AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್​ ಭೇಟಿಯಾದ ಟಾಲಿವುಡ್ ದಿಗ್ಗಜ ನಿರ್ಮಾಪಕರು

ಆಂಧ್ ಪ್ರದೇಶದ ಉಪಮುಖ್ಯ ಮಂತ್ರಿ ಪವನ್ ಕಲ್ಯಾಣ್ ಅವರನ್ನು ತೆಲುಗು ಚಿತ್ರರಂಗದ ಹಿರಿಯ ನಿರ್ಮಾಪಕರು ಭೇಟಿಯಾಗಿ ಅಭಿನಂದನೆ ಸಲ್ಲಿಸುವ ಜೊತೆಗೆ ಚಿತ್ರರಂಗದ ಬಗ್ಗೆ ಚರ್ಚಿಸಿದ್ದಾರೆ.

ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್​ ಭೇಟಿಯಾದ ಟಾಲಿವುಡ್ ದಿಗ್ಗಜ ನಿರ್ಮಾಪಕರು
ಪವನ್ ಕಲ್ಯಾಣ್ ಭೇಟಿಯಾದ ನಿರ್ಮಾಪಕರು
ಮಂಜುನಾಥ ಸಿ.
|

Updated on: Jun 25, 2024 | 9:41 AM

Share

ಆಂಧ್ರ ಪ್ರದೇಶ (Andhra Pradesh) ಸರ್ಕಾರ ಬದಲಾಗಿರುವುದು ಆಂಧ್ರದ ಅಭಿವೃದ್ಧಿ ಮೇಲೆ ಮಾತ್ರವಲ್ಲದೆ ದೊಡ್ಡ ಪ್ರಭಾವವನ್ನು, ಪರಿಣಾಮವನನು ತೆಲುಗು ಚಿತ್ರರಂಗದ ಮೇಲೆ ಬೀರಲಿದೆ. ಈ ಹಿಂದೆ ಜಗನ್ ಸರ್ಕಾರ ಆಂಧ್ರದಲ್ಲಿ ಇದ್ದಾಗ ತೆಲುಗು ಚಿತ್ರರಂಗವನ್ನು ನಿಯಂತ್ರಿಸುವ ಪ್ರಯತ್ನ ಮಾಡಲಾಗಿತ್ತು. ಟಿಕೆಟ್ ದರಗಳ ಇಳಿಕೆ, ತೆರಿಗೆ ವ್ಯವಸ್ಥೆಯಲ್ಲಿ ಭಾರಿ ಬದಲಾವಣೆ, ಸರ್ಕಾರವೇ ಚಿತ್ರಮಂದಿರಗಳ ಟಿಕೆಟ್ ರೇಟು ನಿಗದಿ ಮಾಡುವುದು, ಬೆನಿಫಿಟ್ ಶೋ, ಫ್ಯಾನ್ಸ್ ಶೋ ರದ್ದು, ಚಿತ್ರಮಂದಿರಗಳ ಮೇಲೆ ದಾಳಿ ಇನ್ನೂ ಅನೇಕ ಕಾರ್ಯಗಳು ನಡೆದಿದ್ದವು. ಇದು ತೆಲುಗು ಸಿನಿಮಾ ಮಂದಿಯ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.

ತೆಲುಗು ಚಿತ್ರರಂಗದ ಅನೇಕ ನಟರು, ನಿರ್ಮಾಪಕರು ಜಗನ್ ಸರ್ಕಾರ ವಿರುದ್ಧ ಏರಿದ ದನಿಯಲ್ಲಿ ಮಾತನಾಡಿದ್ದರು. ಚಿರಂಜೀವಿ, ಮಹೇಶ್ ಬಾಬು, ಪ್ರಭಾಸ್, ರಾಜಮೌಳಿ ಇನ್ನೂ ಕೆಲವರು ಸಿಎಂ ಜಗನ್ ಅನ್ನು ಭೇಟಿಯಾಗಿ ಚಿತ್ರರಂಗದ ಮೇಲೆ ಹೇರಲಾಗುತ್ತಿರುವ ಕಠಿಣ ನಿಯಮಗಳನ್ನು ಸಡಿಲಿಸುವಂತೆ ಮನವಿ ಮಾಡಿದ್ದರು. ಮೆಗಾಸ್ಟಾರ್ ಚಿರಂಜೀವಿಯಂತೂ ಜಗನ್ ಮುಂದೆ ಕೈ ಮುಗಿದು ಕೇಳಿಕೊಂಡಿರುವ ವಿಡಿಯೋ ವೈರಲ್ ಆಗಿತ್ತು. ಈಗ ಜಗನ್ ಸರ್ಕಾರವನ್ನು ಎಲ್ಲರೂ ಸೇರಿ ಕೆಳಗಿಳಿಸಿದ್ದಾರೆ. ಈಗ ಹೊಸ ಸರ್ಕಾರ ಬಂದಿದೆ. ಅದರಲ್ಲೂ ಚಿತ್ರರಂಗದ ಸೂಪರ್ ಸ್ಟಾರ್ ಪವನ್ ಕಲ್ಯಾಣ್ ಉಪ ಮುಖ್ಯಮಂತ್ರಿ ಆಗಿದ್ದಾರೆ.

ಟಿಡಿಪಿ-ಜನಸೇನಾ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಟಾಲಿವುಡ್​ನ ನಿರ್ಮಾಪಕರು ಖುಷಿಯಾಗಿದ್ದು, ಇತ್ತೀಚೆಗಷ್ಟೆ ತೆಲುಗು ಚಿತ್ರರಂಗದ ಹಿರಿಯ ನಿರ್ಮಾಪಕರುಗಳೆಲ್ಲ ಸೇರಿ ಪವನ್ ಕಲ್ಯಾಣ್​ರನ್ನು ಭೇಟಿಯಾಗಿ ಚಿತ್ರರಂಗದ ಬಗ್ಗೆ ಚರ್ಚೆ ನಡೆಸಿದ್ದಾರೆ. ಜೊತೆಗೆ ಮೊದಲ ಬಾರಿ ಅಸೆಂಬ್ಲಿ ಪ್ರವೇಶಿಸಿ ಉಪ ಮುಖ್ಯಮಂತ್ರಿಯಾಗಿ ಆಯ್ಕೆ ಆದ ಪವನ್ ಕಲ್ಯಾಣ್ ಅವರನ್ನು ಅಭಿನಂದಿಸಿದ್ದಾರೆ.

ಇದನ್ನೂ ಓದಿ:ಏನಾಗಲಿದೆ ಪವನ್ ಕಲ್ಯಾಣ್ ಮೂರು ಸಿನಿಮಾಗಳ ಭವಿಷ್ಯ?

ತೆಲುಗು ಚಿತ್ರರಂಗದ ಹಿರಿಯ ನಿರ್ಮಾಪಕರಾದ ಅಲ್ಲು ಅರವಿಂದ್, ಅಶ್ವಿನಿ ದತ್, ಎಸ್ ರಾಧಾಕೃಷ್ಣ, ದಿಲ್ ರಾಜು, ಡಿವಿವಿ ದಯಾನಂದ್, ಬನ್ನಿ ವಾಸು, ನಾಗವಂಶಿ, ವಿಶ್ವಪ್ರಸಾದ್, ವಂಶಿ ಕೃಷ್ಣ ಇನ್ನೂ ಹಲವಾರು ನಿರ್ಮಾಪಕರು ಒಟ್ಟಿಗೆ ತೆರಳಿ ಪವನ್ ಕಲ್ಯಾಣ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಅಲ್ಲದೆ ಚಿತ್ರರಂಗದ ಸಮಸ್ಯೆಗಳ ಕುರಿತಾಗಿ ಚುಟುಕಾಗಿ ಸಭೆಯನ್ನು ಸಹ ನಡೆಸಿದರು.

ಚುನಾವಣಾ ಪ್ರಚಾರದ ಸಮಯದಲ್ಲಿಯೇ ಮಾತನಾಡಿದ್ದ ಪವನ್ ಕಲ್ಯಾಣ್, ಜಗನ್ ಸರ್ಕಾರ ತೆಲುಗು ಚಿತ್ರರಂಗದ ವಿರುದ್ಧ ದಬ್ಬಾಳಿಕೆ ನಡೆಸುತ್ತಿದೆ ಎಂದು ದನಿ ಎತ್ತಿದ್ದರು. ತಾವು ಅಧಿಕಾರಕ್ಕೆ ಬಂದರೆ ವಿಶ್ವಮಟ್ಟದಲ್ಲಿ ಗುರುತು ಪಡೆದುಕೊಂಡಿರುವ ತೆಲುಗು ಚಿತ್ರರಂಗಕ್ಕೆ ಶಕ್ತಿ ತುಂಬುವ ಕಾರ್ಯ ಮಾಡುವುದಾಗಿ ಹೇಳಿದ್ದರು. ಸಿಎಂ ಚಂದ್ರಬಾಬು ನಾಯ್ಡು ಸಹ ಇದೇ ಮಾತುಗಳನ್ನು ಹೇಳಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?