Jr NTR: ರಸ್ತೆ ಅಪಘಾತದಲ್ಲಿ ಜ್ಯೂ. ಎನ್​ಟಿಆರ್​ ಅಭಿಮಾನಿ ನಿಧನ; ಸ್ಟಾರ್​ ನಟನ ಪ್ರಾರ್ಥನೆಯೂ ಫಲಿಸಲಿಲ್ಲ

Jr NTR Fan Death: ಜನಾರ್ಧನ್​ ಅವರ ದುಸ್ಥಿತಿ ಬಗ್ಗೆ ತಿಳಿದ ನಂತರ ಜ್ಯೂ. ಎನ್​ಟಿಆರ್​ ಅವರು ದೂರವಾಣಿ ಮೂಲಕ ಸಂಪರ್ಕಿಸಿದ್ದರು. ತಮ್ಮ ಅಭಿಮಾನಿ ಬೇಗ ಗುಣಮುಖನಾಗಲಿ ಎಂದು ಪ್ರಾರ್ಥಿಸಿದ್ದರು.

Jr NTR: ರಸ್ತೆ ಅಪಘಾತದಲ್ಲಿ ಜ್ಯೂ. ಎನ್​ಟಿಆರ್​ ಅಭಿಮಾನಿ ನಿಧನ; ಸ್ಟಾರ್​ ನಟನ ಪ್ರಾರ್ಥನೆಯೂ ಫಲಿಸಲಿಲ್ಲ
ಜನಾರ್ಧನ್​, ಜ್ಯೂ. ಎನ್​ಟಿಆರ್​
Follow us
| Updated By: ಮದನ್​ ಕುಮಾರ್​

Updated on: Jul 06, 2022 | 8:13 AM

ನಟ ಜ್ಯೂ. ಎನ್​ಟಿಆರ್​ (Jr NTR) ಅವರಿಗೆ ದೇಶಾದ್ಯಂತ ಅಭಿಮಾನಿಗಳಿದ್ದಾರೆ. ಅವರಿಗಾಗಿ ಪ್ರಾಣ ಕೊಡಲು ಬೇಕಿದ್ದರೂ ಸಿದ್ಧ ಎಂಬಂತಹ ಅಪ್ಪಟ ಫ್ಯಾನ್ಸ್​ ಕೂಡ ಇದ್ದಾರೆ. ಹಾಗಾಗಿ ತಮ್ಮ ಅಭಿಮಾನಿಗಳಿಗೆ ಜ್ಯೂ. ಎನ್​ಟಿಆರ್​ ಅವರು ತುಂಬ ಗೌರವ ನೀಡುತ್ತಾರೆ. ಕೆಲವೇ ದಿನಗಳ ಹಿಂದೆ ಜನಾರ್ಧನ್​ ಎಂಬ ಅಭಿಮಾನಿಗೆ ರಸ್ತೆ ಅಪಘಾತ (Road Accident) ಆಗಿತ್ತು. ಜನಾರ್ಧನ್​ ಕುಟುಂಬದವರ ಜೊತೆ ಜ್ಯೂ. ಎನ್​ಟಿಆರ್​ ಅವರು ಫೋನ್​ ಮೂಲಕ ಮಾತನಾಡಿದ್ದರು. ದುಃಖದ ಸಂಗತಿ ಏನೆಂದರೆ ಆ ಅಭಿಮಾನಿ (Jr NTR Fan) ಮೃತಪಟ್ಟಿದ್ದಾರೆ. ಚಿಕಿತ್ಸೆ ಫಲಕಾರಿ ಆಗದೇ ಅವರು ಕೊನೆಯುಸಿರು ಎಳೆದಿದ್ದಾರೆ. ಇದರಿಂದ ಜ್ಯೂ. ಎನ್​ಟಿಆರ್​ ಅಭಿಮಾನಿ ಬಳಗದಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ.

ತಿರುಪತಿಯಲ್ಲಿ ಜನಾರ್ಧನ್​ ಅವರಿಗೆ ರಸ್ತೆ ಅಪಘಾತ ಸಂಭವಿಸಿತ್ತು. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗುತ್ತು. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಕೋಮಾದಲ್ಲಿದ್ದ ಅವರು ಜ್ಯೂ. ಎನ್​ಟಿಆರ್​ ಹೆಸರು ಕೇಳಿದಾಗ ಸ್ವಲ್ಪ ಪ್ರಮಾಣದಲ್ಲಿ ಸ್ಪಂದಿಸುತ್ತಿದ್ದರು ಎಂದು ಅಭಿಮಾನಿಗಳ ಸೋಶಿಯಲ್​ ಮೀಡಿಯಾಗಳಲ್ಲಿ ಮಾಹಿತಿ ಹಂಚಿಕೊಳ್ಳಲಾಗಿತ್ತು. ಆದಷ್ಟು ಬೇಗ ಜನಾರ್ಧನ್​ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸಿದ್ದರು.

ಇದನ್ನೂ ಓದಿ
Image
ಖ್ಯಾತ ಹಾಸ್ಯ ನಟ ನರಸಿಂಹ ರಾಜು ಹಿರಿಯ ಪುತ್ರಿ ಧರ್ಮವತಿ ಇನ್ನಿಲ್ಲ; ಹೃದಯಾಘಾತದಿಂದ ನಿಧನ
Image
ಯೋಗರಾಜ್ ಭಟ್ ಮಾವ, ಸ್ಯಾಂಡಲ್​ವುಡ್ ಕಲಾವಿದ ಸತ್ಯ ನಾರಾಯಣ್ ಹೃದಯಾಘಾತದಿಂದ ನಿಧನ
Image
KK Death: ಸಾವಿಗಿಂತ ಕೆಲವೇ ನಿಮಿಷಗಳ ಮುನ್ನ ವೇದಿಕೆ ತೊರೆದಿದ್ದ ಗಾಯಕ ಕೆಕೆ; ಇಲ್ಲಿದೆ ವೈರಲ್​ ವಿಡಿಯೋ
Image
Edava Basheer Death: ಹಾಡುವಾಗಲೇ ವೇದಿಕೆಯಲ್ಲಿ ಕುಸಿದು ಬಿದ್ದು ಆರ್ಕೆಸ್ಟ್ರಾ ಗಾಯಕ ಎಡವ ಬಶೀರ್​ ನಿಧನ; ವಿಡಿಯೋ ವೈರಲ್​

ಜನಾರ್ಧನ್​ ಅವರ ದುಸ್ಥಿತಿ ಬಗ್ಗೆ ತಿಳಿದ ನಂತರ ಜ್ಯೂ. ಎನ್​ಟಿಆರ್​ ಅವರು ದೂರವಾಣಿ ಮೂಲಕ ಸಂಪರ್ಕಿಸಿದ್ದರು. ನೀವು ಧೈರ್ಯವಾಗಿ ಇರಬೇಕು ಎಂದು ಅಭಿಮಾನಿಯ ತಾಯಿಗೆ ಅವರು ಸಮಾಧಾನದ ಮಾತುಗಳನ್ನು ಆಡಿದ್ದರು. ‘ನಿಮ್ಮ ಮಗನಿಗಾಗಿ ನಾವೆಲ್ಲರೂ ಪ್ರಾರ್ಥಿಸುತ್ತೇವೆ’ ಎಂದು ಅವರು ಹೇಳಿದ್ದರು. ಅಭಿಮಾನಿಯ ಕುಟುಂಬದವರ ಜೊತೆ ಜ್ಯೂ. ಎನ್​ಟಿಆರ್​ ಮಾತನಾಡಿದ್ದ ಫೋನ್​ ಕಾಲ್​ ವಿಡಿಯೋ ವೈರಲ್​ ಆಗಿತ್ತು.

ಜನಾರ್ಧನ್​ ಚಿಕಿತ್ಸೆಗೆ ಜ್ಯೂ. ಎನ್​ಟಿಆರ್​ ಸಹಾಯ ಮಾಡಿದ್ದರು. ಗುಣಮುಖರಾದ ಬಳಿಕ ಖಂಡಿತವಾಗಿಯೂ ಭೇಟಿ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ ಜವರಾಯ ಕರುಣೆ ತೋರಿಸಿಲ್ಲ. ಕೊನೆಗೂ ಜನಾರ್ಧನ್​ ಬದುಕುಳಿಯಲಿಲ್ಲ. ಎನ್​ಟಿಆರ್​ ಎಂದು ಕೈ ಮೇಲೆ ಜನಾರ್ಧನ್​ ಟ್ಯಾಟೂ ಹಾಕಿಸಿಕೊಂಡಿದ್ದ ಫೋಟೋ ವೈರಲ್​ ಆಗುತ್ತಿದೆ.

ಇದನ್ನೂ ಓದಿ: ‘ಆರ್​ಆರ್​ಆರ್​’ ರೆಸ್ಟೋರೆಂಟ್ ಆರಂಭಿಸಲಿದ್ದಾರೆ ರಾಮ್​ ಚರಣ್​-ಜ್ಯೂ.ಎನ್​ಟಿಆರ್​? ಕೇಳಿಬಂತು ಹೊಸ ಗುಸುಗುಸು

Alia Bhatt: ‘ದಯವಿಟ್ಟು ನಿಮ್ಮ ಅಭಿಮಾನಿಗಳನ್ನು ನನಗೆ ಕೊಟ್ಟುಬಿಡಿ’; ಜ್ಯೂ ಎನ್​ಟಿಆರ್​ ಬಳಿ ಆಲಿಯಾ ವಿಶೇಷ ಬೇಡಿಕೆ

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ