AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಪ್ ಕಮೆಂಟ್: ಕೊನೆಗೂ ನಟಿ ತ್ರಿಷಾ ಬಳಿ ಕ್ಷಮೆ ಕೇಳಿದ ಮನ್ಸೂರ್ ಅಲಿ ಖಾನ್

ದಳಪತಿ ವಿಜಯ್​ ನಟನೆಯ ‘ಲಿಯೋ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಈ ಸಿನಿಮಾದಲ್ಲಿ ತ್ರಿಷಾ ಅವರು ವಿಜಯ್ ಪತ್ನಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರದಲ್ಲಿ ಮನ್ಸೂರ್​ ಅಲಿ ಖಾನ್​ ವಿಲನ್ ಪಾತ್ರದಲ್ಲಿ ನಟಿಸಿದ್ದರು.

ರೇಪ್ ಕಮೆಂಟ್: ಕೊನೆಗೂ ನಟಿ ತ್ರಿಷಾ ಬಳಿ ಕ್ಷಮೆ ಕೇಳಿದ ಮನ್ಸೂರ್ ಅಲಿ ಖಾನ್
ತ್ರಿಷಾ-ಮನ್ಸೂರ್
ರಾಜೇಶ್ ದುಗ್ಗುಮನೆ
|

Updated on:Nov 24, 2023 | 2:00 PM

Share

‘ತ್ರಿಷಾ (Trisha Krishnan) ಅವರನ್ನು ರೇಪ್ ಮಾಡುವ ದೃಶ್ಯ ಸಿಗಲಿಲ್ಲ’ ಎಂಬರ್ಥದಲ್ಲಿ ಮಾತನಾಡುವ ಮೂಲಕ ವಿವಾದ ಸೃಷ್ಟಿ ಮಾಡಿದ್ದ ನಟ ಮನ್ಸೂರ್ ಅಲಿ ಖಾನ್ ಅವರು ಕೊನೆಗೂ ಕ್ಷಮೆ ಕೇಳಿದ್ದಾರೆ. ನಟಿ ತ್ರಿಷಾ ಬಗ್ಗೆ ನೀಡಿದ್ದ ಈ ಹೇಳಿಕೆಗೆ ಸಂಬಂಧಿಸಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಚೆನ್ನೈ ಪೊಲೀಸರು ಮನ್ಸೂರ್ ಅವರನ್ನು ಅರೆಸ್ಟ್ ಮಾಡಿ ವಿಚಾರಣೆ ನಡೆಸಿದ್ದರು. ಈ ಬೆನ್ನಲ್ಲೇ ಮನ್ಸೂರ್ ಅಲಿ ಖಾನ್ ಅವರು ಕ್ಷಮೆ ಕೇಳಿದ್ದಾರೆ.

ದಳಪತಿ ವಿಜಯ್​ ನಟನೆಯ ‘ಲಿಯೋ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಈ ಸಿನಿಮಾದಲ್ಲಿ ತ್ರಿಷಾ ಅವರು ವಿಜಯ್ ಪತ್ನಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರದಲ್ಲಿ ಮನ್ಸೂರ್​ ಅಲಿ ಖಾನ್​ ವಿಲನ್ ಪಾತ್ರದಲ್ಲಿ ನಟಿಸಿದ್ದರು. ‘ತ್ರಿಷಾ ಜೊತೆ ನಟಿಸುತ್ತೇನೆ ಎಂದಾಗ ಬೆಡ್​ರೂಂ ದೃಶ್ಯ ಇರಬಹುದು ಎಂದು ನಾನು ಭಾವಿಸಿದೆ. ಈ ಮೊದಲ ಸಿನಿಮಾಗಳಲ್ಲಿ ನಟಿಯರನ್ನು ಬೆಡ್​ರೂಂಗೆ ಕರೆದುಕೊಂಡು ಹೋಗುವ ದೃಶ್ಯ ಇತ್ತು. ಈ ಸಿನಿಮಾದಲ್ಲೂ ಹಾಗೆಯೇ ಇರಬಹುದು ಎಂದುಕೊಂಡಿದ್ದೆ. ನಾನು ಹಲವು ರೇಪ್ ದೃಶ್ಯಗಳನ್ನು ಮಾಡಿದ್ದೇನೆ. ಅದು ನನಗೆ ಹೊಸದಲ್ಲ. ಆದರೆ, ಈ ಚಿತ್ರದಲ್ಲಿ ಅವರನ್ನು ನೋಡಲೂ ಅವಕಾಶ ಕೊಡಲಿಲ್ಲ’ ಎಂದಿದ್ದರು ಮನ್ಸೂರ್ ಅಲಿ ಖಾನ್.

ಇದನ್ನೂ ಓದಿ: ತ್ರಿಷಾ ಬಗ್ಗೆ ಕೀಳು ಹೇಳಿಕೆ ನೀಡಿದ ನಟ ಮನ್ಸೂರ್​ ಅಲಿ ಖಾನ್​ ವಿರುದ್ಧ ಲೈಂಗಿಕ ಕಿರುಕುಳದ ಕೇಸ್​ ದಾಖಲು

ಈಗ ವಿಚಾರಣೆ ಬಳಿಕ ಮನ್ಸೂರ್ ಅವರು ಕ್ಷಮೆ ಕೇಳಿದ್ದಾರೆ ಎನ್ನಲಾಗಿದೆ.  ‘ಸಹನಟಿ ತ್ರಿಷಾ ಅವರೇ ನನ್ನನ್ನು ಕ್ಷಮಿಸಿ’ ಎಂದು ಮನ್ಸೂರ್ ಹೇಳಿರುವುದಾಗಿ ಟ್ರೇಡ್ ಅನಲಿಸ್ಟ್​ ರಮೇಶ್ ಬಾಲಾ ಟ್ವೀಟ್ ಮಾಡಿದ್ದಾರೆ.

ಪ್ರತಿಕ್ರಿಯೆ ನೀಡಿದ್ದ ತ್ರಿಷಾ

ಮನ್ಸೂರ್​ ಅಲಿ ಖಾನ್ ಹೇಳಿಕೆ ಬಗ್ಗೆ ತ್ರಿಷಾ ಪ್ರತಿಕ್ರಿಯೆ ನೀಡಿದ್ದರು. ಅವರ ಮಾತು ತ್ರಿಷಾ ಗಮನಕ್ಕೆ ಬಂದಿದೆ. ಈ ಹೇಳಿಕೆಯನ್ನು ಅವರು ಖಂಡಿಸಿದ್ದಾರೆ. ಜೊತೆಗೆ ಮುಂದೆಂದೂ ಅವರ ಜೊತೆ ನಟಿಸುವುದಿಲ್ಲ ಎಂದು ಶಪಥ ಮಾಡಿದ್ದಾರೆ ತ್ರಿಷಾ. ಇಂಥ ಜನರು ಇಡೀ ಮನುಷ್ಯಕುಲಕ್ಕೆ ಕೆಟ್ಟ ಹೆಸರು ತರುತ್ತಾರೆ ಎಂದು ತ್ರಿಷಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:21 pm, Fri, 24 November 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ