ರೇಪ್ ಕಮೆಂಟ್: ಕೊನೆಗೂ ನಟಿ ತ್ರಿಷಾ ಬಳಿ ಕ್ಷಮೆ ಕೇಳಿದ ಮನ್ಸೂರ್ ಅಲಿ ಖಾನ್

ದಳಪತಿ ವಿಜಯ್​ ನಟನೆಯ ‘ಲಿಯೋ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಈ ಸಿನಿಮಾದಲ್ಲಿ ತ್ರಿಷಾ ಅವರು ವಿಜಯ್ ಪತ್ನಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರದಲ್ಲಿ ಮನ್ಸೂರ್​ ಅಲಿ ಖಾನ್​ ವಿಲನ್ ಪಾತ್ರದಲ್ಲಿ ನಟಿಸಿದ್ದರು.

ರೇಪ್ ಕಮೆಂಟ್: ಕೊನೆಗೂ ನಟಿ ತ್ರಿಷಾ ಬಳಿ ಕ್ಷಮೆ ಕೇಳಿದ ಮನ್ಸೂರ್ ಅಲಿ ಖಾನ್
ತ್ರಿಷಾ-ಮನ್ಸೂರ್
Follow us
|

Updated on:Nov 24, 2023 | 2:00 PM

‘ತ್ರಿಷಾ (Trisha Krishnan) ಅವರನ್ನು ರೇಪ್ ಮಾಡುವ ದೃಶ್ಯ ಸಿಗಲಿಲ್ಲ’ ಎಂಬರ್ಥದಲ್ಲಿ ಮಾತನಾಡುವ ಮೂಲಕ ವಿವಾದ ಸೃಷ್ಟಿ ಮಾಡಿದ್ದ ನಟ ಮನ್ಸೂರ್ ಅಲಿ ಖಾನ್ ಅವರು ಕೊನೆಗೂ ಕ್ಷಮೆ ಕೇಳಿದ್ದಾರೆ. ನಟಿ ತ್ರಿಷಾ ಬಗ್ಗೆ ನೀಡಿದ್ದ ಈ ಹೇಳಿಕೆಗೆ ಸಂಬಂಧಿಸಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಚೆನ್ನೈ ಪೊಲೀಸರು ಮನ್ಸೂರ್ ಅವರನ್ನು ಅರೆಸ್ಟ್ ಮಾಡಿ ವಿಚಾರಣೆ ನಡೆಸಿದ್ದರು. ಈ ಬೆನ್ನಲ್ಲೇ ಮನ್ಸೂರ್ ಅಲಿ ಖಾನ್ ಅವರು ಕ್ಷಮೆ ಕೇಳಿದ್ದಾರೆ.

ದಳಪತಿ ವಿಜಯ್​ ನಟನೆಯ ‘ಲಿಯೋ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಈ ಸಿನಿಮಾದಲ್ಲಿ ತ್ರಿಷಾ ಅವರು ವಿಜಯ್ ಪತ್ನಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರದಲ್ಲಿ ಮನ್ಸೂರ್​ ಅಲಿ ಖಾನ್​ ವಿಲನ್ ಪಾತ್ರದಲ್ಲಿ ನಟಿಸಿದ್ದರು. ‘ತ್ರಿಷಾ ಜೊತೆ ನಟಿಸುತ್ತೇನೆ ಎಂದಾಗ ಬೆಡ್​ರೂಂ ದೃಶ್ಯ ಇರಬಹುದು ಎಂದು ನಾನು ಭಾವಿಸಿದೆ. ಈ ಮೊದಲ ಸಿನಿಮಾಗಳಲ್ಲಿ ನಟಿಯರನ್ನು ಬೆಡ್​ರೂಂಗೆ ಕರೆದುಕೊಂಡು ಹೋಗುವ ದೃಶ್ಯ ಇತ್ತು. ಈ ಸಿನಿಮಾದಲ್ಲೂ ಹಾಗೆಯೇ ಇರಬಹುದು ಎಂದುಕೊಂಡಿದ್ದೆ. ನಾನು ಹಲವು ರೇಪ್ ದೃಶ್ಯಗಳನ್ನು ಮಾಡಿದ್ದೇನೆ. ಅದು ನನಗೆ ಹೊಸದಲ್ಲ. ಆದರೆ, ಈ ಚಿತ್ರದಲ್ಲಿ ಅವರನ್ನು ನೋಡಲೂ ಅವಕಾಶ ಕೊಡಲಿಲ್ಲ’ ಎಂದಿದ್ದರು ಮನ್ಸೂರ್ ಅಲಿ ಖಾನ್.

ಇದನ್ನೂ ಓದಿ: ತ್ರಿಷಾ ಬಗ್ಗೆ ಕೀಳು ಹೇಳಿಕೆ ನೀಡಿದ ನಟ ಮನ್ಸೂರ್​ ಅಲಿ ಖಾನ್​ ವಿರುದ್ಧ ಲೈಂಗಿಕ ಕಿರುಕುಳದ ಕೇಸ್​ ದಾಖಲು

ಈಗ ವಿಚಾರಣೆ ಬಳಿಕ ಮನ್ಸೂರ್ ಅವರು ಕ್ಷಮೆ ಕೇಳಿದ್ದಾರೆ ಎನ್ನಲಾಗಿದೆ.  ‘ಸಹನಟಿ ತ್ರಿಷಾ ಅವರೇ ನನ್ನನ್ನು ಕ್ಷಮಿಸಿ’ ಎಂದು ಮನ್ಸೂರ್ ಹೇಳಿರುವುದಾಗಿ ಟ್ರೇಡ್ ಅನಲಿಸ್ಟ್​ ರಮೇಶ್ ಬಾಲಾ ಟ್ವೀಟ್ ಮಾಡಿದ್ದಾರೆ.

ಪ್ರತಿಕ್ರಿಯೆ ನೀಡಿದ್ದ ತ್ರಿಷಾ

ಮನ್ಸೂರ್​ ಅಲಿ ಖಾನ್ ಹೇಳಿಕೆ ಬಗ್ಗೆ ತ್ರಿಷಾ ಪ್ರತಿಕ್ರಿಯೆ ನೀಡಿದ್ದರು. ಅವರ ಮಾತು ತ್ರಿಷಾ ಗಮನಕ್ಕೆ ಬಂದಿದೆ. ಈ ಹೇಳಿಕೆಯನ್ನು ಅವರು ಖಂಡಿಸಿದ್ದಾರೆ. ಜೊತೆಗೆ ಮುಂದೆಂದೂ ಅವರ ಜೊತೆ ನಟಿಸುವುದಿಲ್ಲ ಎಂದು ಶಪಥ ಮಾಡಿದ್ದಾರೆ ತ್ರಿಷಾ. ಇಂಥ ಜನರು ಇಡೀ ಮನುಷ್ಯಕುಲಕ್ಕೆ ಕೆಟ್ಟ ಹೆಸರು ತರುತ್ತಾರೆ ಎಂದು ತ್ರಿಷಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:21 pm, Fri, 24 November 23

ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘