AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jr NTR: ರಸ್ತೆ ಅಪಘಾತದಲ್ಲಿ ಜ್ಯೂ. ಎನ್​ಟಿಆರ್​ ಅಭಿಮಾನಿ ನಿಧನ; ಸ್ಟಾರ್​ ನಟನ ಪ್ರಾರ್ಥನೆಯೂ ಫಲಿಸಲಿಲ್ಲ

Jr NTR Fan Death: ಜನಾರ್ಧನ್​ ಅವರ ದುಸ್ಥಿತಿ ಬಗ್ಗೆ ತಿಳಿದ ನಂತರ ಜ್ಯೂ. ಎನ್​ಟಿಆರ್​ ಅವರು ದೂರವಾಣಿ ಮೂಲಕ ಸಂಪರ್ಕಿಸಿದ್ದರು. ತಮ್ಮ ಅಭಿಮಾನಿ ಬೇಗ ಗುಣಮುಖನಾಗಲಿ ಎಂದು ಪ್ರಾರ್ಥಿಸಿದ್ದರು.

Jr NTR: ರಸ್ತೆ ಅಪಘಾತದಲ್ಲಿ ಜ್ಯೂ. ಎನ್​ಟಿಆರ್​ ಅಭಿಮಾನಿ ನಿಧನ; ಸ್ಟಾರ್​ ನಟನ ಪ್ರಾರ್ಥನೆಯೂ ಫಲಿಸಲಿಲ್ಲ
ಜನಾರ್ಧನ್​, ಜ್ಯೂ. ಎನ್​ಟಿಆರ್​
TV9 Web
| Edited By: |

Updated on: Jul 06, 2022 | 8:13 AM

Share

ನಟ ಜ್ಯೂ. ಎನ್​ಟಿಆರ್​ (Jr NTR) ಅವರಿಗೆ ದೇಶಾದ್ಯಂತ ಅಭಿಮಾನಿಗಳಿದ್ದಾರೆ. ಅವರಿಗಾಗಿ ಪ್ರಾಣ ಕೊಡಲು ಬೇಕಿದ್ದರೂ ಸಿದ್ಧ ಎಂಬಂತಹ ಅಪ್ಪಟ ಫ್ಯಾನ್ಸ್​ ಕೂಡ ಇದ್ದಾರೆ. ಹಾಗಾಗಿ ತಮ್ಮ ಅಭಿಮಾನಿಗಳಿಗೆ ಜ್ಯೂ. ಎನ್​ಟಿಆರ್​ ಅವರು ತುಂಬ ಗೌರವ ನೀಡುತ್ತಾರೆ. ಕೆಲವೇ ದಿನಗಳ ಹಿಂದೆ ಜನಾರ್ಧನ್​ ಎಂಬ ಅಭಿಮಾನಿಗೆ ರಸ್ತೆ ಅಪಘಾತ (Road Accident) ಆಗಿತ್ತು. ಜನಾರ್ಧನ್​ ಕುಟುಂಬದವರ ಜೊತೆ ಜ್ಯೂ. ಎನ್​ಟಿಆರ್​ ಅವರು ಫೋನ್​ ಮೂಲಕ ಮಾತನಾಡಿದ್ದರು. ದುಃಖದ ಸಂಗತಿ ಏನೆಂದರೆ ಆ ಅಭಿಮಾನಿ (Jr NTR Fan) ಮೃತಪಟ್ಟಿದ್ದಾರೆ. ಚಿಕಿತ್ಸೆ ಫಲಕಾರಿ ಆಗದೇ ಅವರು ಕೊನೆಯುಸಿರು ಎಳೆದಿದ್ದಾರೆ. ಇದರಿಂದ ಜ್ಯೂ. ಎನ್​ಟಿಆರ್​ ಅಭಿಮಾನಿ ಬಳಗದಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ.

ತಿರುಪತಿಯಲ್ಲಿ ಜನಾರ್ಧನ್​ ಅವರಿಗೆ ರಸ್ತೆ ಅಪಘಾತ ಸಂಭವಿಸಿತ್ತು. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗುತ್ತು. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಕೋಮಾದಲ್ಲಿದ್ದ ಅವರು ಜ್ಯೂ. ಎನ್​ಟಿಆರ್​ ಹೆಸರು ಕೇಳಿದಾಗ ಸ್ವಲ್ಪ ಪ್ರಮಾಣದಲ್ಲಿ ಸ್ಪಂದಿಸುತ್ತಿದ್ದರು ಎಂದು ಅಭಿಮಾನಿಗಳ ಸೋಶಿಯಲ್​ ಮೀಡಿಯಾಗಳಲ್ಲಿ ಮಾಹಿತಿ ಹಂಚಿಕೊಳ್ಳಲಾಗಿತ್ತು. ಆದಷ್ಟು ಬೇಗ ಜನಾರ್ಧನ್​ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸಿದ್ದರು.

ಇದನ್ನೂ ಓದಿ
Image
ಖ್ಯಾತ ಹಾಸ್ಯ ನಟ ನರಸಿಂಹ ರಾಜು ಹಿರಿಯ ಪುತ್ರಿ ಧರ್ಮವತಿ ಇನ್ನಿಲ್ಲ; ಹೃದಯಾಘಾತದಿಂದ ನಿಧನ
Image
ಯೋಗರಾಜ್ ಭಟ್ ಮಾವ, ಸ್ಯಾಂಡಲ್​ವುಡ್ ಕಲಾವಿದ ಸತ್ಯ ನಾರಾಯಣ್ ಹೃದಯಾಘಾತದಿಂದ ನಿಧನ
Image
KK Death: ಸಾವಿಗಿಂತ ಕೆಲವೇ ನಿಮಿಷಗಳ ಮುನ್ನ ವೇದಿಕೆ ತೊರೆದಿದ್ದ ಗಾಯಕ ಕೆಕೆ; ಇಲ್ಲಿದೆ ವೈರಲ್​ ವಿಡಿಯೋ
Image
Edava Basheer Death: ಹಾಡುವಾಗಲೇ ವೇದಿಕೆಯಲ್ಲಿ ಕುಸಿದು ಬಿದ್ದು ಆರ್ಕೆಸ್ಟ್ರಾ ಗಾಯಕ ಎಡವ ಬಶೀರ್​ ನಿಧನ; ವಿಡಿಯೋ ವೈರಲ್​

ಜನಾರ್ಧನ್​ ಅವರ ದುಸ್ಥಿತಿ ಬಗ್ಗೆ ತಿಳಿದ ನಂತರ ಜ್ಯೂ. ಎನ್​ಟಿಆರ್​ ಅವರು ದೂರವಾಣಿ ಮೂಲಕ ಸಂಪರ್ಕಿಸಿದ್ದರು. ನೀವು ಧೈರ್ಯವಾಗಿ ಇರಬೇಕು ಎಂದು ಅಭಿಮಾನಿಯ ತಾಯಿಗೆ ಅವರು ಸಮಾಧಾನದ ಮಾತುಗಳನ್ನು ಆಡಿದ್ದರು. ‘ನಿಮ್ಮ ಮಗನಿಗಾಗಿ ನಾವೆಲ್ಲರೂ ಪ್ರಾರ್ಥಿಸುತ್ತೇವೆ’ ಎಂದು ಅವರು ಹೇಳಿದ್ದರು. ಅಭಿಮಾನಿಯ ಕುಟುಂಬದವರ ಜೊತೆ ಜ್ಯೂ. ಎನ್​ಟಿಆರ್​ ಮಾತನಾಡಿದ್ದ ಫೋನ್​ ಕಾಲ್​ ವಿಡಿಯೋ ವೈರಲ್​ ಆಗಿತ್ತು.

ಜನಾರ್ಧನ್​ ಚಿಕಿತ್ಸೆಗೆ ಜ್ಯೂ. ಎನ್​ಟಿಆರ್​ ಸಹಾಯ ಮಾಡಿದ್ದರು. ಗುಣಮುಖರಾದ ಬಳಿಕ ಖಂಡಿತವಾಗಿಯೂ ಭೇಟಿ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ ಜವರಾಯ ಕರುಣೆ ತೋರಿಸಿಲ್ಲ. ಕೊನೆಗೂ ಜನಾರ್ಧನ್​ ಬದುಕುಳಿಯಲಿಲ್ಲ. ಎನ್​ಟಿಆರ್​ ಎಂದು ಕೈ ಮೇಲೆ ಜನಾರ್ಧನ್​ ಟ್ಯಾಟೂ ಹಾಕಿಸಿಕೊಂಡಿದ್ದ ಫೋಟೋ ವೈರಲ್​ ಆಗುತ್ತಿದೆ.

ಇದನ್ನೂ ಓದಿ: ‘ಆರ್​ಆರ್​ಆರ್​’ ರೆಸ್ಟೋರೆಂಟ್ ಆರಂಭಿಸಲಿದ್ದಾರೆ ರಾಮ್​ ಚರಣ್​-ಜ್ಯೂ.ಎನ್​ಟಿಆರ್​? ಕೇಳಿಬಂತು ಹೊಸ ಗುಸುಗುಸು

Alia Bhatt: ‘ದಯವಿಟ್ಟು ನಿಮ್ಮ ಅಭಿಮಾನಿಗಳನ್ನು ನನಗೆ ಕೊಟ್ಟುಬಿಡಿ’; ಜ್ಯೂ ಎನ್​ಟಿಆರ್​ ಬಳಿ ಆಲಿಯಾ ವಿಶೇಷ ಬೇಡಿಕೆ

Follow Us
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ