AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವನ್​ ಕಲ್ಯಾಣ್​ ಭೇಟಿಗೆ ಬರ್ತಿದ್ದಾರೆ ‘RRR’, ‘ಪುಷ್ಪ 2’, ‘ಕಲ್ಕಿ 2898 ಎಡಿ’ ನಿರ್ಮಾಪಕರು

ಪವನ್​ ಕಲ್ಯಾಣ್​ ಅವರು ಈಗ ಉಪ ಮುಖ್ಯಮಂತ್ರಿ ಆಗಿರುವುದರಿಂದ ಸಿಕ್ಕಾಪಟ್ಟೆ ಬ್ಯುಸಿ ಆಗಿದ್ದಾರೆ. ತೆಲುಗು ಚಿತ್ರರಂಗದ ಅನೇಕ ಘಟಾನುಘಟಿ ನಿರ್ಮಾಪಕರು ಒಟ್ಟಾಗಿ ಬಂದು ವಿಜಯವಾಡದಲ್ಲಿ ಪವನ್​ ಕಲ್ಯಾಣ್​ ಅವರನ್ನು ಭೇಟಿ ಮಾಡಲಿದ್ದಾರೆ. ಈ ಭೇಟಿಯ ಹಿಂದೆ ಒಂದು ಪ್ರಮುಖ ಕಾರಣ ಇದೆ. ಮಾತುಕತೆ ನಡೆದ ನಂತರ ಹೆಚ್ಚಿನ ಮಾಹಿತಿ ಬಹಿರಂಗ ಆಗಲಿದೆ.

ಪವನ್​ ಕಲ್ಯಾಣ್​ ಭೇಟಿಗೆ ಬರ್ತಿದ್ದಾರೆ ‘RRR’, ‘ಪುಷ್ಪ 2’, ‘ಕಲ್ಕಿ 2898 ಎಡಿ’ ನಿರ್ಮಾಪಕರು
ಪವನ್​ ಕಲ್ಯಾಣ್​
ಮದನ್​ ಕುಮಾರ್​
|

Updated on: Jun 23, 2024 | 10:07 PM

Share

ಟಾಲಿವುಡ್​ನ ಸ್ಟಾರ್ ನಟ ಪವನ್​ ಕಲ್ಯಾಣ್​ (Pawan Kalyan) ಈಗ ಫುಲ್​ಟೈಮ್​ ರಾಜಕೀಯದಲ್ಲಿ ಬ್ಯುಸಿ ಆಗಿದ್ದಾರೆ. ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಅವರನ್ನು ಭೇಟಿಯಾಗಲು ಅನೇಕ ಗಣ್ಯರು ಬರುತ್ತಿದ್ದಾರೆ. ಪವನ್​ ಕಲ್ಯಾಣ್​ ಬಳಿ 4 ಪ್ರಮುಖ ಖಾತೆಗಳು ಇವೆ. ಈ ಎಲ್ಲ ಜವಾಬ್ದಾರಿಯನ್ನು ಅವರು ನಿಭಾಯಿಸಬೇಕಿದೆ. ಹಾಗಾಗಿ ಅವರು ಸದ್ಯಕ್ಕೆ ಸಿನಿಮಾಗಳಿಂದ (Pawan Kalyan Movie) ದೂರ ಉಳಿಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಹಾಗಿದ್ದರೂ ಕೂಡ ಟಾಲಿವುಡ್​ನ (Tollywood) ಘಟಾನುಘಟಿ ನಿರ್ಮಾಣ ಸಂಸ್ಥೆಗಳ ಮಾಲಿಕರು ಪವನ್​ ಕಲ್ಯಾಣ್​ ಅವರನ್ನು ಭೇಟಿ ಮಾಡಲು ಮುಂದಾಗಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ.

‘ಪುಷ್ಪ 2’ ಸಿನಿಮಾ ನಿರ್ಮಾಣ ಮಾಡಿರುವ ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆಯ ನವೀನ್​, ರವಿಶಂಕರ್​, ‘ಆರ್​ಆರ್​ಆರ್​’ ಸಿನಿಮಾದ ನಿರ್ಮಾಪಕ ಡಿವಿವಿ ದಾನಯ್ಯ, ‘ಕಲ್ಕಿ 2898 ಎಡಿ’ ಸಿನಿಮಾದ ನಿರ್ಮಾಪಕ ಅಶ್ವಿನಿ ದತ್​, ಖ್ಯಾತ ನಿರ್ಮಾಪಕ ದಿಲ್​ ರಾಜು, ನಾಗ ವಂಶಿ ಸೇರಿದಂತೆ ಅನೇಕ ನಿರ್ಮಾಪಕರು ಒಟ್ಟಾಗಿ ಪವನ್​ ಕಲ್ಯಾಣ್​ ಅವರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ. ಜೂನ್ 24ರ ಮಧ್ಯಾಹ್ನ ಈ ಭೇಟಿ ನಡೆಯುವ ನಿರೀಕ್ಷೆ ಇದೆ.

ಅಂದಹಾಗೆ, ಈ ದೊಡ್ಡ ದೊಡ್ಡ ನಿರ್ಮಾಪಕರು ಪವನ್​ ಕಲ್ಯಾಣ್​ ಅವರನ್ನು ಭೇಟಿ ಮಾಡಲು ಬರುತ್ತಿರುವುದು ಕಾಲ್​ಶೀಟ್​ ಪಡೆಯೋಕೆ ಅಲ್ಲ. ಬದಲಿಗೆ, ಚಿತ್ರರಂಗದ ಕುರಿತು ಕೆಲವು ಪ್ರಮುಖ ವಿಚಾರಗಳನ್ನು ತಿಳಿಸಲು ಆಗಮಿಸುತ್ತಿದ್ದಾರೆ. ಈ ಹಿಂದಿನ ಸರ್ಕಾರಗಳಿಂದ ಚಿತ್ರರಂಗಕ್ಕೆ ಕೆಲವು ಸವಾಲುಗಳು ಎದುರಾಗಿದ್ದವು. ಅವುಗಳನ್ನು ನಿವಾರಿಸುವ ಸಲುವಾಗಿ ಪವನ್​ ಕಲ್ಯಾಣ್​ ಜೊತೆ ಈ ಎಲ್ಲ ಪ್ರಮುಖ ನಿರ್ಮಾಪಕರು ಮನವಿ ಮಾಡಿಕೊಳ್ಳಲಿದ್ದಾರೆ.

ಇದನ್ನೂ ಓದಿ: ನಾಯ್ಡು ಪ್ರಮಾಣ ವಚನ: ಚಿರಂಜೀವಿ, ಪವನ್​ ಕಲ್ಯಾಣ್​ ಜತೆ ನರೇಂದ್ರ ಮೋದಿ ಗೆಲುವಿನ ನಗು

ತೆಲುಗು ಚಿತ್ರರಂಗದ ಬಹುತೇಕ ಎಲ್ಲ ಘಟಾನುಘಟಿ ನಿರ್ಮಾಪಕರು ವಿಜಯವಾಡದಲ್ಲಿ ಪವನ್​ ಕಲ್ಯಾಣ್​ ಅವರನ್ನು ಭೇಟಿ ಮಾಡಲಿದ್ದಾರೆ. ಪವನ್​ ಕಲ್ಯಾಣ್​ ಈಗ ಉಪ ಮುಖ್ಯಮಂತ್ರಿ ಆಗಿರುವುದರಿಂದ ತುಂಬ ಬ್ಯುಸಿ ಆಗಿದ್ದಾರೆ. ನಿರ್ಮಾಪಕರ ಜೊತೆ ಅವರು ಎಷ್ಟು ಸಮಯ ಮಾತುಕಥೆ ನಡೆಸುತ್ತಾರೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಮೀಟಿಂಗ್​ ಮುಗಿದ ಬಳಿಕ ಅಲ್ಲಿನ ವಿವರಗಳನ್ನು ನಿರ್ಮಾಪಕರು ಮಾಧ್ಯಮಗಳ ಜೊತೆ ಹಂಚಿಕೊಳ್ಳುತ್ತಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ