AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಪ್ ಕಮೆಂಟ್: ಕೊನೆಗೂ ನಟಿ ತ್ರಿಷಾ ಬಳಿ ಕ್ಷಮೆ ಕೇಳಿದ ಮನ್ಸೂರ್ ಅಲಿ ಖಾನ್

ದಳಪತಿ ವಿಜಯ್​ ನಟನೆಯ ‘ಲಿಯೋ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಈ ಸಿನಿಮಾದಲ್ಲಿ ತ್ರಿಷಾ ಅವರು ವಿಜಯ್ ಪತ್ನಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರದಲ್ಲಿ ಮನ್ಸೂರ್​ ಅಲಿ ಖಾನ್​ ವಿಲನ್ ಪಾತ್ರದಲ್ಲಿ ನಟಿಸಿದ್ದರು.

ರೇಪ್ ಕಮೆಂಟ್: ಕೊನೆಗೂ ನಟಿ ತ್ರಿಷಾ ಬಳಿ ಕ್ಷಮೆ ಕೇಳಿದ ಮನ್ಸೂರ್ ಅಲಿ ಖಾನ್
ತ್ರಿಷಾ-ಮನ್ಸೂರ್
ರಾಜೇಶ್ ದುಗ್ಗುಮನೆ
|

Updated on:Nov 24, 2023 | 2:00 PM

Share

‘ತ್ರಿಷಾ (Trisha Krishnan) ಅವರನ್ನು ರೇಪ್ ಮಾಡುವ ದೃಶ್ಯ ಸಿಗಲಿಲ್ಲ’ ಎಂಬರ್ಥದಲ್ಲಿ ಮಾತನಾಡುವ ಮೂಲಕ ವಿವಾದ ಸೃಷ್ಟಿ ಮಾಡಿದ್ದ ನಟ ಮನ್ಸೂರ್ ಅಲಿ ಖಾನ್ ಅವರು ಕೊನೆಗೂ ಕ್ಷಮೆ ಕೇಳಿದ್ದಾರೆ. ನಟಿ ತ್ರಿಷಾ ಬಗ್ಗೆ ನೀಡಿದ್ದ ಈ ಹೇಳಿಕೆಗೆ ಸಂಬಂಧಿಸಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಚೆನ್ನೈ ಪೊಲೀಸರು ಮನ್ಸೂರ್ ಅವರನ್ನು ಅರೆಸ್ಟ್ ಮಾಡಿ ವಿಚಾರಣೆ ನಡೆಸಿದ್ದರು. ಈ ಬೆನ್ನಲ್ಲೇ ಮನ್ಸೂರ್ ಅಲಿ ಖಾನ್ ಅವರು ಕ್ಷಮೆ ಕೇಳಿದ್ದಾರೆ.

ದಳಪತಿ ವಿಜಯ್​ ನಟನೆಯ ‘ಲಿಯೋ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಈ ಸಿನಿಮಾದಲ್ಲಿ ತ್ರಿಷಾ ಅವರು ವಿಜಯ್ ಪತ್ನಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರದಲ್ಲಿ ಮನ್ಸೂರ್​ ಅಲಿ ಖಾನ್​ ವಿಲನ್ ಪಾತ್ರದಲ್ಲಿ ನಟಿಸಿದ್ದರು. ‘ತ್ರಿಷಾ ಜೊತೆ ನಟಿಸುತ್ತೇನೆ ಎಂದಾಗ ಬೆಡ್​ರೂಂ ದೃಶ್ಯ ಇರಬಹುದು ಎಂದು ನಾನು ಭಾವಿಸಿದೆ. ಈ ಮೊದಲ ಸಿನಿಮಾಗಳಲ್ಲಿ ನಟಿಯರನ್ನು ಬೆಡ್​ರೂಂಗೆ ಕರೆದುಕೊಂಡು ಹೋಗುವ ದೃಶ್ಯ ಇತ್ತು. ಈ ಸಿನಿಮಾದಲ್ಲೂ ಹಾಗೆಯೇ ಇರಬಹುದು ಎಂದುಕೊಂಡಿದ್ದೆ. ನಾನು ಹಲವು ರೇಪ್ ದೃಶ್ಯಗಳನ್ನು ಮಾಡಿದ್ದೇನೆ. ಅದು ನನಗೆ ಹೊಸದಲ್ಲ. ಆದರೆ, ಈ ಚಿತ್ರದಲ್ಲಿ ಅವರನ್ನು ನೋಡಲೂ ಅವಕಾಶ ಕೊಡಲಿಲ್ಲ’ ಎಂದಿದ್ದರು ಮನ್ಸೂರ್ ಅಲಿ ಖಾನ್.

ಇದನ್ನೂ ಓದಿ: ತ್ರಿಷಾ ಬಗ್ಗೆ ಕೀಳು ಹೇಳಿಕೆ ನೀಡಿದ ನಟ ಮನ್ಸೂರ್​ ಅಲಿ ಖಾನ್​ ವಿರುದ್ಧ ಲೈಂಗಿಕ ಕಿರುಕುಳದ ಕೇಸ್​ ದಾಖಲು

ಈಗ ವಿಚಾರಣೆ ಬಳಿಕ ಮನ್ಸೂರ್ ಅವರು ಕ್ಷಮೆ ಕೇಳಿದ್ದಾರೆ ಎನ್ನಲಾಗಿದೆ.  ‘ಸಹನಟಿ ತ್ರಿಷಾ ಅವರೇ ನನ್ನನ್ನು ಕ್ಷಮಿಸಿ’ ಎಂದು ಮನ್ಸೂರ್ ಹೇಳಿರುವುದಾಗಿ ಟ್ರೇಡ್ ಅನಲಿಸ್ಟ್​ ರಮೇಶ್ ಬಾಲಾ ಟ್ವೀಟ್ ಮಾಡಿದ್ದಾರೆ.

ಪ್ರತಿಕ್ರಿಯೆ ನೀಡಿದ್ದ ತ್ರಿಷಾ

ಮನ್ಸೂರ್​ ಅಲಿ ಖಾನ್ ಹೇಳಿಕೆ ಬಗ್ಗೆ ತ್ರಿಷಾ ಪ್ರತಿಕ್ರಿಯೆ ನೀಡಿದ್ದರು. ಅವರ ಮಾತು ತ್ರಿಷಾ ಗಮನಕ್ಕೆ ಬಂದಿದೆ. ಈ ಹೇಳಿಕೆಯನ್ನು ಅವರು ಖಂಡಿಸಿದ್ದಾರೆ. ಜೊತೆಗೆ ಮುಂದೆಂದೂ ಅವರ ಜೊತೆ ನಟಿಸುವುದಿಲ್ಲ ಎಂದು ಶಪಥ ಮಾಡಿದ್ದಾರೆ ತ್ರಿಷಾ. ಇಂಥ ಜನರು ಇಡೀ ಮನುಷ್ಯಕುಲಕ್ಕೆ ಕೆಟ್ಟ ಹೆಸರು ತರುತ್ತಾರೆ ಎಂದು ತ್ರಿಷಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:21 pm, Fri, 24 November 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ