Sign In

By signing in or creating an account, you agree with Associated Broadcasting Company's Terms & Conditions and Privacy Policy.

Jr NTR: ರಸ್ತೆ ಅಪಘಾತದಲ್ಲಿ ಜ್ಯೂ. ಎನ್​ಟಿಆರ್​ ಅಭಿಮಾನಿ ನಿಧನ; ಸ್ಟಾರ್​ ನಟನ ಪ್ರಾರ್ಥನೆಯೂ ಫಲಿಸಲಿಲ್ಲ

Jr NTR Fan Death: ಜನಾರ್ಧನ್​ ಅವರ ದುಸ್ಥಿತಿ ಬಗ್ಗೆ ತಿಳಿದ ನಂತರ ಜ್ಯೂ. ಎನ್​ಟಿಆರ್​ ಅವರು ದೂರವಾಣಿ ಮೂಲಕ ಸಂಪರ್ಕಿಸಿದ್ದರು. ತಮ್ಮ ಅಭಿಮಾನಿ ಬೇಗ ಗುಣಮುಖನಾಗಲಿ ಎಂದು ಪ್ರಾರ್ಥಿಸಿದ್ದರು.

Jr NTR: ರಸ್ತೆ ಅಪಘಾತದಲ್ಲಿ ಜ್ಯೂ. ಎನ್​ಟಿಆರ್​ ಅಭಿಮಾನಿ ನಿಧನ; ಸ್ಟಾರ್​ ನಟನ ಪ್ರಾರ್ಥನೆಯೂ ಫಲಿಸಲಿಲ್ಲ
ಜನಾರ್ಧನ್​, ಜ್ಯೂ. ಎನ್​ಟಿಆರ್​
Follow us
TV9 Web
| Updated By: ಮದನ್​ ಕುಮಾರ್​

Updated on: Jul 06, 2022 | 8:13 AM

ನಟ ಜ್ಯೂ. ಎನ್​ಟಿಆರ್​ (Jr NTR) ಅವರಿಗೆ ದೇಶಾದ್ಯಂತ ಅಭಿಮಾನಿಗಳಿದ್ದಾರೆ. ಅವರಿಗಾಗಿ ಪ್ರಾಣ ಕೊಡಲು ಬೇಕಿದ್ದರೂ ಸಿದ್ಧ ಎಂಬಂತಹ ಅಪ್ಪಟ ಫ್ಯಾನ್ಸ್​ ಕೂಡ ಇದ್ದಾರೆ. ಹಾಗಾಗಿ ತಮ್ಮ ಅಭಿಮಾನಿಗಳಿಗೆ ಜ್ಯೂ. ಎನ್​ಟಿಆರ್​ ಅವರು ತುಂಬ ಗೌರವ ನೀಡುತ್ತಾರೆ. ಕೆಲವೇ ದಿನಗಳ ಹಿಂದೆ ಜನಾರ್ಧನ್​ ಎಂಬ ಅಭಿಮಾನಿಗೆ ರಸ್ತೆ ಅಪಘಾತ (Road Accident) ಆಗಿತ್ತು. ಜನಾರ್ಧನ್​ ಕುಟುಂಬದವರ ಜೊತೆ ಜ್ಯೂ. ಎನ್​ಟಿಆರ್​ ಅವರು ಫೋನ್​ ಮೂಲಕ ಮಾತನಾಡಿದ್ದರು. ದುಃಖದ ಸಂಗತಿ ಏನೆಂದರೆ ಆ ಅಭಿಮಾನಿ (Jr NTR Fan) ಮೃತಪಟ್ಟಿದ್ದಾರೆ. ಚಿಕಿತ್ಸೆ ಫಲಕಾರಿ ಆಗದೇ ಅವರು ಕೊನೆಯುಸಿರು ಎಳೆದಿದ್ದಾರೆ. ಇದರಿಂದ ಜ್ಯೂ. ಎನ್​ಟಿಆರ್​ ಅಭಿಮಾನಿ ಬಳಗದಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ.

ತಿರುಪತಿಯಲ್ಲಿ ಜನಾರ್ಧನ್​ ಅವರಿಗೆ ರಸ್ತೆ ಅಪಘಾತ ಸಂಭವಿಸಿತ್ತು. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗುತ್ತು. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಕೋಮಾದಲ್ಲಿದ್ದ ಅವರು ಜ್ಯೂ. ಎನ್​ಟಿಆರ್​ ಹೆಸರು ಕೇಳಿದಾಗ ಸ್ವಲ್ಪ ಪ್ರಮಾಣದಲ್ಲಿ ಸ್ಪಂದಿಸುತ್ತಿದ್ದರು ಎಂದು ಅಭಿಮಾನಿಗಳ ಸೋಶಿಯಲ್​ ಮೀಡಿಯಾಗಳಲ್ಲಿ ಮಾಹಿತಿ ಹಂಚಿಕೊಳ್ಳಲಾಗಿತ್ತು. ಆದಷ್ಟು ಬೇಗ ಜನಾರ್ಧನ್​ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸಿದ್ದರು.

ಇದನ್ನೂ ಓದಿ
Image
ಖ್ಯಾತ ಹಾಸ್ಯ ನಟ ನರಸಿಂಹ ರಾಜು ಹಿರಿಯ ಪುತ್ರಿ ಧರ್ಮವತಿ ಇನ್ನಿಲ್ಲ; ಹೃದಯಾಘಾತದಿಂದ ನಿಧನ
Image
ಯೋಗರಾಜ್ ಭಟ್ ಮಾವ, ಸ್ಯಾಂಡಲ್​ವುಡ್ ಕಲಾವಿದ ಸತ್ಯ ನಾರಾಯಣ್ ಹೃದಯಾಘಾತದಿಂದ ನಿಧನ
Image
KK Death: ಸಾವಿಗಿಂತ ಕೆಲವೇ ನಿಮಿಷಗಳ ಮುನ್ನ ವೇದಿಕೆ ತೊರೆದಿದ್ದ ಗಾಯಕ ಕೆಕೆ; ಇಲ್ಲಿದೆ ವೈರಲ್​ ವಿಡಿಯೋ
Image
Edava Basheer Death: ಹಾಡುವಾಗಲೇ ವೇದಿಕೆಯಲ್ಲಿ ಕುಸಿದು ಬಿದ್ದು ಆರ್ಕೆಸ್ಟ್ರಾ ಗಾಯಕ ಎಡವ ಬಶೀರ್​ ನಿಧನ; ವಿಡಿಯೋ ವೈರಲ್​

ಜನಾರ್ಧನ್​ ಅವರ ದುಸ್ಥಿತಿ ಬಗ್ಗೆ ತಿಳಿದ ನಂತರ ಜ್ಯೂ. ಎನ್​ಟಿಆರ್​ ಅವರು ದೂರವಾಣಿ ಮೂಲಕ ಸಂಪರ್ಕಿಸಿದ್ದರು. ನೀವು ಧೈರ್ಯವಾಗಿ ಇರಬೇಕು ಎಂದು ಅಭಿಮಾನಿಯ ತಾಯಿಗೆ ಅವರು ಸಮಾಧಾನದ ಮಾತುಗಳನ್ನು ಆಡಿದ್ದರು. ‘ನಿಮ್ಮ ಮಗನಿಗಾಗಿ ನಾವೆಲ್ಲರೂ ಪ್ರಾರ್ಥಿಸುತ್ತೇವೆ’ ಎಂದು ಅವರು ಹೇಳಿದ್ದರು. ಅಭಿಮಾನಿಯ ಕುಟುಂಬದವರ ಜೊತೆ ಜ್ಯೂ. ಎನ್​ಟಿಆರ್​ ಮಾತನಾಡಿದ್ದ ಫೋನ್​ ಕಾಲ್​ ವಿಡಿಯೋ ವೈರಲ್​ ಆಗಿತ್ತು.

ಜನಾರ್ಧನ್​ ಚಿಕಿತ್ಸೆಗೆ ಜ್ಯೂ. ಎನ್​ಟಿಆರ್​ ಸಹಾಯ ಮಾಡಿದ್ದರು. ಗುಣಮುಖರಾದ ಬಳಿಕ ಖಂಡಿತವಾಗಿಯೂ ಭೇಟಿ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ ಜವರಾಯ ಕರುಣೆ ತೋರಿಸಿಲ್ಲ. ಕೊನೆಗೂ ಜನಾರ್ಧನ್​ ಬದುಕುಳಿಯಲಿಲ್ಲ. ಎನ್​ಟಿಆರ್​ ಎಂದು ಕೈ ಮೇಲೆ ಜನಾರ್ಧನ್​ ಟ್ಯಾಟೂ ಹಾಕಿಸಿಕೊಂಡಿದ್ದ ಫೋಟೋ ವೈರಲ್​ ಆಗುತ್ತಿದೆ.

ಇದನ್ನೂ ಓದಿ: ‘ಆರ್​ಆರ್​ಆರ್​’ ರೆಸ್ಟೋರೆಂಟ್ ಆರಂಭಿಸಲಿದ್ದಾರೆ ರಾಮ್​ ಚರಣ್​-ಜ್ಯೂ.ಎನ್​ಟಿಆರ್​? ಕೇಳಿಬಂತು ಹೊಸ ಗುಸುಗುಸು

Alia Bhatt: ‘ದಯವಿಟ್ಟು ನಿಮ್ಮ ಅಭಿಮಾನಿಗಳನ್ನು ನನಗೆ ಕೊಟ್ಟುಬಿಡಿ’; ಜ್ಯೂ ಎನ್​ಟಿಆರ್​ ಬಳಿ ಆಲಿಯಾ ವಿಶೇಷ ಬೇಡಿಕೆ

ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ
ರಾಣಿ ಚೆನ್ನಮ್ಮ ಹೆಸರಲ್ಲೂ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಿ: ಸ್ವಾಮೀಜಿ
ರಾಣಿ ಚೆನ್ನಮ್ಮ ಹೆಸರಲ್ಲೂ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಿ: ಸ್ವಾಮೀಜಿ
ಚ್ಯಾನೆಲ್​ಗಳಲ್ಲಿ ವರದಿ ಬಿತ್ತರವಾದಾಗ ಮಾತ್ರ ಅಧಿಕಾರಿಗಳು ಬಂದು ಹೋಗುತ್ತಾರೆ
ಚ್ಯಾನೆಲ್​ಗಳಲ್ಲಿ ವರದಿ ಬಿತ್ತರವಾದಾಗ ಮಾತ್ರ ಅಧಿಕಾರಿಗಳು ಬಂದು ಹೋಗುತ್ತಾರೆ
ಬೋರ್​ ವೆಲ್ ಇದ್ದರೂ ದುಬಾರಿ ಟ್ಯಾಂಕರ್ ನೀರು ಬಳಸುವ ಅನಿವಾರ್ಯತೆ
ಬೋರ್​ ವೆಲ್ ಇದ್ದರೂ ದುಬಾರಿ ಟ್ಯಾಂಕರ್ ನೀರು ಬಳಸುವ ಅನಿವಾರ್ಯತೆ
ಮುಂದಿನ ಸಿಎಂ ಬಗ್ಗೆ ಕೋಡಿಮಠ ಶ್ರೀ ಮಹತ್ವದ ಮಾತು
ಮುಂದಿನ ಸಿಎಂ ಬಗ್ಗೆ ಕೋಡಿಮಠ ಶ್ರೀ ಮಹತ್ವದ ಮಾತು
ಕುಟುಂಬ ರಾಜಕಾರಣದಿಂದ ಹೊರಬರುವ ವರೆಗೂ ಮತ್ತೆ ಬಿಜೆಪಿಗೆ ಬರಲ್ಲ: ಯತ್ನಾಳ್
ಕುಟುಂಬ ರಾಜಕಾರಣದಿಂದ ಹೊರಬರುವ ವರೆಗೂ ಮತ್ತೆ ಬಿಜೆಪಿಗೆ ಬರಲ್ಲ: ಯತ್ನಾಳ್
ಬ್ರಹ್ಮೋತ್ಸವದಲ್ಲಿ ಪಾಲ್ಗೊಳ್ಳುವ ಭಕ್ತಾರಿಗೆ ಮೊದಲಬಾರಿಗೆ ದಾಸೋಹ ವ್ಯವಸ್ಥೆ
ಬ್ರಹ್ಮೋತ್ಸವದಲ್ಲಿ ಪಾಲ್ಗೊಳ್ಳುವ ಭಕ್ತಾರಿಗೆ ಮೊದಲಬಾರಿಗೆ ದಾಸೋಹ ವ್ಯವಸ್ಥೆ
ರಚಿತಾ ರಾಮ್ ಹಾಡೋದನ್ನ ನೋಡಿದ್ದೀರಾ? ಇಲ್ಲಿದೆ ಅಪರೂಪದ ವಿಡಿಯೋ
ರಚಿತಾ ರಾಮ್ ಹಾಡೋದನ್ನ ನೋಡಿದ್ದೀರಾ? ಇಲ್ಲಿದೆ ಅಪರೂಪದ ವಿಡಿಯೋ
ಕೇಂದ್ರ ರೂಪಿಸುವ ಕಾನೂನನ್ನು ರಾಜ್ಯಗಳು ಜಾರಿಮಾಡಬೇಕು: ಪ್ರಲ್ಹಾದ್ ಜೋಶಿ
ಕೇಂದ್ರ ರೂಪಿಸುವ ಕಾನೂನನ್ನು ರಾಜ್ಯಗಳು ಜಾರಿಮಾಡಬೇಕು: ಪ್ರಲ್ಹಾದ್ ಜೋಶಿ