AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋತು ಸುಣ್ಣವಾದ ಸರಣಿಯಲ್ಲಿ ನಾಲ್ಕನೇ ಸಿನಿಮಾ; ಟೈಗರ್ ಶ್ರಾಫ್​ ಸಿನಿಮಾಗೆ ಸಿಗ್ತಿಲ್ಲ ನಿರ್ದೇಶಕ

‘ಬಾಘಿ’ ಹಾಗೂ ‘ಬಾಘಿ 2’ ಚಿತ್ರಗಳು ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದ್ದವು. ಆದರೆ, ‘ಬಾಘಿ 3’ ಸಿನಿಮಾ ಅಂದುಕೊಟ್ಟ ಮಟ್ಟಕ್ಕೆ ಹಿಟ್ ಆಗಿಲ್ಲ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಗಳಿಸಿದ್ದು ಕೇವಲ 93 ಕೋಟಿ ರೂಪಾಯಿ. ಈ ಚಿತ್ರ ವಿಮರ್ಶೆಯಲ್ಲಿ ಸೋತಿದೆ. ಈಗ ನಾಲ್ಕನೇ ಪಾರ್ಟ್ ಬರುತ್ತಿದೆ.

ಸೋತು ಸುಣ್ಣವಾದ ಸರಣಿಯಲ್ಲಿ ನಾಲ್ಕನೇ ಸಿನಿಮಾ; ಟೈಗರ್ ಶ್ರಾಫ್​ ಸಿನಿಮಾಗೆ ಸಿಗ್ತಿಲ್ಲ ನಿರ್ದೇಶಕ
ಟೈಗರ್ ಶ್ರಾಫ್
ರಾಜೇಶ್ ದುಗ್ಗುಮನೆ
|

Updated on:Jul 29, 2024 | 12:45 PM

Share

ಬಾಲಿವುಡ್​ನ ಖ್ಯಾತ ನಟ ಟೈಗರ್ ಶ್ರಾಫ್ ಅವರು ‘ಬಡೇ ಮಿಯಾ ಚೋಟೆ ಮಿಯಾ’ ಸಿನಿಮಾದಲ್ಲಿ ನಟಿಸಿದ್ದರು. ಈ ಸಿನಿಮಾ ಅಂದುಕೊಂಡ ರೀತಿಯಲ್ಲಿ ಕಮಾಲ್ ಮಾಡಿಲ್ಲ. ಇದಾದ ಬಳಿಕ ಟೈಗರ್ ಶ್ರಾಫ್ ಅವರಿಗೆ ಆಫರ್​ಗಳೇ ಬಂದಿಲ್ಲ ಎನ್ನಲಾಗಿದೆ. ಅಷ್ಟೇ ಅಲ್ಲ ಈಗ ಪಡೆಯುತ್ತಿರೋ ಸಂಭಾವನೆಗಿಂತ ಅರ್ಧದಷ್ಟು ಮೊತ್ತವನ್ನು ಕಡಿಮೆ ಮಾಡಿಕೊಳ್ಳುವಂತೆ ಅವರಿಗೆ ಸೂಚಿಸಲಾಗಿದೆ. ಈ ಮಧ್ಯೆ ಅವರಿಗೆ ‘ಬಾಘಿ 4’ ಚಿತ್ರದ ತಂಡದಿಂದ ಆಫರ್ ಬಂದಿದೆ ಎನ್ನಲಾಗಿದೆ.

‘ಬಾಘಿ’ ಹಾಗೂ ‘ಬಾಘಿ 2’ ಚಿತ್ರಗಳು ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದ್ದವು. ಆದರೆ, ‘ಬಾಘಿ 3’ ಸಿನಿಮಾ ಸಾಧಾರಣ ಹಿಟ್ ಎನಿಸಿಕೊಂಡಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಗಳಿಸಿದ್ದು ಕೇವಲ 93 ಕೋಟಿ ರೂಪಾಯಿ. ಈ ಚಿತ್ರ ವಿಮರ್ಶೆಯಲ್ಲಿ ಸೋತಿದೆ. ಈಗ ಅವರಿಗೆ ‘ಬಾಘಿ 4’ ಸಿನಿಮಾ ಕಡೆಯಿಂದ ಆಫರ್ ಬಂದಿದೆ ಎನ್ನಲಾಗಿದೆ.

2016ರಲ್ಲಿ ‘ಬಾಘಿ’ ರಿಲೀಸ್ ಆಯಿತು. 2018ರಲ್ಲಿ ‘ಬಾಘಿ 2’ ಹಾಗೂ 2020ರಲ್ಲಿ ‘ಬಾಘಿ 3’ ರಿಲೀಸ್ ಆಗಿದೆ. ಈಗ ನಾಲ್ಕು ವರ್ಷಗಳ ಬಳಿಕ ಈ ಚಿತ್ರಕ್ಕೆ ಸೀಕ್ವೆಲ್ ಮಾಡುವ ಆಲೋಚನೆ ನಿರ್ಮಾಪಕ ಸಾಜಿದ್ ನಾಡಿಯಾದ್ವಾಲಾಗೆ ಬಂದಿದೆ. ಈಗ ಅವರು ನಿರ್ದೇಶಕರ ಹುಡುಕಾಟದಲ್ಲಿ ಇದ್ದಾರೆ.

ಟೈಗರ್ ಶ್ರಾಫ್ ಅವರನ್ನು ಜನರು ಇತ್ತೀಚೆಗೆ ತಿರಸ್ಕರಿಸುತ್ತಿದ್ದಾರೆ. ಅವರು ಹೀರೋ ಆಗಿ ನಟಿಸಿದ ಸಿನಿಮಾಗಳು ಮೆಚ್ಚುಗೆ ಪಡೆಯುತ್ತಿಲ್ಲ. ಅದರಲ್ಲೂ ಅವರ ಸಿನಿಮಾಗಳಲ್ಲಿ ಇರೋದೆಲ್ಲ ಕೇವಲ ಆ್ಯಕ್ಷನ್. ಹೀಗಾಗಿ, ಒಂದು ವರ್ಗದ ಜನರಿಗೆ ಈ ಸಿನಿಮಾ ಅಷ್ಟಾಗಿ ಇಷ್ಟ ಆಗದೇ ಇರಬಹುದು. ಆದರೂ ನಿರ್ಮಾಪಕರು ರಿಸ್ಕ್ ತೆಗೆದುಕೊಳ್ಳೋಕೆ ರೆಡಿ ಆಗಿದ್ದಾರೆ.

ಇದನ್ನೂ ಓದಿ: ದಿಶಾ ಪಟಾಣಿ ವಿಚಾರದಲ್ಲಿ ಕಾಲೆಳೆದ ಅಕ್ಷಯ್ ಕುಮಾರ್​​ಗೆ ತಿರುಗೇಟು ಕೊಟ್ಟ ಟೈಗರ್ ಶ್ರಾಫ್

‘ಬಾಘಿ 4’ ಚಿತ್ರಕ್ಕೆ ನಿರ್ದೇಶಕರು ಸಿಕ್ಕ ಬಳಿಕವೇ ಈ ಬಗ್ಗೆ ಅಧಿಕೃತ ಘೋಷಣೆ ಆಗಲಿದೆ. ಟೈಗರ್ ಶ್ರಾಫ್ ಸದ್ಯ ‘ಈಗಲ್’ ಹಾಗೂ ‘ಸಿಂಗಂ ಅಗೇನ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:44 pm, Mon, 29 July 24

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ