AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬಬ್ಬಾ, ಯಶ್ ಬುದ್ಧಿವಂತಿಕೆ ಮೆಚ್ಚಲೇಬೇಕು; ಈ ಡೀಲ್​​​ನಿಂದ ‘ಟಾಕ್ಸಿಕ್​​’ಗೆ ದೊಡ್ಡ ಲಾಭ

ಯಶ್ ಅಭಿನಯದ 'ಟಾಕ್ಸಿಕ್' ಚಿತ್ರದ ವಿದೇಶಿ ಹಂಚಿಕೆ ಹಕ್ಕನ್ನು ಫಾರ್ಸ್ ಫಿಲ್ಮ್ 105 ಕೋಟಿ ರೂ.ಗೆ ಖರೀದಿಸಿದೆ. ಯಶ್‌ನ ಈ ಚಾಣಾಕ್ಷ ನಿರ್ಧಾರ ಗಲ್ಫ್ ರಾಷ್ಟ್ರಗಳಲ್ಲಿ ಚಿತ್ರದ ವಿಸ್ತೃತ ವಿತರಣೆಗೆ ಸಹಾಯಕವಾಗಿದೆ. 'ಧುರಂಧರ್ 2' ಅಲ್ಲಿ ಬಿಡುಗಡೆಯಾಗದ ಹಿನ್ನೆಲೆಯಲ್ಲಿ, 'ಟಾಕ್ಸಿಕ್' ಈ ಪ್ರಮುಖ ಮಾರುಕಟ್ಟೆಯನ್ನು ಪ್ರವೇಶಿಸಲು ಈ ಡೀಲ್ ಸಹಕಾರಿ ಆಗಿದೆ.

ಅಬ್ಬಬ್ಬಾ, ಯಶ್ ಬುದ್ಧಿವಂತಿಕೆ ಮೆಚ್ಚಲೇಬೇಕು; ಈ ಡೀಲ್​​​ನಿಂದ ‘ಟಾಕ್ಸಿಕ್​​’ಗೆ ದೊಡ್ಡ ಲಾಭ
ಯಶ್
ರಾಜೇಶ್ ದುಗ್ಗುಮನೆ
|

Updated on: Feb 11, 2026 | 9:00 AM

Share

‘ಟಾಕ್ಸಿಕ್’ ಸಿನಿಮಾ (Toxic Movie) ರಿಲೀಸ್​​ಗೆ ಇನ್ನು ಒಂದು ತಿಂಗಳು ಬಾಕಿ ಇದೆ. ಈಗಾಗಲೇ ಸಿನಿಮಾಗೆ ಸಿದ್ಧತೆ ಜೋರಾಗಿ ನಡೆದಿದೆ. ಈ ಸಿನಿಮಾ ನೋಡಲು ಫ್ಯಾನ್ಸ್ ಕಾದಿದ್ದಾರೆ. ಈ ಚಿತ್ರದ ವಿದೇಶಿ ಹಂಚಿಕೆ ಹಕ್ಕನ್ನು ಫಾರ್ಸ್ ಫಿಲ್ಮ್ ಬರೋಬ್ಬರಿ 105 ಕೋಟಿ ರೂಪಾಯಿಗೆ ಖರೀದಿ ಮಾಡಿದೆ. ಈ ಡೀಲ್​​ನ ಹಿಂದೆ ಸಾಕಷ್ಟು ಲೆಕ್ಕಾಚಾರ ಇದೆ ಎಂದು ವರದಿ ಆಗಿದೆ. ಆ ಬಗ್ಗೆ ಇಲ್ಲಿದೆ ವಿವರ.

‘ಟಾಕ್ಸಿಕ್’ ಸಿನಿಮಾ ಕೇಲವ ಭಾರತದ ಭಾಷೆಗಳಲ್ಲಿ ಮಾತ್ರವಲ್ಲದೆ, ಇಂಗ್ಲಿಷ್ ಅಲ್ಲೂ ರಿಲೀಸ್ ಆಗಲಿದೆ. ಈಗ ಫಾರ್ಸ್ ಫಿಲ್ಮ್​ಗೆ ನೀಡಿದ್ದು ಕೇವಲ ಕನ್ನಡ, ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಆವೃತ್ತಿಗಳನ್ನು ಮಾತ್ರ. ಹೀಗಾಗಿ, ಇಂಗ್ಲಿಷ್ ಹಕ್ಕನ್ನು ಇನ್ನೊಂದು ಸಂಸ್ಥೆಗೆ ತಂಡ ನೀಡಲಿದೆ.

ಫಾರ್ಸ್ ಫಿಲ್ಮ್​ ಜೊತೆ ಇಷ್ಟು ದೊಡ್ಡ ಡೀಲ್ ಮಾಡಿಕೊಳ್ಳಲು ‘ಧುರಂಧರ್ 2’ ಕಾರಣ ಎನ್ನಲಾಗುತ್ತಿದೆ. ಫಾರ್ಸ್​ ಫಿಲ್ಮ್ಸ್ ಸಿನಿಮಾ ಹಂಚಿಕೆಯಲ್ಲಿ ಸಾಕಷ್ಟು ಅನುಭವ ಹೊಂದಿದೆ. ಅಲ್ಲದೆ, ಇದು ದುಬೈ ಮೂಲದ ಕಂಪನಿ. ಹೀಗಾಗಿ, ಗಲ್ಫ್ ರಾಷ್ಟ್ರಗಳಲ್ಲಿ ಇದು ಸಾಕಷ್ಟು ಹಿಡಿತ ಹೊಂದಿದೆ. ಈ ಭಾಗದಲ್ಲಿ ದೊಡ್ಡ ಮಟ್ಟದಲ್ಲಿ ಸಿನಿಮಾ ರಿಲೀಸ್ ಮಾಡುವ ಆಲೋಚನೆ ತಂಡಕ್ಕೆ ಇದೆ.

ಇದನ್ನೂ ಓದಿ: ‘ಧುರಂಧರ್’ ನಟ ರಣವೀರ್ ಸಿಂಗ್​ಗೆ ಬೆದರಿಕೆ; ಭದ್ರತೆ ಹೆಚ್ಚಿಸಿದ ಪೊಲೀಸರು

‘ಧುರಂಧರ್’ ಸಿನಿಮಾ ಗಲ್ಫ್ ರಾಷ್ಟ್ರಗಳಲ್ಲಿ ರಿಲೀಸ್ ಆಗಿರಲಿಲ್ಲ. ಅದೇ ರೀತಿ, ‘ಧುರಂಧರ್ 2’ ಸಿನಿಮಾ ಕೂಡ ಈ ಭಾಗದಲ್ಲಿ ರಿಲೀಸ್ ಆಗೋದಿಲ್ಲ. ಇದರ ಅಡ್ವಾಂಟೇಜ್ ತೆಗೆದುಕೊಳ್ಳಲು ಯಶ್ ಹಾಗೂ ತಂಡ ನಿರ್ಧರಿಸಿದೆ. ಈ ಕಾರಣದಿಂದ ‘ಟಾಕ್ಸಿಕ್’ ನಿರ್ಮಾಣ ಸಂಸ್ಥೆ ಹಾಗೂ ಯಶ್ ಫಾರ್ಸ್ ಫಿಲ್ಮ್​ ಜೊತೆ ಒಪ್ಪಂದ ಮಾಡಿಕೊಂಡಿದ್ದಾರೆ.

‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಂದು ರಿಲೀಸ್ ಆಗುತ್ತಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಹೊಂದಿದ್ದಾರೆ. ಯಶ್ ಜೊತೆ ಕಿಯಾರಾ ಅಡ್ವಾಣಿ ಮೊದಲಾದವರು ನಟಿಸಿದ್ದಾರೆ. ಮಲಯಾಳಂ ನಿರ್ದೇಶಕಿ ಗೀತು ಮೋಹನ್​ ದಾಸ್ ನಿರ್ದೇಶನ ಚಿತ್ರಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!