AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲು ಅರ್ಜುನ್​-ರಾಮ್ ಚರಣ್ ಫ್ಯಾಮಿಲಿ ಟ್ರೀ; ಟಾಲಿವುಡ್​ನ ಈ ಕುಟುಂಬದ ಬಗ್ಗೆ ನಿಮಗೆಷ್ಟು ಗೊತ್ತು?

ಅಲ್ಲು ಅರ್ಜುನ್ ಅವರು ಟಾಲಿವುಡ್​ನ ಬೇಡಿಕೆಯ ನಟ. ಅಲ್ಲು ಅರ್ಜುನ್ ಕುಟುಂಬಕ್ಕೂ, ಚಿರಂಜೀವಿ ಕುಟುಂಬಕ್ಕೂ ನಿಕಟ ಸಂಬಂಧ ಇದೆ. ಇವರ ಫ್ಯಾಮಿಲಿ ತುಂಬಾನೇ ದೊಡ್ಡದು.

ಅಲ್ಲು ಅರ್ಜುನ್​-ರಾಮ್ ಚರಣ್ ಫ್ಯಾಮಿಲಿ ಟ್ರೀ; ಟಾಲಿವುಡ್​ನ ಈ ಕುಟುಂಬದ ಬಗ್ಗೆ ನಿಮಗೆಷ್ಟು ಗೊತ್ತು?
ಅಲ್ಲು ಅರ್ಜುನ್​ ಕುಟುಂಬ
 ಶ್ರೀಲಕ್ಷ್ಮೀ ಎಚ್
| Edited By: |

Updated on: Aug 08, 2023 | 4:47 PM

Share

ಅಲ್ಲು ಅರ್ಜುನ್ (Allu Arjun) ಅವರು ಟಾಲಿವುಡ್​ನ (Tollywood) ಬೇಡಿಕೆಯ ನಟ. ಅಲ್ಲು ಅರ್ಜುನ್ ಕುಟುಂಬಕ್ಕೂ, ಚಿರಂಜೀವಿ ಕುಟುಂಬಕ್ಕೂ ನಿಕಟ ಸಂಬಂಧ ಇದೆ. ಇವರ ಫ್ಯಾಮಿಲಿ ತುಂಬಾನೇ ದೊಡ್ಡದು. ಚಿತ್ರರಂಗಕ್ಕೆ ಇವರು ನೀಡಿದ ಕೊಡುಗೆ ತುಂಬಾನೇ ದೊಡ್ಡದು. ಹಾಗಾದರೆ, ಚಿತ್ರರಂಗದಲ್ಲಿ ಇವರ ಕುಟುಂಬದ ಯಾರೆಲ್ಲ ಆ್ಯಕ್ಟೀವ್ ಆಗಿದ್ದಾರೆ? ಈ ಫ್ಯಾಮಿಲಿಯ (Allu Arjun Family) ಸದಸ್ಯರ ಪರಿಚಯ ನಿಮಗೆ ಮಾಡಿಕೊಡುತ್ತಿದ್ದೇವೆ.

ಅಲ್ಲು ರಾಮಲಿಂಗಯ್ಯ: ಅಲ್ಲು ಅರ್ಜುನ್ ತಾತ ಅಲ್ಲು ರಾಮಲಿಂಗಯ್ಯ ಟಾಲಿವುಡ್​​ನಲ್ಲಿ ನೂರಾರು ಚಿತ್ರಗಳಲ್ಲಿ ನಟಿಸಿದ್ದಾರೆ. ಅವರಿಗೆ 1990ರಲ್ಲಿ ಪದ್ಮಶ್ರೀ ಮತ್ತು 2001ರಲ್ಲಿ ರಘುಪತಿ ವೆಂಕಯ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಅವರು ಪ್ರಸಿದ್ಧ ನಟ ಮತ್ತು ಹಾಸ್ಯನಟರಾಗಿದ್ದರು. ಅವರ ಮಕ್ಕಳ ಪೈಕಿ ಅಲ್ಲು ಅರವಿಂದ್ ಮತ್ತು ಸುರೇಖಾ ಚಿತ್ರರಂಗದಲ್ಲಿ ಹೆಚ್ಚು ಸಕ್ರಿಯರಾಗಿದ್ದಾರೆ. ಅಲ್ಲು ಅರ್ಜುನ್ ಅವರ ತಂದೆ ಅಲ್ಲು ಅರವಿಂದ್ ಅವರದ್ದು ದಕ್ಷಿಣದಲ್ಲಿ ದೊಡ್ಡ ಹೆಸರು. ಅವರು ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ.

ಅಲ್ಲು ಅರವಿಂದ್: ಅಲ್ಲು ಅರವಿಂದ್ ಅವರು ಸಾಕಷ್ಟು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ಗೀತಾ ಆರ್ಟ್ಸ್ ಮೂಲಕ ಸಾಕಷ್ಟು ಚಿತ್ರಗಳಿಗೆ ಬಂಡವಾಳ ಹೂಡಿದ್ದಾರೆ. ‘ಅಲಾ ವೈಕುಂಟಪುರಮುಲೋ’ ಸೇರಿದಂತೆ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಇವರಿಗೆ ಇದೆ. ಕನ್ನಡದ ‘ಸುಂದರಾಂಗ ಜಾಣ’ (2016), ‘ಮಾಂಗಲ್ಯಂ ತಂತುನಾನೇನ’ (1998) ಚಿತ್ರಗಳನ್ನು ಅವರು ನಿರ್ಮಿಸಿದ್ದರು. ಅಲ್ಲು ನಿರ್ಮಲಾ ಇವರ ಪತ್ನಿ. ಅಲ್ಲು ವೆಂಕಟೇಶ್, ಅಲ್ಲು ಅರ್ಜುನ್, ಅಲ್ಲು ಸಿರಿಶ್ ಹೆಸರಿನ ಪುತ್ರರಿದ್ದಾರೆ.

‘ಪುಷ್ಪ 2’ ಪೋಸ್ಟರ್​ ರೀತಿ ವೇಷ ಧರಿಸಿ ಬಂದ ಸಂಸದ; ಅಲ್ಲು ಅರ್ಜುನ್​ ಅಭಿಮಾನಿಗಳಲ್ಲಿ ಹೆಚ್ಚಿತು ಕ್ರೇಜ್​

ಅಲ್ಲು ಅರ್ಜುನ್: ಅಲ್ಲು ಅರ್ಜುನ್ ತೆಲುಗಿನಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಸದ್ಯ ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅಲ್ಲು ಅರ್ಜುನ್ 2011ರಲ್ಲಿ ಸ್ನೇಹಾ ರೆಡ್ಡಿ ಅವರನ್ನು ವಿವಾಹವಾದರು. ಇವರು ಕುಟುಂಬಕ್ಕೆ ಹೆಚ್ಚು ಸಮಯ ನೀಡುತ್ತಾರೆ. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಮಗಳ ಹೆಸರು ಅರ್ಹ ಮತ್ತು ಮಗನ ಹೆಸರು ಅಯಾನ್.

ಅಲ್ಲು ಶಿರೀಶ್: ಅಲ್ಲು ಶಿರೀಶ್ ಕೂಡ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಕೆಲವು ಸಿನಿಮಾಗಳಲ್ಲಿ ಇವರು ನಟಿಸಿದ್ದಾರೆ. ಆದರೆ ಅಲ್ಲು ಅರ್ಜುನ್ ಅವರಷ್ಟು ಫ್ಯಾನ್ ಫಾಲೋಯಿಂಗ್ ಇವರಿಗೆ ಇಲ್ಲ. 2013ರಲ್ಲಿ ತೆರೆಕಂಡ ‘ಗೌರವಂ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು.

ಅಲ್ಲು ಫ್ಯಾಮಿಲಿ-ಕೊನಿಡೆಲಾ ಫ್ಯಾಮಿಲಿ ಬಾಂಧವ್ಯ

ಟಾಲಿವುಡ್​ನ ಪ್ರಭಾವಶಾಲಿ ಫ್ಯಾಮಿಲಿಗಳಲ್ಲಿ ಅಲ್ಲು ಫ್ಯಾಮಿಲಿ ಮತ್ತು ಕೊನಿಡೆಲಾ ಫ್ಯಾಮಿಲಿ ಇದೆ. ಎರಡೂ ಕುಟುಂಬಗಳ ನಡುವಿನ ಬಾಂಧವ್ಯ ತುಂಬಾ ವಿಶೇಷ. ಅಲ್ಲು ಅರವಿಂದ್ ಅವರು ಅಲ್ಲು ರಾಮಲಿಂಗಯ್ಯ ಮತ್ತು ಕನಕರತ್ನಂ ಅವರ ಮಗ. ಅಲ್ಲು ಅರವಿಂದ್ ತಂಗಿ ಸುರೇಖಾ ಅವರು ತೆಲುಗು ಸೂಪರ್ ಸ್ಟಾರ್ ಚಿರಂಜೀವಿ ಅವರನ್ನು ವಿವಾಹವಾಗಿದ್ದಾರೆ. ಚಿರಂಜೀವಿ ಹಾಗೂ ಅವರ ಮಗ ರಾಮ್​ ಚರಣ್ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ರಾಮ್ ಚರಣ್ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಅಭಿಮಾನಿಗಳನ್ನು ಹೊಂದಿದ್ದಾರೆ. ‘ಆರ್​ಆರ್​ಆರ್​’ ಸಿನಿಮಾ ಮೂಲಕ ಅವರು ಜನಪ್ರಿಯತೆ ಪಡೆದರು. ಅವರು ಉಪಾಸನಾ ಅವರನ್ನು ಮದುವೆ ಆದರು. ಅವರಿಗೆ ಇತ್ತೀಚೆಗೆ ಮಗಳು ಜನಿಸಿದ್ದಾಳೆ. ಕ್ಲಿನ್ ಕಾರ ಕೊನಿಡೆಲಾ ಎಂದು ಆಕೆಗೆ ಹೆಸರು ಇಡಲಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ