AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರ್ಛೆ ತಪ್ಪಿದ ಕೆಲವೇ ಕ್ಷಣದಲ್ಲಿ ಸಿನಿಮಾ ನಿರ್ದೇಶಕ ನಾಗೇಶ್ವರ ರಾವ್​ ನಿಧನ; ಸೆಲೆಬ್ರಿಟಿಗಳ ಕಂಬನಿ

KS Nageswara Rao Death: ಪತ್ನಿ ಮತ್ತು ಇಬ್ಬರು ಮಕ್ಕಳನ್ನು ನಿರ್ದೇಶಕ ಕೆ.ಎಸ್​. ನಾಗೇಶ್ವರ ರಾವ್​ ಅಗಲಿದ್ದಾರೆ. 1986ರಿಂದಲೂ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು. ಅವರ ನಿಧನಕ್ಕೆ ಟಾಲಿವುಡ್​ ಸೆಲೆಬ್ರಿಟಿಗಳು ಕಂಬನಿ ಮಿಡಿದ್ದಾರೆ.

ಮೂರ್ಛೆ ತಪ್ಪಿದ ಕೆಲವೇ ಕ್ಷಣದಲ್ಲಿ ಸಿನಿಮಾ ನಿರ್ದೇಶಕ ನಾಗೇಶ್ವರ ರಾವ್​ ನಿಧನ; ಸೆಲೆಬ್ರಿಟಿಗಳ ಕಂಬನಿ
ಕೆ.ಎಸ್​. ನಾಗೇಶ್ವರ ರಾವ್
TV9 Web
| Updated By: ಮದನ್​ ಕುಮಾರ್​|

Updated on: Nov 28, 2021 | 9:01 AM

Share

ತೆಲುಗು ಚಿತ್ರರಂಗಕ್ಕೆ ಕಹಿ ಸುದ್ದಿ ಕೇಳಿಬಂದಿದೆ. ಟಾಲಿವುಡ್ (Tollywood)​ ನಿರ್ದೇಶಕ ಕೆ.ಎಸ್​. ನಾಗೇಶ್ವರ ರಾವ್​ ಅವರು ವಿಧಿವಶರಾಗಿದ್ದಾರೆ. ಶನಿವಾರ (ನ.27) ತಮ್ಮ ಊರಿನಿಂದ ಹೈದರಾಬಾದ್​ಗೆ ಪ್ರಯಾಣ ಮಾಡುವ ಸಂದರ್ಭದಲ್ಲಿ ಅವರ ಆರೋಗ್ಯದಲ್ಲಿ ಏರುಪೇರು ಆಯಿತು. ಮೂರ್ಛೆ ತಪ್ಪಿದ ಕೆಲವೇ ನಿಮಿಷಗಳಲ್ಲಿ ಅವರು ನಿಧನರಾದರು ಎಂದು ವರದಿ ಆಗಿದೆ. ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಬಳಿಕ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ, ಅಷ್ಟರಲ್ಲಾಗಲೇ ಅವರ ಪ್ರಾಣಪಕ್ಷಿ ಹಾರಿ ಹೋಗಿತ್ತು. ಈ ಸುದ್ದಿ ಕೇಳಿ ಇಡೀ ಟಾಲಿವುಡ್​ ಕಂಬನಿ ಮಿಡಿದಿದೆ. ಅನೇಕ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ ನಾಗೇಶ್ವರ ರಾವ್​ (KS Nageswara Rao) ಅವರು ನಿಧನರಾಗಿರುವುದು ಎಲ್ಲರಿಗೂ ಆಘಾತ ಮೂಡಿಸಿದೆ. ಸ್ನೇಹಿತರು, ಸೆಲೆಬ್ರಿಟಿಗಳು, ಆಪ್ತರು ಮತ್ತು ಅಭಿಮಾನಿಗಳು ನಾಗೇಶ್ವರ ರಾವ್​ ಅಗಲಿಕೆಗೆ ಕಂಬನಿ ಮಿಡಿಯುತ್ತಿದ್ದಾರೆ. ಅವರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳುತ್ತಿದ್ದಾರೆ.

ಪತ್ನಿ ಮತ್ತು ಇಬ್ಬರು ಮಕ್ಕಳನ್ನು ನಾಗೇಶ್ವರ ರಾವ್​ ಅಗಲಿದ್ದಾರೆ. 1986ರಿಂದಲೂ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು. ಖ್ಯಾತ ನಿರ್ದೇಶಕ ಕೋಡಿ ರಾಮಕೃಷ್ಣ ಅವರ ಜೊತೆ ಸಹಾಯಕ ನಿರ್ದೇಶಕರಾಗಿ ನಾಗೇಶ್ವರ ರಾವ್​ ವೃತ್ತಿಜೀವನ ಆರಂಭಿಸಿದ್ದರು. ಅವರು ನಿರ್ದೇಶಿಸಿದ್ದ ಮೊದಲ ಸಿನಿಮಾ ‘ರಿಕ್ಷಾ ರುದ್ರಯ್ಯ’. ಅನೇಕ ಕಲಾವಿದರು ಮತ್ತು ತಂತ್ರಜ್ಞರನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದ ಕೀರ್ತಿ ನಾಗೇಶ್ವರ ರಾವ್​ ಅವರಿಗೆ ಸಲ್ಲುತ್ತದೆ.

ಇದನ್ನೂ ಓದಿ:

‘ಅಪ್ಪು ನಿಧನದ ಸುದ್ದಿ ಕೇಳಿದಾಗ ರಾಡ್​ನಿಂದ ತಲೆಗೆ ಹೊಡೆದಂತೆ ಆಯ್ತು’; ಕರಾಳ ಕ್ಷಣದ ಬಗ್ಗೆ ಶಿವಣ್ಣನ ಮಾತು

ಪುನೀತ್​ ಹೊಸ ಚಿತ್ರ ‘ಲಕ್ಕಿ ಮ್ಯಾನ್​’ ಶೀಘ್ರವೇ ರಿಲೀಸ್​; ಅಪ್ಪು ಅಭಿಮಾನಿಗಳಿಗೆ ಗುಡ್​ ನ್ಯೂಸ್​

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ