AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತ್ಯನಾರಾಯಣ ಕಥೆ ವಿಚಾರದಲ್ಲಿ ತಪ್ಪು ಮಾಡುವ ಮುನ್ನವೇ ಎಚ್ಚೆತ್ತುಕೊಂಡು ನಿರ್ದೇಶಕ; ಸಡನ್​ ಟ್ವಿಸ್ಟ್​

ಹಿಂದುಗಳಲ್ಲಿ ಸತ್ಯನಾರಾಯಣ ಕಥೆಯ ಬಗ್ಗೆ ಅಪಾರ ನಂಬಿಕೆ ಇದೆ. ಹಾಗಾಗಿ ಟೈಟಲ್​ ಬದಲಿಸುವ ನಿರ್ಧಾರಕ್ಕೆ ಬರಲಾಗಿದೆ. ಈ ಬಗ್ಗೆ ಚಿತ್ರತಂಡ ಹೇಳಿಕೆ ಬಿಡುಗಡೆ ಮಾಡಿದೆ.

ಸತ್ಯನಾರಾಯಣ ಕಥೆ ವಿಚಾರದಲ್ಲಿ ತಪ್ಪು ಮಾಡುವ ಮುನ್ನವೇ ಎಚ್ಚೆತ್ತುಕೊಂಡು ನಿರ್ದೇಶಕ; ಸಡನ್​ ಟ್ವಿಸ್ಟ್​
ಸಮೀರ್​ ವಿದ್ವಾಂಸ್​, ಕಾರ್ತಿಕ್​ ಆರ್ಯನ್​
TV9 Web
| Edited By: |

Updated on: Jul 04, 2021 | 9:58 AM

Share

ಇತ್ತೀಚೆಗೆ ಹಲವು ಸಿನಿಮಾ ಮತ್ತು ವೆಬ್​ ಸಿರೀಸ್​ಗಳು ವಿವಾದ ಮಾಡಿಕೊಳ್ಳುತ್ತಿವೆ. ಅದರಲ್ಲೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ಕಿರಿಕ್​ ಆಗುತ್ತಿರುವುದೇ ಹೆಚ್ಚು. ಕನ್ನಡದ ‘ಪೊಗರು’ ಸಿನಿಮಾ, ಹಿಂದಿಯ ‘ತಾಂಡವ್​’ ವೆಬ್​ ಸರಣಿ ಸೇರಿದಂತೆ ಅನೇಕ ಉದಾಹರಣೆಗಳನ್ನು ನೋಡಬಹುದು. ಆದರೆ ಇಂಥ ಕಿರಿಕ್​ನ ಸಹವಾಸವೇ ಬೇಡ ಎಂದು ಆರಂಭದಲ್ಲಿಯೇ ಬಾಲಿವುಡ್​ನ ಸ್ಟಾರ್​ ನಟನ ಚಿತ್ರದಲ್ಲಿ ದೊಡ್ಡ ಬದಲಾವಣೆ ಮಾಡಿಕೊಳ್ಳಲಾಗುತ್ತಿದೆ. ಹೌದು, ಕಾರ್ತಿಕ್​ ಆರ್ಯನ್​ ನಟನೆಯ ಹೊಸ ಚಿತ್ರಕ್ಕೆ ಶೀರ್ಷಿಕೆ ಬದಲಾಗುತ್ತಿದೆ.

ನಟ ಕಾರ್ತಿಕ್​ ಆರ್ಯನ್​ ಮತ್ತು ನಿರ್ದೇಶಕ ಸಮೀರ್​ ವಿದ್ವಾಂಸ್​​ ಕಾಂಬಿನೇಷನ್​ನಲ್ಲಿ ಮೂಡಿಬರಬೇಕಿರುವ ಸಿನಿಮಾಗೆ ‘ಸತ್ಯನಾರಾಯಣ್​ ಕಿ ಕಥಾ’ ಎಂದು ಶೀರ್ಷಿಕೆ ಇಡಲಾಗಿತ್ತು. ಹಿಂದುಗಳಲ್ಲಿ ಸತ್ಯನಾರಾಯಣ ಕಥೆಯ ಬಗ್ಗೆ ಅಪಾರ ನಂಬಿಕೆ ಇದೆ. ಹಾಗಾಗಿ ಇಂಥ ಶೀರ್ಷಿಕೆಯನ್ನು ಸಿನಿಮಾಗೆ ಇಟ್ಟುಕೊಂಡು ಇಲ್ಲಸಲ್ಲದ್ದನ್ನು ತೋರಿಸಿದರೆ ಜನರು ಸಿಟ್ಟಾಗುವುದು ಗ್ಯಾರಂಟಿ ಎಂಬುದು ಚಿತ್ರತಂಡಕ್ಕೆ ಅರಿವಾದಂತಿದೆ. ಹಾಗಾಗಿ ಟೈಟಲ್​ ಬದಲಿಸುವ ನಿರ್ಧಾರಕ್ಕೆ ಬರಲಾಗಿದೆ.

‘ಸೃಜನಾತ್ಮಕವಾಗಿ ಒಂದು ಸಿನಿಮಾದ ಟೈಟಲ್​ ಇಡಲಾಗುತ್ತದೆ. ಇತ್ತೀಚೆಗೆ ನಾವು ಅನೌನ್ಸ್​ ಮಾಡಿರುವ ಸತ್ಯನಾರಾಯಣ್​ ಕಿ ಕಥಾ ಚಿತ್ರದ ಶೀರ್ಷಿಕೆ ಬದಲಾಯಿಸಲು ತೀರ್ಮಾನಿಸಿದ್ದೇವೆ. ಜನರ ಭಾವನೆಗೆ ಧಕ್ಕೆ ತರುವುದನ್ನು ತಪ್ಪಿಸಬೇಕು ಎಂಬ ಕಾರಣಕ್ಕೆ ಈ ನಿರ್ಧಾರ ಮಾಡಿದ್ದೇವೆ. ಇದರ ಹಿಂದೆ ಬೇರೆ ಯಾವುದೇ ಉದ್ದೇಶ ಇರಲಿಲ್ಲ. ಈ ನಿರ್ಧಾರಕ್ಕೆ ನಿರ್ಮಾಪಕರು ಮತ್ತು ಇಡೀ ಕ್ರಿಯೇಟಿವ್​ ತಂಡದ ಬೆಂಬಲ ಇದೆ. ಮುಂದಿನ ದಿನಗಳಲ್ಲಿ ಹೊಸ ಟೈಟಲ್​ ಏನೆಂಬುದನ್ನು ತಿಳಿಸುತ್ತೇವೆ’ ಎಂದು ನಿರ್ದೇಶಕ ಸಮೀರ್​ ವಿದ್ವಾಂಸ್​​ ಟ್ವೀಟ್​ ಮಾಡಿದ್ದಾರೆ.

ಈ ವರ್ಷ ಅಂತ್ಯದಲ್ಲಿ ಈ ಸಿನಿಮಾ ಸೆಟ್ಟೇರಲಿದೆ. ಸಾಜಿದ್​ ನಾಡಿಯದ್ವಾಲಾ ಅವರು ನಿರ್ಮಾಣ ಮಾಡುತ್ತಿದ್ದಾರೆ. ಇತ್ತೀಚೆಗೆ ಕರಣ್​ ಜೋಹರ್​ ಜೊತೆಗಿನ ಕಿರಿಕ್​ನ ಕಾರಣದಿಂದ ಕಾರ್ತಿಕ್​ ಆರ್ಯನ್​ ಸುದ್ದಿ ಆಗಿದ್ದರು. ‘ದೋಸ್ತಾನಾ 2’ ಸೇರಿದಂತೆ ಬಾಲಿವುಡ್​ನ ಕೆಲವು ಪ್ರಾಜೆಕ್ಟ್​ಗಳಿಂದ ಅವರನ್ನು ಕೈ ಬಿಡಲಾಗಿತ್ತು. ಪ್ರಸ್ತುತ ‘ಧಮಾಕಾ’, ‘ಭೂಲ್​ ಭುಲಯ್ಯ 2’ ಮುಂತಾದ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ.

ಇದನ್ನೂ ಓದಿ:

ಕಾರ್ತಿಕ್​ ಆರ್ಯನ್​ಗೆ ಬರುತ್ತಿಲ್ಲ ಸಿನಿಮಾ ಆಫರ್​; ಕರಣ್​ ಜೋಹರ್​ ಜತೆಗಿನ ವೈಷಮ್ಯವೇ ಮುಳುವಾಯ್ತಾ?

ಸುಶಾಂತ್​ ಸಿಂಗ್​ ರಜಪೂತ್ ರೀತಿಯೇ ಕಾರ್ತಿಕ್​ ಆರ್ಯನ್​ಗೆ ಅನ್ಯಾಯ ಆಗಲು ಕತ್ರಿನಾ ಕಾರಣವೇ?

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!