AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರ್ಛೆ ತಪ್ಪಿದ ಕೆಲವೇ ಕ್ಷಣದಲ್ಲಿ ಸಿನಿಮಾ ನಿರ್ದೇಶಕ ನಾಗೇಶ್ವರ ರಾವ್​ ನಿಧನ; ಸೆಲೆಬ್ರಿಟಿಗಳ ಕಂಬನಿ

KS Nageswara Rao Death: ಪತ್ನಿ ಮತ್ತು ಇಬ್ಬರು ಮಕ್ಕಳನ್ನು ನಿರ್ದೇಶಕ ಕೆ.ಎಸ್​. ನಾಗೇಶ್ವರ ರಾವ್​ ಅಗಲಿದ್ದಾರೆ. 1986ರಿಂದಲೂ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು. ಅವರ ನಿಧನಕ್ಕೆ ಟಾಲಿವುಡ್​ ಸೆಲೆಬ್ರಿಟಿಗಳು ಕಂಬನಿ ಮಿಡಿದ್ದಾರೆ.

ಮೂರ್ಛೆ ತಪ್ಪಿದ ಕೆಲವೇ ಕ್ಷಣದಲ್ಲಿ ಸಿನಿಮಾ ನಿರ್ದೇಶಕ ನಾಗೇಶ್ವರ ರಾವ್​ ನಿಧನ; ಸೆಲೆಬ್ರಿಟಿಗಳ ಕಂಬನಿ
ಕೆ.ಎಸ್​. ನಾಗೇಶ್ವರ ರಾವ್
TV9 Web
| Edited By: |

Updated on: Nov 28, 2021 | 9:01 AM

Share

ತೆಲುಗು ಚಿತ್ರರಂಗಕ್ಕೆ ಕಹಿ ಸುದ್ದಿ ಕೇಳಿಬಂದಿದೆ. ಟಾಲಿವುಡ್ (Tollywood)​ ನಿರ್ದೇಶಕ ಕೆ.ಎಸ್​. ನಾಗೇಶ್ವರ ರಾವ್​ ಅವರು ವಿಧಿವಶರಾಗಿದ್ದಾರೆ. ಶನಿವಾರ (ನ.27) ತಮ್ಮ ಊರಿನಿಂದ ಹೈದರಾಬಾದ್​ಗೆ ಪ್ರಯಾಣ ಮಾಡುವ ಸಂದರ್ಭದಲ್ಲಿ ಅವರ ಆರೋಗ್ಯದಲ್ಲಿ ಏರುಪೇರು ಆಯಿತು. ಮೂರ್ಛೆ ತಪ್ಪಿದ ಕೆಲವೇ ನಿಮಿಷಗಳಲ್ಲಿ ಅವರು ನಿಧನರಾದರು ಎಂದು ವರದಿ ಆಗಿದೆ. ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಬಳಿಕ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ, ಅಷ್ಟರಲ್ಲಾಗಲೇ ಅವರ ಪ್ರಾಣಪಕ್ಷಿ ಹಾರಿ ಹೋಗಿತ್ತು. ಈ ಸುದ್ದಿ ಕೇಳಿ ಇಡೀ ಟಾಲಿವುಡ್​ ಕಂಬನಿ ಮಿಡಿದಿದೆ. ಅನೇಕ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ ನಾಗೇಶ್ವರ ರಾವ್​ (KS Nageswara Rao) ಅವರು ನಿಧನರಾಗಿರುವುದು ಎಲ್ಲರಿಗೂ ಆಘಾತ ಮೂಡಿಸಿದೆ. ಸ್ನೇಹಿತರು, ಸೆಲೆಬ್ರಿಟಿಗಳು, ಆಪ್ತರು ಮತ್ತು ಅಭಿಮಾನಿಗಳು ನಾಗೇಶ್ವರ ರಾವ್​ ಅಗಲಿಕೆಗೆ ಕಂಬನಿ ಮಿಡಿಯುತ್ತಿದ್ದಾರೆ. ಅವರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳುತ್ತಿದ್ದಾರೆ.

ಪತ್ನಿ ಮತ್ತು ಇಬ್ಬರು ಮಕ್ಕಳನ್ನು ನಾಗೇಶ್ವರ ರಾವ್​ ಅಗಲಿದ್ದಾರೆ. 1986ರಿಂದಲೂ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು. ಖ್ಯಾತ ನಿರ್ದೇಶಕ ಕೋಡಿ ರಾಮಕೃಷ್ಣ ಅವರ ಜೊತೆ ಸಹಾಯಕ ನಿರ್ದೇಶಕರಾಗಿ ನಾಗೇಶ್ವರ ರಾವ್​ ವೃತ್ತಿಜೀವನ ಆರಂಭಿಸಿದ್ದರು. ಅವರು ನಿರ್ದೇಶಿಸಿದ್ದ ಮೊದಲ ಸಿನಿಮಾ ‘ರಿಕ್ಷಾ ರುದ್ರಯ್ಯ’. ಅನೇಕ ಕಲಾವಿದರು ಮತ್ತು ತಂತ್ರಜ್ಞರನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದ ಕೀರ್ತಿ ನಾಗೇಶ್ವರ ರಾವ್​ ಅವರಿಗೆ ಸಲ್ಲುತ್ತದೆ.

ಇದನ್ನೂ ಓದಿ:

‘ಅಪ್ಪು ನಿಧನದ ಸುದ್ದಿ ಕೇಳಿದಾಗ ರಾಡ್​ನಿಂದ ತಲೆಗೆ ಹೊಡೆದಂತೆ ಆಯ್ತು’; ಕರಾಳ ಕ್ಷಣದ ಬಗ್ಗೆ ಶಿವಣ್ಣನ ಮಾತು

ಪುನೀತ್​ ಹೊಸ ಚಿತ್ರ ‘ಲಕ್ಕಿ ಮ್ಯಾನ್​’ ಶೀಘ್ರವೇ ರಿಲೀಸ್​; ಅಪ್ಪು ಅಭಿಮಾನಿಗಳಿಗೆ ಗುಡ್​ ನ್ಯೂಸ್​

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ