AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘Tiger 3’: ಸಲ್ಮಾನ್ ಖಾನ್ ಹಾಗೂ ಕತ್ರಿನಾ ಕೈಫ್ ನಟನೆಯ ’ಟೈಗರ್ 3’ ಚಿತ್ರೀಕರಣ ಮರು ಆರಂಭವಾಗಲಿದೆಯಾ?

ಬಾಲಿವುಡ್​ನ ಹಿಟ್ ಜೋಡಿ ಸಲ್ಮಾನ್ ಖಾನ್ ಹಾಗೂ ಕತ್ರೀನಾ ಕೈಫ್ ನಟನೆಯ ‘ಟೈಗರ್ 3’ ಚಿತ್ರದ ಚಿತ್ರೀಕರಣದ ಮರುಪ್ರಾರಂಭದ ದಿನಾಂಕವನ್ನು ನಿರ್ಧರಿಸಲಾಗಿದೆ. ಈ ಚಿತ್ರದಲ್ಲಿ ಇಮ್ರಾನ್ ಹಶ್ಮಿ ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ.

'Tiger 3': ಸಲ್ಮಾನ್ ಖಾನ್ ಹಾಗೂ ಕತ್ರಿನಾ ಕೈಫ್ ನಟನೆಯ ’ಟೈಗರ್ 3’ ಚಿತ್ರೀಕರಣ ಮರು ಆರಂಭವಾಗಲಿದೆಯಾ?
ಟೈಗರ್ 3 ಚಿತ್ರದ ಪೋಸ್ಟರ್
TV9 Web
| Edited By: |

Updated on:Jul 11, 2021 | 12:10 PM

Share

ಬಾಲಿವುಡ್​ನಲ್ಲಿ ತೆರೆಯ ಮೇಲಿನ ಕಾಂಬಿನೇಷನ್​ನಲ್ಲಿ ಸಲ್ಮಾನ್ ಖಾನ್ ಹಾಗೂ ಕತ್ರಿನಾ ಕೈಫ್ ಜೋಡಿ ಹಿಟ್ ಜೋಡಿ ಎಂದು ಪರಿಗಣಿತವಾಗಿದೆ. ಇವರೀರ್ವರೂ ಜೊತೆಗೆ ನಟಿಸಿದ್ದ ಟೈಗರ್ ಸೀರೀಸ್​ನ ಚಿತ್ರಗಳು ಬಾಲಿವುಡ್ ಬಾಕ್ಸಾಫೀಸ್​ನಲ್ಲಿ ಧೂಳೆಬ್ಬಿಸಿತ್ತು. ‘ಏಕ್ ಥಾ ಟೈಗರ್’ ಹಾಗೂ ‘ಟೈಗರ್ ಜಿಂದಾ ಹೈ’ ಚಿತ್ರಗಳು ಒಳ್ಳೆಯ ಕಮಾಯಿ ಮಾಡಿದ್ದವು. ಎರಡೂ ಚಿತ್ರದಲ್ಲೂ ಕತ್ರೀನಾ ಹಾಗೂ ಸಲ್ಮಾನ್ ಜೋಡಿ ಕಾಣಿಸಿಕೊಂಡಿತ್ತು. ಕಳೆದ ವರ್ಷ ಇದೇ ಸೀರೀಸ್​ನಲ್ಲಿ ಮೂರನೇ ಚಿತ್ರವನ್ನು ‘ಯಶ್ ರಾಜ್ ಸ್ಟುಡಿಯೊಸ್’ ಅನೌನ್ಸ್ ಮಾಡಿತ್ತು. ಚಿತ್ರೀಕರಣವೂ ಪ್ರಾರಂಭವಾಗಿತ್ತು. ಆದರೆ ಕರೋನಾ ಹಾಗೂ ಮುಂಬೈಯಲ್ಲಿ ಉಂಟಾದ ಸೈಕ್ಲೋನ್ ಸಹಿತ ಭಾರೀ ಮಳೆಯಿಂದಾಗಿ ಚಿತ್ರೀಕರಣವನ್ನು ಏಪ್ರಿಲ್​ನಲ್ಲಿ ಸ್ಥಗಿತಗೊಳಿಸಲಾಗಿತ್ತು. ಇದೀಗ ಬಂದಿರುವ ಮಾಹಿತಿಯಂತೆ ಜುಲೈ 23ರಿಂದ ಮುಂಬೈನಲ್ಲಿ ‘ಟೈಗರ್ 3’ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ.

ವಾಸ್ತವವಾಗಿ, ಈ ಚಿತ್ರಕ್ಕೆ ಅಧಿಕೃತ ಶೀರ್ಷಿಕೆಯನ್ನು ಇನ್ನೂ ಚಿತ್ರತಂಡ ನಿರ್ಧರಿಸಿಲ್ಲ. ಸದ್ಯಕ್ಕೆ ಟೈಗರ್3 ಹೆಸರಿನಲ್ಲಿ ಚಿತ್ರದ ನಿರ್ಮಾಣ ಕಾರ್ಯದಲ್ಲಿ ಚಿತ್ರತಂಡ ತೊಡಗಿಸಿಕೊಂಡಿದೆ. ಚಿತ್ರದ ವಿಶೇಷತೆಯೆಂದರೆ, ಇಮ್ರಾನ್ ಹಶ್ಮಿ ಈ ಚಿತ್ರದಲ್ಲಿ ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸದ್ಯಕ್ಕೆ ಚಿತ್ರತಂಡ ಬಿಡುಗಡೆ ಮಾಡಿರುವ ಮಾಹಿತಿಯಂತೆ ಇದೇ ತಿಂಗಳ 23ರಿಂದ ಕತ್ರೀನಾ ಹಾಗೂ ಸಲ್ಮಾನ್ ಖಾನ್ ಅವರ ಪಾತ್ರಗಳಿರುವ ದೃಶ್ಯಗಳನ್ನಷ್ಟೇ ಚಿತ್ರೀಕರಿಸಲಾಗುತ್ತದೆ. ಮುಂದಿನ ದಿನಗಳಲ್ಲಿ ಚಿತ್ರದ ಇತರ ತಾರಾಗಣ ಇವರನ್ನು ಕೂಡಿಕೊಳ್ಳಲಿದೆ. ತಂಡದ ಎಲ್ಲರಿಗೂ ಕರೊನಾ ಲಸಿಕೆ ನೀಡಿದ ಬಳಿಕವಷ್ಟೇ ಚಿತ್ರೀಕರಣ ಪ್ರಾರಂಭಿಸಲಾಗುವುದು ಎಂದು ನಿರ್ಮಾಪಕ ಆದಿತ್ಯ ಚೋಪ್ರಾ ಸ್ಪಷ್ಟಪಡಿಸಿದ್ದಾರೆ.

ಇಮ್ರಾನ್ ಹಶ್ಮಿ ಪ್ರತಿನಾಯಕನ ಪಾತ್ರದಲ್ಲಿ ನಟಿಸುತ್ತಿದ್ದು, ಅವರ ಚಿತ್ರೀಕರಣ ಇನ್ನೂ ಸ್ವಲ್ಪಬಾಕಿಯಿದೆ. ಸಲ್ಮಾನ್ ಹಾಗೂ ಕತ್ರೀನ್ ಅವರ ಶೆಡ್ಯೂಲ್ ಮುಗಿದ ನಂತರ ಇಮ್ರಾನ್ ಹಶ್ಮಿ ತಂಡವನ್ನು ಕೂಡಿಕೊಳ್ಳಲಿದ್ದಾರೆ. ನಂತರ ಮುಖ್ಯ ದೃಶ್ಯದ ಚಿತ್ರೀಕರಣ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ತೌಕ್ತೆ ಚಂಡಮಾರುತದ ಪ್ರಭಾವದಿಂದಾಗಿ ಚಿತ್ರಕ್ಕೆ ಹಾಕಿದ್ದ ಸೆಟ್ ಜಖಂಗೊಂಡಿತ್ತು.ಅದನ್ನು ಮರುನಿರ್ಮಿಸಲು ಆದಿತ್ಯ ಚೋಪ್ರಾ ಹಾಗೂ ನಿರ್ದೇಶಕ ಮನೀಷ್ ಶರ್ಮ ಈ ಮೊದಲು ನಿರ್ಧರಿಸಿದ್ದರು. ಆದರೆ ಈಗ ಆ ಯೋಜನೆಯನ್ನು ಕೈಬಿಡಲಾಗಿದೆ. ವಿದೇಶಗಳಲ್ಲಿ ಪರಿಸ್ಥಿತಿ ಸುಧಾರಿಸುತ್ತಿರುವುದರಿಂದ ಆಗಸ್ಟ್ 15ರ ನಂತರ ವಿದೇಶದಲ್ಲಿ ಚಿತ್ರೀಕರಣ ನಡೆಸಲು ಚಿತ್ರತಂಡವು ನಿರ್ಧರಿಸಿದೆ ಎನ್ನಲಾಗಿದೆ. ಚಿತ್ರದಲ್ಲಿ ಮಧ್ಯ ಏಷ್ಯಾವು ಪ್ರಮುಖ ಭೂಮಿಕೆಯಾಗಿದ್ದು, ಅದನ್ನು ದುಬೈಯ ಮಾರ್ಕೆಟ್​ವೊಂದರಲ್ಲಿ ಚಿತ್ರೀಕರಿಸಬಹುದು ಎನ್ನಲಾಗುತ್ತಿದೆ.

ಈ ಚಿತ್ರಕ್ಕೆ ಬಹುದೊಡ್ಡ ತಾರಾಗಣ ಹಾಗೂ ತಂತ್ರಜ್ಞರು ಕೆಲಸ ಮಾಡುತ್ತಿರುವುದರಿಂದ ಅಭಿಮಾನಿಗಳ ನಿರೀಕ್ಷೆಯೂ ಜೋರಾಗಿಎದ. ಈ ಬಾರಿ ಆದಿತ್ಯ ಚೋಪ್ರಾ ಅವರೇ ‘ವಾರ್’ ಚಿತ್ರದ ಬರಹಗಾರ ಶ್ರೀಧರ್ ರಾಘವನ್ ಜೊತೆ ಸೇರಿ ಕತೆಯನ್ನು ಬರೆದಿದ್ದಾರೆ. ಚಿತ್ರವು 2022ರಲ್ಲಿ ತೆರೆಗೆ ಬರುವ ನಿರೀಕ್ಷೆ ಇದೆ. ಬಾಲಿವುಡ್​ನ ಬಹುದೊಡ್ಡ ನಿರ್ಮಾಣ ಸಂಸ್ಥೆಗಳಲ್ಲಿ ಒಂದಾಗಿರುವ ಯಶ್ ರಾಜ್ ಫಿಲ್ಮ್ಸ್ ಈ ಬಾರಿ ಎಂತಹ ಚಿತ್ರವನ್ನು ಅಭಿಮಾನಿಗಳಿಗೆ ಉಣಬಡಿಸುತ್ತದೆ ಎಂದು ಕಾದು ನೋಡಬೇಕು.

ಇದನ್ನೂ ಓದಿ: Kannada Movies: ಯೂಟ್ಯೂಬ್​ನಲ್ಲಿ ಉಚಿತವಾಗಿ ವೀಕ್ಷಿಸಬಹುದಾದ ಕನ್ನಡದ ಅತ್ಯುತ್ತಮ ಸಿನಿಮಾಗಳ ಪಟ್ಟಿ ಬೇಕೆ?

(Tiger 3 movie shoot will be resume shortly says official sources)

Published On - 12:07 pm, Sun, 11 July 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್