AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂರಾರು ಕೋಟಿ ರೂಪಾಯಿ ಮೋಸ, ಟಾಲಿವುಡ್ ನಿರ್ಮಾಪಕನ ಬಂಧನ

Tollywood: ‘ಯುವರಾಜ’, ‘ತಮ್ಮುಡು’ ಅಂಥಹಾ ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿರುವ ತೆಲುಗು ನಿರ್ಮಾಪಕ ಶಿವ ರಾಮ ಕೃಷ್ಣ ಅವರನ್ನು ಭಾರಿ ಭೂ ಹಗರಣ ಪ್ರಕರಣವೊಂದರಲ್ಲಿ ಬಂಧಿಸಲಾಗಿದೆ.

ನೂರಾರು ಕೋಟಿ ರೂಪಾಯಿ ಮೋಸ, ಟಾಲಿವುಡ್ ನಿರ್ಮಾಪಕನ ಬಂಧನ
ಮಂಜುನಾಥ ಸಿ.
|

Updated on: Oct 24, 2024 | 7:25 AM

Share

ಭಾರಿ ಮೊತ್ತದ ಭೂ ಹಗರಣ ಮಾಡಿರುವ ಆರೋಪದಲ್ಲಿ ತೆಲುಗು ಚಿತ್ರರಂಗದ ಹಿರಿಯ ನಿರ್ಮಾಪಕ ಒಬ್ಬರನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ತೆಲುಗಿನ ಬ್ಲಾಕ್ ಬಸ್ಟರ್ ಸಿನಿಮಾಗಳಾದ ಮಹೇಶ್ ಬಾಬು ನಟನೆಯ ‘ಯುವರಾಜ’, ಪವನ್ ಕಲ್ಯಾಣ್ ನಟನೆಯ ‘ತಮ್ಮುಡು’, ವೆಂಕಟೇಶ್ ನಟನೆಯ ‘ಪ್ರೇಮಂಟೆ ಇದೇರಾ’ ಸೇರಿದಂತೆ ಹಲವು ಹಿಟ್ ಸಿನಿಮಾಗಳನ್ನು ನೀಡಿರುವ ನಿರ್ಮಾಪಕ ಬುರುಗಪಲ್ಲಿ ಶಿವ ರಾಮ ಕೃಷ್ಣ ಅನ್ನು ಪೊಲೀಸರು ಇದೀಗ ಬಂಧಿಸಿದ್ದಾರೆ. ಎರಡು ದಶಕಗಳ ಕಾಲ ನಡೆದ ಪ್ರಕರಣದಲ್ಲಿ ಶಿವ ರಾಮ ಕೃಷ್ಣ ಅವರಿಗೆ ತೀವ್ರ ಹಿನ್ನಡೆ ಆಗಿದೆ.

1900 ಹಾಗೂ 2000 ದಶಕದಲ್ಲಿ ಟಾಪ್ ನಿರ್ಮಾಪಕ ಆಗಿದ್ದ ಬುರುಗಪಲ್ಲಿ ಶಿವ ರಾಮ ಕೃಷ್ಣ, ಸರ್ಕಾರ ಹಾಗೂ ಇತರೆ ಕೆಲವರಿಗೆ ಸೇರಿದ ಸುಮಾರು 80 ಎಕರೆ ಜಮೀನನ್ನು ನಕಲಿ ದಾಖಲೆಗಳನ್ನು ಸೃಷ್ಟಿಸಿ ತನ್ನದು ಮಾಡಿಕೊಂಡಿದ್ದರು. ಹೈದರಾಬಾದ್​ ಬಳಿಯಲ್ಲಿಯೇ ಈ 80 ಎಕರೆ ಜಮೀನನ್ನು ಅಕ್ರಮವಾಗಿ ವಶಪಡಿಸಿಕೊಂಡಿದ್ದು, ಜಮೀನಿನ ಈಗಿನ ಮೌಲ್ಯ ಸುಮಾರು 500 ಕೋಟಿಗೂ ಹೆಚ್ಚು ಎನ್ನಲಾಗುತ್ತದೆ. 2003 ರಲ್ಲಿಯೇ ಈ ಹಗರಣ ಬೆಳಕಿಗೆ ಬಂದು, ಆಗಿನ ಅವಿಭಜಿತ ಆಂಧ್ರ ಪ್ರದೇಶ ಸರ್ಕಾರ ಬುರುಗಪಲ್ಲಿ ಶಿವ ರಾಮ ಕೃಷ್ಣ ವಿರುದ್ಧ ಪ್ರಕರಣ ದಾಖಲಿಸಿತ್ತು.

ಪುರಾತತ್ವ ಇಲಾಖೆಯ ಹಿರಿಯ ಸಹಾಯಕ ಕೊತ್ತಿ ಚಂದ್ರಶೇಖರ್ ಎಂಬುವರ ನೆರವು ಪಡೆದು ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದ ಬುರುಗಪಲ್ಲಿ ಶಿವ ರಾಮ ಕೃಷ್ಣ ಆ ನಂತರ ಬಿಲ್ಡರ್ ಮುರುಗ ಲಿಂಗಂ ಸಹಾಯ ಪಡೆದು ಅಲ್ಲಿ ನಿವೇಶನ ನಿರ್ಮಾಣ ಹಾಗೂ ಮಾರಾಟಕ್ಕೆ ಮುಂದಾಗಿದ್ದರು. ಬಿಲ್ಡರ್ ಮುರುಗ ಲಿಂಗಂ ಸಹ, ನಕಲಿ ದಾಖಲೆ ಸೃಷ್ಟಿಸಲು ಶಿವ ರಾಮ ಕೃಷ್ಣಗೆ ಸಹಾಯ ಮಾಡಿದ್ದರು. ಈಗ ಈ ಇಬ್ಬರನ್ನೂ ಸಹ ಬಂಧಿಸಲಾಗಿದೆ.

ಇದನ್ನೂ ಓದಿ:ತೆಲುಗು ಚಿತ್ರರಂಗಕ್ಕೆ ಬೇಡವಾದರೇ ನಟಿ ಶ್ರೀಲೀಲಾ?

2003 ರಲ್ಲಿ ಅವಿಭಜಿತ ಆಂಧ್ರ ಪ್ರದೇಶ ಸರ್ಕಾರವು ಶಿವ ರಾಮ ಕೃಷ್ಣ ಅವರ ಮಾಲೀಕತ್ವವನ್ನು ಪ್ರಶ್ನಿಸಿ ನ್ಯಾಯಾಲಯದಲ್ಲಿ ಅರ್ಜಿ ಹೂಡಿತ್ತು, ಹೈಕೋರ್ಟ್​ನಲ್ಲಿ ಶಿವ ರಾಮ ಕೃಷ್ಣಗೆ ಹಿನ್ನಡೆ ಆಗಿತ್ತು, ಬಳಿಕ ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟ್​ನಲ್ಲಿ ನಡೆದು ಶಿವ ರಾಮ ಕೃಷ್ಣಗೆ ಸುಪ್ರೀಂಕೋರ್ಟ್​ನಲ್ಲಿಯೂ ಹಿನ್ನಡೆ ಆಗಿರುವುದಲ್ಲದೆ, ಶಿವ ರಾಮ ಕೃಷ್ಣ ಮತ್ತು ಸಂಗಡಿಗರು ಭಾರಿ ಮೌಲ್ಯದ ಜಮೀನನ್ನು ನಕಲಿ ದಾಖಲೆ ಬಳಸಿ ಅಕ್ರಮವಾಗಿ ವಶಕ್ಕೆ ಪಡೆದಿರುವುದು ಸಾಬೀತಾಗಿದೆ. ಪ್ರಕರಣದಲ್ಲಿ ಶಿವ ರಾಮ ಕೃಷ್ಣಗೆ ಶಿಕ್ಷೆ ವಿಧಿಸಲಾಗಿದ್ದು, ಇದೇ ಕಾರಣಕ್ಕೆ ಹೈದರಾಬಾದ್​ನ ಒಸ್ವಾಲ್ ಯೂನಿವರ್ಸಿಟಿ ಪೊಲೀಸರು ಶಿವ ರಾಮ ಕೃಷ್ಣ ಹಾಗೂ ಇತರರನ್ನು ಬಂಧಿಸಿದ್ದಾರೆ.

ತೆಲುಗು ಚಿತ್ರರಂಗದ ಹಲವಾರು ಮಂದಿ ರಿಯಲ್ ಎಸ್ಟೇಟ್​ನಲ್ಲಿ ಹೂಡಿಕೆ ಮಾಡಿದ್ದು, ನಿರ್ಮಾಪಕ ಆಗಿರುವ ಜೊತೆಗೆ ಬಿಲ್ಡರ್ ಸಹ ಆಗಿದ್ದ ಶಿವ ರಾಮ ಕೃಷ್ಣ ಸಹ ಟಾಲಿವುಡ್​ನ ಹಲವು ಸೆಲೆಬ್ರಿಟಿಗಳಿಗೆ ಜಮೀನು ಕೊಡಿಸಿದ್ದಾರೆ. ಹಾಗಾಗಿ ಈಗ ಶಿವ ರಾಮ ಕೃಷ್ಣ ಅವರ ಇತರೆ ಜಮೀನುಗಳ ಮಾಲೀಕತ್ವದ ಬಗ್ಗೆಯೂ ಪ್ರಶ್ನೆಗಳು ಎದ್ದಿವೆ. ಜೊತೆಗೆ ಹೈದರಾಬಾದ್​ ಹಾಗೂ ಅದರ ಹೊರವಲಯದಲ್ಲಿರುವ ಎಲ್ಲ ಜಮೀನುಗಳ ಮಾಲೀತ್ವದ ತನಿಖೆಗೆ ಸಹ ಒತ್ತಾಯಿಸಲಾಗುತ್ತಿದೆ. ತೆಲಂಗಾಣ ಸರ್ಕಾರ ಈಗಾಗಲೇ ‘ಹೈಡ್ರಾ’ ಮೂಲಕ ಹೈದರಾಬಾದ್​ನಲ್ಲಿ ಎಲ್ಲೆಲ್ಲಿ ಅಕ್ರಮ ಒತ್ತುವರಿ ಆಗಿದೆಯೋ ಅವನ್ನೆಲ್ಲ ತೆರವು ಮಾಡುತ್ತಿದೆ. ಇದೇ ಸಮಯದಲ್ಲಿ ಈ ಪ್ರಕರಣ ಹೈಡ್ರಾಗೆ ಇನ್ನಷ್ಟು ಬಲ ತುಂಬಿದಂತಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ