AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತ್ಯನಾರಾಯಣ ಕಥೆ ವಿಚಾರದಲ್ಲಿ ತಪ್ಪು ಮಾಡುವ ಮುನ್ನವೇ ಎಚ್ಚೆತ್ತುಕೊಂಡು ನಿರ್ದೇಶಕ; ಸಡನ್​ ಟ್ವಿಸ್ಟ್​

ಹಿಂದುಗಳಲ್ಲಿ ಸತ್ಯನಾರಾಯಣ ಕಥೆಯ ಬಗ್ಗೆ ಅಪಾರ ನಂಬಿಕೆ ಇದೆ. ಹಾಗಾಗಿ ಟೈಟಲ್​ ಬದಲಿಸುವ ನಿರ್ಧಾರಕ್ಕೆ ಬರಲಾಗಿದೆ. ಈ ಬಗ್ಗೆ ಚಿತ್ರತಂಡ ಹೇಳಿಕೆ ಬಿಡುಗಡೆ ಮಾಡಿದೆ.

ಸತ್ಯನಾರಾಯಣ ಕಥೆ ವಿಚಾರದಲ್ಲಿ ತಪ್ಪು ಮಾಡುವ ಮುನ್ನವೇ ಎಚ್ಚೆತ್ತುಕೊಂಡು ನಿರ್ದೇಶಕ; ಸಡನ್​ ಟ್ವಿಸ್ಟ್​
ಸಮೀರ್​ ವಿದ್ವಾಂಸ್​, ಕಾರ್ತಿಕ್​ ಆರ್ಯನ್​
TV9 Web
| Edited By: |

Updated on: Jul 04, 2021 | 9:58 AM

Share

ಇತ್ತೀಚೆಗೆ ಹಲವು ಸಿನಿಮಾ ಮತ್ತು ವೆಬ್​ ಸಿರೀಸ್​ಗಳು ವಿವಾದ ಮಾಡಿಕೊಳ್ಳುತ್ತಿವೆ. ಅದರಲ್ಲೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ಕಿರಿಕ್​ ಆಗುತ್ತಿರುವುದೇ ಹೆಚ್ಚು. ಕನ್ನಡದ ‘ಪೊಗರು’ ಸಿನಿಮಾ, ಹಿಂದಿಯ ‘ತಾಂಡವ್​’ ವೆಬ್​ ಸರಣಿ ಸೇರಿದಂತೆ ಅನೇಕ ಉದಾಹರಣೆಗಳನ್ನು ನೋಡಬಹುದು. ಆದರೆ ಇಂಥ ಕಿರಿಕ್​ನ ಸಹವಾಸವೇ ಬೇಡ ಎಂದು ಆರಂಭದಲ್ಲಿಯೇ ಬಾಲಿವುಡ್​ನ ಸ್ಟಾರ್​ ನಟನ ಚಿತ್ರದಲ್ಲಿ ದೊಡ್ಡ ಬದಲಾವಣೆ ಮಾಡಿಕೊಳ್ಳಲಾಗುತ್ತಿದೆ. ಹೌದು, ಕಾರ್ತಿಕ್​ ಆರ್ಯನ್​ ನಟನೆಯ ಹೊಸ ಚಿತ್ರಕ್ಕೆ ಶೀರ್ಷಿಕೆ ಬದಲಾಗುತ್ತಿದೆ.

ನಟ ಕಾರ್ತಿಕ್​ ಆರ್ಯನ್​ ಮತ್ತು ನಿರ್ದೇಶಕ ಸಮೀರ್​ ವಿದ್ವಾಂಸ್​​ ಕಾಂಬಿನೇಷನ್​ನಲ್ಲಿ ಮೂಡಿಬರಬೇಕಿರುವ ಸಿನಿಮಾಗೆ ‘ಸತ್ಯನಾರಾಯಣ್​ ಕಿ ಕಥಾ’ ಎಂದು ಶೀರ್ಷಿಕೆ ಇಡಲಾಗಿತ್ತು. ಹಿಂದುಗಳಲ್ಲಿ ಸತ್ಯನಾರಾಯಣ ಕಥೆಯ ಬಗ್ಗೆ ಅಪಾರ ನಂಬಿಕೆ ಇದೆ. ಹಾಗಾಗಿ ಇಂಥ ಶೀರ್ಷಿಕೆಯನ್ನು ಸಿನಿಮಾಗೆ ಇಟ್ಟುಕೊಂಡು ಇಲ್ಲಸಲ್ಲದ್ದನ್ನು ತೋರಿಸಿದರೆ ಜನರು ಸಿಟ್ಟಾಗುವುದು ಗ್ಯಾರಂಟಿ ಎಂಬುದು ಚಿತ್ರತಂಡಕ್ಕೆ ಅರಿವಾದಂತಿದೆ. ಹಾಗಾಗಿ ಟೈಟಲ್​ ಬದಲಿಸುವ ನಿರ್ಧಾರಕ್ಕೆ ಬರಲಾಗಿದೆ.

‘ಸೃಜನಾತ್ಮಕವಾಗಿ ಒಂದು ಸಿನಿಮಾದ ಟೈಟಲ್​ ಇಡಲಾಗುತ್ತದೆ. ಇತ್ತೀಚೆಗೆ ನಾವು ಅನೌನ್ಸ್​ ಮಾಡಿರುವ ಸತ್ಯನಾರಾಯಣ್​ ಕಿ ಕಥಾ ಚಿತ್ರದ ಶೀರ್ಷಿಕೆ ಬದಲಾಯಿಸಲು ತೀರ್ಮಾನಿಸಿದ್ದೇವೆ. ಜನರ ಭಾವನೆಗೆ ಧಕ್ಕೆ ತರುವುದನ್ನು ತಪ್ಪಿಸಬೇಕು ಎಂಬ ಕಾರಣಕ್ಕೆ ಈ ನಿರ್ಧಾರ ಮಾಡಿದ್ದೇವೆ. ಇದರ ಹಿಂದೆ ಬೇರೆ ಯಾವುದೇ ಉದ್ದೇಶ ಇರಲಿಲ್ಲ. ಈ ನಿರ್ಧಾರಕ್ಕೆ ನಿರ್ಮಾಪಕರು ಮತ್ತು ಇಡೀ ಕ್ರಿಯೇಟಿವ್​ ತಂಡದ ಬೆಂಬಲ ಇದೆ. ಮುಂದಿನ ದಿನಗಳಲ್ಲಿ ಹೊಸ ಟೈಟಲ್​ ಏನೆಂಬುದನ್ನು ತಿಳಿಸುತ್ತೇವೆ’ ಎಂದು ನಿರ್ದೇಶಕ ಸಮೀರ್​ ವಿದ್ವಾಂಸ್​​ ಟ್ವೀಟ್​ ಮಾಡಿದ್ದಾರೆ.

ಈ ವರ್ಷ ಅಂತ್ಯದಲ್ಲಿ ಈ ಸಿನಿಮಾ ಸೆಟ್ಟೇರಲಿದೆ. ಸಾಜಿದ್​ ನಾಡಿಯದ್ವಾಲಾ ಅವರು ನಿರ್ಮಾಣ ಮಾಡುತ್ತಿದ್ದಾರೆ. ಇತ್ತೀಚೆಗೆ ಕರಣ್​ ಜೋಹರ್​ ಜೊತೆಗಿನ ಕಿರಿಕ್​ನ ಕಾರಣದಿಂದ ಕಾರ್ತಿಕ್​ ಆರ್ಯನ್​ ಸುದ್ದಿ ಆಗಿದ್ದರು. ‘ದೋಸ್ತಾನಾ 2’ ಸೇರಿದಂತೆ ಬಾಲಿವುಡ್​ನ ಕೆಲವು ಪ್ರಾಜೆಕ್ಟ್​ಗಳಿಂದ ಅವರನ್ನು ಕೈ ಬಿಡಲಾಗಿತ್ತು. ಪ್ರಸ್ತುತ ‘ಧಮಾಕಾ’, ‘ಭೂಲ್​ ಭುಲಯ್ಯ 2’ ಮುಂತಾದ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ.

ಇದನ್ನೂ ಓದಿ:

ಕಾರ್ತಿಕ್​ ಆರ್ಯನ್​ಗೆ ಬರುತ್ತಿಲ್ಲ ಸಿನಿಮಾ ಆಫರ್​; ಕರಣ್​ ಜೋಹರ್​ ಜತೆಗಿನ ವೈಷಮ್ಯವೇ ಮುಳುವಾಯ್ತಾ?

ಸುಶಾಂತ್​ ಸಿಂಗ್​ ರಜಪೂತ್ ರೀತಿಯೇ ಕಾರ್ತಿಕ್​ ಆರ್ಯನ್​ಗೆ ಅನ್ಯಾಯ ಆಗಲು ಕತ್ರಿನಾ ಕಾರಣವೇ?

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?