AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್​ 2’ ಕಲೆಕ್ಷನ್​ ವಿಚಾರದಲ್ಲಿ ಮೂಡಿದೆ ಚಿಂತೆ; ಮನಸ್ಸು ಬದಲಿಸುತ್ತಾ ಆಂಧ್ರ ಸರ್ಕಾರ?

ಆಂಧ್ರ ಪ್ರದೇಶದಲ್ಲಿ ಈವರೆಗೆ ‘ಕೆಜಿಎಫ್​ ಚಾಪ್ಟರ್​ 2’ ಬುಕಿಂಗ್ ಓಪನ್ ಆಗಿಲ್ಲ. ಹೀಗೇಕೆ ಎಂದು ಅನೇಕರು ಆಲೋಚಿಸುತ್ತಿದ್ದಾರೆ. ಇದಕ್ಕೆ ಮಹತ್ವದ ಕಾರಣವೊಂದಿದೆ.

‘ಕೆಜಿಎಫ್​ 2’ ಕಲೆಕ್ಷನ್​ ವಿಚಾರದಲ್ಲಿ ಮೂಡಿದೆ ಚಿಂತೆ; ಮನಸ್ಸು ಬದಲಿಸುತ್ತಾ ಆಂಧ್ರ ಸರ್ಕಾರ?
ಯಶ್
TV9 Web
| Edited By: |

Updated on: Apr 11, 2022 | 2:42 PM

Share

‘ಕೆಜಿಎಫ್​ ಚಾಪ್ಟರ್​ 2’ ಸಿನಿಮಾ (KGF Chapter 2) ಕೇವಲ ಕನ್ನಡ ಚಿತ್ರವಾಗಿ ಉಳಿದಿಲ್ಲ. ಪರಭಾಷಿಗರು ಕೂಡ ಇದು ನಮ್ಮದೇ ಚಿತ್ರ ಎಂಬಷ್ಟು ಪ್ರೀತಿ ತೋರುತ್ತಿದ್ದಾರೆ. ಈ ಚಿತ್ರ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿದ್ದು, ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡುವುದರಲ್ಲಿ ಯಾವುದೇ ಅನುಮಾನ ಇಲ್ಲ. ಈ ಮಧ್ಯೆ ಆಂಧ್ರ ಪ್ರದೇಶದ (Andhra Pradesh) ಭಾಗದಲ್ಲಿ ಸರ್ಕಾರದ ಹೊಸ ನಿಯಮದಿಂದ ಚಿತ್ರದ ಬಾಕ್ಸ್​ ಆಫೀಸ್ ಕಲೆಕ್ಷನ್​ಗೆ ಕೊಂಚ ಹಿನ್ನಡೆ ಆಗುವ ಸೂಚನೆ ಸಿಕ್ಕಿದೆ. ಒಂದೊಮ್ಮೆ ಸರ್ಕಾರ ಮನಸ್ಸು ಬದಲಿಸಿದರೆ ಚಿತ್ರಕ್ಕೆ ಪ್ಲಸ್ ಪಾಯಿಂಟ್ ಆಗಲಿದೆ.

ಕರ್ನಾಟಕ, ಮಹಾರಾಷ್ಟ್ರ, ದೆಹಲಿ, ತಮಿಳುನಾಡು, ಕೇರಳದಲ್ಲಿ ಈಗಾಗಲೇ ‘ಕೆಜಿಎಫ್​ ಚಾಪ್ಟರ್​ 2’ ಮುಂಗಡ ಬುಕಿಂಗ್ ಆರಂಭಗೊಂಡಿದೆ. ಬೆಂಗಳೂರು ಸೇರಿ ಹಲವು ಕಡೆಗಳಲ್ಲಿ ಹಲವು ಶೋಗಳ ಟಿಕೆಟ್​ಗಳು ಸೋಲ್ಡ್​ಔಟ್​ ಆಗಿದೆ. ಆದರೆ, ಆಂಧ್ರ ಪ್ರದೇಶದಲ್ಲಿ ಈವರೆಗೆ ‘ಕೆಜಿಎಫ್​ ಚಾಪ್ಟರ್​ 2’ ಬುಕಿಂಗ್ ಓಪನ್ ಆಗಿಲ್ಲ. ಹೀಗೇಕೆ ಎಂದು ಅನೇಕರು ಆಲೋಚಿಸುತ್ತಿದ್ದಾರೆ. ಇದಕ್ಕೆ ಮಹತ್ವದ ಕಾರಣವೊಂದಿದೆ.

ಸಿನಿಮಾ ಟಿಕೆಟ್​ ದರದ ವಿಚಾರದಲ್ಲಿ ಆಂಧ್ರ ಪ್ರದೇಶ ಸರ್ಕಾರ ಹೊಸ ನಿಯಮ ಜಾರಿಗೆ ತಂದಿತ್ತು. ನಗರ ವ್ಯಾಪ್ತಿಯಲ್ಲಿ ಇರುವ ಮಲ್ಟಿಪ್ಲೆಕ್ಸ್​ಗಳಿಗೆ ಟಿಕೆಟ್​ ಮೊತ್ತ 75 ರೂಪಾಯಿ ಕನಿಷ್ಠ ಹಾಗೂ 250 ರೂಪಾಯಿ ಗರಿಷ್ಟ ಮೊತ್ತ ನಿಗದಿ ಮಾಡಲಾಗಿತ್ತು. ಎಸಿ ಹಾಗೂ ಎಸಿ ರಹಿತ ಚಿತ್ರಮಂದಿರಗಳ ಟಿಕೆಟ್​ ದರ 20-100 ರೂ ಅಂತರದಲ್ಲಿ ಇರಬೇಕು ಎಂದು ಹೇಳಿತ್ತು. ಇದಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ದೊಡ್ಡ ಬಜೆಟ್​ನ ಚಿತ್ರಗಳಿಗೆ ವಿನಾಯಿತಿ ನೀಡುವ ಬಗ್ಗೆ ಸರ್ಕಾರ ಘೋಷಿಸಿತ್ತು. ಜತೆಗೆ ಕೆಲ ಷರತ್ತುಗಳನ್ನು ಕೂಡ ವಿಧಿಸಿತ್ತು.

ಸಿನಿಮಾದ ಬಜೆಟ್ 100 ಕೋಟಿ ರೂಪಾಯಿ ದಾಟಿರಬೇಕು ಮತ್ತು ಸಿನಿಮಾದ ಶೇ.20 ಶೂಟಿಂಗ್ ಆಂಧ್ರ ಪ್ರದೇಶದಲ್ಲೇ ಆಗಿರಬೇಕು. ಹೀಗಿದ್ದರೆ ಮಾತ್ರ ಟಿಕೆಟ್ ದರ ಹೆಚ್ಚಿಸಿಕೊಳ್ಳಬಹುದು. ‘ಕೆಜಿಎಫ್​ 2’ ಬಜೆಟ್ 100 ಕೋಟಿ ಮೇಲಿದೆ. ಆದರೆ, ಚಿತ್ರದ ಶೇ.20 ಶೂಟಿಂಗ್ ಆಂಧ್ರದಲ್ಲಿ ನಡೆದಿದೆಯೋ ಅಥವಾ ಇಲ್ಲವೋ ಎಂಬ ಬಗ್ಗೆ ಸೂಕ್ತ ಸ್ಪಷ್ಟನೆ ಸಿಕ್ಕಿಲ್ಲ. ಈ ಕಾರಣಕ್ಕೆ ಸಿನಿಮಾದ ಟಿಕೆಟ್​ ದರವನ್ನು ಹೆಚ್ಚಿಸುವಂತಿಲ್ಲ.

ಈ ಹಿಂದೆ ‘ರಾಧೆ ಶ್ಯಾಮ್​’ ಹಾಗೂ ‘ಆರ್​ಆರ್​ಆರ್’ ಚಿತ್ರಗಳಿಗೆ ಸರ್ಕಾರದಿಂದ ವಿನಾಯಿತಿ ಸಿಕ್ಕಿತ್ತು. ಈ ಎರಡೂ ಚಿತ್ರಗಳ ಶೆ.20 ಶೂಟಿಂಗ್ ಆಂಧ್ರದಲ್ಲಿ ನಡೆದಿರಲಿಲ್ಲ. ಆದರೆ, ಹೊಸ ನಿಯಮ ಬರುವುದಕ್ಕೂ ಮೊದಲೇ ಸಿನಿಮಾದ ಶೂಟಿಂಗ್ ಪೂರ್ಣಗೊಂಡಿತ್ತು ಎಂಬ ಕಾರಣಕ್ಕೆ ಸಿನಿಮಾದ ಟಿಕೆಟ್​ ದರ ಹೆಚ್ಚಿಸಿಕೊಳ್ಳಲು ಅವಕಾಶ ನೀಡಲಾಗಿತ್ತು. ಈಗ ‘ಕೆಜಿಎಫ್​ 2’ಗೂ ಇದೇ ರೀತಿಯ ವಿನಾಯಿತಿ ಸಿಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಯಶ್​ ಎಂಟ್ರಿಗೆ ಹೆದರಿದ ಬಾಲಿವುಡ್​ ಹೀರೋ; ಪೈಪೋಟಿ ನೀಡಲಾಗದೇ ಹಿಂದೆ ಸರಿದ ಶಾಹಿದ್​ ಕಪೂರ್ ‘ಜೆರ್ಸಿ’

‘ಕೆಜಿಎಫ್​ ಚಾಪ್ಟರ್​ 2’ ಬಗ್ಗೆ ಹಲವು ಅಚ್ಚರಿಯ ವಿಚಾರಗಳು; ಯಶ್ ಜತೆಗಿನ ವಿಶೇಷ ಸಂದರ್ಶನ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ