AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಂಗಳಮುಖಿಯರು ಪ್ರಪಂಚವನ್ನು ನೋಡುವ ಪರಿಯೇ ಬೇರೆ’; ನವಾಜುದ್ದೀನ್ ಸಿದ್ದಿಕಿ

ನವಾಜುದ್ದೀನ್ ಸಿದ್ದಿಕಿ ಮಂಗಳಮುಖಿಯಾಗಿ ಕಾಣಿಸಿಕೊಳ್ಳುತ್ತಿರುವ 'ಹಡ್ಡಿ' ಚಿತ್ರದ ಮತ್ತೊಂದು ಪೋಸ್ಟರ್​​ ರಿವೀಲ್​ ಆಗಿದೆ.

‘ಮಂಗಳಮುಖಿಯರು ಪ್ರಪಂಚವನ್ನು ನೋಡುವ ಪರಿಯೇ ಬೇರೆ’; ನವಾಜುದ್ದೀನ್ ಸಿದ್ದಿಕಿ
ಹಡ್ಡಿ ಚಿತ್ರದ ಹೊಸ ಪೋಸ್ಟರ್​​
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Nov 19, 2022 | 4:50 PM

Share

ಭಿನ್ನ, ವಿಭಿನ್ನ ಪಾತ್ರಗಳ ಮೂಲಕ ಬಾಲಿವುಡ್​​ ಚಿತ್ರರಂಗದಲ್ಲಿ ಗುರುತಿಸಿಕೊಂಡವರ ಪೈಕಿ ನಟ ನವಾಜುದ್ದೀನ್ ಸಿದ್ದಿಕಿ (Nawazuddinsiddiqui) ಕೂಡ ಒಬ್ಬರು. ಭಿನ್ನ ಪಾತ್ರ ಆಯ್ಕೆಯಲ್ಲಿ ಅವರು ಎತ್ತಿದ ಕೈ. ಹಾಗಾಗಿಯೇ ಅವರು ಪರದೆ ಮೇಲೆ ಬಂದರೆ ಆ ಪಾತ್ರವನ್ನು ಸಂಪೂರ್ಣವಾಗಿ ಆವರಿಸಿಕೊಳ್ಳುತ್ತಾರೆ. ತಮ್ಮ ನೈಜ ಅಭಿನಯದಿಂದ ನವಾಜುದ್ದೀನ್ ಸಿದ್ದಿಕಿ ವಿಭಿನ್ನವಾಗಿ ನಿಲ್ಲುತ್ತಾರೆ. ನಟ ಟೈಗರ್​ ಶ್ರಾಫ್​ ನಟನೆಯ ‘ಹೀರೋಪಂತಿ 2’ ಚಿತ್ರ ಬಿಟ್ಟರೆ ಮತ್ತೆ ನವಾಜುದ್ದೀನ್ ಸಿದ್ದಿಕಿ ತೆರೆಮೇಲೆ ಕಾಣಿಸಿಕೊಂಡಿರಲಿಲ್ಲ. ಕೆಲ ಸಮಯ ಚಿತ್ರರಂಗದಿಂದ ಅವರು ಬ್ರೇಕ್​ ಪಡೆದುಕೊಂಡಿದ್ದರು. ಆದರೆ ಈಗ ಮತ್ತೆ ಮರಳಿದ್ದಾರೆ. ಅದು ಒಂದು ವಿಭಿನ್ನ ಪಾತ್ರದ ಮೂಲಕ ಎನ್ನುವುದು ವಿಶೇಷ.

ನಟ ನವಾಜುದ್ದೀನ್ ಸಿದ್ದಿಕಿ ಸದ್ಯ ತಮಗೆ ಸವಾಲೆನಿಸಿದ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ. ಮತ್ತು ಆ ಚಿತ್ರ ಸದ್ದಿಲ್ಲದೆ ಚಿತ್ರೀಕರಣವನ್ನು ಸಹ ಮುಗಿಸಿದೆ. ಹೌದು ಸೇಡಿನ ಕಥಾಹಂದರವುಳ್ಳ ಚಿತ್ರವಾದ ‘ಹಡ್ಡಿ’ (Haddi) ಸಿನಿಮಾದಲ್ಲಿ ಅವರು ನಟಿಸಿದ್ದಾರೆ. ಈ ಕುರಿತಾಗಿ ಹಿಂದೆ ಬೂದು ಬಣ್ಣದ ಗೌನ್ ಧರಿಸಿ, ಉದ್ದ ಕೂದಲು ಮತ್ತು ಫುಲ್​​ ಮೇಕ್ಅಪ್‌ನಲ್ಲಿದ್ದ ಲುಕ್‌ ಒಂದನ್ನು ಚಿತ್ರತಂಡ ಬಿಡುಗಡೆ ಮಾಡಿತ್ತು. ಅದು ಭಾರೀ ಕುತೂಹಲಕ್ಕೂ ಕಾರಣವಾಗಿತ್ತು. ಈಗ ಇದೇ ಚಿತ್ರದ ಮತ್ತೊಂದು ಹೊಸ ಲುಕ್ ಬಿಡುಗಡೆ ಮಾಡಲಾಗಿದೆ.

ನವಾಜುದ್ದೀನ್ ಸಿದ್ದಿಕಿ ಮಂಗಳಮುಖಿಯಾಗಿ ಕಾಣಿಸಿಕೊಳ್ಳುತ್ತಿರುವ ಚಿತ್ರ ‘ಹಡ್ಡಿ’. ಸದ್ಯ ಈ ಚಿತ್ರದ ಮತ್ತೊಂದು ಪೋಸ್ಟರ್​​ ರಿವೀಲ್​ ಆಗಿದೆ. ಕೆಲ ಮಂಗಳಮುಖಿಯರ ನಡುವೆ ನಿಂತುಕೊಂಡು ಮೇಲೆ ಯಾರನ್ನೋ ನೋಡುವಂತಿದೆ ಈ ಹೊಸ ಪೋಸ್ಟರ್. ಸದ್ಯ ಈ ಹೊಸ ಲುಕ್​ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

ಸುದ್ದಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ ನವಾಜುದ್ದೀನ್ ಸಿದ್ದಿಕಿ ಮಂಗಳಮುಖಿಯವರೊಂದಿಗೆ ಸಿನಿಮಾ ಮಾಡಿರುವುದರ ಕುರಿತಾಗಿ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ. ‘ಚಿತ್ರೀಕರಣ ಸಂದರ್ಭದಲ್ಲಿ ನಾನು  ಮಂಗಳಮುಖಿ ಸಮುದಾಯದವರೊಂದಿಗಿದ್ದೆ. ಅದೊಂದು ಸಂಪೂರ್ಣ ಬೇರೆಯದೇ ಪ್ರಪಂಚವಾಗಿತ್ತು. ಪ್ರತಿನಿತ್ಯ ಸೆಟ್​​ನಲ್ಲಿ 25-30 ಜನ ಮಂಗಳಮುಖಿಯರು ಇರುತ್ತಿದ್ದರು. ಅವರು ಪ್ರಪಂಚವನ್ನು ನೋಡುವ ಪರಿಯೇ ಬೇರೆ. ತುಂಬಾನೇ ಕುತೂಹಲಕಾರಿಯಾಗಿದೆ. ಈ ಹಡ್ಡಿ ಚಿತ್ರದ ಮೂಲಕ ನಾನು ಅವರ ಕುರಿತಾಗಿ ಬಹಳ ಕಲಿತುಕೊಂಡೆ’ ಎಂದು ನವಾಜುದ್ದೀನ್ ಸಿದ್ದಿಕಿ ಸಂದರ್ಶನದಲ್ಲಿ  ಹೇಳಿದ್ದಾರೆ.

ಮತ್ತಷ್ಟು ಮನರಂಜನೆ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ