ಮೂರ್ಛೆ ತಪ್ಪಿದ ಕೆಲವೇ ಕ್ಷಣದಲ್ಲಿ ಸಿನಿಮಾ ನಿರ್ದೇಶಕ ನಾಗೇಶ್ವರ ರಾವ್​ ನಿಧನ; ಸೆಲೆಬ್ರಿಟಿಗಳ ಕಂಬನಿ

KS Nageswara Rao Death: ಪತ್ನಿ ಮತ್ತು ಇಬ್ಬರು ಮಕ್ಕಳನ್ನು ನಿರ್ದೇಶಕ ಕೆ.ಎಸ್​. ನಾಗೇಶ್ವರ ರಾವ್​ ಅಗಲಿದ್ದಾರೆ. 1986ರಿಂದಲೂ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು. ಅವರ ನಿಧನಕ್ಕೆ ಟಾಲಿವುಡ್​ ಸೆಲೆಬ್ರಿಟಿಗಳು ಕಂಬನಿ ಮಿಡಿದ್ದಾರೆ.

ಮೂರ್ಛೆ ತಪ್ಪಿದ ಕೆಲವೇ ಕ್ಷಣದಲ್ಲಿ ಸಿನಿಮಾ ನಿರ್ದೇಶಕ ನಾಗೇಶ್ವರ ರಾವ್​ ನಿಧನ; ಸೆಲೆಬ್ರಿಟಿಗಳ ಕಂಬನಿ
ಕೆ.ಎಸ್​. ನಾಗೇಶ್ವರ ರಾವ್
Follow us
| Updated By: ಮದನ್​ ಕುಮಾರ್​

Updated on: Nov 28, 2021 | 9:01 AM

ತೆಲುಗು ಚಿತ್ರರಂಗಕ್ಕೆ ಕಹಿ ಸುದ್ದಿ ಕೇಳಿಬಂದಿದೆ. ಟಾಲಿವುಡ್ (Tollywood)​ ನಿರ್ದೇಶಕ ಕೆ.ಎಸ್​. ನಾಗೇಶ್ವರ ರಾವ್​ ಅವರು ವಿಧಿವಶರಾಗಿದ್ದಾರೆ. ಶನಿವಾರ (ನ.27) ತಮ್ಮ ಊರಿನಿಂದ ಹೈದರಾಬಾದ್​ಗೆ ಪ್ರಯಾಣ ಮಾಡುವ ಸಂದರ್ಭದಲ್ಲಿ ಅವರ ಆರೋಗ್ಯದಲ್ಲಿ ಏರುಪೇರು ಆಯಿತು. ಮೂರ್ಛೆ ತಪ್ಪಿದ ಕೆಲವೇ ನಿಮಿಷಗಳಲ್ಲಿ ಅವರು ನಿಧನರಾದರು ಎಂದು ವರದಿ ಆಗಿದೆ. ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಬಳಿಕ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ, ಅಷ್ಟರಲ್ಲಾಗಲೇ ಅವರ ಪ್ರಾಣಪಕ್ಷಿ ಹಾರಿ ಹೋಗಿತ್ತು. ಈ ಸುದ್ದಿ ಕೇಳಿ ಇಡೀ ಟಾಲಿವುಡ್​ ಕಂಬನಿ ಮಿಡಿದಿದೆ. ಅನೇಕ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ ನಾಗೇಶ್ವರ ರಾವ್​ (KS Nageswara Rao) ಅವರು ನಿಧನರಾಗಿರುವುದು ಎಲ್ಲರಿಗೂ ಆಘಾತ ಮೂಡಿಸಿದೆ. ಸ್ನೇಹಿತರು, ಸೆಲೆಬ್ರಿಟಿಗಳು, ಆಪ್ತರು ಮತ್ತು ಅಭಿಮಾನಿಗಳು ನಾಗೇಶ್ವರ ರಾವ್​ ಅಗಲಿಕೆಗೆ ಕಂಬನಿ ಮಿಡಿಯುತ್ತಿದ್ದಾರೆ. ಅವರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳುತ್ತಿದ್ದಾರೆ.

ಪತ್ನಿ ಮತ್ತು ಇಬ್ಬರು ಮಕ್ಕಳನ್ನು ನಾಗೇಶ್ವರ ರಾವ್​ ಅಗಲಿದ್ದಾರೆ. 1986ರಿಂದಲೂ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು. ಖ್ಯಾತ ನಿರ್ದೇಶಕ ಕೋಡಿ ರಾಮಕೃಷ್ಣ ಅವರ ಜೊತೆ ಸಹಾಯಕ ನಿರ್ದೇಶಕರಾಗಿ ನಾಗೇಶ್ವರ ರಾವ್​ ವೃತ್ತಿಜೀವನ ಆರಂಭಿಸಿದ್ದರು. ಅವರು ನಿರ್ದೇಶಿಸಿದ್ದ ಮೊದಲ ಸಿನಿಮಾ ‘ರಿಕ್ಷಾ ರುದ್ರಯ್ಯ’. ಅನೇಕ ಕಲಾವಿದರು ಮತ್ತು ತಂತ್ರಜ್ಞರನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದ ಕೀರ್ತಿ ನಾಗೇಶ್ವರ ರಾವ್​ ಅವರಿಗೆ ಸಲ್ಲುತ್ತದೆ.

ಇದನ್ನೂ ಓದಿ:

‘ಅಪ್ಪು ನಿಧನದ ಸುದ್ದಿ ಕೇಳಿದಾಗ ರಾಡ್​ನಿಂದ ತಲೆಗೆ ಹೊಡೆದಂತೆ ಆಯ್ತು’; ಕರಾಳ ಕ್ಷಣದ ಬಗ್ಗೆ ಶಿವಣ್ಣನ ಮಾತು

ಪುನೀತ್​ ಹೊಸ ಚಿತ್ರ ‘ಲಕ್ಕಿ ಮ್ಯಾನ್​’ ಶೀಘ್ರವೇ ರಿಲೀಸ್​; ಅಪ್ಪು ಅಭಿಮಾನಿಗಳಿಗೆ ಗುಡ್​ ನ್ಯೂಸ್​

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!