AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nandamuri Balakrishna: ನಂದಮೂರಿ ಬಾಲಕೃಷ್ಣಗೆ ಕೊರೊನಾ ಪಾಸಿಟಿವ್​; ಶ್ರುತಿ ಹಾಸನ್​ ಆರೋಗ್ಯದ ಬಗ್ಗೆ ಅಭಿಮಾನಿಗಳಿಗೆ ಚಿಂತೆ

Ballayya Corona Positive: ನಂದಮೂರಿ ಬಾಲಕೃಷ್ಣ ಅವರು ಎಲ್ಲ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಹೋಮ್​ ಐಸೋಲೇಷನ್​ನಲ್ಲಿ ಇದ್ದಾರೆ. ಅವರು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಪ್ರಾರ್ಥನೆ ಮಾಡುತ್ತಿದ್ದಾರೆ.

Nandamuri Balakrishna: ನಂದಮೂರಿ ಬಾಲಕೃಷ್ಣಗೆ ಕೊರೊನಾ ಪಾಸಿಟಿವ್​; ಶ್ರುತಿ ಹಾಸನ್​ ಆರೋಗ್ಯದ ಬಗ್ಗೆ ಅಭಿಮಾನಿಗಳಿಗೆ ಚಿಂತೆ
ನಂದಮೂರಿ ಬಾಲಕೃಷ್ಣ
TV9 Web
| Edited By: |

Updated on:Jun 25, 2022 | 7:40 AM

Share

ತೆಲುಗಿನ ಖ್ಯಾತ ನಟ ನಂದಮೂರಿ ಬಾಲಕೃಷ್ಣ (Nandamuri Balakrishna) ಅಭಿಮಾನಿಗಳಿಗೆ ಇದು ಬ್ಯಾಡ್​ ನ್ಯೂಸ್​. ಪ್ರಸ್ತುತ ‘ಎನ್​ಬಿಕೆ 107’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿರುವ ಬಾಲಯ್ಯ ಅವರಿಗೆ ಕೊರೊನಾ ಪಾಸಿಟಿವ್​ ಆಗಿದೆ. ಇದರಿಂದ ಈ ಚಿತ್ರದ ಕೆಲಸಗಳು ವಿಳಂಬ ಆಗಲಿವೆ. ನಂದಮೂರಿ ಬಾಲಕೃಷ್ಣ ಅವರು ಕೊರೊನಾ ಸೋಂಕಿಗೆ ಒಳಗಾಗಿರುವುದನ್ನು ಸೋಶಿಯಲ್​ ಮೀಡಿಯಾದಲ್ಲಿ ಅವರ ತಂಡದವರು ಖಚಿತ ಪಡಿಸಿದ್ದಾರೆ. ಅಲ್ಲದೇ, ಸದ್ಯ ಅವರ ಆರೋಗ್ಯ ಸ್ಥಿತಿ ಹೇಗಿದೆ ಎಂಬುದನ್ನು ಕೂಡ ತಿಳಿಸಲಾಗಿದೆ. ಅವರಿಗೆ ಯಾವುದೇ ರೋಗ ಲಕ್ಷಣಗಳು ಇಲ್ಲ. ಆದರೂ ಕೂಡ ಮನೆಯಲ್ಲಿ ಐಸೊಲೇಟ್​ ಆಗಿದ್ದಾರೆ ಎಂದು ತಿಳಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಬಾಲಯ್ಯ (Ballayya) ಅವರ ಸಂಪರ್ಕಕ್ಕೆ ಬಂದ ಎಲ್ಲರೂ ಕೊರೊನಾ ಟೆಸ್ಟ್​ ಮಾಡಿಸಿಕೊಳ್ಳಿ ಎಂದು ಸೂಚನೆ ನೀಡಲಾಗಿದೆ. ಕೆಲವೇ ದಿನಗಳ ಹಿಂದೆ ನಟಿ ಶ್ರುತಿ ಹಾಸನ್​ ಅವರು ‘ಎನ್​ಬಿಕೆ 107’ (NBK 107) ಸಿನಿಮಾದ ಶೂಟಿಂಗ್​ನಲ್ಲಿ ಭಾಗಿ ಆಗಿದ್ದರು.

ಎಲ್ಲ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಬಾಲಯ್ಯ ಅವರು ಹೋಮ್​ ಐಸೋಲೇಷನ್​ನಲ್ಲಿ ಇದ್ದಾರೆ. ಅವರು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಪ್ರಾರ್ಥನೆ ಮಾಡುತ್ತಿದ್ದಾರೆ. ಸದ್ಯ ಬಾಲಯ್ಯ ಅವರಿಗೆ 62 ವರ್ಷ ವಯಸ್ಸು. ಕೆಲವೇ ದಿನಗಳ ಹಿಂದೆ (ಜೂನ್​ 10) ಅವರು ಹುಟ್ಟುಹಬ್ಬ ಆಚರಿಸಿಕೊಂಡರು. ಈ ವಯಸ್ಸಿನಲ್ಲೂ ಅವರು ದಣಿವರಿಯದೇ ಕೆಲಸ ಮಾಡುತ್ತಿದ್ದಾರೆ. ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ.

ನಂದಮೂರಿ ಬಾಲಕೃಷ್ಣ ನಟಿಸುತ್ತಿರುವ 107ನೇ ಸಿನಿಮಾಗೆ ತಾತ್ಕಾಲಿಕವಾಗಿ ‘ಎನ್​ಬಿಕೆ 107’ ಎಂದು ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾದಲ್ಲಿ ನಾಯಕಿಯಾಗಿ ಶ್ರುತಿ ಹಾಸನ್​ ಅಭಿನಯಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಅವರು ಶೂಟಿಂಗ್​ ಸೆಟ್​ ಸೇರಿಕೊಂಡಿದ್ದರು. ಹಾಗಾಗಿ ಅವರಿಗೂ ಕೊವಿಡ್​ ಅಂಟಿರಬಹುದೇ ಎಂಬ ಗುಮಾನಿ ಮೂಡಿದೆ. ಹಾಗಾಗಿ ಅವರ ಆರೋಗ್ಯದ ಬಗ್ಗೆಯೂ ಅಭಿಮಾನಿಗಳು ಕಾಳಜಿ ತೋರಿಸುತ್ತಿದ್ದಾರೆ. ಇದೇ ಸಿನಿಮಾದಲ್ಲಿ ದುನಿಯಾ ವಿಜಯ್ ಅವರು ವಿಲನ್​ ಆಗಿ ನಟಿಸುತ್ತಿದ್ದಾರೆ.

ಇದನ್ನೂ ಓದಿ
Image
NBK Birthday: ನಂದಮೂರಿ ಬಾಲಕೃಷ್ಣ ಜನ್ಮದಿನಕ್ಕೆ ಟೀಸರ್​ ಮೂಲಕ ವಿಶ್​ ಮಾಡಿದ ‘ಎನ್​ಬಿಕೆ 107’ ಬಳಗ
Image
ದುನಿಯಾ ವಿಜಯ್​ ಎದುರು ಕಾದಾಡಲು ‘ಬೇಟೆ ಶುರು..’ ಎಂದು ಮಾಸ್​ ಅವತಾರ ತಾಳಿದ ನಂದಮೂರಿ ಬಾಲಕೃಷ್ಣ
Image
NBK107: ತೆಲುಗಿನಲ್ಲೂ ರಿಮೇಕ್ ಆಗುತ್ತಿದೆಯಾ ‘ಮಫ್ತಿ’? ಕುತೂಹಲ ಮೂಡಿಸಿದ ‘ಎನ್​ಬಿಕೆ107’ ಪೋಸ್ಟರ್
Image
ಪುನೀತ್​ ಅಂತಿಮ ದರ್ಶನ ಪಡೆದು ತೆರಳಿದ್ದ ನಟ ನಂದಮೂರಿ ಬಾಲಕೃಷ್ಣ ಆಸ್ಪತ್ರೆಗೆ ದಾಖಲು; ಅಂಥದ್ದೇನಾಯ್ತು?

ನಂದಮೂರಿ ಬಾಲಕೃಷ್ಣ ನಟಿಸಿದ ‘ಅಖಂಡ’ ಸಿನಿಮಾ 2021ರ ಡಿಸೆಂಬರ್​ನಲ್ಲಿ ತೆರೆಕಂಡು ಸೂಪರ್​ ಹಿಟ್​ ಆಯಿತು. ಈಗ ಆ ಚಿತ್ರಕ್ಕೆ ಸೀಕ್ವೆಲ್​ ಕೂಡ ಬರಲಿದೆ ಎಂಬ ಬಗ್ಗೆ ಮಾಹಿತಿ ಕೇಳಿಬಂದಿದೆ. 2024ರ ಸಾರ್ವತ್ರಿಕ ಚುನಾವಣೆಗೂ ಮುನ್ನ ಈ ಸಿನಿಮಾವನ್ನು ರಿಲೀಸ್​ ಮಾಡಲು ಪ್ಲ್ಯಾನ್​ ನಡೆಯುತ್ತಿದೆ ಎನ್ನಲಾಗಿದೆ.

ಇದನ್ನೂ ಓದಿ: ನಂದಮೂರಿ ಬಾಲಕೃಷ್ಣ ಸಿನಿಮಾದಲ್ಲಿ ಶ್ರೀಲೀಲಾ ನಟನೆ; ಯಾವ ಪಾತ್ರ? ಇಲ್ಲಿದೆ ಟ್ವಿಸ್ಟ್..​

ಟಾಲಿವುಡ್​ಗೆ ಎಂಟ್ರಿ ನೀಡಿದ ದುನಿಯಾ ವಿಜಯ್​; ನಂದಮೂರಿ ಬಾಲಕೃಷ್ಣ ಚಿತ್ರದಲ್ಲಿ ಬಂಪರ್​ ಚಾನ್ಸ್​

Published On - 7:36 am, Sat, 25 June 22

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು