AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗು ಸಿನಿಮಾ ನಿರ್ದೇಶಕ ಎಎಸ್ ರವಿಕುಮಾರ್ ನಿಧನ

AS Ravikumar: ತೆಲುಗು ಚಿತ್ರರಂಗದ ಕೆಲ ಸ್ಟಾರ್ ನಟರ ಜೊತೆಗೆ ಕೆಲಸ ಮಾಡಿರುವ, ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ನಿರ್ದೇಶಕ ಎಎಸ್ ರವಿಕುಮಾರ್ ನಿಧನ ಹೊಂದಿದ್ದಾರೆ. ರವಿಕುಮಾರ್ ಅವರು ಕಳೆದ ಕೆಲ ತಿಂಗಳಿನಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು, ನಿನ್ನೆ ತಡರಾತ್ರಿ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ತೆಲುಗು ಸಿನಿಮಾ ನಿರ್ದೇಶಕ ಎಎಸ್ ರವಿಕುಮಾರ್ ನಿಧನ
As Ravikumar
ಮಂಜುನಾಥ ಸಿ.
|

Updated on: Jun 11, 2025 | 11:58 AM

Share

ತೆಲುಗು ಚಿತ್ರರಂಗದ (Tollywood) ಕೆಲ ಸ್ಟಾರ್ ನಟರ ಜೊತೆಗೆ ಕೆಲಸ ಮಾಡಿರುವ, ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ನಿರ್ದೇಶಕ ಎಎಸ್ ರವಿಕುಮಾರ್ ನಿಧನ ಹೊಂದಿದ್ದಾರೆ. ರವಿಕುಮಾರ್ ಅವರು ಕಳೆದ ಕೆಲ ತಿಂಗಳಿನಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು, ನಿನ್ನೆ ತಡರಾತ್ರಿ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ ಸುಮಾರು 70 ವರ್ಷ ವಯಸ್ಸಾಗಿತ್ತು. ರವಿಕುಮಾರ್ ಅವರಿಗೆ ಪತ್ನಿ ಮತ್ತು ಮಕ್ಕಳಿದ್ದರೂ ಸಹ ಕೆಲ ವರ್ಷಗಳಿಂದ ಅವರು ಒಬ್ಬರೇ ಬದುಕುತ್ತಿದ್ದರು ಎನ್ನಲಾಗಿದೆ.

ನಂದಮೂರಿ ಬಾಲಕೃಷ್ಣ, ಗೋಪಿಚಂದ್, ನಿತಿನ್ ಇನ್ನೂ ಕೆಲವು ತೆಲುಗಿನ ಸ್ಟಾರ್ ನಟರುಗಳೊಟ್ಟಿಗೆ ಎಎಸ್ ರವಿಕುಮಾರ್ ಕೆಲಸ ಮಾಡಿದ್ದಾರೆ. ವಿಲನ್ ಪಾತ್ರಗಳಲ್ಲಿ ನಟಿಸುತ್ತಿದ್ದ ಗೋಪಿಚಂದ್ ಅವರನ್ನು ‘ಯಜ್ಞಂ’ ಸಿನಿಮಾ ಮೂಲಕ ನಾಯಕ ನಟನನ್ನಾಗಿ ಮಾಡಿದ್ದು ಎಎಸ್ ರವಿಕುಮಾರ್. ಆ ನಂತರ ಮೆಗಾಸ್ಟಾರ್ ಕುಟುಂಬದ ಸಾಯಿ ದುರ್ಗ ತೇಜ್ ಅವರ ಮೊದಲ ಸಿನಿಮಾ ‘ಪಿಲ್ಲಾ ನೂವು ಲೇನಿ ಜೀವತಂ’ ಅನ್ನು ರವಿಕುಮಾರ್ ನಿರ್ದೇಶನ ಮಾಡಿದ್ದರು.

ಇದನ್ನೂ ಓದಿ:ತೆಲುಗು ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಮೇಲೆ ಓಪನ್​ ಟ್ರೋಲ್; ಹುಟ್ಟಿತು ಚರ್ಚೆ

ನಟ ನಂದಮೂರಿ ಬಾಲಕೃಷ್ಣ ನಟನೆಯ ‘ವೀರಭದ್ರ’ ಸಿನಿಮಾವನ್ನು ರವಿಕುಮಾರ್ ನಿರ್ದೇಶಿಸಿದ್ದರು. ಆ ಸಿನಿಮಾ ಹಿಟ್ ಆಗಿತ್ತು. ನಿತಿನ್ ಜೊತೆಗೆ ‘ಆಟಾಡಿಸ್ತ’ ಸಿನಿಮಾ ಮಾಡಿದ್ದರು. ಗೋಪಿಚಂದ್ ನಟನೆಯ ‘ಶೌಖ್ಯಂ’ ಸಿನಿಮಾ ಮಾಡಿದ್ದರು. ರಾಜ್ ತರುಣ್ ನಟನೆಯ ‘ತಿರಗಬಡರಾ ಸಾಮಿ’ ರವಿಕುಮಾರ್ ಅವರ ಕೊನೆಯ ಸಿನಿಮಾ. ಎಎಸ್ ರವಿಕುಮಾರ್ ನಿಧನಕ್ಕೆ ತೆಲುಗು ಚಿತ್ರರಂಗದ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು