AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಯವಿಟ್ಟು ಹುಷಾರಾಗಿರಿ’; 3ನೇ ಬಾರಿ ಕೊವಿಡ್​ ಪಾಸಿಟಿವ್ ಆದ ಖ್ಯಾತ ನಿರ್ಮಾಪಕನ ಮನವಿ​

ಬಂಡ್ಲ ಗಣೇಶ್​ ಅವರಿಗೆ ಕೊವಿಡ್ ಅಂಟಿದೆ. ‘ದಯವಿಟ್ಟು ಹುಷಾರಾಗಿರಿ. ಪ್ರಯಾಣ ಮಾಡುವುದಕ್ಕಿಂತ ಮುನ್ನ ಯೋಚಿಸಿ’ ಎಂದು ಅವರು​ ಟ್ವೀಟ್ ಮಾಡಿದ್ದಾರೆ.

‘ದಯವಿಟ್ಟು ಹುಷಾರಾಗಿರಿ’; 3ನೇ ಬಾರಿ ಕೊವಿಡ್​ ಪಾಸಿಟಿವ್ ಆದ ಖ್ಯಾತ ನಿರ್ಮಾಪಕನ ಮನವಿ​
ಬಂಡ್ಲ ಗಣೇಶ್
TV9 Web
| Edited By: |

Updated on: Jan 10, 2022 | 9:43 AM

Share

ಕೊರೊನಾ ವೈರಸ್​ (Coronavirus) ಹಾವಳಿ ಮತ್ತೆ ಶುರುವಾಗಿದೆ. ದೇಶಾದ್ಯಂತ ಒಮಿಕ್ರಾನ್​ ಪ್ರಕರಣಗಳ ಸಂಖ್ಯೆ (Omicron Cases in India) ಹೆಚ್ಚುತ್ತಿರುವುದು ಎಲ್ಲರ ಆತಂಕಕ್ಕೆ ಕಾರಣ ಆಗಿದೆ. ಮೂರನೇ ಅಲೆಯಲ್ಲಿ ಮತ್ತೆ ಜನರ ಜೀವನ ಅಸ್ತವ್ಯಸ್ತ ಆಗಬಹುದೆಂಬ ಭಯ ಆವರಿಸಿದೆ. ಈ ಸಂದರ್ಭದಲ್ಲಿ ಅನೇಕ ಸೆಲೆಬ್ರಿಟಿಗಳಿಗೆ ಕೊರೊನಾ ಪಾಸಿಟಿವ್​ (Corona Positive) ಆಗಿದೆ. ತೆಲುಗಿನ ಖ್ಯಾತ ನಿರ್ಮಾಪಕ ಬಂಡ್ಲ ಗಣೇಶ್​ (Bandla Ganesh) ಅವರಿಗೆ ಕೊರೊನಾ ಸೋಂಕು ತಗುಲಿದೆ. ಮೂರನೇ ಬಾರಿಗೆ ಅವರು ಕೊವಿಡ್​ 19 ಪಾಸಿಟಿವ್​ ಆಗಿದ್ದಾರೆ. ಹಾಗಾಗಿ ಅವರು ಎಚ್ಚರಿಕೆ ಸಂದೇಶ ನೀಡಿದ್ದಾರೆ. ಎಲ್ಲರೂ ಜಾಗೃತವಾಗಿರಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ತಮಗೆ ಕೊರೊನಾ ಪಾಸಿಟಿವ್​ ಆಗಿರುವ ಕುರಿತು ಬಂಡ್ಲ ಗಣೇಶ್​ ಅವರು ಸೋಶಿಯಲ್​ ಮೀಡಿಯಾ ಮೂಲಕ ತಿಳಿಸಿದ್ದಾರೆ. ಕಳೆದ ಮೂರು ದಿನಗಳಿಂದ ನಾನು ದೆಹಲಿಯಲ್ಲಿದ್ದೆ. ಇಂದು ಸಂಜೆ ಕೊವಿಡ್​ ಪಾಸಿಟಿವ್​ ಆಗಿರುವ ವರದಿ ಬಂದಿದೆ. ನನಗೆ ಸಣ್ಣ-ಪುಟ್ಟ ಲಕ್ಷಣಗಳಿವೆ. ನನ್ನ ಕುಟುಂಬದವರಿಗೆ ನೆಗೆಟಿವ್​ ವರದಿ ಬಂದಿದೆ. ದಯವಿಟ್ಟು ಹುಷಾರಾಗಿರಿ. ಪ್ರಯಾಣ ಮಾಡುವುದಕ್ಕಿಂತ ಮುನ್ನ ಯೋಚಿಸಿ. ನಾನು ಐಸೋಲೇಟ್​ ಆಗಿದ್ದೇನೆ’ ಎಂದು ಬಂಡ್ಲ ಗಣೇಶ್​ ಟ್ವೀಟ್ ಮಾಡಿದ್ದಾರೆ.

ಮೊದಲ ಬಾರಿಗೆ ಬಂಡ್ಲ ಗಣೇಶ್​ ಅವರಿಗೆ ಕೊರೊನಾ ಸೋಂಕು ತಗುಲಿದಾಗ ಅವರ ಪರಿಸ್ಥಿತಿ ಗಂಭೀರವಾಗಿತ್ತು. ಆಸ್ಪತ್ರೆಗೆ ದಾಖಲಾದ ಬಳಿಕ ಅವರು ಚೇತರಿಸಿಕೊಂಡಿದ್ದರು. ನಂತರ ಎರಡನೇ ಅಲೆ ಸಂದರ್ಭದಲ್ಲಿ ಅವರಿಗೆ ಮತ್ತೆ ಕೊವಿಡ್​ ಪಾಸಿಟಿವ್​ ಆಗಿತ್ತು. ಈಗ ಮೂರನೇ ಬಾರಿಗೆ ಅವರಿಗೆ ಸೋಂಕು ತಗುಲಿದೆ. ಅವರು ಬೇಗ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಇತ್ತೀಚೆಗೆ ಅನೇಕ ಸೆಲೆಬ್ರಿಟಿಗಳಿಗೆ ಕೊವಿಡ್​ ಅಂಟಿದೆ. ನಟ ಮಹೇಶ್​ ಬಾಬು, ಗಾಯಕ ವಿಶಾಲ್​ ದದ್ಲಾನಿ, ನಿರ್ಮಾಪಕಿ ಏಕ್ತಾ ಕಪೂರ್​ ಸೇರಿದಂತೆ ಹಲವು ಸೆಲೆಬ್ರಿಟಿಗಳು ತಮಗೆ ಕೊರೊನಾ ಪಾಸಿಟಿವ್ ಆಗಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಇತ್ತೀಚೆಗೆ ಟ್ವೀಟ್​ ಮಾಡಿದ್ದ ಮಹೇಶ್​ ಬಾಬು ಅವರು, ‘ನನ್ನ ಎಲ್ಲಾ ಅಭಿಮಾನಿಗಳಿಗೆ ಮತ್ತು ಹಿತೈಷಿಗಳಿಗೆ ಈ ಪತ್ರ. ಎಲ್ಲಾ ರೀತಿಯ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೂ ಸಹ, ನನಗೆ ಕೊವಿಡ್​ 19 ಅಂಟಿದೆ. ನಾನು ಮನೆಯಲ್ಲಿ ಕ್ವಾರಂಟೈನ್​ ಆಗಿದ್ದೇನೆ. ವೈದ್ಯರ ಸೂಚನೆ ಹಾಗೂ ಮಾರ್ಗದರ್ಶನವನ್ನು ಅನುಸರಿಸುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರೆಲ್ಲರನ್ನೂ ಕೊವಿಡ್​ ಪರೀಕ್ಷೆಗೆ ಒಳಪಡಲು ವಿನಂತಿಸಿಕೊಳ್ಳುತ್ತಿದ್ದೇನೆ. ಕೊವಿಡ್​ ಲಸಿಕೆಯನ್ನು ತೆಗೆದುಕೊಳ್ಳದ ಪ್ರತಿಯೊಬ್ಬರು ತಕ್ಷಣವೇ ಲಸಿಕೆ ತೆಗೆದುಕೊಳ್ಳುವಂತೆ ನಾನು ಮನವಿ ಮಾಡುತ್ತೇನೆ. ಕೊರೊನಾ ಲಸಿಕೆ ಅಪಾಯವನ್ನು ಕಡಿಮೆ ಮಾಡುತ್ತದೆ. ದಯವಿಟ್ಟು ಕೊವಿಡ್​ ನಿಯಮಗಳನ್ನು ಅನುಸರಿಸಿ ಮತ್ತು ಸುರಕ್ಷಿತವಾಗಿರಿ’ ಎಂದು ಬರೆದುಕೊಂಡಿದ್ದರು.

ಇದನ್ನೂ ಓದಿ:

ಐಸಿಯುನಲ್ಲಿ ತಂದೆ ಸಾವು; ಕೊವಿಡ್​ನಿಂದ ಹತ್ತಿರ ಹೋಗದ ಮಗ; ಖ್ಯಾತ ಗಾಯಕನ ಕರುಣಾಜನಕ ಸ್ಥಿತಿ

ಕೊವಿಡ್​ ಇದ್ದರೂ ಅಣ್ಣನ ಅಂತ್ಯಸಂಸ್ಕಾರಕ್ಕೆ ಹೋದರಾ ಮಹೇಶ್​ ಬಾಬು? ವೈರಲ್​ ಆದ ಫೋಟೋದ ಅಸಲಿಯತ್ತೇನು?  

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ