Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ ಕೇಸ್​ನಲ್ಲಿ ತಲೆಮರೆಸಿಕೊಂಡ ತೆಲುಗು ನಟ; ಶೀಘ್ರವೇ ನವದೀಪ್ ಅರೆಸ್ಟ್?  

ತೆಲುಗು ಸಿನಿಮಾಗಳಲ್ಲಿ ನವದೀಪ್ ಅವರು ಗುರುತಿಸಿಕೊಂಡಿದ್ದಾರೆ. ಹಲವು ಸಿನಿಮಾಗಳಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ. ನವದೀಪ್ ಅವರು ಮಾದಾಪುರ ಡ್ರಗ್​ ಕೇಸ್​ನಲ್ಲಿ 37ನೇ ಆರೋಪಿ ಆಗಿದ್ದಾರೆ. ಅವರ ವಿಚಾರಣೆಗೆ ಪೊಲೀಸರು ಸಾಕಷ್ಟು ಹುಡುಕಾಟ ನಡೆಸುತ್ತಿದ್ದಾರೆ.

ಡ್ರಗ್ ಕೇಸ್​ನಲ್ಲಿ ತಲೆಮರೆಸಿಕೊಂಡ ತೆಲುಗು ನಟ; ಶೀಘ್ರವೇ ನವದೀಪ್ ಅರೆಸ್ಟ್?  
ನವದೀಪ್
Follow us
ರಾಜೇಶ್ ದುಗ್ಗುಮನೆ
|

Updated on:Sep 21, 2023 | 8:58 AM

ತೆಲುಗು ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆಗಿರುವ ನವದೀಪ್ (Navdeep) ಅವರು ಈಗ ಡ್ರಗ್ಸ್ ಪ್ರಕರಣದಲ್ಲಿ ಸಂಕಷ್ಟ ಅನುಭವಿಸುತ್ತಿದ್ದಾರೆ. ಡ್ರಗ್​ ಕೇಸ್​ನಲ್ಲಿ ಅವರ ಹೆಸರೂ ಸಿಲುಕಿದೆ. ಆದರೆ, ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಅವರು ತಲೆಮರೆಸಿಕೊಂಡಿದ್ದಾರೆ. ನಟನ ನಡೆಯ ಬಗ್ಗೆ ಪೊಲೀಸರು ಅಸಮಾಧಾನಗೊಂಡಿದ್ದಾರೆ. ತನಿಖೆಗೆ ಅಸಹಕಾರ ತೋರಿದ ಆರೋಪದ ಮೇಲೆ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ.

ತೆಲುಗು ಸಿನಿಮಾಗಳಲ್ಲಿ ನವದೀಪ್ ಅವರು ಗುರುತಿಸಿಕೊಂಡಿದ್ದಾರೆ. ಹಲವು ಸಿನಿಮಾಗಳಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ. ನವದೀಪ್ ಅವರು ಮಾದಾಪುರ ಡ್ರಗ್​ ಕೇಸ್​ನಲ್ಲಿ 37ನೇ ಆರೋಪಿ ಆಗಿದ್ದಾರೆ. ಅವರ ವಿಚಾರಣೆಗೆ ಪೊಲೀಸರು ಸಾಕಷ್ಟು ಹುಡುಕಾಟ ನಡೆಸುತ್ತಿದ್ದಾರೆ. ಆದರೆ, ಅವರ ಸುಳಿವು ಸಿಗುತ್ತಿಲ್ಲ.

‘ನವದೀಪ್ ಅವರು ತನಗೂ ಈ ಪ್ರಕರಣಕ್ಕೂ ಸಂಬಂಧವಿಲ್ಲ, ನಾನು ಡ್ರಗ್ ಸೇವಿಸಿಲ್ಲ’ ಎಂದು ಹೇಳುತ್ತಾ ಬರುತ್ತಿದ್ದಾರೆ. ಹಾಗಿದ್ದರೂ ಅವರು ತಲೆಮರೆಸಿಕೊಂಡಿದ್ದಾರೆ. ಇದು ಸಾಕಷ್ಟು ಅನುಮಾನ ಮೂಡಿಸಿದೆ. ನವದೀಪ್ ಅವರ ಗೆಳೆಯ ರಾಮಚಂದ್ ಕೂಡ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಇನ್ನು ಇತ್ತೀಚೆಗೆ ನವದೀಪ್ ಅವರು ಹೈಕೋರ್ಟ್​ನಿಂದ ನಿರೀಕ್ಷಣಾ ಜಾಮೀನು ಪಡೆಯಲು ಕೂಡ ಪ್ರಯತ್ನಿಸಿದ್ದರು. ಈ ಎಲ್ಲಾ ಬೆಳವಣಿಗೆಯಿಂದ ಈ ಪ್ರಕರಣದಲ್ಲಿ ನವದೀಪ್​ಗೆ ಸಂಕಷ್ಟ ಹೆಚ್ಚಿದೆ.

ಹೈದರಾಬಾದ್ ಪೊಲೀಸ್ ಕಮಿಷನರ್ ಸಿವಿ ಆನಂದ್ ಅವರು ಹೇಳುವ ಪ್ರಕಾರ ನವದೀಪ್ ಅವರು ಡ್ರಗ್ ಪೆಡ್ಲರ್​ಗಳ ಜೊತೆ ಲಿಂಕ್ ಹೊಂದಿದ್ದಾರಂತೆ. ಅವರ ಜೊತೆ ಇವರು ಮಾತುಕತೆ ಕೂಡ ನಡೆದಿದೆ. ಈ ರೀತಿಯ ದಾಖಲೆಗಳನ್ನು ಎನ್​ಸಿಬಿ ಪರ ವಕೀಲರು ಕೋರ್ಟ್​ಗೆ ನೀಡಿದ್ದು, ನವದೀಪ್​ ಜಾಮೀನು ಅರ್ಜಿ ತಿರಸ್ಕಾರಗೊಂಡಿದೆ.

ಇದನ್ನೂ ಓದಿ: ಡ್ರಗ್ಸ್ ಪ್ರಕರಣ: ನಟನ ಮನೆ ಮೇಲೆ ಅಧಿಕಾರಿಗಳ ದಾಳಿ

ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದೆ. ನವದೀಪ್ ಅವರನ್ನು ಬಂಧಿಸಬಾರದು ಎಂದು ಅವರ ಬೆಂಬಲಿಗರು ಆಗ್ರಹಿಸುತ್ತಿದ್ದಾರೆ. ಇನ್ನೂ ಕೆಲವರು ಅವರನ್ನು ಶೀಘ್ರವೇ ಬಂಧಿಸಬೇಕು ಎಂದು ಹೇಳುತ್ತಿದ್ದಾರೆ. ನವದೀಪ್ ಅವರು 2004ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ಆ ಬಳಿಕ ಹಲವು ತೆಲುಗು ಸಿನಿಮಾಗಳಲ್ಲಿ ಅವರು ನಟಿಸಿದರು. ಧಾರಾವಾಹಿಗಳಲ್ಲೂ ಅವರು ಅಭಿನಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:07 am, Thu, 21 September 23

ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ