AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಮೌಳಿ ಅಬ್ಬರಕ್ಕೆ ಹೆದರಿದ ಟಾಲಿವುಡ್​? ಈ ಸ್ಟಾರ್​ ನಟರ ಸಿನಿಮಾ ರಿಲೀಸ್​ ಡೇಟ್​ ಮುಂದೂಡಿಕೆ

ರಾಜಮೌಳಿ ಎಲ್ಲಾ ನಿರ್ಮಾಪಕರ ಜತೆ ಮಾತುಕತೆ ನಡೆಸಿದ್ದಾರೆ. ಮಹೇಶ್​ ಬಾಬು ಸಿನಿಮಾವನ್ನು ಬೇಸಿಗೆ ರಜೆಗೆ ರಿಲೀಸ್​ ಮಾಡುವಂತೆ ಅವರು ಕೋರಿದ್ದಾರೆ.

ರಾಜಮೌಳಿ ಅಬ್ಬರಕ್ಕೆ ಹೆದರಿದ ಟಾಲಿವುಡ್​? ಈ ಸ್ಟಾರ್​ ನಟರ ಸಿನಿಮಾ ರಿಲೀಸ್​ ಡೇಟ್​ ಮುಂದೂಡಿಕೆ
ಮಹೇಶ್​ ಬಾಬು, ರಾಜಮೌಳಿ ಮತ್ತು ಪ್ರಭಾಸ್
TV9 Web
| Edited By: |

Updated on: Oct 13, 2021 | 1:43 PM

Share

ಎಸ್​.ಎಸ್​. ರಾಜಮೌಳಿ ನಿರ್ದೇಶನದ ಸಿನಿಮಾ ತೆರೆಗೆ ಬರುತ್ತದೆ ಎಂದರೆ ಅದರ ಸಮೀಪ ಯಾವುದೇ ಸಿನಿಮಾಗಳು ರಿಲೀಸ್​ ಆಗುವುದಿಲ್ಲ. ರಾಜಮೌಳಿ ಸಿನಿಮಾಗಳ ಅದ್ದೂರಿತನ, ಅವರು ಸಿನಿಮಾ ಕಟ್ಟಿಕೊಡುವ ರೀತಿಯನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಚಿತ್ರಮಂದಿರಕ್ಕೆ ಬಂದೇ ಬರುತ್ತಾರೆ. ಹೀಗಾಗಿ ಈ ಸಂದರ್ಭದಲ್ಲಿ ಬೇರೆ  ಸಿನಿಮಾ ರಿಲೀಸ್​ ಆದರೆ ಕೈಸುಟ್ಟಿಕೊಳ್ಳುವುದು ಪಕ್ಕಾ ಅನ್ನೋದು ಬಹುತೇಕರಿಗೆ ಅರಿವಾಗಿದೆ. ಆದರೆ, ಈಗ ರಾಜಮೌಳಿ ಬೇರೆ ಸ್ಟಾರ್​ ಸಿನಿಮಾಗಳ ಜತೆ ತಾವೇ ಕಾಂಪಿಟೇಷನ್​ಗೆ ಇಳಿದಿದ್ದಾರೆ. ಇದರಿಂದ ಸಿನಿಮಾ ರಿಲೀಸ್​ ಡೇಟ್​ ಮುಂದೂಡುವು ಅನಿವಾರ್ಯತೆ ನಿರ್ಮಾಪಕರಿಗೆ ಬಂದಿದೆ.

ಮಹೇಶ್​ ಬಾಬು ನಟನೆಯ ‘ಸರ್ಕಾರು ವಾರಿ ಪಾಟ’ ಸಿನಿಮಾ ರಿಲೀಸ್​ ಡೇಟ್​ ಈಗಾಗಲೇ ಘೋಷಣೆ ಆಗಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಈ ಸಿನಿಮಾ ಜನವರಿ 13ರಂದು ತೆರೆಗೆ ಬರುತ್ತಿದೆ. ಬಿಗ್​ ಬಜೆಟ್​ ಸಿನಿಮಾ ಇದಾಗಿದ್ದು, ಈ ಬಗ್ಗೆ ಪ್ರೇಕ್ಷಕರು ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಅಂದರೆ ಜನವರಿ 14ರಂದು ‘ರಾಧೆ ಶ್ಯಾಮ್​’ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗುತ್ತಿದೆ. ಪ್ರಭಾಸ್​ ನಟನೆಯ ಈ ಸಿನಿಮಾ ಕೂಡ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದೆ.  ಪವನ್​ ಕಲ್ಯಾಣ್​ ಹಾಗೂ ರಾಣಾ ದಗ್ಗುಬಾಟಿ ಅಭಿನಯದ ‘ಭೀಮ್ಲಾ ನಾಯಕ್​’ ಸಿನಿಮಾ ಜನವರಿ 12ರಂದು ರಿಲೀಸ್​ ಆಗುತ್ತಿದೆ. ಆರ್​ಆರ್​ಆರ್​ ಸಿನಿಮಾ ಜನವರಿ 7ರಂದು ತೆರೆಗೆ ಬರುತ್ತಿದೆ. ಇದರಿಂದ ಅತಿ ದೊಡ್ಡ ಬಾಕ್ಸ್​ ಆಫೀಸ್​ ಕ್ಲ್ಯಾಶ್​ ಆಗುವ ಸಾಧ್ಯತೆ ಇದೆ ಎನ್ನಲಾಗಿತ್ತು.

ಆದರೆ, ರಾಜಮೌಳಿ ಎಲ್ಲಾ ನಿರ್ಮಾಪಕರ ಜತೆ ಮಾತುಕತೆ ನಡೆಸಿದ್ದಾರೆ. ಮಹೇಶ್​ ಬಾಬು ಸಿನಿಮಾವನ್ನು ಬೇಸಿಗೆ ರಜೆಗೆ ರಿಲೀಸ್​ ಮಾಡುವಂತೆ ಅವರು ಕೋರಿದ್ದಾರೆ. ಅದೇ ರೀತಿ ಪವನ್​ ಕಲ್ಯಾಣ್​ ಜತೆಗೂ ಮಾತುಕತೆ ನಡೆದಿದೆ. ಹೀಗಾಗಿ,  ಪವನ್​ ತಮ್ಮ ಸಿನಿಮಾವನ್ನು ಫೆಬ್ರವರಿ 24ರಂದು ತೆರೆಗೆ ತರಲು ನಿರ್ಧರಿಸಿದ್ದಾರಂತೆ. ಆದರೆ, ಪ್ರಭಾಸ್​ ಸಿನಿಮಾ ತಂಡ ಮಾತ್ರ ಈ ಬೇಡಿಕೆಗೆ ಒಪ್ಪಿಗೆ ನೀಡಿಲ್ಲ. ಹೀಗಾಗಿ, ಈ ಸಿನಿಮಾ ರಿಲೀಸ್ ಜನವರಿಯಲ್ಲೇ ರಿಲೀಸ್​​ ಆಗೋದು ಪಕ್ಕಾ ಆಗಿದೆ. ಹೀಗಾಗಿ, ಪ್ರಭಾಸ್ ಮತ್ತು ರಾಜಮೌಳಿ ಸಿನಿಮಾ ನಡುವೆ ಫೈಟ್​ ಏರ್ಪಡಲಿದೆ.

ಇದನ್ನೂ ಓದಿ:ರಾಮ್​ ಚರಣ್​, ಜ್ಯೂ. ಎನ್​ಟಿಆರ್​ ಮನವಿಗೂ ಬಗ್ಗದ ರಾಜಮೌಳಿ; ಬಿಗ್​ ಬಾಸ್​ ವೇದಿಕೆಯಲ್ಲಿ ಸತ್ಯ ಬಯಲು 

ರಾಜಮೌಳಿ ಜನ್ಮದಿನ: ಅಪರೂಪದ ಫೋಟೋಗಳ ಮೂಲಕ ಸಿನಿಮಾ ಮಾಂತ್ರಿಕನಿಗೆ ‘ಆರ್​ಆರ್​ಆರ್​’ ತಂಡದ ವಿಶ್​

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ