Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ರಕರ್ತನ ಮೇಲೆ ಹಲ್ಲೆ ಮಾಡಿದ್ದಕ್ಕೆ ಕ್ಷಮೆ ಕೇಳಿದ ನಟ ಮೋಹನ್ ಬಾಬು

ಟಾಲಿವುಡ್​ನ ಹಿರಿಯ ನಟ ಮೋಹನ್ ಬಾಬು ಅವರು ಇತ್ತೀಚೆಗೆ ಟಿವಿ9 ವರದಿಗಾರ ರಂಜಿತ್ ಕುಮಾರ್​ ಮೇಲೆ ಹಲ್ಲೆ ಮಾಡಿದ್ದರು. ಈಗ ಮೋಹನ್ ಬಾಬು ಕ್ಷಮೆ ಕೇಳಿದ್ದಾರೆ. ರಂಜಿತ್ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ. ರಂಜಿತ್ ಕುಟುಂಬದವರ ಬಳಿಯೂ ಮೋಹನ್ ಬಾಬು ಕ್ಷಮೆ ಕೇಳಿದ್ದಾರೆ.

ಪತ್ರಕರ್ತನ ಮೇಲೆ ಹಲ್ಲೆ ಮಾಡಿದ್ದಕ್ಕೆ ಕ್ಷಮೆ ಕೇಳಿದ ನಟ ಮೋಹನ್ ಬಾಬು
ರಂಜಿತ್, ಮೋಹನ್ ಬಾಬು
Follow us
ಮದನ್​ ಕುಮಾರ್​
|

Updated on: Dec 15, 2024 | 9:06 PM

ಖ್ಯಾತ ನಟ ಮೋಹನ್ ಬಾಬು ಅವರ ಕುಟುಂಬದಲ್ಲಿ ಬಿರುಕು ಮೂಡಿದ್ದು, ಆ ಕುರಿತು ವರದಿ ಮಾಡಲು ತೆರಳಿದ್ದ ಪತ್ರಕರ್ತರ ಮೇಲೆ ಅವರು ಕೋಪಗೊಂಡಿದ್ದರು. ವಿವಾದದ ಕುರಿತು ಪ್ರಶ್ನೆ ಕೇಳಿದ ಟಿವಿ9 ವರದಿಗಾರ ರಂಜಿತ್ ಕುಮಾರ್​ ಮೇಲೆ ಮೋಹನ್​ ಬಾಬು ಅವರು ಹಲ್ಲೆ ಮಾಡಿದ್ದರು. ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಸದ್ಯಕ್ಕೆ ರಂಜಿತ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ತೆರಳಿ ರಂಜಿತ್ ಕುಮಾರ್​ ಅವರ ಆರೋಗ್ಯವನ್ನು ಮೋಹನ್ ಬಾಬು ವಿಚಾರಿಸಿದ್ದಾರೆ. ಅಲ್ಲದೇ, ಅವರ ಬಳಿ ಕ್ಷಮೆ ಕೇಳಿದ್ದಾರೆ.

‘ಮೋಹನ್ ಬಾಬು ಅವರು ನನಗೆ, ನನ್ನ ಕುಟುಂಬಕ್ಕೆ ಹಾಗೂ ಇಡೀ ಪತ್ರಕರ್ತರ ಸಮೂಹಕ್ಕೆ ಕ್ಷಮೆ ಕೇಳಿದ್ದಾರೆ’ ಎಂದು ರಂಜಿತ್ ಹೇಳಿಕೆ ನೀಡಿರುವುದಾಗಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ. ರಂಜಿತ್ ಗುಣಮುಖರಾಗಿ ರಿಸ್ಚಾರ್ಜ್​ ಆದ ಬಳಿಕ ಮನೆಗೂ ಭೇಟಿ ನೀಡಿರುವುದಾಗಿ ಮೋಹನ್ ಬಾಬು ಹೇಳಿದ್ದಾರೆ ಎಂದು ವರದಿ ಆಗಿದೆ.

ಡಿಸೆಂಬರ್​ 10ರಂದು ಮೋಹನ್ ಬಾಬು ಅವರ ಮನೆಯಲ್ಲಿ ಗಲಾಟೆ ಆಗಿತ್ತು. ಆಸ್ತಿ ವಿಚಾರವಾಗಿ ಅವರ ಪುತ್ರರಾದ ಮಂಜು ಮನೋಜ್ ಹಾಗೂ ಮಂಜು ವಿಷ್ಣು ನಡುವೆ ಜಟಾಪಟಿ ನಡೆದಿತ್ತು. ಮೋಹನ್ ಬಾಬು ಅವರು ಮಂಜು ವಿಷ್ಣು ಪರ ವಹಿಸಿದ್ದಾರೆ. ಈ ಎಲ್ಲ ವಿಚಾರಗಳ ಬಗ್ಗೆ ವರದಿ ಮಾಡಲು ತೆರಳಿದ್ದಾಗ ಮೋಹನ್ ಬಾಬು ಅವರು ಅಶ್ಲೀಲವಾಗಿ ಬೈಯ್ಯುತ್ತ ಪತ್ರಕರ್ತರ ಮೇಲೆ ಹಲ್ಲೆ ಮಾಡಿದ್ದರು. ಆ ವಿಡಿಯೋ ವೈರಲ್ ಆಗಿತ್ತು.

ಇದನ್ನೂ ಓದಿ: ವರದಿಗಾರನ ಮೇಲೆ ಹಲ್ಲೆ: ಟಿವಿ9ಗೆ ಕ್ಷಮೆ ಕೇಳಿದ ನಟ ಮೋಹನ್ ಬಾಬು

ಮೋಹನ್ ಬಾಬು ಅವರು ಹಲ್ಲೆ ಮಾಡಿದ್ದನ್ನು ಖಂಡಿಸಿ, ಹೈದರಾಬಾದ್​ನಲ್ಲಿ ಪತ್ರಕರ್ತರು ಪ್ರತಿಭಟನೆ ಮಾಡಿದ್ದರು. ಆ ಬಳಿಕ ಮೋಹನ್ ಬಾಬು ಅವರು ಕ್ಷಮೆಯಾಚಿಸಿ ಹೇಳಿಕೆ ಬಿಡುಗಡೆ ಮಾಡಿದ್ದರು. ಕೋಪದಲ್ಲಿ ತಾನು ಹಲ್ಲೆ ಮಾಡಿದ್ದಾಗಿ ಅವರು ವಿವಾಷ ವ್ಯಕ್ತಪಡಿಸಿದ್ದರು. ರಂಜಿತ್ ಕುಮಾರ್​ ದೂರು ನೀಡಿದ ಬಳಿಕ ಮೋಹನ್ ಬಾಬು ವಿರುದ್ಧ ಕೊಲೆ ಪ್ರಯತ್ನದ ಕೇಸ್​ ದಾಖಲಾಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ