AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟೈಗರ್ 3’ ಚಿತ್ರದಲ್ಲಿ ಅತಿಥಿ ಪಾತ್ರ ಮಾಡ್ತಾರೆ ಜೂನಿಯರ್ ಎನ್​ಟಿಆರ್? ಇದರಲ್ಲಿ ಸತ್ಯವೆಷ್ಟು?

ಯಶ್ ರಾಜ್ ಫಿಲ್ಮ್ಸ್ ನಿರ್ಮಾಣ ಸಂಸ್ಥೆ ಸ್ಪೈ ಯೂನಿವರ್ಸ್ ರೆಡಿ ಮಾಡಿಕೊಂಡಿದೆ. ‘ಟೈಗರ್ ಜಿಂದಾ ಹೈ’, ‘ಪಠಾಣ್’, ‘ವಾರ್’, ‘ಟೈಗರ್ 3’ ಮೊದಲಾದ ಸಿನಿಮಾಗಳು ಈ ಯೂನಿವರ್ಸ್ ಅಡಿಯಲ್ಲಿ ಬರುತ್ತವೆ. ಈ ಕಾರಣದಿಂದಲೇ ‘ಟೈಗರ್ 3’ ಚಿತ್ರದಲ್ಲಿ ಶಾರುಖ್ ಖಾನ್ ಅವರು ‘ಪಠಾಣ್’ ಆಗಿ ಎಂಟ್ರಿ ಕೊಡಲಿದ್ದಾರೆ.

‘ಟೈಗರ್ 3’ ಚಿತ್ರದಲ್ಲಿ ಅತಿಥಿ ಪಾತ್ರ ಮಾಡ್ತಾರೆ ಜೂನಿಯರ್ ಎನ್​ಟಿಆರ್? ಇದರಲ್ಲಿ ಸತ್ಯವೆಷ್ಟು?
ಜೂನಿಯರ್ ಎನ್​ಟಿಆರ್
ರಾಜೇಶ್ ದುಗ್ಗುಮನೆ
|

Updated on: Oct 03, 2023 | 7:45 AM

Share

ಸಲ್ಮಾನ್ ಖಾನ್ ನಟನೆಯ ‘ಟೈಗರ್ 3’ ಸಿನಿಮಾ (Tiger 3 Movie) ರಿಲೀಸ್​ಗೆ ರೆಡಿ ಇದೆ. ದೀಪಾವಳಿ ಪ್ರಯುಕ್ತ ಈ ಚಿತ್ರ ಬಿಡುಗಡೆ ಆಗುತ್ತಿದೆ. ಸಲ್ಮಾನ್ ಖಾನ್​ಗೆ ಜೊತೆಯಾಗಿ ಕತ್ರಿನಾ ಕೈಫ್ ಅವರು ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಶಾರುಖ್ ಖಾನ್ ಅವರು ಅತಿಥಿ ಪಾತ್ರ ಮಾಡಲಿದ್ದಾರೆ ಅನ್ನೋದು ಬಹುತೇಕ ಖಚಿತವಾಗಿದೆ. ಇದರ ಜೊತೆಗೆ ಜೂನಿಯರ್ ಎನ್​ಟಿಆರ್ ಕೂಡ ಈ ಚಿತ್ರದಲ್ಲಿ ಬಂದು ಹೋಗಲಿದ್ದಾರೆ ಎನ್ನಲಾಗಿತ್ತು. ಆದರೆ, ಇದರಲ್ಲಿ ಯಾವುದೇ ಸತ್ಯ ಇಲ್ಲ ಎನ್ನಲಾಗಿದೆ.

ಯಶ್ ರಾಜ್ ಫಿಲ್ಮ್ಸ್ ನಿರ್ಮಾಣ ಸಂಸ್ಥೆ ಸ್ಪೈ ಯೂನಿವರ್ಸ್ ರೆಡಿ ಮಾಡಿಕೊಂಡಿದೆ. ‘ಟೈಗರ್ ಜಿಂದಾ ಹೈ’, ‘ಪಠಾಣ್’, ‘ವಾರ್’, ‘ಟೈಗರ್ 3’ ಮೊದಲಾದ ಸಿನಿಮಾಗಳು ಈ ಯೂನಿವರ್ಸ್ ಅಡಿಯಲ್ಲಿ ಬರುತ್ತವೆ. ಈ ಕಾರಣದಿಂದಲೇ ‘ಟೈಗರ್ 3’ ಚಿತ್ರದಲ್ಲಿ ಶಾರುಖ್ ಖಾನ್ ಅವರು ‘ಪಠಾಣ್’ ಆಗಿ ಎಂಟ್ರಿ ಕೊಡಲಿದ್ದಾರೆ. ಅಷ್ಟೇ ಅಲ್ಲ, ‘ಪಠಾಣ್ Vs ಟೈಗರ್’ ಸಿನಿಮಾ ಕೂಡ ಸಿದ್ಧಗೊಳ್ಳುತ್ತಿದೆ. ಹೀಗಾಗಿ ಜೂನಿಯರ್ ಎನ್​ಟಿಆರ್ ಆಗಮನ ‘ಟೈಗರ್ 3’ ಚಿತ್ರದಲ್ಲಿ ಆಗಲಿದೆ ಎಂದು ಹೇಳಲಾಗಿತ್ತು. ಆದರೆ, ಇದು ಸುಳ್ಳು ಎನ್ನಲಾಗುತ್ತಿದೆ.

‘ವಾರ್ 2’ ಚಿತ್ರದಲ್ಲಿ ಜೂನಿಯರ್ ಎನ್​ಟಿಆರ್ ಮಾಡುವ ಪಾತ್ರ ಯಾವ ರೀತಿಯಲ್ಲಿ ಇರಲಿದೆ ಅನ್ನೋದು ಯಾರಿಗೂ ಸ್ಪಷ್ಟವಾಗಿ ಗೊತ್ತಿಲ್ಲ. ಇದನ್ನು ಸದ್ಯಕ್ಕಂತೂ ರಿವೀಲ್ ಮಾಡುವುದಿಲ್ಲ. ಒಂದೊಮ್ಮೆ ‘ಟೈಗರ್ 3’ ಚಿತ್ರದಲ್ಲಿ ಅತಿಥಿ ಪಾತ್ರ ಮಾಡಿದರೆ ಪಾತ್ರದ ಕುರಿತ ಮಾಹಿತಿ ರಿವೀಲ್ ಆಗಿ ಬಿಡುತ್ತದೆ. ಈ ಕಾರಣದಿಂದ ಜೂನಿಯರ್ ಎನ್​ಟಿಆರ್ ಅವರನ್ನು ಕರೆತರದೇ ಇರಲು ತಂಡ ನಿರ್ಧರಿಸಿದೆ.

ಇದನ್ನೂ ಓದಿ: ಮೂರನೇ ಬಾರಿಗೆ ಒಂದಾದ ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ; ಅಭಿಮಾನಿಗಳಲ್ಲಿ ಮೂಡಿದೆ ನಿರೀಕ್ಷೆ 

ಸದ್ಯ ‘ದೇವರ’ ಸಿನಿಮಾ ಕೆಲಸಗಳಲ್ಲಿ ಜೂನಿಯರ್ ಎನ್​ಟಿಆರ್ ಅವರು ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಜಾನ್ವಿ ಕಪೂರ್ ನಾಯಕಿ. ಈ ಸಿನಿಮಾ ರಿಲೀಸ್ ಆದ ಬಳಿಕ ಅವರು ‘ವಾರ್ 2’ ಚಿತ್ರದ ಕೆಲಸದಲ್ಲಿ ಬ್ಯುಸಿ ಆಗುತ್ತಾರಾ ಅಥವಾ ಪ್ರಶಾಂತ್ ನೀಲ್ ಜೊತೆ ಮಾಡಬೇಕಿರುವ ಸಿನಿಮಾ ಕೈಗೆತ್ತಿಕೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ