ಪವನ್​ ಕಲ್ಯಾಣ್​ ಭೇಟಿಗೆ ಬರ್ತಿದ್ದಾರೆ ‘RRR’, ‘ಪುಷ್ಪ 2’, ‘ಕಲ್ಕಿ 2898 ಎಡಿ’ ನಿರ್ಮಾಪಕರು

ಪವನ್​ ಕಲ್ಯಾಣ್​ ಅವರು ಈಗ ಉಪ ಮುಖ್ಯಮಂತ್ರಿ ಆಗಿರುವುದರಿಂದ ಸಿಕ್ಕಾಪಟ್ಟೆ ಬ್ಯುಸಿ ಆಗಿದ್ದಾರೆ. ತೆಲುಗು ಚಿತ್ರರಂಗದ ಅನೇಕ ಘಟಾನುಘಟಿ ನಿರ್ಮಾಪಕರು ಒಟ್ಟಾಗಿ ಬಂದು ವಿಜಯವಾಡದಲ್ಲಿ ಪವನ್​ ಕಲ್ಯಾಣ್​ ಅವರನ್ನು ಭೇಟಿ ಮಾಡಲಿದ್ದಾರೆ. ಈ ಭೇಟಿಯ ಹಿಂದೆ ಒಂದು ಪ್ರಮುಖ ಕಾರಣ ಇದೆ. ಮಾತುಕತೆ ನಡೆದ ನಂತರ ಹೆಚ್ಚಿನ ಮಾಹಿತಿ ಬಹಿರಂಗ ಆಗಲಿದೆ.

ಪವನ್​ ಕಲ್ಯಾಣ್​ ಭೇಟಿಗೆ ಬರ್ತಿದ್ದಾರೆ ‘RRR’, ‘ಪುಷ್ಪ 2’, ‘ಕಲ್ಕಿ 2898 ಎಡಿ’ ನಿರ್ಮಾಪಕರು
ಪವನ್​ ಕಲ್ಯಾಣ್​
Follow us
|

Updated on: Jun 23, 2024 | 10:07 PM

ಟಾಲಿವುಡ್​ನ ಸ್ಟಾರ್ ನಟ ಪವನ್​ ಕಲ್ಯಾಣ್​ (Pawan Kalyan) ಈಗ ಫುಲ್​ಟೈಮ್​ ರಾಜಕೀಯದಲ್ಲಿ ಬ್ಯುಸಿ ಆಗಿದ್ದಾರೆ. ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಅವರನ್ನು ಭೇಟಿಯಾಗಲು ಅನೇಕ ಗಣ್ಯರು ಬರುತ್ತಿದ್ದಾರೆ. ಪವನ್​ ಕಲ್ಯಾಣ್​ ಬಳಿ 4 ಪ್ರಮುಖ ಖಾತೆಗಳು ಇವೆ. ಈ ಎಲ್ಲ ಜವಾಬ್ದಾರಿಯನ್ನು ಅವರು ನಿಭಾಯಿಸಬೇಕಿದೆ. ಹಾಗಾಗಿ ಅವರು ಸದ್ಯಕ್ಕೆ ಸಿನಿಮಾಗಳಿಂದ (Pawan Kalyan Movie) ದೂರ ಉಳಿಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಹಾಗಿದ್ದರೂ ಕೂಡ ಟಾಲಿವುಡ್​ನ (Tollywood) ಘಟಾನುಘಟಿ ನಿರ್ಮಾಣ ಸಂಸ್ಥೆಗಳ ಮಾಲಿಕರು ಪವನ್​ ಕಲ್ಯಾಣ್​ ಅವರನ್ನು ಭೇಟಿ ಮಾಡಲು ಮುಂದಾಗಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ.

‘ಪುಷ್ಪ 2’ ಸಿನಿಮಾ ನಿರ್ಮಾಣ ಮಾಡಿರುವ ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆಯ ನವೀನ್​, ರವಿಶಂಕರ್​, ‘ಆರ್​ಆರ್​ಆರ್​’ ಸಿನಿಮಾದ ನಿರ್ಮಾಪಕ ಡಿವಿವಿ ದಾನಯ್ಯ, ‘ಕಲ್ಕಿ 2898 ಎಡಿ’ ಸಿನಿಮಾದ ನಿರ್ಮಾಪಕ ಅಶ್ವಿನಿ ದತ್​, ಖ್ಯಾತ ನಿರ್ಮಾಪಕ ದಿಲ್​ ರಾಜು, ನಾಗ ವಂಶಿ ಸೇರಿದಂತೆ ಅನೇಕ ನಿರ್ಮಾಪಕರು ಒಟ್ಟಾಗಿ ಪವನ್​ ಕಲ್ಯಾಣ್​ ಅವರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ. ಜೂನ್ 24ರ ಮಧ್ಯಾಹ್ನ ಈ ಭೇಟಿ ನಡೆಯುವ ನಿರೀಕ್ಷೆ ಇದೆ.

ಅಂದಹಾಗೆ, ಈ ದೊಡ್ಡ ದೊಡ್ಡ ನಿರ್ಮಾಪಕರು ಪವನ್​ ಕಲ್ಯಾಣ್​ ಅವರನ್ನು ಭೇಟಿ ಮಾಡಲು ಬರುತ್ತಿರುವುದು ಕಾಲ್​ಶೀಟ್​ ಪಡೆಯೋಕೆ ಅಲ್ಲ. ಬದಲಿಗೆ, ಚಿತ್ರರಂಗದ ಕುರಿತು ಕೆಲವು ಪ್ರಮುಖ ವಿಚಾರಗಳನ್ನು ತಿಳಿಸಲು ಆಗಮಿಸುತ್ತಿದ್ದಾರೆ. ಈ ಹಿಂದಿನ ಸರ್ಕಾರಗಳಿಂದ ಚಿತ್ರರಂಗಕ್ಕೆ ಕೆಲವು ಸವಾಲುಗಳು ಎದುರಾಗಿದ್ದವು. ಅವುಗಳನ್ನು ನಿವಾರಿಸುವ ಸಲುವಾಗಿ ಪವನ್​ ಕಲ್ಯಾಣ್​ ಜೊತೆ ಈ ಎಲ್ಲ ಪ್ರಮುಖ ನಿರ್ಮಾಪಕರು ಮನವಿ ಮಾಡಿಕೊಳ್ಳಲಿದ್ದಾರೆ.

ಇದನ್ನೂ ಓದಿ: ನಾಯ್ಡು ಪ್ರಮಾಣ ವಚನ: ಚಿರಂಜೀವಿ, ಪವನ್​ ಕಲ್ಯಾಣ್​ ಜತೆ ನರೇಂದ್ರ ಮೋದಿ ಗೆಲುವಿನ ನಗು

ತೆಲುಗು ಚಿತ್ರರಂಗದ ಬಹುತೇಕ ಎಲ್ಲ ಘಟಾನುಘಟಿ ನಿರ್ಮಾಪಕರು ವಿಜಯವಾಡದಲ್ಲಿ ಪವನ್​ ಕಲ್ಯಾಣ್​ ಅವರನ್ನು ಭೇಟಿ ಮಾಡಲಿದ್ದಾರೆ. ಪವನ್​ ಕಲ್ಯಾಣ್​ ಈಗ ಉಪ ಮುಖ್ಯಮಂತ್ರಿ ಆಗಿರುವುದರಿಂದ ತುಂಬ ಬ್ಯುಸಿ ಆಗಿದ್ದಾರೆ. ನಿರ್ಮಾಪಕರ ಜೊತೆ ಅವರು ಎಷ್ಟು ಸಮಯ ಮಾತುಕಥೆ ನಡೆಸುತ್ತಾರೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಮೀಟಿಂಗ್​ ಮುಗಿದ ಬಳಿಕ ಅಲ್ಲಿನ ವಿವರಗಳನ್ನು ನಿರ್ಮಾಪಕರು ಮಾಧ್ಯಮಗಳ ಜೊತೆ ಹಂಚಿಕೊಳ್ಳುತ್ತಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ