AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ಮದುವೆಗೆ ತ್ರಿಷಾ ಹಾಜರಿ; ಕೇಡು ಬಯಸಿದ ನಟನ ಮಗಳ ಜೊತೆ ನಟಿ ಪೋಸ್

ನಟಿ ತ್ರಿಷಾ ಕೃಷ್ಣನ್ ಇತ್ತೀಚೆಗೆ ಸೆಲೆಬ್ರಿಟಿ ಸ್ಟೈಲಿಸ್ಟ್ ಎಕಾ ಲಖಾನಿ ವಿವಾಹದಲ್ಲಿ ಪಾಲ್ಗೊಂಡರು. ಈ ಸಮಾರಂಭದಲ್ಲಿ ಅವರು ನಟ ಪಾರ್ಥಿಬನ್ ಪುತ್ರಿ ಕೀರ್ತನಾ ಜೊತೆ ಕಾಣಿಸಿಕೊಂಡರು. ವಿಜಯ್ ಜೊತೆಗಿನ ತ್ರಿಷಾ ಒಡನಾಟದ ಬಗ್ಗೆ ಪಾರ್ಥಿಬನ್ ಟೀಕಿಸಿದ್ದ ಹಿನ್ನೆಲೆಯಲ್ಲಿ ಇದು ಗಮನ ಸೆಳೆದಿದೆ. ಮಣಿರತ್ನಂ ಅವರನ್ನು ಸಹ ಭೇಟಿಯಾದ ತ್ರಿಷಾ ಫೋಟೋಗಳು ವೈರಲ್ ಆಗಿದ್ದು, ವಿಜಯ್ ಅನುಪಸ್ಥಿತಿ ಬಗ್ಗೆ ಚರ್ಚೆಯಾಗಿದೆ.

ಮತ್ತೊಂದು ಮದುವೆಗೆ ತ್ರಿಷಾ ಹಾಜರಿ; ಕೇಡು ಬಯಸಿದ ನಟನ ಮಗಳ ಜೊತೆ ನಟಿ ಪೋಸ್
ತ್ರಿಷಾ
ರಾಜೇಶ್ ದುಗ್ಗುಮನೆ
|

Updated on:Mar 16, 2026 | 1:25 PM

Share

ನಟಿ ತ್ರಿಷಾ ಅವರು ಇತ್ತೀಚೆಗೆ ಸುದ್ದಿ ಆಗಿದ್ದರು. ಇದಕ್ಕೆ ಕಾರಣ ಅವರು ವಿವಾಹದಲ್ಲಿ ಭಾಗಿ ಆಗಿದ್ದು. ಚೆನ್ನೈನಲ್ಲಿ ನಡೆದ ವಿವಾಹದಲ್ಲಿ ದಳಪತಿ ವಿಜಯ್ ಜೊತೆ ತ್ರಿಷಾ ಹಾಜರಿ ಹಾಕಿದ್ದರು. ಇದು ಚರ್ಚೆ ಹುಟ್ಟುಹಾಕಿತ್ತು. ಈಗ ತ್ರಿಷಾ ಮತ್ತೊಂದು ವಿವಾಹದಲ್ಲಿ ಪಾಲ್ಗೊಂಡಿದ್ದಾರೆ. ಹಾಗಂತ ಈ ಮದುವೆಯಲ್ಲಿ ವಿಜಯ್ ಹಾಜರಿ ಹಾಕಿಲ್ಲ. ತಮ್ಮ ಆಪ್ತ ಬಳಗದವರ ಜೊತೆ ತ್ರಿಷಾ ಕಾಣಿಸಿಕೊಂಡಿದ್ದಾರೆ.

ಸೆಲೆಬ್ರಿಟಿ ಸ್ಟೈಲಿಸ್ಟ್ ಎಕಾ ಲಖಾನಿ ಅವರು ನಿರ್ಮಾಪಕ ರವಿ ಭಾಗ್ಚಂದ್ಕಾ ಜೊತೆ ಮದುವೆ ಆದರು. ಮುಂಬೈನಲ್ಲಿ ಮಾರ್ಚ್ 14ರಂದು ಈ ಮದುವೆ ನಡೆಯಿತು. ಚಿತ್ರರಂಗದ ಅನೇಕರು ಇದರಲ್ಲಿ ಭಾಗಿ ಆಗಿದ್ದರು. ಇದರಲ್ಲಿ ತ್ರಿಷಾ ಕೃಷ್ಣನ್ ಕೂಡ ಒಬ್ಬರು. ತ್ರಿಷಾ ಅವರು ವಿವಾಹದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ಗಮನ ಸೆಳೆದಿದೆ.

ತ್ರಿಷಾ ಜೊತೆ ಪಾರ್ಥಿಬನ್ ಮಗಳು ಕೀರ್ತನಾ ಕೂಡ ಇದ್ದರು ಎಂಬುದು ವಿಶೇಷ. ಪಾರ್ಥಿಬನ್ ತಮಿಳು ನಟ. ಅವರ ಜೊತೆ ಕೀರ್ತನಾ ಕಾಣಿಸಿಕೊಂಡರೆ ಸಮಸ್ಯೆ ಏನು ಎಂಬ ಪ್ರಶ್ನೆ ಅನೇಕರಿಗೆ ಬರಬಹುದು. ಅದಕ್ಕೂ ಉತ್ತರ ಇದೆ. ಇತ್ತೀಚೆಗೆ ವಿಜಯ್ ಜೊತೆ ತ್ರಿಷಾ ಕಾಣಿಸಿಕೊಂಡಾಗ ಪಾರ್ಥಿಬನ್ ಅವರು ಇದನ್ನು ಟೀಕೆ ಮಾಡಿದ್ದರು. ‘ತ್ರಿಷಾ ಸ್ವಲ್ಪ ದಿನ ಮನೆಯಲ್ಲಿರೋದು ಉತ್ತಮ’ ಎಂಬರ್ಥದಲ್ಲಿ ಮಾತನಾಡಿದ್ದರು.

ಈ ಘಟನೆ ಬೆನ್ನಲ್ಲೇ ತ್ರಿಷಾ ಅವರು ಪಾರ್ಥಿಬನ್ ಮನೆಯವರ ಜೊತೆ ಕಾಣಿಸಿಕೊಂಡಿದ್ದು ವಿಶೇಷ. ಸೋಶಿಯಲ್ ಮೀಡಿಯಾದಲ್ಲಿ ತ್ರಿಷಾ ಫೋಟೋ ಹಚಿಕೊಂಡಿದ್ದು, ಅವರು ನವ ದಂಪತಿಗೆ ವಿಶ್ ಮಾಡಿದ್ದಾರೆ.

ಇದನ್ನೂ ಓದಿ: ‘ನನಗೆ ವಿಚ್ಛೆದನ ಬಗ್ಗೆ ನಂಬಿಕೆ ಇಲ್ಲ, ಮದುವೆಗೂ ಮೊದಲು ನೂರು ಬಾರಿ ಯೋಚಿಸುವೆ’; ತ್ರಿಷಾ

ಈ ಮದುವೆಯಲ್ಲಿ ನಿರ್ದೇಶಕ ಮಣಿರತ್ನಂ ಅವರನ್ನು ತ್ರಿಷಾ ಭೇಟಿ ಮಾಡಿದರು. ಈ ಮೊದಲು ಇಬ್ಬರೂ ‘ಪೊನ್ನಿಯನ್ ಸೆಲ್ವನ್’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದರು. ಈ ಫೋಟೋ ವೈರಲ್ ಆದ ಬೆನ್ನಲ್ಲೇ ‘ವಿಜಯ್ ಮದುವೆಗೆ ಬಂದಿಲ್ಲವೇ’ ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಈ ಮೂಲಕ ಮಣಿರತ್ನಂ ಅವರು ತ್ರಿಷಾ ಕಾಲೆಳೆದಿದ್ದಾರೆ. ಇನ್ನೂ ಕೆಲವರು ವೈರಿಗಳ ಮಗಳ ಜೊತೆ ತ್ರಿಷಾ ಪೋಸ್ ಕೊಟ್ಟಿದ್ದಾರೆ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:25 pm, Mon, 16 March 26

Follow Us
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಎಲ್​ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಎಲ್​ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ
ಕಾಳಸಂತೆಯಲ್ಲಿ ಸಿಲಿಂಡರ್ ಸೇಲ್ ! ಗ್ಯಾಸ್​ ದಂಧೆಕೋರರ ವಿರುದ್ಧ 3 ಎಫ್​ಐಆರ್
ಕಾಳಸಂತೆಯಲ್ಲಿ ಸಿಲಿಂಡರ್ ಸೇಲ್ ! ಗ್ಯಾಸ್​ ದಂಧೆಕೋರರ ವಿರುದ್ಧ 3 ಎಫ್​ಐಆರ್
ಬನ್ನೇರುಘಟ್ಟ ಝೂಗೆ ಹೊಸ ಅತಿಥಿಗಳ ಆಗಮನ: ಇಲ್ಲಿದೆ ವಿಡಿಯೋ
ಬನ್ನೇರುಘಟ್ಟ ಝೂಗೆ ಹೊಸ ಅತಿಥಿಗಳ ಆಗಮನ: ಇಲ್ಲಿದೆ ವಿಡಿಯೋ
ವೀಕೆಂಡ್​ನಲ್ಲೂ ನಂದಿ ಹಿಲ್ಸ್ ಖಾಲಿ! ಊಟ-ತಿಂಡಿ ಸಿಗಲ್ಲ ಎಂದು ಬಾರದ ಜನ
ವೀಕೆಂಡ್​ನಲ್ಲೂ ನಂದಿ ಹಿಲ್ಸ್ ಖಾಲಿ! ಊಟ-ತಿಂಡಿ ಸಿಗಲ್ಲ ಎಂದು ಬಾರದ ಜನ
ಪಾಕ್ ಪಡೆಯನ್ನು ಮಕಾಡೆ ಮಲಗಿಸಿ ಹೊಸ ಇತಿಹಾಸ ಬರೆದ ಬಾಂಗ್ಲಾದೇಶ್
ಪಾಕ್ ಪಡೆಯನ್ನು ಮಕಾಡೆ ಮಲಗಿಸಿ ಹೊಸ ಇತಿಹಾಸ ಬರೆದ ಬಾಂಗ್ಲಾದೇಶ್
ಚಿಕ್ಕಮಗಳೂರು, ಬೀದರ್, ಬೆಳಗಾವಿ, ಮಡಿಕೇರಿ ಸೇರಿ ಕರ್ನಾಟಕದ ಹಲವೆಡೆ ಮಳೆ
ಚಿಕ್ಕಮಗಳೂರು, ಬೀದರ್, ಬೆಳಗಾವಿ, ಮಡಿಕೇರಿ ಸೇರಿ ಕರ್ನಾಟಕದ ಹಲವೆಡೆ ಮಳೆ