AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mahesh Babu: ಟಾಲಿವುಡ್​ ನಟ ಮಹೇಶ್​ ಬಾಬುಗೆ ಕೊವಿಡ್​ ಪಾಸಿಟಿವ್​

ಮಹೇಶ್​ ಬಾಬು ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಎಲ್ಲಾ ಮುಂಜಾಗೃತಾ ಕ್ರಮಗಳನ್ನು ಕೈಗೊಂಡ ಹೊರತಾಗಿಯೂ ಕೊವಿಡ್​ ಪಾಸಿಟಿವ್​ ಆಗಿದೆ ಎಂದು ಅವರು ಬೇಸರ ಹೊರ ಹಾಕಿದ್ದಾರೆ.

Mahesh Babu: ಟಾಲಿವುಡ್​ ನಟ ಮಹೇಶ್​ ಬಾಬುಗೆ ಕೊವಿಡ್​ ಪಾಸಿಟಿವ್​
ಮಹೇಶ್​ ಬಾಬು
TV9 Web
| Edited By: |

Updated on:Jan 06, 2022 | 9:33 PM

Share

ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದನ್ನು ನಿಯಂತ್ರಣ ಮಾಡೋಕೆ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಿದೆ. ಸ್ಟಾರ್​ ನಟರಿಗೂ ಕೊವಿಡ್​ ಅಂಟುತ್ತಿದೆ. ತೆಲುಗಿನ ಖ್ಯಾತ ನಟ ಮಹೇಶ್​ ಬಾಬು ಅವರಿಗೂ ಕೊವಿಡ್ ಪಾಸಿಟಿವ್​ ಆಗಿದೆ. ಈ ಬಗ್ಗೆ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಎಲ್ಲಾ ಮುಂಜಾಗೃತಾ ಕ್ರಮಗಳನ್ನು ಕೈಗೊಂಡ ಹೊರತಾಗಿಯೂ ಕೊವಿಡ್​ ಪಾಸಿಟಿವ್​ ಆಗಿದೆ ಎಂದು ಅವರು ಬೇಸರ ಹೊರ ಹಾಕಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಅವರು, ‘ನನ್ನ ಎಲ್ಲಾ ಅಭಿಮಾನಿಗಳಿಗೆ ಮತ್ತು ಹಿತೈಷಿಗಳಿಗೆ ಈ ಪತ್ರ. ಎಲ್ಲಾ ರೀತಿಯ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೂ ಸಹ, ನನಗೆ ಕೊವಿಡ್​ 19 ಅಂಟಿದೆ. ನಾನು ಮನೆಯಲ್ಲಿ ಕ್ವಾರಂಟೈನ್​ ಆಗಿದ್ದೇನೆ. ವೈದ್ಯರ ಸೂಚನೆ ಹಾಗೂ ಮಾರ್ಗದರ್ಶನವನ್ನು ಅನುಸರಿಸುತ್ತಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.

‘ನನ್ನ ಸಂಪರ್ಕಕ್ಕೆ ಬಂದವರೆಲ್ಲರನ್ನೂ ಕೊವಿಡ್​ ಪರೀಕ್ಷೆಗೆ ಒಳಪಡಲು ವಿನಂತಿಸಿಕೊಳ್ಳುತ್ತಿದ್ದೇನೆ. ಕೊವಿಡ್​ ಲಸಿಕೆಯನ್ನು ತೆಗೆದುಕೊಳ್ಳದ ಪ್ರತಿಯೊಬ್ಬರು  ತಕ್ಷಣವೇ ಲಸಿಕೆ ತೆಗೆದುಕೊಳ್ಳುವಂತೆ ನಾನು ಮನವಿ ಮಾಡುತ್ತೇನೆ. ಕೊರೊನಾ ಲಸಿಕೆ ಅಪಾಯವನ್ನು ಕಡಿಮೆ ಮಾಡುತ್ತದೆ. ದಯವಿಟ್ಟು ಕೊವಿಡ್​ ನಿಯಮಗಳನ್ನು ಅನುಸರಿಸಿ ಮತ್ತು ಸುರಕ್ಷಿತವಾಗಿರಿ’ ಎಂದು ಮಹೇಶ್​ ಬಾಬು ಹೇಳಿದ್ದಾರೆ.

ಮಹೇಶ್ ಬಾಬು ಅವರು ಶೀಘ್ರದಲ್ಲೇ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎನ್ನುವ ಮಾಹಿತಿ ಇದೆ. ಈ ಶಸ್ತ್ರ ಚಿಕಿತ್ಸೆ ನಂತರದಲ್ಲಿ ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಎರಡು ತಿಂಗಳುಬೇಕು. ಅವರು ಸಂಪೂರ್ಣವಾಗಿ ಫಿಟ್ ಆದ ನಂತರವೇ ‘ಸರ್ಕಾರು ವಾರಿ ಪಾಟ’ ಚಿತ್ರದ ಬಾಕಿಯಿರುವ ಶೂಟಿಂಗ್​ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ. ಈ ಎಲ್ಲಾ ಕಾರಣದಿಂದ ಸಿನಿಮಾ ಕೆಲಸಗಳು ವಿಳಂಬವಾಗಲಿದೆ ಎನ್ನಲಾಗುತ್ತಿದೆ. ಹೀಗಾದಲ್ಲಿ ಸಿನಿಮಾಗಾಗಿ ಮತ್ತೆ ಹಲವು ತಿಂಗಳು ಕಾಯೋದು ಅನಿವಾರ್ಯ ಆಗಲಿದೆ.

ಮೈತ್ರಿ ಮೂವಿ ಮೇಕರ್ಸ್ ​‘ಸರ್ಕಾರು ವಾರಿ ಪಾಟ’ ಸಿನಿಮಾ ನಿರ್ಮಾಣ ಮಾಡುತ್ತಿದೆ. ಪರಶುರಾಮ ಈ ಸಿನಿಮಾ ನಿರ್ದೇಶನ ಮಾಡಲಿದ್ದಾರೆ. ಮಹೇಶ್​ ಬಾಬು ಖ್ಯಾತ ನಿರ್ದೇಶಕ ರಾಜಮೌಳಿ ಜತೆ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾ ಬಗ್ಗೆಯೂ ಸಾಕಷ್ಟು ನಿರೀಕ್ಷೆ ಇದೆ.  ‘ಆರ್​​ಆರ್​ಆರ್​​’ ತೆರೆಗೆ ಬಂದ ನಂತರದಲ್ಲಿ ಈ ಸಿನಿಮಾ ರಿಲೀಸ್​ ಆಗಬೇಕಿತ್ತು. ಆದರೆ, ಈ ಚಿತ್ರದ ಕೆಲಸಗಳು ಕೂಡ ಮುಂದೂಡುವ ಸಾಧ್ಯತೆ ಇದೆ.

ಇದನ್ನೂ ಓದಿ: ಇಂಗ್ಲಿಷ್​ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಡಲಿದ್ದಾರೆ ಮಹೇಶ್​ ಬಾಬು ಮಗಳು? ನಟನ ಅಚ್ಚರಿಯ ಹೇಳಿಕೆ

ಮಹೇಶ್​ ಬಾಬು ಪತ್ನಿಗೆ ಸಿಕ್ಕಿಲ್ಲ ಸ್ಪೆಷಲ್​ ಅಧಿಕಾರ; ತಪ್ಪುಗಳ ಬಗ್ಗೆ ಬಾಯ್ಬಿಟ್ಟ ‘ಪ್ರಿನ್ಸ್​’

Published On - 9:18 pm, Thu, 6 January 22

Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು