AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂರಾರು ಕೋಟಿ ರೂಪಾಯಿ ಮೋಸ, ಟಾಲಿವುಡ್ ನಿರ್ಮಾಪಕನ ಬಂಧನ

Tollywood: ‘ಯುವರಾಜ’, ‘ತಮ್ಮುಡು’ ಅಂಥಹಾ ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿರುವ ತೆಲುಗು ನಿರ್ಮಾಪಕ ಶಿವ ರಾಮ ಕೃಷ್ಣ ಅವರನ್ನು ಭಾರಿ ಭೂ ಹಗರಣ ಪ್ರಕರಣವೊಂದರಲ್ಲಿ ಬಂಧಿಸಲಾಗಿದೆ.

ನೂರಾರು ಕೋಟಿ ರೂಪಾಯಿ ಮೋಸ, ಟಾಲಿವುಡ್ ನಿರ್ಮಾಪಕನ ಬಂಧನ
ಮಂಜುನಾಥ ಸಿ.
|

Updated on: Oct 24, 2024 | 7:25 AM

Share

ಭಾರಿ ಮೊತ್ತದ ಭೂ ಹಗರಣ ಮಾಡಿರುವ ಆರೋಪದಲ್ಲಿ ತೆಲುಗು ಚಿತ್ರರಂಗದ ಹಿರಿಯ ನಿರ್ಮಾಪಕ ಒಬ್ಬರನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ತೆಲುಗಿನ ಬ್ಲಾಕ್ ಬಸ್ಟರ್ ಸಿನಿಮಾಗಳಾದ ಮಹೇಶ್ ಬಾಬು ನಟನೆಯ ‘ಯುವರಾಜ’, ಪವನ್ ಕಲ್ಯಾಣ್ ನಟನೆಯ ‘ತಮ್ಮುಡು’, ವೆಂಕಟೇಶ್ ನಟನೆಯ ‘ಪ್ರೇಮಂಟೆ ಇದೇರಾ’ ಸೇರಿದಂತೆ ಹಲವು ಹಿಟ್ ಸಿನಿಮಾಗಳನ್ನು ನೀಡಿರುವ ನಿರ್ಮಾಪಕ ಬುರುಗಪಲ್ಲಿ ಶಿವ ರಾಮ ಕೃಷ್ಣ ಅನ್ನು ಪೊಲೀಸರು ಇದೀಗ ಬಂಧಿಸಿದ್ದಾರೆ. ಎರಡು ದಶಕಗಳ ಕಾಲ ನಡೆದ ಪ್ರಕರಣದಲ್ಲಿ ಶಿವ ರಾಮ ಕೃಷ್ಣ ಅವರಿಗೆ ತೀವ್ರ ಹಿನ್ನಡೆ ಆಗಿದೆ.

1900 ಹಾಗೂ 2000 ದಶಕದಲ್ಲಿ ಟಾಪ್ ನಿರ್ಮಾಪಕ ಆಗಿದ್ದ ಬುರುಗಪಲ್ಲಿ ಶಿವ ರಾಮ ಕೃಷ್ಣ, ಸರ್ಕಾರ ಹಾಗೂ ಇತರೆ ಕೆಲವರಿಗೆ ಸೇರಿದ ಸುಮಾರು 80 ಎಕರೆ ಜಮೀನನ್ನು ನಕಲಿ ದಾಖಲೆಗಳನ್ನು ಸೃಷ್ಟಿಸಿ ತನ್ನದು ಮಾಡಿಕೊಂಡಿದ್ದರು. ಹೈದರಾಬಾದ್​ ಬಳಿಯಲ್ಲಿಯೇ ಈ 80 ಎಕರೆ ಜಮೀನನ್ನು ಅಕ್ರಮವಾಗಿ ವಶಪಡಿಸಿಕೊಂಡಿದ್ದು, ಜಮೀನಿನ ಈಗಿನ ಮೌಲ್ಯ ಸುಮಾರು 500 ಕೋಟಿಗೂ ಹೆಚ್ಚು ಎನ್ನಲಾಗುತ್ತದೆ. 2003 ರಲ್ಲಿಯೇ ಈ ಹಗರಣ ಬೆಳಕಿಗೆ ಬಂದು, ಆಗಿನ ಅವಿಭಜಿತ ಆಂಧ್ರ ಪ್ರದೇಶ ಸರ್ಕಾರ ಬುರುಗಪಲ್ಲಿ ಶಿವ ರಾಮ ಕೃಷ್ಣ ವಿರುದ್ಧ ಪ್ರಕರಣ ದಾಖಲಿಸಿತ್ತು.

ಪುರಾತತ್ವ ಇಲಾಖೆಯ ಹಿರಿಯ ಸಹಾಯಕ ಕೊತ್ತಿ ಚಂದ್ರಶೇಖರ್ ಎಂಬುವರ ನೆರವು ಪಡೆದು ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದ ಬುರುಗಪಲ್ಲಿ ಶಿವ ರಾಮ ಕೃಷ್ಣ ಆ ನಂತರ ಬಿಲ್ಡರ್ ಮುರುಗ ಲಿಂಗಂ ಸಹಾಯ ಪಡೆದು ಅಲ್ಲಿ ನಿವೇಶನ ನಿರ್ಮಾಣ ಹಾಗೂ ಮಾರಾಟಕ್ಕೆ ಮುಂದಾಗಿದ್ದರು. ಬಿಲ್ಡರ್ ಮುರುಗ ಲಿಂಗಂ ಸಹ, ನಕಲಿ ದಾಖಲೆ ಸೃಷ್ಟಿಸಲು ಶಿವ ರಾಮ ಕೃಷ್ಣಗೆ ಸಹಾಯ ಮಾಡಿದ್ದರು. ಈಗ ಈ ಇಬ್ಬರನ್ನೂ ಸಹ ಬಂಧಿಸಲಾಗಿದೆ.

ಇದನ್ನೂ ಓದಿ:ತೆಲುಗು ಚಿತ್ರರಂಗಕ್ಕೆ ಬೇಡವಾದರೇ ನಟಿ ಶ್ರೀಲೀಲಾ?

2003 ರಲ್ಲಿ ಅವಿಭಜಿತ ಆಂಧ್ರ ಪ್ರದೇಶ ಸರ್ಕಾರವು ಶಿವ ರಾಮ ಕೃಷ್ಣ ಅವರ ಮಾಲೀಕತ್ವವನ್ನು ಪ್ರಶ್ನಿಸಿ ನ್ಯಾಯಾಲಯದಲ್ಲಿ ಅರ್ಜಿ ಹೂಡಿತ್ತು, ಹೈಕೋರ್ಟ್​ನಲ್ಲಿ ಶಿವ ರಾಮ ಕೃಷ್ಣಗೆ ಹಿನ್ನಡೆ ಆಗಿತ್ತು, ಬಳಿಕ ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟ್​ನಲ್ಲಿ ನಡೆದು ಶಿವ ರಾಮ ಕೃಷ್ಣಗೆ ಸುಪ್ರೀಂಕೋರ್ಟ್​ನಲ್ಲಿಯೂ ಹಿನ್ನಡೆ ಆಗಿರುವುದಲ್ಲದೆ, ಶಿವ ರಾಮ ಕೃಷ್ಣ ಮತ್ತು ಸಂಗಡಿಗರು ಭಾರಿ ಮೌಲ್ಯದ ಜಮೀನನ್ನು ನಕಲಿ ದಾಖಲೆ ಬಳಸಿ ಅಕ್ರಮವಾಗಿ ವಶಕ್ಕೆ ಪಡೆದಿರುವುದು ಸಾಬೀತಾಗಿದೆ. ಪ್ರಕರಣದಲ್ಲಿ ಶಿವ ರಾಮ ಕೃಷ್ಣಗೆ ಶಿಕ್ಷೆ ವಿಧಿಸಲಾಗಿದ್ದು, ಇದೇ ಕಾರಣಕ್ಕೆ ಹೈದರಾಬಾದ್​ನ ಒಸ್ವಾಲ್ ಯೂನಿವರ್ಸಿಟಿ ಪೊಲೀಸರು ಶಿವ ರಾಮ ಕೃಷ್ಣ ಹಾಗೂ ಇತರರನ್ನು ಬಂಧಿಸಿದ್ದಾರೆ.

ತೆಲುಗು ಚಿತ್ರರಂಗದ ಹಲವಾರು ಮಂದಿ ರಿಯಲ್ ಎಸ್ಟೇಟ್​ನಲ್ಲಿ ಹೂಡಿಕೆ ಮಾಡಿದ್ದು, ನಿರ್ಮಾಪಕ ಆಗಿರುವ ಜೊತೆಗೆ ಬಿಲ್ಡರ್ ಸಹ ಆಗಿದ್ದ ಶಿವ ರಾಮ ಕೃಷ್ಣ ಸಹ ಟಾಲಿವುಡ್​ನ ಹಲವು ಸೆಲೆಬ್ರಿಟಿಗಳಿಗೆ ಜಮೀನು ಕೊಡಿಸಿದ್ದಾರೆ. ಹಾಗಾಗಿ ಈಗ ಶಿವ ರಾಮ ಕೃಷ್ಣ ಅವರ ಇತರೆ ಜಮೀನುಗಳ ಮಾಲೀಕತ್ವದ ಬಗ್ಗೆಯೂ ಪ್ರಶ್ನೆಗಳು ಎದ್ದಿವೆ. ಜೊತೆಗೆ ಹೈದರಾಬಾದ್​ ಹಾಗೂ ಅದರ ಹೊರವಲಯದಲ್ಲಿರುವ ಎಲ್ಲ ಜಮೀನುಗಳ ಮಾಲೀತ್ವದ ತನಿಖೆಗೆ ಸಹ ಒತ್ತಾಯಿಸಲಾಗುತ್ತಿದೆ. ತೆಲಂಗಾಣ ಸರ್ಕಾರ ಈಗಾಗಲೇ ‘ಹೈಡ್ರಾ’ ಮೂಲಕ ಹೈದರಾಬಾದ್​ನಲ್ಲಿ ಎಲ್ಲೆಲ್ಲಿ ಅಕ್ರಮ ಒತ್ತುವರಿ ಆಗಿದೆಯೋ ಅವನ್ನೆಲ್ಲ ತೆರವು ಮಾಡುತ್ತಿದೆ. ಇದೇ ಸಮಯದಲ್ಲಿ ಈ ಪ್ರಕರಣ ಹೈಡ್ರಾಗೆ ಇನ್ನಷ್ಟು ಬಲ ತುಂಬಿದಂತಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್