AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಂಗಳಮುಖಿಯರು ಪ್ರಪಂಚವನ್ನು ನೋಡುವ ಪರಿಯೇ ಬೇರೆ’; ನವಾಜುದ್ದೀನ್ ಸಿದ್ದಿಕಿ

ನವಾಜುದ್ದೀನ್ ಸಿದ್ದಿಕಿ ಮಂಗಳಮುಖಿಯಾಗಿ ಕಾಣಿಸಿಕೊಳ್ಳುತ್ತಿರುವ 'ಹಡ್ಡಿ' ಚಿತ್ರದ ಮತ್ತೊಂದು ಪೋಸ್ಟರ್​​ ರಿವೀಲ್​ ಆಗಿದೆ.

‘ಮಂಗಳಮುಖಿಯರು ಪ್ರಪಂಚವನ್ನು ನೋಡುವ ಪರಿಯೇ ಬೇರೆ’; ನವಾಜುದ್ದೀನ್ ಸಿದ್ದಿಕಿ
ಹಡ್ಡಿ ಚಿತ್ರದ ಹೊಸ ಪೋಸ್ಟರ್​​
TV9 Web
| Edited By: |

Updated on: Nov 19, 2022 | 4:50 PM

Share

ಭಿನ್ನ, ವಿಭಿನ್ನ ಪಾತ್ರಗಳ ಮೂಲಕ ಬಾಲಿವುಡ್​​ ಚಿತ್ರರಂಗದಲ್ಲಿ ಗುರುತಿಸಿಕೊಂಡವರ ಪೈಕಿ ನಟ ನವಾಜುದ್ದೀನ್ ಸಿದ್ದಿಕಿ (Nawazuddinsiddiqui) ಕೂಡ ಒಬ್ಬರು. ಭಿನ್ನ ಪಾತ್ರ ಆಯ್ಕೆಯಲ್ಲಿ ಅವರು ಎತ್ತಿದ ಕೈ. ಹಾಗಾಗಿಯೇ ಅವರು ಪರದೆ ಮೇಲೆ ಬಂದರೆ ಆ ಪಾತ್ರವನ್ನು ಸಂಪೂರ್ಣವಾಗಿ ಆವರಿಸಿಕೊಳ್ಳುತ್ತಾರೆ. ತಮ್ಮ ನೈಜ ಅಭಿನಯದಿಂದ ನವಾಜುದ್ದೀನ್ ಸಿದ್ದಿಕಿ ವಿಭಿನ್ನವಾಗಿ ನಿಲ್ಲುತ್ತಾರೆ. ನಟ ಟೈಗರ್​ ಶ್ರಾಫ್​ ನಟನೆಯ ‘ಹೀರೋಪಂತಿ 2’ ಚಿತ್ರ ಬಿಟ್ಟರೆ ಮತ್ತೆ ನವಾಜುದ್ದೀನ್ ಸಿದ್ದಿಕಿ ತೆರೆಮೇಲೆ ಕಾಣಿಸಿಕೊಂಡಿರಲಿಲ್ಲ. ಕೆಲ ಸಮಯ ಚಿತ್ರರಂಗದಿಂದ ಅವರು ಬ್ರೇಕ್​ ಪಡೆದುಕೊಂಡಿದ್ದರು. ಆದರೆ ಈಗ ಮತ್ತೆ ಮರಳಿದ್ದಾರೆ. ಅದು ಒಂದು ವಿಭಿನ್ನ ಪಾತ್ರದ ಮೂಲಕ ಎನ್ನುವುದು ವಿಶೇಷ.

ನಟ ನವಾಜುದ್ದೀನ್ ಸಿದ್ದಿಕಿ ಸದ್ಯ ತಮಗೆ ಸವಾಲೆನಿಸಿದ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ. ಮತ್ತು ಆ ಚಿತ್ರ ಸದ್ದಿಲ್ಲದೆ ಚಿತ್ರೀಕರಣವನ್ನು ಸಹ ಮುಗಿಸಿದೆ. ಹೌದು ಸೇಡಿನ ಕಥಾಹಂದರವುಳ್ಳ ಚಿತ್ರವಾದ ‘ಹಡ್ಡಿ’ (Haddi) ಸಿನಿಮಾದಲ್ಲಿ ಅವರು ನಟಿಸಿದ್ದಾರೆ. ಈ ಕುರಿತಾಗಿ ಹಿಂದೆ ಬೂದು ಬಣ್ಣದ ಗೌನ್ ಧರಿಸಿ, ಉದ್ದ ಕೂದಲು ಮತ್ತು ಫುಲ್​​ ಮೇಕ್ಅಪ್‌ನಲ್ಲಿದ್ದ ಲುಕ್‌ ಒಂದನ್ನು ಚಿತ್ರತಂಡ ಬಿಡುಗಡೆ ಮಾಡಿತ್ತು. ಅದು ಭಾರೀ ಕುತೂಹಲಕ್ಕೂ ಕಾರಣವಾಗಿತ್ತು. ಈಗ ಇದೇ ಚಿತ್ರದ ಮತ್ತೊಂದು ಹೊಸ ಲುಕ್ ಬಿಡುಗಡೆ ಮಾಡಲಾಗಿದೆ.

ನವಾಜುದ್ದೀನ್ ಸಿದ್ದಿಕಿ ಮಂಗಳಮುಖಿಯಾಗಿ ಕಾಣಿಸಿಕೊಳ್ಳುತ್ತಿರುವ ಚಿತ್ರ ‘ಹಡ್ಡಿ’. ಸದ್ಯ ಈ ಚಿತ್ರದ ಮತ್ತೊಂದು ಪೋಸ್ಟರ್​​ ರಿವೀಲ್​ ಆಗಿದೆ. ಕೆಲ ಮಂಗಳಮುಖಿಯರ ನಡುವೆ ನಿಂತುಕೊಂಡು ಮೇಲೆ ಯಾರನ್ನೋ ನೋಡುವಂತಿದೆ ಈ ಹೊಸ ಪೋಸ್ಟರ್. ಸದ್ಯ ಈ ಹೊಸ ಲುಕ್​ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

ಸುದ್ದಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ ನವಾಜುದ್ದೀನ್ ಸಿದ್ದಿಕಿ ಮಂಗಳಮುಖಿಯವರೊಂದಿಗೆ ಸಿನಿಮಾ ಮಾಡಿರುವುದರ ಕುರಿತಾಗಿ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ. ‘ಚಿತ್ರೀಕರಣ ಸಂದರ್ಭದಲ್ಲಿ ನಾನು  ಮಂಗಳಮುಖಿ ಸಮುದಾಯದವರೊಂದಿಗಿದ್ದೆ. ಅದೊಂದು ಸಂಪೂರ್ಣ ಬೇರೆಯದೇ ಪ್ರಪಂಚವಾಗಿತ್ತು. ಪ್ರತಿನಿತ್ಯ ಸೆಟ್​​ನಲ್ಲಿ 25-30 ಜನ ಮಂಗಳಮುಖಿಯರು ಇರುತ್ತಿದ್ದರು. ಅವರು ಪ್ರಪಂಚವನ್ನು ನೋಡುವ ಪರಿಯೇ ಬೇರೆ. ತುಂಬಾನೇ ಕುತೂಹಲಕಾರಿಯಾಗಿದೆ. ಈ ಹಡ್ಡಿ ಚಿತ್ರದ ಮೂಲಕ ನಾನು ಅವರ ಕುರಿತಾಗಿ ಬಹಳ ಕಲಿತುಕೊಂಡೆ’ ಎಂದು ನವಾಜುದ್ದೀನ್ ಸಿದ್ದಿಕಿ ಸಂದರ್ಶನದಲ್ಲಿ  ಹೇಳಿದ್ದಾರೆ.

ಮತ್ತಷ್ಟು ಮನರಂಜನೆ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?