AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ವಿಜಯ್‌ 52ನೇ ಜನ್ಮದಿನಕ್ಕೆ ತ್ರಿಶಾ ಕೃಷ್ಣನ್ ಮೌನ: ಶುಭಾಶಯದ ಸುಳಿವೇ ಇಲ್ಲ

ದಳಪತಿ ವಿಜಯ್ ಮತ್ತು ತ್ರಿಶಾ ಕೃಷ್ಣನ್ ನಡುವೆ ಆಪ್ತ ಒಡನಾಟವಿದೆ ಎಂಬುದು ಗುಟ್ಟೇನೂ ಅಲ್ಲ. ಆದರೂ ಕೂಡ ವಿಜಯ್ ಹುಟ್ಟುಹಬ್ಬಕ್ಕೆ ತ್ರಿಶಾ ಅವರು ವಿಶ್ ಮಾಡಿಲ್ಲ. ಇದು ಅಭಿಮಾನಿಗಳ ವಲಯದಲ್ಲಿ ಚರ್ಚೆಗೆ ಕಾರಣ ಆಗಿದೆ. ತ್ರಿಶಾ ಮೌನಕ್ಕೆ ಕಾರಣ ಏನಿರಬಹುದು ಎಂಬ ಪ್ರಶ್ನೆ ಫ್ಯಾನ್ಸ್ ಮನದಲ್ಲಿ ಮೂಡಿದೆ.

ಸಿಎಂ ವಿಜಯ್‌ 52ನೇ ಜನ್ಮದಿನಕ್ಕೆ ತ್ರಿಶಾ ಕೃಷ್ಣನ್ ಮೌನ: ಶುಭಾಶಯದ ಸುಳಿವೇ ಇಲ್ಲ
Vijay, Trisha Krishnan
ಮದನ್​ ಕುಮಾರ್​
|

Updated on: Jun 22, 2026 | 9:01 PM

Share

ತಮಿಳುನಾಡು ಮುಖ್ಯಮಂತ್ರಿ ಹಾಗೂ ತಮಿಳಗ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷ ಸಿ. ಜೋಸೆಫ್ ವಿಜಯ್ (CM Vijay) ಇಂದು (ಜೂನ್ 22) 52ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ನಟನೆಯಿಂದ ರಾಜಕೀಯಕ್ಕೆ ಪ್ರವೇಶಿಸಿ ಇತ್ತೀಚೆಗಷ್ಟೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ವಿಜಯ್ ಅವರಿಗೆ ದೇಶದಾದ್ಯಂತ ರಾಜಕಾರಣಿಗಳು, ಚಿತ್ರರಂಗದ ಪ್ರಮುಖರು ಹಾಗೂ ಕೋಟ್ಯಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಶುಭ ಕೋರುತ್ತಿದ್ದಾರೆ. ಆದರೆ ಅವರ ಆಪ್ತ ಗೆಳತಿ ತ್ರಿಶಾ ಕೃಷ್ಣನ್ (Trisha Krishnan) ಮಾತ್ರ ಮೌನ ತಾಳಿದ್ದಾರೆ!

ಹಿರಿಯ ನಟ ಕಮಲ್ ಹಾಸನ್ ಅವರು ಟ್ವೀಟ್ ಮಾಡಿ, ‘ಕೋಟಿ ಕೋಟಿ ಹೃದಯಗಳನ್ನು ಗೆದ್ದಿರುವ ಗೌರವಾನ್ವಿತ ತಮಿಳುನಾಡು ಮುಖ್ಯಮಂತ್ರಿ, ತಮಿಳಗ ವೆಟ್ರಿ ಕಳಗಂ ಅಧ್ಯಕ್ಷ ಹಾಗೂ ನನ್ನ ಪ್ರೀತಿಯ ಕಿರಿಯ ಸೋದರ ವಿಜಯ್ ಅವರಿಗೆ ಹಾರ್ದಿಕ ಜನ್ಮದಿನದ ಶುಭಾಶಯಗಳು’ ಎಂದು ಬರೆದುಕೊಂಡಿದ್ದಾರೆ. ನಟಿ ಮತ್ತು ರಾಜಕಾರಣಿ ಖುಷ್ಬೂ ಸುಂದರ್ ಕೂಡ ವಿಶ್ ಮಾಡಿದ್ದಾರೆ.

ಖುಷ್ಬೂ ಅವರು ವಿಜಯ್ ಜೊತೆಗಿನ ಫೋಟೋ ಹಂಚಿಕೊಂಡು, ‘ನನ್ನ ಸಹೋದರ, ತಮಿಳುನಾಡಿನ ಸಿಎಂ ವಿಜಯ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ದೇವರು ನಿಮಗೆ ಆರೋಗ್ಯ, ಆಯುಷ್ಯ ನೀಡಿ ಆಶೀರ್ವದಿಸಲಿ’ ಎಂದು ಹಾರೈಸಿದ್ದಾರೆ. ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ಲಾಲ್, ನಟರಾದ ವಿಶಾಲ್ ಮತ್ತು ರಾಘವ ಲಾರೆನ್ಸ್ ಕೂಡ ವಿಜಯ್‌ಗೆ ಶುಭ ಕೋರಿದ್ದಾರೆ. ಈ ಬಾರಿ ವಿಜಯ್ ಸಿಎಂ ಆಗಿರುವುದರಿಂದ ಅವರ ಹುಟ್ಟುಹಬ್ಬದ ಸಂಭ್ರಮ ದುಪ್ಪಟ್ಟಾಗಿದೆ ಎಂದು ಸಹೋದ್ಯೋಗಿಗಳು ಸಂತಸ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ತ್ರಿಶಾ ಜೊತೆಯಲ್ಲೇ ಬಂದು ಅಜಿತ್ ತಾಯಿಯ ಅಂತಿಮ ದರ್ಶನ ಪಡೆದ ಸಿಎಂ ವಿಜಯ್

ಪ್ರತಿ ವರ್ಷ ವಿಜಯ್ ಜನ್ಮದಿನಕ್ಕೆ ಎಲ್ಲರಿಗಿಂತ ಮುಂಚಿತವಾಗಿ ವಿಶೇಷವಾಗಿ ಶುಭ ಕೋರುತ್ತಿದ್ದ ನಟಿ ತ್ರಿಶಾ ಕೃಷ್ಣನ್ ಈ ಬಾರಿ ಇನ್ನು ಯಾವುದೇ ಪೋಸ್ಟ್ ಹಾಕದಿರುವುದು ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಸೋಶಿಯಲ್ ಮೀಡಿಯಾದಲ್ಲಿ ವಿಜಯ್ ಬರ್ತ್‌ಡೇ ಟ್ರೆಂಡ್ ಆಗುತ್ತಿದ್ದರೆ, ಅಭಿಮಾನಿಗಳು ಮಾತ್ರ ‘ತ್ರಿಶಾ ಅವರ ಶುಭ ಹಾರೈಕೆಯ ಪೋಸ್ಟ್‌ಗಾಗಿ ನಾವು ಕಾಯುತ್ತಿದ್ದೇವೆ’ ಎಂದು ಕಮೆಂಟ್ ಮಾಡುತ್ತಿದ್ದಾರೆ. ಕೆಲವರಂತೂ ತ್ರಿಶಾ ಅವರ ಹಳೆಯ ಟ್ವೀಟ್‌ಗಳನ್ನು ಮರುಹಂಚಿಕೊಂಡು, ‘ನಿಮ್ಮ ಪೋಸ್ಟ್‌ಗಾಗಿ ಕಾಯುತ್ತಿದ್ದೇವೆ’ ಎಂದು ಬರೆಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು