AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BA Raju: ಹೃದಯಾಘಾತದಿಂದ ನಿರ್ಮಾಪಕ, ಪ್ರಚಾರಕ ಬಿಎ ರಾಜು ನಿಧನ; ಮಹೇಶ್​ ಬಾಬು ಸಂತಾಪ

BA Raju Death: ಬಿಎ ರಾಜು ನಿಧನಕ್ಕೆ ಮಹೇಶ್​ ಬಾಬು ಕಂಬನಿ ಮಿಡಿದಿದ್ದಾರೆ. ‘ರಾಜು ನಿಧನರಾಗಿರುವುದನ್ನು ಸಹಿಸಲಾಗುತ್ತಿಲ್ಲ. ನನ್ನ ಬಾಲ್ಯದಿಂದಲೂ ನಾನು ಅವರನ್ನು ಬಲ್ಲೆ. ಅವರ ಜೊತೆ ತುಂಬಾ ಹತ್ತಿರದಿಂದ ಕೆಲಸ ಮಾಡಿದ್ದೇನೆ’ ಎಂದು ಪ್ರಿನ್ಸ್​ ಟ್ವೀಟ್​ ಮಾಡಿದ್ದಾರೆ.

BA Raju: ಹೃದಯಾಘಾತದಿಂದ ನಿರ್ಮಾಪಕ, ಪ್ರಚಾರಕ ಬಿಎ ರಾಜು ನಿಧನ; ಮಹೇಶ್​ ಬಾಬು ಸಂತಾಪ
ಬಿಎ ರಾಜು - ಮಹೇಶ್ ಬಾಬು
ಮದನ್​ ಕುಮಾರ್​
|

Updated on: May 22, 2021 | 12:37 PM

Share

ಒಂದೆಡೆ ಕೊರೊನಾ, ಮತ್ತೊಂದೆಡೆ ಹೃದಯಾಘಾತದಿಂದಾಗಿ ಅನೇಕ ಸೆಲೆಬ್ರಿಟಿಗಳು ನಿಧನರಾಗುತ್ತಿದ್ದಾರೆ. ಟಾಲಿವುಡ್​ ನಿರ್ಮಾಪಕ ಹಾಗೂ ಸಿನಿಮಾ ಪ್ರಚಾರಕ ಬಿಎ ರಾಜು ಅವರು ಶುಕ್ರವಾರ (ಮೇ 21) ರಾತ್ರಿ ಹೈದರಾಬಾದ್​ನಲ್ಲಿ ಹೃದಯಾಘಾತದಿಂದ ಅಸುನೀಗಿದ್ದಾರೆ. ಈ ಸುದ್ದಿ ಕೇಳಿ ಇಡೀ ಟಾಲಿವುಡ್​ಗೆ ಆಘಾತ ಆಗಿದೆ. ಬಿಎ ರಾಜು ಅವರಿಗೆ 57 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ಅವರು ಟಾಲಿವುಡ್​ ಸಿನಿಮಾಗಳಿಗೆ ಪ್ರಚಾರಕರಾಗಿ ಕೆಲಸ ಮಾಡುತ್ತಿದ್ದರು. ರಾಜು ನಿಧನಕ್ಕೆ ಮಹೇಶ್​ ಬಾಬು ಸೇರಿದಂತೆ ಹಲವು ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ.

ಇಬ್ಬರು ಪುತ್ರರನ್ನು ಬಿಎ ರಾಜು ಅಗಲಿದ್ದಾರೆ. 2018ರಲ್ಲಿ ಅವರ ಪತ್ನಿ, ನಿರ್ದೇಶಕಿ ಬಿ ಜಯಾ ನಿಧನರಾಗಿದ್ದರು. ಈಗ ರಾಜು ಸಾವಿನ ಸುದ್ದಿಯನ್ನು ಅವರ ಪುತ್ರ ಶಿವಕುಮಾರ್​ ಖಚಿತ ಪಡಿಸಿದ್ದಾರೆ. ‘ನಮ್ಮ ತಂದೆ ರಾಜು ಅವರು ಅಕಾಲಿಕ ಮರಣ ಹೊಂದಿದರು ಎಂಬುದನ್ನು ತೀವ್ರ ನೋವಿನೊಂದಿಗೆ ತಿಳಿಸುತ್ತಿದ್ದೇವೆ. ಹಠಾತ್​ ಡಯಾಬಿಟೀಸ್​ ಏರಿಳಿತ ಮತ್ತು ಹೃದಯಾಘಾತದಿಂದಾಗಿ ಅವರು ನಿಧನರಾದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಶಿವಕುಮಾರ್​ ಟ್ವೀಟ್​ ಮಾಡಿದ್ದಾರೆ.

ಸಿನಿಮಾ ಪತ್ರಕರ್ತನಾಗಿ, ಪ್ರಚಾರಕನಾಗಿ, ನಿರ್ಮಾಪಕನಾಗಿ ಹಲವು ವರ್ಷಗಳಿಂದ ಗುರುತಿಸಿಕೊಂಡಿದ್ದ ಅವರು ‘ಸೂಪರ್​ ಹಿಟ್​’ ಎಂಬ ಮ್ಯಾಗಜಿನ್​ ಕೂಡ ಪ್ರಕಟಿಸುತ್ತಿದ್ದರು. ಮಹೇಶ್​ ಬಾಬು ಮತ್ತು ಅವರ ಕುಟುಂಬಕ್ಕೆ ಪರ್ಸನಲ್​​ ಪ್ರಚಾರಕನಾಗಿಯೂ ತೊಡಗಿಕೊಂಡಿದ್ದರು. ನಾಲ್ಕು ದಶಕಗಳ ವೃತ್ತಿಜೀವನದಲ್ಲಿ ನೂರಾರು ಸಿನಿಮಾಗಳಿಗೆ ಅವರು ಪಿಆರ್​ಓ ಆಗಿದ್ದರು. ಪ್ರಭಾಸ್​, ನಾಗಾರ್ಜುನ, ಜ್ಯೂ. ಎನ್​ಟಿಆರ್​ ಮುಂತಾದ ಸ್ಟಾರ್​ ನಟರ ಜೊತೆಗೆ ಕೆಲಸ ಮಾಡಿದ್ದರು.

ರಾಜು ನಿಧನಕ್ಕೆ ಮಹೇಶ್​ ಬಾಬು ಕಂಬನಿ ಮಿಡಿದಿದ್ದಾರೆ. ‘ರಾಜು ಅವರು ನಿಧನರಾಗಿರುವುದನ್ನು ಸಹಿಸಲಾಗುತ್ತಿಲ್ಲ. ನನ್ನ ಬಾಲ್ಯದಿಂದಲೂ ನಾನು ಅವರನ್ನು ಬಲ್ಲೆ. ಅವರ ಜೊತೆ ತುಂಬಾ ಹತ್ತಿರದಿಂದ ಕೆಲಸ ಮಾಡಿದ್ದೇನೆ. ಹಲವು ವರ್ಷಗಳಿಂದ ಇಬ್ಬರೂ ಜೊತೆಯಾಗಿ ಪ್ರಯಾಣ ಮಾಡಿದ್ದೇವೆ’ ಎಂದು ರಾಜು ಜೊತೆಗಿನ ತಮ್ಮ ಒಡನಾಟವನ್ನು ಮಹೇಶ್​ ಬಾಬು ಸ್ಮರಿಸಿಕೊಂಡಿದ್ದಾರೆ.

‘ಸಿನಿಮಾ ಬಗ್ಗೆ ತೀವ್ರ ಒಲವು ಇದ್ದಂತಹ ಜಂಟಲ್​ಮನ್​ ಅವರು. ನಮ್ಮ ಕುಟುಂಬ ಎಂದರೆ ಅವರಿಗೆ ಪ್ರಪಂಚವಾಗಿತ್ತು. ನಮ್ಮ ಕುಟುಂಬ ಮತ್ತು ಮೀಡಿಯಾ ವಲಯಕ್ಕೆ ಇದು ತುಂಬಲಾರದ ನಷ್ಟ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ರಾಜು ಅವರೇ, ನಿಮ್ಮನ್ನು ತುಂಬಾ ಮಿಸ್​ ಮಾಡಿಕೊಳ್ಳುತ್ತೇನೆ’ ಎಂದು ಮಹೇಶ್​ ಬಾಬು ಟ್ವೀಟ್​ ಮಾಡಿದ್ದಾರೆ.

ಮಹೇಶ್​ ಬಾಬು ಮಾತ್ರವಲ್ಲದೆ ಅನೇಕ ಸೆಲೆಬ್ರಿಟಿಗಳು, ಸ್ನೇಹಿತರು ಹಾಗೂ ಪತ್ರಕರ್ತರು ಬಿಎ ರಾಜು ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

ಇದನ್ನೂ ಓದಿ:

ಹಾಸ್ಯ ನಟ ಅಯ್ಯಪ್ಪನ್​ ಗೋಪಿ ಹೃದಯಾಘಾತದಿಂದ ನಿಧನ; ಚಿತ್ರರಂಗಕ್ಕೆ ಮತ್ತೊಂದು ಆಘಾತ

Mahesh Babu: ಮಹೇಶ್​ ಬಾಬುಗೆ ಶಿಲ್ಪಾ ಶೆಟ್ಟಿ ಆಂಟಿ? ಇದು ಹೇಗೆ ಸಾಧ್ಯ ಎಂದು ತಲೆ ಕೆರೆದುಕೊಂಡ ಫ್ಯಾನ್ಸ್​

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ