ಪತ್ರಕರ್ತನ ಮೇಲೆ ಹಲ್ಲೆ ಮಾಡಿದ್ದಕ್ಕೆ ಕ್ಷಮೆ ಕೇಳಿದ ನಟ ಮೋಹನ್ ಬಾಬು

ಟಾಲಿವುಡ್​ನ ಹಿರಿಯ ನಟ ಮೋಹನ್ ಬಾಬು ಅವರು ಇತ್ತೀಚೆಗೆ ಟಿವಿ9 ವರದಿಗಾರ ರಂಜಿತ್ ಕುಮಾರ್​ ಮೇಲೆ ಹಲ್ಲೆ ಮಾಡಿದ್ದರು. ಈಗ ಮೋಹನ್ ಬಾಬು ಕ್ಷಮೆ ಕೇಳಿದ್ದಾರೆ. ರಂಜಿತ್ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ. ರಂಜಿತ್ ಕುಟುಂಬದವರ ಬಳಿಯೂ ಮೋಹನ್ ಬಾಬು ಕ್ಷಮೆ ಕೇಳಿದ್ದಾರೆ.

ಪತ್ರಕರ್ತನ ಮೇಲೆ ಹಲ್ಲೆ ಮಾಡಿದ್ದಕ್ಕೆ ಕ್ಷಮೆ ಕೇಳಿದ ನಟ ಮೋಹನ್ ಬಾಬು
ರಂಜಿತ್, ಮೋಹನ್ ಬಾಬು

Updated on: Dec 15, 2024 | 9:06 PM

ಖ್ಯಾತ ನಟ ಮೋಹನ್ ಬಾಬು ಅವರ ಕುಟುಂಬದಲ್ಲಿ ಬಿರುಕು ಮೂಡಿದ್ದು, ಆ ಕುರಿತು ವರದಿ ಮಾಡಲು ತೆರಳಿದ್ದ ಪತ್ರಕರ್ತರ ಮೇಲೆ ಅವರು ಕೋಪಗೊಂಡಿದ್ದರು. ವಿವಾದದ ಕುರಿತು ಪ್ರಶ್ನೆ ಕೇಳಿದ ಟಿವಿ9 ವರದಿಗಾರ ರಂಜಿತ್ ಕುಮಾರ್​ ಮೇಲೆ ಮೋಹನ್​ ಬಾಬು ಅವರು ಹಲ್ಲೆ ಮಾಡಿದ್ದರು. ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಸದ್ಯಕ್ಕೆ ರಂಜಿತ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ತೆರಳಿ ರಂಜಿತ್ ಕುಮಾರ್​ ಅವರ ಆರೋಗ್ಯವನ್ನು ಮೋಹನ್ ಬಾಬು ವಿಚಾರಿಸಿದ್ದಾರೆ. ಅಲ್ಲದೇ, ಅವರ ಬಳಿ ಕ್ಷಮೆ ಕೇಳಿದ್ದಾರೆ.

‘ಮೋಹನ್ ಬಾಬು ಅವರು ನನಗೆ, ನನ್ನ ಕುಟುಂಬಕ್ಕೆ ಹಾಗೂ ಇಡೀ ಪತ್ರಕರ್ತರ ಸಮೂಹಕ್ಕೆ ಕ್ಷಮೆ ಕೇಳಿದ್ದಾರೆ’ ಎಂದು ರಂಜಿತ್ ಹೇಳಿಕೆ ನೀಡಿರುವುದಾಗಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ. ರಂಜಿತ್ ಗುಣಮುಖರಾಗಿ ರಿಸ್ಚಾರ್ಜ್​ ಆದ ಬಳಿಕ ಮನೆಗೂ ಭೇಟಿ ನೀಡಿರುವುದಾಗಿ ಮೋಹನ್ ಬಾಬು ಹೇಳಿದ್ದಾರೆ ಎಂದು ವರದಿ ಆಗಿದೆ.

ಡಿಸೆಂಬರ್​ 10ರಂದು ಮೋಹನ್ ಬಾಬು ಅವರ ಮನೆಯಲ್ಲಿ ಗಲಾಟೆ ಆಗಿತ್ತು. ಆಸ್ತಿ ವಿಚಾರವಾಗಿ ಅವರ ಪುತ್ರರಾದ ಮಂಜು ಮನೋಜ್ ಹಾಗೂ ಮಂಜು ವಿಷ್ಣು ನಡುವೆ ಜಟಾಪಟಿ ನಡೆದಿತ್ತು. ಮೋಹನ್ ಬಾಬು ಅವರು ಮಂಜು ವಿಷ್ಣು ಪರ ವಹಿಸಿದ್ದಾರೆ. ಈ ಎಲ್ಲ ವಿಚಾರಗಳ ಬಗ್ಗೆ ವರದಿ ಮಾಡಲು ತೆರಳಿದ್ದಾಗ ಮೋಹನ್ ಬಾಬು ಅವರು ಅಶ್ಲೀಲವಾಗಿ ಬೈಯ್ಯುತ್ತ ಪತ್ರಕರ್ತರ ಮೇಲೆ ಹಲ್ಲೆ ಮಾಡಿದ್ದರು. ಆ ವಿಡಿಯೋ ವೈರಲ್ ಆಗಿತ್ತು.

ಇದನ್ನೂ ಓದಿ: ವರದಿಗಾರನ ಮೇಲೆ ಹಲ್ಲೆ: ಟಿವಿ9ಗೆ ಕ್ಷಮೆ ಕೇಳಿದ ನಟ ಮೋಹನ್ ಬಾಬು

ಮೋಹನ್ ಬಾಬು ಅವರು ಹಲ್ಲೆ ಮಾಡಿದ್ದನ್ನು ಖಂಡಿಸಿ, ಹೈದರಾಬಾದ್​ನಲ್ಲಿ ಪತ್ರಕರ್ತರು ಪ್ರತಿಭಟನೆ ಮಾಡಿದ್ದರು. ಆ ಬಳಿಕ ಮೋಹನ್ ಬಾಬು ಅವರು ಕ್ಷಮೆಯಾಚಿಸಿ ಹೇಳಿಕೆ ಬಿಡುಗಡೆ ಮಾಡಿದ್ದರು. ಕೋಪದಲ್ಲಿ ತಾನು ಹಲ್ಲೆ ಮಾಡಿದ್ದಾಗಿ ಅವರು ವಿವಾಷ ವ್ಯಕ್ತಪಡಿಸಿದ್ದರು. ರಂಜಿತ್ ಕುಮಾರ್​ ದೂರು ನೀಡಿದ ಬಳಿಕ ಮೋಹನ್ ಬಾಬು ವಿರುದ್ಧ ಕೊಲೆ ಪ್ರಯತ್ನದ ಕೇಸ್​ ದಾಖಲಾಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us