AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರ್ಛೆ ತಪ್ಪಿದ ಕೆಲವೇ ಕ್ಷಣದಲ್ಲಿ ಸಿನಿಮಾ ನಿರ್ದೇಶಕ ನಾಗೇಶ್ವರ ರಾವ್​ ನಿಧನ; ಸೆಲೆಬ್ರಿಟಿಗಳ ಕಂಬನಿ

KS Nageswara Rao Death: ಪತ್ನಿ ಮತ್ತು ಇಬ್ಬರು ಮಕ್ಕಳನ್ನು ನಿರ್ದೇಶಕ ಕೆ.ಎಸ್​. ನಾಗೇಶ್ವರ ರಾವ್​ ಅಗಲಿದ್ದಾರೆ. 1986ರಿಂದಲೂ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು. ಅವರ ನಿಧನಕ್ಕೆ ಟಾಲಿವುಡ್​ ಸೆಲೆಬ್ರಿಟಿಗಳು ಕಂಬನಿ ಮಿಡಿದ್ದಾರೆ.

ಮೂರ್ಛೆ ತಪ್ಪಿದ ಕೆಲವೇ ಕ್ಷಣದಲ್ಲಿ ಸಿನಿಮಾ ನಿರ್ದೇಶಕ ನಾಗೇಶ್ವರ ರಾವ್​ ನಿಧನ; ಸೆಲೆಬ್ರಿಟಿಗಳ ಕಂಬನಿ
ಕೆ.ಎಸ್​. ನಾಗೇಶ್ವರ ರಾವ್
TV9 Web
| Edited By: |

Updated on: Nov 28, 2021 | 9:01 AM

Share

ತೆಲುಗು ಚಿತ್ರರಂಗಕ್ಕೆ ಕಹಿ ಸುದ್ದಿ ಕೇಳಿಬಂದಿದೆ. ಟಾಲಿವುಡ್ (Tollywood)​ ನಿರ್ದೇಶಕ ಕೆ.ಎಸ್​. ನಾಗೇಶ್ವರ ರಾವ್​ ಅವರು ವಿಧಿವಶರಾಗಿದ್ದಾರೆ. ಶನಿವಾರ (ನ.27) ತಮ್ಮ ಊರಿನಿಂದ ಹೈದರಾಬಾದ್​ಗೆ ಪ್ರಯಾಣ ಮಾಡುವ ಸಂದರ್ಭದಲ್ಲಿ ಅವರ ಆರೋಗ್ಯದಲ್ಲಿ ಏರುಪೇರು ಆಯಿತು. ಮೂರ್ಛೆ ತಪ್ಪಿದ ಕೆಲವೇ ನಿಮಿಷಗಳಲ್ಲಿ ಅವರು ನಿಧನರಾದರು ಎಂದು ವರದಿ ಆಗಿದೆ. ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಬಳಿಕ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ, ಅಷ್ಟರಲ್ಲಾಗಲೇ ಅವರ ಪ್ರಾಣಪಕ್ಷಿ ಹಾರಿ ಹೋಗಿತ್ತು. ಈ ಸುದ್ದಿ ಕೇಳಿ ಇಡೀ ಟಾಲಿವುಡ್​ ಕಂಬನಿ ಮಿಡಿದಿದೆ. ಅನೇಕ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ ನಾಗೇಶ್ವರ ರಾವ್​ (KS Nageswara Rao) ಅವರು ನಿಧನರಾಗಿರುವುದು ಎಲ್ಲರಿಗೂ ಆಘಾತ ಮೂಡಿಸಿದೆ. ಸ್ನೇಹಿತರು, ಸೆಲೆಬ್ರಿಟಿಗಳು, ಆಪ್ತರು ಮತ್ತು ಅಭಿಮಾನಿಗಳು ನಾಗೇಶ್ವರ ರಾವ್​ ಅಗಲಿಕೆಗೆ ಕಂಬನಿ ಮಿಡಿಯುತ್ತಿದ್ದಾರೆ. ಅವರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳುತ್ತಿದ್ದಾರೆ.

ಪತ್ನಿ ಮತ್ತು ಇಬ್ಬರು ಮಕ್ಕಳನ್ನು ನಾಗೇಶ್ವರ ರಾವ್​ ಅಗಲಿದ್ದಾರೆ. 1986ರಿಂದಲೂ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು. ಖ್ಯಾತ ನಿರ್ದೇಶಕ ಕೋಡಿ ರಾಮಕೃಷ್ಣ ಅವರ ಜೊತೆ ಸಹಾಯಕ ನಿರ್ದೇಶಕರಾಗಿ ನಾಗೇಶ್ವರ ರಾವ್​ ವೃತ್ತಿಜೀವನ ಆರಂಭಿಸಿದ್ದರು. ಅವರು ನಿರ್ದೇಶಿಸಿದ್ದ ಮೊದಲ ಸಿನಿಮಾ ‘ರಿಕ್ಷಾ ರುದ್ರಯ್ಯ’. ಅನೇಕ ಕಲಾವಿದರು ಮತ್ತು ತಂತ್ರಜ್ಞರನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದ ಕೀರ್ತಿ ನಾಗೇಶ್ವರ ರಾವ್​ ಅವರಿಗೆ ಸಲ್ಲುತ್ತದೆ.

ಇದನ್ನೂ ಓದಿ:

‘ಅಪ್ಪು ನಿಧನದ ಸುದ್ದಿ ಕೇಳಿದಾಗ ರಾಡ್​ನಿಂದ ತಲೆಗೆ ಹೊಡೆದಂತೆ ಆಯ್ತು’; ಕರಾಳ ಕ್ಷಣದ ಬಗ್ಗೆ ಶಿವಣ್ಣನ ಮಾತು

ಪುನೀತ್​ ಹೊಸ ಚಿತ್ರ ‘ಲಕ್ಕಿ ಮ್ಯಾನ್​’ ಶೀಘ್ರವೇ ರಿಲೀಸ್​; ಅಪ್ಪು ಅಭಿಮಾನಿಗಳಿಗೆ ಗುಡ್​ ನ್ಯೂಸ್​

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ