‘ಟೈಗರ್ 3’ ಚಿತ್ರದಲ್ಲಿ ಅತಿಥಿ ಪಾತ್ರ ಮಾಡ್ತಾರೆ ಜೂನಿಯರ್ ಎನ್​ಟಿಆರ್? ಇದರಲ್ಲಿ ಸತ್ಯವೆಷ್ಟು?

ಯಶ್ ರಾಜ್ ಫಿಲ್ಮ್ಸ್ ನಿರ್ಮಾಣ ಸಂಸ್ಥೆ ಸ್ಪೈ ಯೂನಿವರ್ಸ್ ರೆಡಿ ಮಾಡಿಕೊಂಡಿದೆ. ‘ಟೈಗರ್ ಜಿಂದಾ ಹೈ’, ‘ಪಠಾಣ್’, ‘ವಾರ್’, ‘ಟೈಗರ್ 3’ ಮೊದಲಾದ ಸಿನಿಮಾಗಳು ಈ ಯೂನಿವರ್ಸ್ ಅಡಿಯಲ್ಲಿ ಬರುತ್ತವೆ. ಈ ಕಾರಣದಿಂದಲೇ ‘ಟೈಗರ್ 3’ ಚಿತ್ರದಲ್ಲಿ ಶಾರುಖ್ ಖಾನ್ ಅವರು ‘ಪಠಾಣ್’ ಆಗಿ ಎಂಟ್ರಿ ಕೊಡಲಿದ್ದಾರೆ.

‘ಟೈಗರ್ 3’ ಚಿತ್ರದಲ್ಲಿ ಅತಿಥಿ ಪಾತ್ರ ಮಾಡ್ತಾರೆ ಜೂನಿಯರ್ ಎನ್​ಟಿಆರ್? ಇದರಲ್ಲಿ ಸತ್ಯವೆಷ್ಟು?
ಜೂನಿಯರ್ ಎನ್​ಟಿಆರ್
Follow us
|

Updated on: Oct 03, 2023 | 7:45 AM

ಸಲ್ಮಾನ್ ಖಾನ್ ನಟನೆಯ ‘ಟೈಗರ್ 3’ ಸಿನಿಮಾ (Tiger 3 Movie) ರಿಲೀಸ್​ಗೆ ರೆಡಿ ಇದೆ. ದೀಪಾವಳಿ ಪ್ರಯುಕ್ತ ಈ ಚಿತ್ರ ಬಿಡುಗಡೆ ಆಗುತ್ತಿದೆ. ಸಲ್ಮಾನ್ ಖಾನ್​ಗೆ ಜೊತೆಯಾಗಿ ಕತ್ರಿನಾ ಕೈಫ್ ಅವರು ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಶಾರುಖ್ ಖಾನ್ ಅವರು ಅತಿಥಿ ಪಾತ್ರ ಮಾಡಲಿದ್ದಾರೆ ಅನ್ನೋದು ಬಹುತೇಕ ಖಚಿತವಾಗಿದೆ. ಇದರ ಜೊತೆಗೆ ಜೂನಿಯರ್ ಎನ್​ಟಿಆರ್ ಕೂಡ ಈ ಚಿತ್ರದಲ್ಲಿ ಬಂದು ಹೋಗಲಿದ್ದಾರೆ ಎನ್ನಲಾಗಿತ್ತು. ಆದರೆ, ಇದರಲ್ಲಿ ಯಾವುದೇ ಸತ್ಯ ಇಲ್ಲ ಎನ್ನಲಾಗಿದೆ.

ಯಶ್ ರಾಜ್ ಫಿಲ್ಮ್ಸ್ ನಿರ್ಮಾಣ ಸಂಸ್ಥೆ ಸ್ಪೈ ಯೂನಿವರ್ಸ್ ರೆಡಿ ಮಾಡಿಕೊಂಡಿದೆ. ‘ಟೈಗರ್ ಜಿಂದಾ ಹೈ’, ‘ಪಠಾಣ್’, ‘ವಾರ್’, ‘ಟೈಗರ್ 3’ ಮೊದಲಾದ ಸಿನಿಮಾಗಳು ಈ ಯೂನಿವರ್ಸ್ ಅಡಿಯಲ್ಲಿ ಬರುತ್ತವೆ. ಈ ಕಾರಣದಿಂದಲೇ ‘ಟೈಗರ್ 3’ ಚಿತ್ರದಲ್ಲಿ ಶಾರುಖ್ ಖಾನ್ ಅವರು ‘ಪಠಾಣ್’ ಆಗಿ ಎಂಟ್ರಿ ಕೊಡಲಿದ್ದಾರೆ. ಅಷ್ಟೇ ಅಲ್ಲ, ‘ಪಠಾಣ್ Vs ಟೈಗರ್’ ಸಿನಿಮಾ ಕೂಡ ಸಿದ್ಧಗೊಳ್ಳುತ್ತಿದೆ. ಹೀಗಾಗಿ ಜೂನಿಯರ್ ಎನ್​ಟಿಆರ್ ಆಗಮನ ‘ಟೈಗರ್ 3’ ಚಿತ್ರದಲ್ಲಿ ಆಗಲಿದೆ ಎಂದು ಹೇಳಲಾಗಿತ್ತು. ಆದರೆ, ಇದು ಸುಳ್ಳು ಎನ್ನಲಾಗುತ್ತಿದೆ.

‘ವಾರ್ 2’ ಚಿತ್ರದಲ್ಲಿ ಜೂನಿಯರ್ ಎನ್​ಟಿಆರ್ ಮಾಡುವ ಪಾತ್ರ ಯಾವ ರೀತಿಯಲ್ಲಿ ಇರಲಿದೆ ಅನ್ನೋದು ಯಾರಿಗೂ ಸ್ಪಷ್ಟವಾಗಿ ಗೊತ್ತಿಲ್ಲ. ಇದನ್ನು ಸದ್ಯಕ್ಕಂತೂ ರಿವೀಲ್ ಮಾಡುವುದಿಲ್ಲ. ಒಂದೊಮ್ಮೆ ‘ಟೈಗರ್ 3’ ಚಿತ್ರದಲ್ಲಿ ಅತಿಥಿ ಪಾತ್ರ ಮಾಡಿದರೆ ಪಾತ್ರದ ಕುರಿತ ಮಾಹಿತಿ ರಿವೀಲ್ ಆಗಿ ಬಿಡುತ್ತದೆ. ಈ ಕಾರಣದಿಂದ ಜೂನಿಯರ್ ಎನ್​ಟಿಆರ್ ಅವರನ್ನು ಕರೆತರದೇ ಇರಲು ತಂಡ ನಿರ್ಧರಿಸಿದೆ.

ಇದನ್ನೂ ಓದಿ: ಮೂರನೇ ಬಾರಿಗೆ ಒಂದಾದ ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ; ಅಭಿಮಾನಿಗಳಲ್ಲಿ ಮೂಡಿದೆ ನಿರೀಕ್ಷೆ 

ಸದ್ಯ ‘ದೇವರ’ ಸಿನಿಮಾ ಕೆಲಸಗಳಲ್ಲಿ ಜೂನಿಯರ್ ಎನ್​ಟಿಆರ್ ಅವರು ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಜಾನ್ವಿ ಕಪೂರ್ ನಾಯಕಿ. ಈ ಸಿನಿಮಾ ರಿಲೀಸ್ ಆದ ಬಳಿಕ ಅವರು ‘ವಾರ್ 2’ ಚಿತ್ರದ ಕೆಲಸದಲ್ಲಿ ಬ್ಯುಸಿ ಆಗುತ್ತಾರಾ ಅಥವಾ ಪ್ರಶಾಂತ್ ನೀಲ್ ಜೊತೆ ಮಾಡಬೇಕಿರುವ ಸಿನಿಮಾ ಕೈಗೆತ್ತಿಕೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ