AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದಲ್ಲೂ ರಿಲೀಸ್ ಆಗಲಿದೆ ತೆಲುಗಿನ ‘ಲವ್ ರೆಡ್ಡಿ’; ದುನಿಯಾ ವಿಜಯ್ ಬೆಂಬಲ

‘ನಾವು ಕೂಡ ಕನ್ನಡವರೇ. ನಮ್ಮ ಸಿನಿಮಾ ನೋಡಿ ಪ್ರೋತ್ಸಾಹಿಸಿ’ ಎಂದು ನಟ ಅಂಜನ್ ರಾಮಚಂದ್ರ ಹಾಗೂ ನಟಿ ಶ್ರಾವಣಿ ಹೇಳಿದ್ದಾರೆ. ‘ಲವ್​ ರೆಡ್ಡಿ’ ಸಿನಿಮಾಗೆ ಕರ್ನಾಟಕದಲ್ಲೂ ಉತ್ತಮ ಪ್ರತಿಕ್ರಿಯೆ ಸಿಗಲಿದೆ ಎಂಬ ನಂಬಿಕೆ ಚಿತ್ರತಂಡಕ್ಕೆ ಇದೆ. ದುಬೈನಲ್ಲೂ ಈ ಸಿನಿಮಾವನ್ನು ಬಿಡುಗಡೆ ಮಾಡುವ ಕುರಿತು ಮಾತುಕಥೆ ನಡೆಸುವುದಾಗಿ ದುನಿಯಾ ವಿಜಯ್ ಭರವಸೆ ನೀಡಿದ್ದಾರೆ.

ಕನ್ನಡದಲ್ಲೂ ರಿಲೀಸ್ ಆಗಲಿದೆ ತೆಲುಗಿನ ‘ಲವ್ ರೆಡ್ಡಿ’; ದುನಿಯಾ ವಿಜಯ್ ಬೆಂಬಲ
‘ಲವ್ ರೆಡ್ಡಿ’ ಸಿನಿಮಾದ ಕನ್ನಡ ವರ್ಷನ್​ ಟ್ರೇಲರ್​ ಬಿಡುಗಡೆ
ಮದನ್​ ಕುಮಾರ್​
|

Updated on:Nov 11, 2024 | 10:19 PM

Share

ರಿಯಲ್ ಘಟನೆಯನ್ನು ಆಧಾರವಾಗಿ ಇಟ್ಟುಕೊಂಡು ಮೂಡಿಬಂದ ‘ಲವ್ ರೆಡ್ಡಿ’ ಸಿನಿಮಾಗೆ ತೆಲುಗಿನಲ್ಲಿ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಗಲ್ಲಾಪಟ್ಟೆಗೆಯಲ್ಲಿ ಸದ್ದು ಮಾಡಿದ್ದೂ ಅಲ್ಲದೇ ಸ್ಟಾರ್​ ಸೆಲೆಬ್ರಿಟಿಗಳಿಂದ ಮೆಚ್ಚುಗೆ ಕೂಡ ಪಡೆದುಕೊಂಡಿದೆ. ಈಗ ಈ ಸಿನಿಮಾವನ್ನು ಕನ್ನಡದಲ್ಲೂ ಬಿಡುಗಡೆ ಮಾಡಲಾಗುತ್ತಿದೆ. ಇತ್ತೀಚೆಗೆ ಕನ್ನಡ ವರ್ಷನ್​ ಟ್ರೇಲರ್​ ಬಿಡುಗಡೆ ಆಯಿತು. ದುನಿಯಾ ವಿಜಯ್ (ವಿಜಯ್ ಕುಮಾರ್) ಅವರು ಈ ಟ್ರೇಲರ್​ ಬಿಡುಗಡೆ ಮಾಡುವ ಮೂಲಕ ‘ಲವ್ ರೆಡ್ಡಿ’ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಅವರ ಬೆಂಬಲ ಸಿಕ್ಕಿದ್ದಕ್ಕೆ ಸಿನಿಮಾ ತಂಡಕ್ಕೆ ಖುಷಿ ಆಗಿದೆ.

ಸಾಕಷ್ಟು ಮಂದಿ ಹೊಸಬರು ಸೇರಿಕೊಂಡು ‘ಲವ್ ರೆಡ್ಡಿ’ ಸಿನಿಮಾ ಮಾಡಿದ್ದಾರೆ. ಸ್ಮರಣ್ ರೆಡ್ಡಿ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ನಟ ಅಂಜನ್ ರಾಮಚಂದ್ರ ಹಾಗೂ ನಟಿ ಶ್ರಾವಣಿ ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಅಂಜನ್ ಕುಟುಂಬದವರೇ ನಿರ್ಮಾಣ ಮಾಡಿದ್ದಾರೆ. ದುನಿಯಾ ವಿಜಯ್ ಅವರಿಗೆ ಈ ಸಿನಿಮಾ ಇಷ್ಟ ಆಗಿದೆ. ಹೊಂಬಾಳೆ ಫಿಲ್ಸ್ಮ್​ ಮೂಲಕ ಈ ಸಿನಿಮಾ ಕರ್ನಾಟಕದಲ್ಲಿ ನ.22ರಂದು ಬಿಡುಗಡೆ ಆಗಲಿದೆ.

‘ಲವ್ ರೆಡ್ಡಿ’ ಸಿನಿಮಾದ ಟ್ರೇಲರ್​:

ವಿಶೇಷ ಏನೆಂದರೆ, ಆಂಧ್ರ ಮತ್ತು ಕರ್ನಾಟಕದ ಗಡಿಯಲ್ಲಿ ನಡೆದ ನೈಜ ಘಟನೆಯೇ ‘ಲವ್ ರೆಡ್ಡಿ’ ಸಿನಿಮಾದಲ್ಲಿ ಇದೆ. ಹಾಗಾಗಿ ಕನ್ನಡದ ಪ್ರೇಕ್ಷಕರಿಗೆ ಈ ಸಿನಿಮಾ ಹೆಚ್ಚು ಕನೆಕ್ಟ್ ಆಗಲಿದೆ ಎಂಬುದು ಚಿತ್ರತಂಡದ ನಂಬಿಕೆ. ‘ನಮಗೆ ಯಾವುದೇ ಫಿಲ್ಮಿ ಹಿನ್ನೆಲೆ ಇಲ್ಲ. ಅಂಜನ್ ರಾಮಚಂದ್ರ ನಮ್ಮ ಫ್ಯಾಮಿಲಿಯವರು. ಹೊಸಬರ ಸಿನಿಮಾವನ್ನು ನಿರ್ಮಾಣ ಮಾಡಲು ಯಾರೂ ಮುಂದೆ ಬರಲ್ಲ. ಹಾಗಾಗಿ ನಾವೆಲ್ಲ ಸೇರಿ ಈ ಚಿತ್ರವನ್ನು ನಿರ್ಮಿಸಿದ್ದೇನೆ. ಜನ ಮೆಚ್ಚಿದ್ದಾರೆ. ಪ್ರಭಾಸ್​ ಕೂಡ ಇಷ್ಟಪಟ್ಟಿದ್ದಾರೆ. ವಿಜಯ್ ಕುಮಾರ್​ ಅವರಿಗೆ ನಾವು ಚಿರಋಣಿ’ ಎಂದು ನಿರ್ಮಾಪಕರು ಹೇಳಿದ್ದಾರೆ.

ಇದನ್ನೂ ಓದಿ: ಕನ್ನಡದ ನಟನ ಮೇಲೆ ಚಿತ್ರಮಂದಿರದಲ್ಲಿ ಮಹಿಳೆಯಿಂದ ಹಲ್ಲೆ; ಕಾರಣ ವಿಚಿತ್ರ

ಕನ್ನಡದ ಸೀರಿಯಲ್​ಗಳ ಮೂಲಕ ಫೇಮಸ್​ ಆಗಿರುವ ಎನ್.ಟಿ. ರಾಮಸ್ವಾಮಿ ಅವರು ಈ ಸಿನಿಮಾದಲ್ಲಿ ಒಂದು ಪಾತ್ರ ಮಾಡಿದ್ದಾರೆ. ಹೈದರಾಬಾದ್​ನಲ್ಲಿ ಸಿನಿಮಾದ ಪ್ರಚಾರಕ್ಕೆ ಹೋದಾಗ ಮಹಿಳೆಯೊಬ್ಬರು ರಾಮಸ್ವಾಮಿ ಮೇಲೆ ಹಲ್ಲೆಗೆ ಮುಂದಾಗಿದ್ದರು. ಆ ಬಗ್ಗೆ ಅವರು ಮಾತನಾಡಿದರು. ‘ಏಕಾಏಕಿ ಮಹಿಳೆಯೊಬ್ಬರು ಕೆನ್ನೆಗೆ ಹೊಡೆಯಲು ಶುರು ಮಾಡಿದರು. ನನ್ನ ಪಾತ್ರ ನೋಡಿ ಅವರಿಗೆ ಕೋಪ ಬಂದಿತ್ತು. ಅಷ್ಟರಮಟ್ಟಿಗೆ ಜನರಿಗೆ ಈ ಪಾತ್ರ ತಲುಪಿದೆ’ ಎಂದು ಅವರು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:06 pm, Mon, 11 November 24

Follow Us
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು
ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು
ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ
ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ
ಮಾ.03 ಚಂದ್ರಗ್ರಹಣ; ಧನಸ್ಸು ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; ಧನಸ್ಸು ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?