

‘ಕೆಜಿಎಫ್​ ಚಾಪ್ಟರ್​ 2’ ಬಗ್ಗೆ ಹಲವು ಅಚ್ಚರಿಯ ವಿಚಾರಗಳು; ಯಶ್ ಜತೆಗಿನ ವಿಶೇಷ ಸಂದರ್ಶನ

‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು