AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೋಸೆ ಹುಡುಕುತ್ತಾ ಬೆಂಗಳೂರಿಗೆ ಬಂದ ಟಾಲಿವುಡ್ ಸ್ಟಾರ್ ವೆಂಕಿ

Venkatesh Dagubhati: ಬೆಂಗಳೂರಿನ ತರ-ತರಹದ ದೋಸೆಗಳನ್ನು ಸವಿಯಲು ನಾನಾ ಕಡೆಗಳಿಂದ ಜನ ಬರುತ್ತಾರೆ. ವಿದೇಶಗಳಿಂದಲೂ ಸಹ ಫುಡ್ ವ್ಲಾಗರ್​​ಗಳು ಬೆಂಗಳೂರಿಗೆ ಬರುವುದು ಇಲ್ಲಿನ ದೋಸೆಗಳನ್ನು ಎಕ್ಸ್​​ಪ್ಲೋರ್ ಮಾಡಲೆಂದೇ. ಶತಮಾನಕ್ಕೂ ಹಳೆಯ ಕೆಲ ದೋಸೆ ಹೋಟೆಲ್​​ಗಳು ಬೆಂಗಳೂರಿನಲ್ಲಿವೆ. ಅರ್ಧ ಶತಮಾನ ದಾಟಿದ ಹಲವು ಹೋಟೆಲ್​​ಗಳಿವೆ. ಇದೀಗ ಟಾಲಿವುಡ್​​ನ ಸ್ಟಾರ್ ನಟರೊಬ್ಬರು ದೋಸೆ ಹುಡುಕಿಕೊಂಡು ಬೆಂಗಳೂರಿಗೆ ಬಂದಿದ್ದಾರೆ.

ದೋಸೆ ಹುಡುಕುತ್ತಾ ಬೆಂಗಳೂರಿಗೆ ಬಂದ ಟಾಲಿವುಡ್ ಸ್ಟಾರ್ ವೆಂಕಿ
Venkatesh
ಮಂಜುನಾಥ ಸಿ.
|

Updated on: Mar 29, 2026 | 7:08 PM

Share

ಬೆಂಗಳೂರನ್ನು (Bengaluru) ಗಾರ್ಡನ್ ಸಿಟಿ, ಸಿಲಿಕಾನ್ ಸಿಟಿ ಎಂದೆಲ್ಲ ಕರೆಯಲಾಗುತ್ತದೆ. ಇಲ್ಲಿನ ಉದ್ಯಾನಗಳು ಬಹಳ ಜನಪ್ರಿಯ. ಆದರೆ ಅದರಷ್ಟೆ ಜನಪ್ರಿಯ ಬೆಂಗಳೂರಿನ ದೋಸೆಗಳು. ಬೆಂಗಳೂರಿನ ತರ-ತರಹದ ದೋಸೆಗಳನ್ನು ಸವಿಯಲು ನಾನಾ ಕಡೆಗಳಿಂದ ಜನ ಬರುತ್ತಾರೆ. ವಿದೇಶಗಳಿಂದಲೂ ಸಹ ಫುಡ್ ವ್ಲಾಗರ್​​ಗಳು ಬೆಂಗಳೂರಿಗೆ ಬರುವುದು ಇಲ್ಲಿನ ದೋಸೆಗಳನ್ನು ಎಕ್ಸ್​​ಪ್ಲೋರ್ ಮಾಡಲೆಂದೇ. ಶತಮಾನಕ್ಕೂ ಹಳೆಯ ಕೆಲ ದೋಸೆ ಹೋಟೆಲ್​​ಗಳು ಬೆಂಗಳೂರಿನಲ್ಲಿವೆ. ಅರ್ಧ ಶತಮಾನ ದಾಟಿದ ಹಲವು ಹೋಟೆಲ್​​ಗಳಿವೆ. ಇದೀಗ ಟಾಲಿವುಡ್​​ನ ಸ್ಟಾರ್ ನಟರೊಬ್ಬರು ದೋಸೆ ಹುಡುಕಿಕೊಂಡು ಬೆಂಗಳೂರಿಗೆ ಬಂದಿದ್ದಾರೆ.

ವಿಕ್ಟರಿ ವೆಂಕಟೇಶ್ ಎಂದೇ ಖ್ಯಾತರಾಗಿರುವ ಟಾಲಿವುಡ್​ನ ಸ್ಟಾರ್ ನಟ ದಗ್ಗುಬಾಟಿ ವೆಂಕಟೇಶ್ ಅವರು ಇತ್ತೀಚೆಗಷ್ಟೆ ಬೆಂಗಳೂರಿಗೆ ಬಂದಿದ್ದರು, ಅದೂ ಬೆಂಗಳೂರಿನ ಬೆಸ್ಟ್ ದೋಸೆ ಸವಿಯಲು. ವೆಂಕಟೇಶ್ ಅವರು ಭೇಟಿ ನೀಡಿದ್ದು ಬೆಂಗಳೂರಿನ ಹೆಮ್ಮೆಯ ವಿದ್ಯಾರ್ಥಿ ಭವನ್ ಹೋಟೆಲಿಗೆ. ಗಾಂಧಿ ಬಜಾರಿನ ಈ ನೂರು ವರ್ಷಕ್ಕೂ ಹಳೆಯ ಹೋಟೆಲ್​​ಗೆ ಭೇಟಿ ನೀಡಿದ ವೆಂಕಟೇಶ್ ಅವರು ಹೋಟೆಲ್​​ನ ಹಲವು ಖಾದ್ಯಗಳನ್ನು ಸವಿದಿದ್ದಾರೆ.

ಮೊದಲಿಗೆ ಮೃದುವಾದ ಇಡ್ಲಿ ಮತ್ತು ಗರಿ-ಗರಿಯಾದ ವಡೆಯೊಂದಿಗೆ ಉಪಹಾರ ಆರಂಭಿಸಿದ ವೆಂಕಟೇಶ್. ಆ ಬಳಿಕ ಚೌ-ಚೌ ಬಾತು ಸವಿದಿದ್ದಾರೆ. ಬಳಿಕ ವಿದ್ಯಾರ್ಥಿ ಭವನದ ಬಲು ಫೇಮಸ್ ಮಸಾಲೆ ದೋಸೆ ಸವಿದು, ರುಚಿಗೆ ಮಾರು ಹೋಗಿದ್ದಾರೆ. ಒಂದು ಒಳ್ಳೆಯ ಫಿಲ್ಟರ್ ಕಾಫಿ ಜೊತೆಗೆ ಅಂತ್ಯ ಮಾಡಿದ್ದಾರೆ. ರುವಿಗೆ ಫಿದಾ ಆದ ವೆಂಕಟೇಶ್ ಅವರು ವಿದ್ಯಾರ್ಥಿ ಭವನ ಸಿಬ್ಬಂದಿ ಜೊತೆಗೆ ಹಾಗೂ ಮಾಲೀಕರ ಜೊತೆಗೆ ಮಾತನಾಡಿ, ಅವರೊಟ್ಟಿಗೆ ಚಿತ್ರಗಳನ್ನು ಸಹ ತೆಗೆಸಿಕೊಂಡಿದ್ದಾರೆ.

ಇದನ್ನೂ ಓದಿ:IPL 2026: ‘ಐಪಿಎಲ್​ಗೆ ಚಿನ್ನಸ್ವಾಮಿ ರೆಡಿ ಇದ್ರು ಆರ್​ಸಿಬಿ ಮನಸ್ಸು ಮಾಡ್ತಿಲ್ಲ’; ವೆಂಕಟೇಶ್ ಪ್ರಸಾದ್

ವಿಶೇಷವೆಂದರೆ ವೆಂಕಟೇಶ್ ಅವರ ಈ ಹಿಂದಿನ ಸಿನಿಮಾ ‘ಮನ ಶಂಕರ ವರ ಪ್ರಸಾದ್’ನಲ್ಲಿ ವೆಂಕಟೇಶ್ ಅವರು ಕರ್ನಾಟಕದ ವ್ಯಕ್ತಿಯ ಪಾತ್ರದಲ್ಲಿ ನಟಿಸಿದ್ದರು. ಸಿನಿಮಾನಲ್ಲಿ ಕನ್ನಡದಲ್ಲೇ ಮಾತನಾಡಿದ್ದರು ಸಹ. ಆ ಸಿನಿಮಾ ಮಾತ್ರವಲ್ಲ, ಈ ಹಿಂದೆ ಇನ್ನೂ ಕೆಲವು ಸಿನಿಮಾಗಳಲ್ಲಿ ವೆಂಕಟೇಶ್ ಅವರು ಕನ್ನಡಿಗನಾಗಿ ನಟಿಸಿದ್ದಿದೆ. ತೆಲುಗು ಸಿನಿಮಾಗಳಲ್ಲಿ ಕನ್ನಡದಲ್ಲಿ ಮಾತನಾಡಿದ್ದೂ ಸಹ ಇದೆ.

ವೆಂಕಟೇಶ್ ಅವರ ಪುತ್ರಿ ಆಶ್ರಿತಾ ದಗ್ಗುಬಾಟಿ ಸ್ವತಃ ಬೇಕರ್ ಮತ್ತು ಫುಡ್ ವ್ಲಾಗರ್ ಸಹ ಆಗಿದ್ದಾರೆ. ಭಿನ್ನ-ಭಿನ್ನ ರೀತಿಯ ಖಾದ್ಯಗಳನ್ನು ಎಕ್ಸ್​​ಪ್ಲೋರ್ ಮಾಡುತ್ತಿರುತ್ತಾರೆ. ತಮ್ಮ ಮನೆಯಲ್ಲಿ ಮಾಡುವ ಅಡುಗೆ ಸೇರಿದಂತೆ ಹಲವು ಭಿನ್ನ ರೀತಿಯ ತಿಂಡಿ-ತಿನಿಸುಗಳ ವ್ಲಾಗಿಂಗ್ ಸಹ ಅವರು ಮಾಡಿದ್ದಾರೆ. ವೆಂಕೇಶ್ ಅವರ ಅಣ್ಣನ ಮಗ, ಖ್ಯಾತ ನಟ ರಾಣಾ ದಗ್ಗುಬಾಟಿ ಸಹ ಒಮ್ಮೆ ಹೇಳಿದಂತೆ ದಗ್ಗುಬಾಟಿ ಕುಟುಂಬದ ಎಲ್ಲರೂ ಆಹಾರ ಪ್ರಿಯರಂತೆ. ಅಂತೆಯೇ ವೆಂಕಟೇಶ್ ಸಹ, ಹಾಗಾಗಿ ಅವರು ದೋಸೆ ಹುಡುಕಿಕೊಂಡು ಬೆಂಗಳೂರಿಗೆ ಬಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಇರಾನ್ ಮೇಲೆ ವಿಧ್ವಂಸಕ ದಾಳಿಗೆ ಸಜ್ಜಾಗಿರುವ B-52 ಬಾಂಬರ್!
ಇರಾನ್ ಮೇಲೆ ವಿಧ್ವಂಸಕ ದಾಳಿಗೆ ಸಜ್ಜಾಗಿರುವ B-52 ಬಾಂಬರ್!
ತಾಯಿ, ಅಕ್ಕನ ಕತ್ತು ಸೀಳಿ ಯುವಕ ಆತ್ಮಹತ್ಯೆಗೆ ಯತ್ನ: ಅಸಲಿಗೆ ಆಗಿದ್ದೇನು?
ತಾಯಿ, ಅಕ್ಕನ ಕತ್ತು ಸೀಳಿ ಯುವಕ ಆತ್ಮಹತ್ಯೆಗೆ ಯತ್ನ: ಅಸಲಿಗೆ ಆಗಿದ್ದೇನು?
ಆರ್​​ಸಿಬಿ ಮ್ಯಾಚ್ ಸುಸೂತ್ರ, ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಆರ್​​ಸಿಬಿ ಮ್ಯಾಚ್ ಸುಸೂತ್ರ, ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ರಾಮ ಮಂದಿರದಲ್ಲಿ ಹನುಮ ಭಕ್ತಿ;ಮಂಗಳಾರತಿವರೆಗೂ ಕಾದು ಪ್ರಾರ್ಥನೆಗೈದ ಕೋತಿ
ರಾಮ ಮಂದಿರದಲ್ಲಿ ಹನುಮ ಭಕ್ತಿ;ಮಂಗಳಾರತಿವರೆಗೂ ಕಾದು ಪ್ರಾರ್ಥನೆಗೈದ ಕೋತಿ
ಬಿಜೆಪಿ ಎಲ್ಡಿಎಫ್​, ಯುಡಿಎಫ್ ಹಗರಣಗಳನ್ನು ಬಯಲು ಮಾಡುತ್ತೆ: ಪ್ರಧಾನಿ ಮೋದಿ
ಬಿಜೆಪಿ ಎಲ್ಡಿಎಫ್​, ಯುಡಿಎಫ್ ಹಗರಣಗಳನ್ನು ಬಯಲು ಮಾಡುತ್ತೆ: ಪ್ರಧಾನಿ ಮೋದಿ
ಶ್ರೀರಾಮನವಮಿ ಅನ್ನಪ್ರಸಾದ ಸೇವಿಸಿದ್ದ ಭಕ್ತರಿಗೆ ವಾಂತಿ, ಬೇಧಿ!
ಶ್ರೀರಾಮನವಮಿ ಅನ್ನಪ್ರಸಾದ ಸೇವಿಸಿದ್ದ ಭಕ್ತರಿಗೆ ವಾಂತಿ, ಬೇಧಿ!
ಜೈಲುಪಾಲಾಗಿರುವ ಪುತ್ರ ಪ್ರಜ್ವಲ್ ಗಾಗಿ ತಂದೆ ರೇವಣ್ಣ ವಿಶೇಷ ಪೂಜೆ
ಜೈಲುಪಾಲಾಗಿರುವ ಪುತ್ರ ಪ್ರಜ್ವಲ್ ಗಾಗಿ ತಂದೆ ರೇವಣ್ಣ ವಿಶೇಷ ಪೂಜೆ
ಅಣ್ಣಮ್ಮ ಸಾಂಗ್​ಗೆ ಮಚ್ಚು ಹಿಡಿದು ರೌಡಿಶೀಟರ್ ಡ್ಯಾನ್ಸ್ ! ಇಬ್ಬರ ಬಂಧನ
ಅಣ್ಣಮ್ಮ ಸಾಂಗ್​ಗೆ ಮಚ್ಚು ಹಿಡಿದು ರೌಡಿಶೀಟರ್ ಡ್ಯಾನ್ಸ್ ! ಇಬ್ಬರ ಬಂಧನ
BJP ಅಭ್ಯರ್ಥಿ ಸಹೋದರನಿಂದ ಕಾಂಗ್ರೆಸ್​​ ಪರ ಮತಯಾಚನೆ!
BJP ಅಭ್ಯರ್ಥಿ ಸಹೋದರನಿಂದ ಕಾಂಗ್ರೆಸ್​​ ಪರ ಮತಯಾಚನೆ!
ತಾಯಿ, ಅಕ್ಕನ ಕೊಂದು ಆತ್ಮಹತ್ಯೆಗೆ ಯುವಕ ಯತ್ನ: ಎಸ್​​ಪಿ ಹೇಳಿದ್ದೇನು?
ತಾಯಿ, ಅಕ್ಕನ ಕೊಂದು ಆತ್ಮಹತ್ಯೆಗೆ ಯುವಕ ಯತ್ನ: ಎಸ್​​ಪಿ ಹೇಳಿದ್ದೇನು?