AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ರಿಷಾ ಸಹ ಆಗಲಿದ್ದಾರೆ ಶಾಸಕಿ, ವಿಜಯ್ ಕ್ಷೇತ್ರದಿಂದಲೇ ಸ್ಪರ್ಧೆ?

Trisha Krishnan: ವಿಜಯ್ ಅವರು ನಟಿ ತ್ರಿಷಾ ಜೊತೆಗೆ ಆಪ್ತ ಸಂಬಂಧ ಹೊಂದಿರುವುದು ಈಗ ಗುಟ್ಟೇನೂ ಅಲ್ಲ. ವಿಜಯ್ ಅವರ ಪತ್ನಿ ಸಹ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದಾರೆ. ತ್ರಿಷಾ ಅವರ ಹುಟ್ಟುಹಬ್ಬದ ದಿನವೇ ವಿಜಯ್ ಅವರ ಪಕ್ಷ ಗೆಲುವು ಸಾಧಿಸಿದ್ದು, ಇದೀಗ ತ್ರಿಷಾ ಸಹ ಶಾಸಕಿ ಆಗುವ ಆ ಬಳಿಕ ಸಚಿವೆ ಆಗುವ ಸಾಧ್ಯತೆ ಸಹ ಇದೆ ಎನ್ನಲಾಗುತ್ತಿದೆ.

ತ್ರಿಷಾ ಸಹ ಆಗಲಿದ್ದಾರೆ ಶಾಸಕಿ, ವಿಜಯ್ ಕ್ಷೇತ್ರದಿಂದಲೇ ಸ್ಪರ್ಧೆ?
Vijay Trisha
ಮಂಜುನಾಥ ಸಿ.
|

Updated on: May 06, 2026 | 10:32 PM

Share

ತಮಿಳು ಚಿತ್ರರಂಗದ ಸ್ಟಾರ ನಟ ವಿಜಯ್ (Vijay) ಅವರ ಟಿವಿಕೆ ಪಕ್ಷ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದೆ. ವಿಜಯ್ ಅವರು ನಾಳೆ (ಮೇ 07) ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡುವ ಸಾಧ್ಯತೆ ಇದೆ. ವಿಜಯ್ ಅವರು ನಟಿ ತ್ರಿಷಾ ಜೊತೆಗೆ ಆಪ್ತ ಸಂಬಂಧ ಹೊಂದಿರುವುದು ಈಗ ಗುಟ್ಟೇನೂ ಅಲ್ಲ. ವಿಜಯ್ ಅವರ ಪತ್ನಿ ಸಹ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದಾರೆ. ತ್ರಿಷಾ ಅವರ ಹುಟ್ಟುಹಬ್ಬದ ದಿನವೇ ವಿಜಯ್ ಅವರ ಪಕ್ಷ ಗೆಲುವು ಸಾಧಿಸಿದ್ದು, ಇದೀಗ ತ್ರಿಷಾ ಸಹ ಶಾಸಕಿ ಆಗುವ ಆ ಬಳಿಕ ಸಚಿವೆ ಆಗುವ ಸಾಧ್ಯತೆ ಸಹ ಇದೆ ಎನ್ನಲಾಗುತ್ತಿದೆ.

ದಳಪತಿ ವಿಜಯ್ ಅವರು ತಮಿಳುನಾಡು ಚುನಾವಣೆಯಲ್ಲಿ ಎರಡು ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರು. ಪೆರಂಬೂರು ಮತ್ತು ಈಸ್ಟ್ ತಿರುಚ್ಚಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿ ಎರಡೂ ಕಡೆಯೂ ವಿಜೇತರಾಗಿದ್ದಾರೆ. ನಿಯಮದ ಅನುಸಾರ ಈಗ ವಿಜಯ್ ಅವರು ಒಂದು ಕ್ಷೇತ್ರಕ್ಕೆ ರಾಜೀನಾಮೆ ಸಲ್ಲಿಸಬೇಕಿದ್ದು, ಅಲ್ಲಿ ಮರು ಚುನಾವಣೆ ನಡೆಯಲಿದೆ. ಮೂಲಗಳ ಪ್ರಕಾರ, ವಿಜಯ್ ಅವರು ಪೆರಂಬೂರು ಕ್ಷೇತ್ರವನ್ನು ಉಳಿಸಿಕೊಂಡು, ಈಸ್ಟ್ ತಿರುಚ್ಚಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗುತ್ತಿದೆ. ಈಸ್ಟ್ ತಿರುಚ್ಚಿ ಕ್ಷೇತ್ರದಿಂದ ತಮ್ಮ ಆಪ್ತೆ ತ್ರಿಷಾ ಕೃಷ್ಣನ್ ಅವರನ್ನು ಚುನಾವಣೆಗೆ ನಿಲ್ಲಿಸಿ ಗೆಲ್ಲಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಇದನ್ನೂ ಓದಿ:ದಳಪತಿ ವಿಜಯ್ ಗೆದ್ದಿದ್ದಕ್ಕೆ ದುನಿಯಾ ವಿಜಿ ಹೇಳಿದ್ದೇನು?

ಜ್ಯೋತಿಷಿ ಪ್ರಶಾಂತ್ ಕಿಣಿ ಸಹ ಈ ಬಗ್ಗೆ ಭವಿಷ್ಯ ನುಡಿದಿದ್ದು, ನಟಿ ತ್ರಿಷಾ ಚುನಾವಣೆಗೆ ಸ್ಪರ್ಧಿಸಿ ಯಶಸ್ಸು ಗಳಿಸುತ್ತಾರೆ ಎಂದಿದ್ದಾರೆ. ಒಂದೊಮ್ಮೆ ತ್ರಿಷಾ ಅವರನ್ನು ವಿಜಯ್, ಚುನಾವಣೆಗೆ ನಿಲ್ಲಿಸಿದ್ದೇ ಆದಲ್ಲಿ ಅವರು ಗೆಲ್ಲುವುದು ಪಕ್ಕಾ ಆಗಲಿದೆ. ಮಾತ್ರವಲ್ಲದೆ, ಅವರಿಗೆ ಸಚಿವ ಸ್ಥಾನ ದೊರೆತರೂ ಆಶ್ಚರ್ಯವಿಲ್ಲ.

ಕೆಲ ವಾರಗಳ ಹಿಂದೆ ತ್ರಿಷಾ ಅವರ ಹಳೆಯ ವಿಡಿಯೋ ಒಂದು ವೈರಲ್ ಆಗಿತ್ತು. ವಿಡಿಯೋನಲ್ಲಿ ತ್ರಿಷಾ ಅವರು ತಮಗೆ ತಮಿಳುನಾಡಿನ ಸಿಎಂ ಆಗಬೇಕೆಂಬ ಆಸೆ ಇದೆ ಎಂದು ಹೇಳಿದ್ದರು. ಈಗ ನೋಡಿದರೆ ಅವರ ಆಪ್ತರಾಗಿರುವ ವಿಜಯ್ ಸಿಎಂ ಆಗಲಿದ್ದು, ತ್ರಿಷಾ ಅವರ ಆಸೆಯೂ ಸಹ ಮುಂದಿನ ದಿನಗಳಲ್ಲಿ ನೆರವೇರುವ ಸಾಧ್ಯತೆ ಗೋಚರಿಸುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಟಿಎಂಸಿ ಗೂಂಡಾಗಳ ದೌರ್ಜನ್ಯವನ್ನು ಬಿಜೆಪಿ ಸಹಿಸುವುದಿಲ್ಲ; ಸುವೇಂದು ಅಧಿಕಾರಿ
ಟಿಎಂಸಿ ಗೂಂಡಾಗಳ ದೌರ್ಜನ್ಯವನ್ನು ಬಿಜೆಪಿ ಸಹಿಸುವುದಿಲ್ಲ; ಸುವೇಂದು ಅಧಿಕಾರಿ
ಎರಡುವರೆ ವರ್ಷ ಬಳಿಕ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ ಜೀವರಾಜ್
ಎರಡುವರೆ ವರ್ಷ ಬಳಿಕ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ ಜೀವರಾಜ್
ಮೇ 10ರಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ: ಏನು ವಿಶೇಷ?
ಮೇ 10ರಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ: ಏನು ವಿಶೇಷ?
ಸಿಕ್ಕ ಸಿಕ್ಕ ಗೋಡೆ ನೋಡಿ ಮೂತ್ರ ವಿಸರ್ಜನೆ ಮಾಡ್ತೀರಾ? ಹುಷಾರ್
ಸಿಕ್ಕ ಸಿಕ್ಕ ಗೋಡೆ ನೋಡಿ ಮೂತ್ರ ವಿಸರ್ಜನೆ ಮಾಡ್ತೀರಾ? ಹುಷಾರ್
ಬಡ್ತಿ ಪರೀಕ್ಷೆಯಲ್ಲೂ ಕನ್ನಡಕ್ಕೆ ಅವಕಾಶ ನೀಡದ ರೈಲ್ವೆ ಇಲಾಖೆ
ಬಡ್ತಿ ಪರೀಕ್ಷೆಯಲ್ಲೂ ಕನ್ನಡಕ್ಕೆ ಅವಕಾಶ ನೀಡದ ರೈಲ್ವೆ ಇಲಾಖೆ
ಡಾಬಸ್ ಪೇಟೆ ಬಳಿ ಸರಣಿ ಅಪಘಾತ: ಇಬ್ಬರ ಸ್ಥಿತಿ ಗಂಭೀರ
ಡಾಬಸ್ ಪೇಟೆ ಬಳಿ ಸರಣಿ ಅಪಘಾತ: ಇಬ್ಬರ ಸ್ಥಿತಿ ಗಂಭೀರ
ಪ್ರಮಾಣ ವಚನಕ್ಕೆ ಸಿದ್ಧತೆ ನಡೆಸಿದ್ದ ವಿಜಯ್‌ಗೆ ಬಿಗ್‌ ಶಾಕ್‌
ಪ್ರಮಾಣ ವಚನಕ್ಕೆ ಸಿದ್ಧತೆ ನಡೆಸಿದ್ದ ವಿಜಯ್‌ಗೆ ಬಿಗ್‌ ಶಾಕ್‌
ದಾವಣಗೆರೆ: ಕಾಂಗ್ರೆಸ್​​ ಗೆಲುವಿಗೆ ಕಾರಣ ಯಾರು? ಜಬ್ಬಾರ್​ ಹೇಳಿದ್ದಿಷ್ಟು
ದಾವಣಗೆರೆ: ಕಾಂಗ್ರೆಸ್​​ ಗೆಲುವಿಗೆ ಕಾರಣ ಯಾರು? ಜಬ್ಬಾರ್​ ಹೇಳಿದ್ದಿಷ್ಟು
ಸರಿಪಡಿಸದಿದ್ರೆ ‌ಮತ್ತೆ ಅನಾಹುತಗಳಾಗುತ್ತೆ: ಕೈಗೆ ಜಬ್ಬಾರ್ ಎಚ್ಚರಿಕೆ
ಸರಿಪಡಿಸದಿದ್ರೆ ‌ಮತ್ತೆ ಅನಾಹುತಗಳಾಗುತ್ತೆ: ಕೈಗೆ ಜಬ್ಬಾರ್ ಎಚ್ಚರಿಕೆ
ಮದುವೆ ಬಗ್ಗೆ ನೂತನ ಶಾಸಕ ಸಮರ್ಥ್ ಶಾಮನೂರು ಹೇಳಿದ್ದೇನು?
ಮದುವೆ ಬಗ್ಗೆ ನೂತನ ಶಾಸಕ ಸಮರ್ಥ್ ಶಾಮನೂರು ಹೇಳಿದ್ದೇನು?