AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಪ್ ಕಮೆಂಟ್: ಕೊನೆಗೂ ನಟಿ ತ್ರಿಷಾ ಬಳಿ ಕ್ಷಮೆ ಕೇಳಿದ ಮನ್ಸೂರ್ ಅಲಿ ಖಾನ್

ದಳಪತಿ ವಿಜಯ್​ ನಟನೆಯ ‘ಲಿಯೋ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಈ ಸಿನಿಮಾದಲ್ಲಿ ತ್ರಿಷಾ ಅವರು ವಿಜಯ್ ಪತ್ನಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರದಲ್ಲಿ ಮನ್ಸೂರ್​ ಅಲಿ ಖಾನ್​ ವಿಲನ್ ಪಾತ್ರದಲ್ಲಿ ನಟಿಸಿದ್ದರು.

ರೇಪ್ ಕಮೆಂಟ್: ಕೊನೆಗೂ ನಟಿ ತ್ರಿಷಾ ಬಳಿ ಕ್ಷಮೆ ಕೇಳಿದ ಮನ್ಸೂರ್ ಅಲಿ ಖಾನ್
ತ್ರಿಷಾ-ಮನ್ಸೂರ್
ರಾಜೇಶ್ ದುಗ್ಗುಮನೆ
|

Updated on:Nov 24, 2023 | 2:00 PM

Share

‘ತ್ರಿಷಾ (Trisha Krishnan) ಅವರನ್ನು ರೇಪ್ ಮಾಡುವ ದೃಶ್ಯ ಸಿಗಲಿಲ್ಲ’ ಎಂಬರ್ಥದಲ್ಲಿ ಮಾತನಾಡುವ ಮೂಲಕ ವಿವಾದ ಸೃಷ್ಟಿ ಮಾಡಿದ್ದ ನಟ ಮನ್ಸೂರ್ ಅಲಿ ಖಾನ್ ಅವರು ಕೊನೆಗೂ ಕ್ಷಮೆ ಕೇಳಿದ್ದಾರೆ. ನಟಿ ತ್ರಿಷಾ ಬಗ್ಗೆ ನೀಡಿದ್ದ ಈ ಹೇಳಿಕೆಗೆ ಸಂಬಂಧಿಸಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಚೆನ್ನೈ ಪೊಲೀಸರು ಮನ್ಸೂರ್ ಅವರನ್ನು ಅರೆಸ್ಟ್ ಮಾಡಿ ವಿಚಾರಣೆ ನಡೆಸಿದ್ದರು. ಈ ಬೆನ್ನಲ್ಲೇ ಮನ್ಸೂರ್ ಅಲಿ ಖಾನ್ ಅವರು ಕ್ಷಮೆ ಕೇಳಿದ್ದಾರೆ.

ದಳಪತಿ ವಿಜಯ್​ ನಟನೆಯ ‘ಲಿಯೋ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಈ ಸಿನಿಮಾದಲ್ಲಿ ತ್ರಿಷಾ ಅವರು ವಿಜಯ್ ಪತ್ನಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರದಲ್ಲಿ ಮನ್ಸೂರ್​ ಅಲಿ ಖಾನ್​ ವಿಲನ್ ಪಾತ್ರದಲ್ಲಿ ನಟಿಸಿದ್ದರು. ‘ತ್ರಿಷಾ ಜೊತೆ ನಟಿಸುತ್ತೇನೆ ಎಂದಾಗ ಬೆಡ್​ರೂಂ ದೃಶ್ಯ ಇರಬಹುದು ಎಂದು ನಾನು ಭಾವಿಸಿದೆ. ಈ ಮೊದಲ ಸಿನಿಮಾಗಳಲ್ಲಿ ನಟಿಯರನ್ನು ಬೆಡ್​ರೂಂಗೆ ಕರೆದುಕೊಂಡು ಹೋಗುವ ದೃಶ್ಯ ಇತ್ತು. ಈ ಸಿನಿಮಾದಲ್ಲೂ ಹಾಗೆಯೇ ಇರಬಹುದು ಎಂದುಕೊಂಡಿದ್ದೆ. ನಾನು ಹಲವು ರೇಪ್ ದೃಶ್ಯಗಳನ್ನು ಮಾಡಿದ್ದೇನೆ. ಅದು ನನಗೆ ಹೊಸದಲ್ಲ. ಆದರೆ, ಈ ಚಿತ್ರದಲ್ಲಿ ಅವರನ್ನು ನೋಡಲೂ ಅವಕಾಶ ಕೊಡಲಿಲ್ಲ’ ಎಂದಿದ್ದರು ಮನ್ಸೂರ್ ಅಲಿ ಖಾನ್.

ಇದನ್ನೂ ಓದಿ: ತ್ರಿಷಾ ಬಗ್ಗೆ ಕೀಳು ಹೇಳಿಕೆ ನೀಡಿದ ನಟ ಮನ್ಸೂರ್​ ಅಲಿ ಖಾನ್​ ವಿರುದ್ಧ ಲೈಂಗಿಕ ಕಿರುಕುಳದ ಕೇಸ್​ ದಾಖಲು

ಈಗ ವಿಚಾರಣೆ ಬಳಿಕ ಮನ್ಸೂರ್ ಅವರು ಕ್ಷಮೆ ಕೇಳಿದ್ದಾರೆ ಎನ್ನಲಾಗಿದೆ.  ‘ಸಹನಟಿ ತ್ರಿಷಾ ಅವರೇ ನನ್ನನ್ನು ಕ್ಷಮಿಸಿ’ ಎಂದು ಮನ್ಸೂರ್ ಹೇಳಿರುವುದಾಗಿ ಟ್ರೇಡ್ ಅನಲಿಸ್ಟ್​ ರಮೇಶ್ ಬಾಲಾ ಟ್ವೀಟ್ ಮಾಡಿದ್ದಾರೆ.

ಪ್ರತಿಕ್ರಿಯೆ ನೀಡಿದ್ದ ತ್ರಿಷಾ

ಮನ್ಸೂರ್​ ಅಲಿ ಖಾನ್ ಹೇಳಿಕೆ ಬಗ್ಗೆ ತ್ರಿಷಾ ಪ್ರತಿಕ್ರಿಯೆ ನೀಡಿದ್ದರು. ಅವರ ಮಾತು ತ್ರಿಷಾ ಗಮನಕ್ಕೆ ಬಂದಿದೆ. ಈ ಹೇಳಿಕೆಯನ್ನು ಅವರು ಖಂಡಿಸಿದ್ದಾರೆ. ಜೊತೆಗೆ ಮುಂದೆಂದೂ ಅವರ ಜೊತೆ ನಟಿಸುವುದಿಲ್ಲ ಎಂದು ಶಪಥ ಮಾಡಿದ್ದಾರೆ ತ್ರಿಷಾ. ಇಂಥ ಜನರು ಇಡೀ ಮನುಷ್ಯಕುಲಕ್ಕೆ ಕೆಟ್ಟ ಹೆಸರು ತರುತ್ತಾರೆ ಎಂದು ತ್ರಿಷಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:21 pm, Fri, 24 November 23

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ