AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ತಂದೆ-ತಾಯಿಯನ್ನು ಕಳೆದುಕೊಂಡ ಸಾವಿರ ಮಕ್ಕಳಿಗೆ ಸಹಾಯ ಮಾಡುತ್ತಿರುವ ನಟಿ ಲಕ್ಷ್ಮೀ ಮಂಚು

ಟೀಚ್​ ಫಾರ್​ ಚೇಂಜ್​ ಎನ್​ಜಿಓ ಮೂಲಕ ಈ ಕೆಲಸ ಮಾಡಲಾಗುತ್ತಿದೆ. ಕೊವಿಡ್​ನಿಂದ ತಂದೆ-ತಾಯಿಯನ್ನು ಕಳೆದುಕೊಂಡ ಮಕ್ಕಳಿಗೆ ವಸತಿ, ಶಿಕ್ಷಣ ಮುಂತಾದ ಮೂಲಭೂತ ನೆರವುಗಳನ್ನು ನೀಡುವಲ್ಲಿ ಲಕ್ಷ್ಮೀ ಮಂಚು ಅವರ ಈ ಎನ್​ಜಿಓ ನಿರತವಾಗಿದೆ.

ಕೊರೊನಾದಿಂದ ತಂದೆ-ತಾಯಿಯನ್ನು ಕಳೆದುಕೊಂಡ ಸಾವಿರ ಮಕ್ಕಳಿಗೆ ಸಹಾಯ ಮಾಡುತ್ತಿರುವ ನಟಿ ಲಕ್ಷ್ಮೀ ಮಂಚು
ನಟಿ ಲಕ್ಷ್ಮೀ ಮಂಚು
ಮದನ್​ ಕುಮಾರ್​
|

Updated on: May 22, 2021 | 1:51 PM

Share

ದೇಶಾದ್ಯಂತ ಕೊರೊನಾ ವೈರಸ್​ ಹಾವಳಿ ಮಿತಿ ಮೀರಿದೆ. ಹಲವು ರೀತಿಯಲ್ಲಿ ಇದು ಜನರ ಮೇಲೆ ಪರಿಣಾಮ ಆಗಿದೆ. ಸಾವಿರಾರು ಜನರು ತಮ್ಮವರನ್ನು ಕಳೆದುಕೊಂಡು ಕಣ್ಣೀರು ಸುರಿಸುವಂತಾಗಿದೆ. ಅದರಲ್ಲೂ ಕೊವಿಡ್​ನಿಂದ ತಂದೆ-ತಾಯಿಯನ್ನು ಕಳೆದುಕೊಂಡ ಮಕ್ಕಳ ಗೋಳು ಹೇಳತೀರದು. ಮಹಾಮಾರಿಯ ಶಾಪಕ್ಕೆ ಪಾಲಕರು ನಿಧನರಾದ ಕಾರಣ ಮಕ್ಕಳು ಅನಾಥರಾಗುವಂತಾಗಿದೆ. ಅಂಥ ಮಕ್ಕಳ ಭವಿಷ್ಯ ಚಿಂತಾಜನಕ ಆಗುತ್ತಿದೆ. ಇದನ್ನು ಅರಿತಿರುವ ಟಾಲಿವುಡ್​ ನಟಿ ಲಕ್ಷ್ಮೀ ಮಂಚು ಅವರು ಸಹಾಯಕ್ಕೆ ಧಾವಿಸಿದ್ದಾರೆ.

ಕೊವಿಡ್​ನಿಂದ ಉಂಟಾಗಿರುವ ದುರಂತ ಪರಿಸ್ಥಿತಿಯಲ್ಲಿ ಅನೇಕ ಸೆಲೆಬ್ರಿಟಿಗಳು ಜನರಿಗೆ ಸಹಾಯ ಮಾಡುತ್ತಿದ್ದಾರೆ. ದಿನಸಿ ನೀಡುವುದು, ಅಗತ್ಯ ವಸ್ತುಗಳನ್ನು ಪೂರೈಸುವುದು, ಆರ್ಥಿಕ ನೆರವು ನೀಡುವುದು ಮುಂತಾದ ಕೆಲಸಗಳಲ್ಲಿ ನಟ-ನಟಿಯರು ತೊಡಗಿಕೊಂಡಿದ್ದಾರೆ. ಟಾಲಿವುಡ್​ನ ಅನುಭವಿ ನಟಿ ಲಕ್ಷ್ಮೀ ಮಂಚು ಕೂಡ ತಮ್ಮ ಎನ್​ಜಿಓ ಮೂಲಕ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಈಗ ಅವರು ಒಂದು ಸಾವಿರ ಮಕ್ಕಳಿಗೆ ನೆರವಾಗುತ್ತಿದ್ದಾರೆ.

ಟೀಚ್​ ಫಾರ್​ ಚೇಂಜ್​ ಎನ್​ಜಿಓ ಮೂಲಕ ಈ ಕೆಲಸ ಮಾಡಲಾಗುತ್ತಿದೆ. ಕೊವಿಡ್​ನಿಂದ ತಂದೆ-ತಾಯಿಯನ್ನು ಕಳೆದುಕೊಂಡ ಮಕ್ಕಳಿಗೆ ವಸತಿ, ಶಿಕ್ಷಣ ಮುಂತಾದ ಮೂಲಭೂತ ನೆರವುಗಳನ್ನು ನೀಡುವಲ್ಲಿ ಈ ಎನ್​ಜಿಓ ನಿರತವಾಗಿದೆ. ‘ವೈಯಕ್ತಿಕವಾಗಿ ನಾನು ಅನೇಕರಿಗೆ ಸಹಾಯ ಮಾಡುತ್ತಿದ್ದೇನೆ. ಬೆಡ್​ ವ್ಯವಸ್ಥೆ ಮಾಡುವುದರ ಜೊತೆಗೆ, ಔಷಧಿಗಳನ್ನು ಒದಗಿಸುತ್ತಿದ್ದೇನೆ. ಕೊವಿಡ್​ನಿಂದ ತಂದೆ-ತಾಯಿಯನ್ನು ಕಳೆದುಕೊಂಡ ಮಕ್ಕಳಿಗೆ ಹೆಚ್ಚು ಕಷ್ಟ ಆಗುತ್ತಿದೆ. ನಮ್ಮ ಎನ್​ಜಿಓ ಕಡೆಯಿಂದ ಇಂಥ ಮಕ್ಕಳಿಗೆ ಶಿಕ್ಷಣ, ಟ್ಯೂಷನ್​, ಬಟ್ಟೆ ಮುಂತಾದನ್ನು ಒದಗಿಸುತ್ತೇವೆ’ ಎಂದು ಲಕ್ಷ್ಮೀ ಮಂಚು ಹೇಳಿದ್ದಾರೆ.

ಕೊವಿಡ್​ನಿಂದಾಗಿ ಅನೇಕ ಕುಟುಂಬಗಳು ತೊಂದರೆಗೆ ಒಳಗಾಗಿವೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವರಿಗೆ ಪ್ರತಿ ದಿನ ಊಟದ ವ್ಯವಸ್ಥೆ ಮಾಡಿಕೊಳ್ಳುವುದು ಕಷ್ಟ ಆಗುತ್ತಿದೆ. ಅದನ್ನು ಗಮನದಲ್ಲಿ ಇಟ್ಟುಕೊಂಡು ಪ್ರತಿ ದಿನ ಸಾವಿರ ಜನರಿಗೆ ಊಟ ವಿತರಿಸುವ ಕೆಲಸವನ್ನು ಲಕ್ಷ್ಮೀ ಮಂಚು ಅವರ ನೇತೃತ್ವದ ಎನ್​ಜಿಓ ಮಾಡುತ್ತಿದೆ. ಅವರ ಈ ಕೆಲಸಕ್ಕೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕನ್ನಡದಲ್ಲಿ ಕೂಡ ಅನೇಕ ನಟ-ನಟಿಯರು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಉಪೇಂದ್ರ, ಭುವನ್​ ಪೊನ್ನಣ್ಣ, ಹರ್ಷಿಕಾ ಪೂಣಚ್ಚ, ಶ್ರೀಮುರಳಿ ಮುಂತಾದವರು ಜನರಿಗೆ ನೆರವಾಗುತ್ತಿದ್ದಾರೆ.

ಇದನ್ನೂ ಓದಿ:

Kichcha Sudeep: ಹಿರಿಯ ಕಲಾವಿದರ ಸಹಾಯಕ್ಕೆ ನಿಂತ ಸುದೀಪ್​; ಅಗತ್ಯ ವಸ್ತುಗಳ ಜತೆ ಪತ್ರ ತಲುಪಿಸಿದ ಕಿಚ್ಚ

ಭುವನ್​ ಪೊನ್ನಣ್ಣ​ ನಿಜವಾದ ಬಿಗ್​ ಬಾಸ್​; ಕೊವಿಡ್​ ಸಂಕಷ್ಟದಲ್ಲಿ ಮಾಡಿದ ಸಹಾಯ ನೆನೆದು ಭಾವುಕರಾದ ಹಿರಿಯ ನಟ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!