ಡ್ರಗ್ ಕೇಸ್​ನಲ್ಲಿ ತಲೆಮರೆಸಿಕೊಂಡ ತೆಲುಗು ನಟ; ಶೀಘ್ರವೇ ನವದೀಪ್ ಅರೆಸ್ಟ್?  

ತೆಲುಗು ಸಿನಿಮಾಗಳಲ್ಲಿ ನವದೀಪ್ ಅವರು ಗುರುತಿಸಿಕೊಂಡಿದ್ದಾರೆ. ಹಲವು ಸಿನಿಮಾಗಳಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ. ನವದೀಪ್ ಅವರು ಮಾದಾಪುರ ಡ್ರಗ್​ ಕೇಸ್​ನಲ್ಲಿ 37ನೇ ಆರೋಪಿ ಆಗಿದ್ದಾರೆ. ಅವರ ವಿಚಾರಣೆಗೆ ಪೊಲೀಸರು ಸಾಕಷ್ಟು ಹುಡುಕಾಟ ನಡೆಸುತ್ತಿದ್ದಾರೆ.

ಡ್ರಗ್ ಕೇಸ್​ನಲ್ಲಿ ತಲೆಮರೆಸಿಕೊಂಡ ತೆಲುಗು ನಟ; ಶೀಘ್ರವೇ ನವದೀಪ್ ಅರೆಸ್ಟ್?  
ನವದೀಪ್
Follow us
|

Updated on:Sep 21, 2023 | 8:58 AM

ತೆಲುಗು ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆಗಿರುವ ನವದೀಪ್ (Navdeep) ಅವರು ಈಗ ಡ್ರಗ್ಸ್ ಪ್ರಕರಣದಲ್ಲಿ ಸಂಕಷ್ಟ ಅನುಭವಿಸುತ್ತಿದ್ದಾರೆ. ಡ್ರಗ್​ ಕೇಸ್​ನಲ್ಲಿ ಅವರ ಹೆಸರೂ ಸಿಲುಕಿದೆ. ಆದರೆ, ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಅವರು ತಲೆಮರೆಸಿಕೊಂಡಿದ್ದಾರೆ. ನಟನ ನಡೆಯ ಬಗ್ಗೆ ಪೊಲೀಸರು ಅಸಮಾಧಾನಗೊಂಡಿದ್ದಾರೆ. ತನಿಖೆಗೆ ಅಸಹಕಾರ ತೋರಿದ ಆರೋಪದ ಮೇಲೆ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ.

ತೆಲುಗು ಸಿನಿಮಾಗಳಲ್ಲಿ ನವದೀಪ್ ಅವರು ಗುರುತಿಸಿಕೊಂಡಿದ್ದಾರೆ. ಹಲವು ಸಿನಿಮಾಗಳಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ. ನವದೀಪ್ ಅವರು ಮಾದಾಪುರ ಡ್ರಗ್​ ಕೇಸ್​ನಲ್ಲಿ 37ನೇ ಆರೋಪಿ ಆಗಿದ್ದಾರೆ. ಅವರ ವಿಚಾರಣೆಗೆ ಪೊಲೀಸರು ಸಾಕಷ್ಟು ಹುಡುಕಾಟ ನಡೆಸುತ್ತಿದ್ದಾರೆ. ಆದರೆ, ಅವರ ಸುಳಿವು ಸಿಗುತ್ತಿಲ್ಲ.

‘ನವದೀಪ್ ಅವರು ತನಗೂ ಈ ಪ್ರಕರಣಕ್ಕೂ ಸಂಬಂಧವಿಲ್ಲ, ನಾನು ಡ್ರಗ್ ಸೇವಿಸಿಲ್ಲ’ ಎಂದು ಹೇಳುತ್ತಾ ಬರುತ್ತಿದ್ದಾರೆ. ಹಾಗಿದ್ದರೂ ಅವರು ತಲೆಮರೆಸಿಕೊಂಡಿದ್ದಾರೆ. ಇದು ಸಾಕಷ್ಟು ಅನುಮಾನ ಮೂಡಿಸಿದೆ. ನವದೀಪ್ ಅವರ ಗೆಳೆಯ ರಾಮಚಂದ್ ಕೂಡ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಇನ್ನು ಇತ್ತೀಚೆಗೆ ನವದೀಪ್ ಅವರು ಹೈಕೋರ್ಟ್​ನಿಂದ ನಿರೀಕ್ಷಣಾ ಜಾಮೀನು ಪಡೆಯಲು ಕೂಡ ಪ್ರಯತ್ನಿಸಿದ್ದರು. ಈ ಎಲ್ಲಾ ಬೆಳವಣಿಗೆಯಿಂದ ಈ ಪ್ರಕರಣದಲ್ಲಿ ನವದೀಪ್​ಗೆ ಸಂಕಷ್ಟ ಹೆಚ್ಚಿದೆ.

ಹೈದರಾಬಾದ್ ಪೊಲೀಸ್ ಕಮಿಷನರ್ ಸಿವಿ ಆನಂದ್ ಅವರು ಹೇಳುವ ಪ್ರಕಾರ ನವದೀಪ್ ಅವರು ಡ್ರಗ್ ಪೆಡ್ಲರ್​ಗಳ ಜೊತೆ ಲಿಂಕ್ ಹೊಂದಿದ್ದಾರಂತೆ. ಅವರ ಜೊತೆ ಇವರು ಮಾತುಕತೆ ಕೂಡ ನಡೆದಿದೆ. ಈ ರೀತಿಯ ದಾಖಲೆಗಳನ್ನು ಎನ್​ಸಿಬಿ ಪರ ವಕೀಲರು ಕೋರ್ಟ್​ಗೆ ನೀಡಿದ್ದು, ನವದೀಪ್​ ಜಾಮೀನು ಅರ್ಜಿ ತಿರಸ್ಕಾರಗೊಂಡಿದೆ.

ಇದನ್ನೂ ಓದಿ: ಡ್ರಗ್ಸ್ ಪ್ರಕರಣ: ನಟನ ಮನೆ ಮೇಲೆ ಅಧಿಕಾರಿಗಳ ದಾಳಿ

ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದೆ. ನವದೀಪ್ ಅವರನ್ನು ಬಂಧಿಸಬಾರದು ಎಂದು ಅವರ ಬೆಂಬಲಿಗರು ಆಗ್ರಹಿಸುತ್ತಿದ್ದಾರೆ. ಇನ್ನೂ ಕೆಲವರು ಅವರನ್ನು ಶೀಘ್ರವೇ ಬಂಧಿಸಬೇಕು ಎಂದು ಹೇಳುತ್ತಿದ್ದಾರೆ. ನವದೀಪ್ ಅವರು 2004ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ಆ ಬಳಿಕ ಹಲವು ತೆಲುಗು ಸಿನಿಮಾಗಳಲ್ಲಿ ಅವರು ನಟಿಸಿದರು. ಧಾರಾವಾಹಿಗಳಲ್ಲೂ ಅವರು ಅಭಿನಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:07 am, Thu, 21 September 23

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ